ಪುತ್ತೂರು

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರಿನಿಂದ ಸಾಗಿಬಂದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಬೊಳುವಾರು ಶ್ರೀ ಶಕ್ತಿ ಆಂಜನೇಯ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಚೆಂಡೆ ವಾದ್ಯದೊಂದಿಗೆ ಕಲಶ ಹಿಡಿದ ಮಹಿಳೆಯರು, ಕುಣಿತ ಭಜನೆ ಸಾಗಿಬಂದಿತು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, […]

ಬೊಳುವಾರಿನಿಂದ ಮೆರವಣಿಗೆಯಲ್ಲಿ ಸಾಗಿಬಂದ ಹೊರೆಕಾಣಿಕೆ Read More »

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಗುರಿಯಾಗಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪದವಿ ಪ್ರಧಾನ ಸಮಾರಂಭದಲ್ಲಿ ಡಾ. ವಿಶ್ವೇಶ್ವರಯ್ಯ ಪ್ರಕಾಶ್

ಪುತ್ತೂರು: ಭಾರತದಲ್ಲಿ ವಿದ್ಯಾಭ್ಯಾಸ ಪಡೆದು ವಿದೇಶಕ್ಕೆ ಹೋಗಿ ವೃತ್ತಿ ಜೀವನ ಸಾಗಿಸುವುದಕ್ಕಿಂತ ನಮ್ಮ ದೇಶದಲ್ಲೇ ಇದ್ದು ಉದ್ಯೋಗ ಪಡೆಯುವುದು ಉತ್ತಮ. ನಮ್ಮ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವುದರಲ್ಲಿ ನಮ್ಮ ಪಾತ್ರವು ಮುಖ್ಯ ಎಂದು ಮೈಸೂರಿನ ಸಿ.ಎಫ್.ಟಿ.ಆರ್.ಐ.ನ ಪೂರ್ವ ನಿರ್ದೇಶಕ ಹಾಗೂ ಹೆಸರಾಂತ ವಿಜ್ಞಾನಿ ಪದ್ಮಶ್ರೀ ಡಾ.ವಿಶ್ವೇಶ್ವರಯ್ಯ ಪ್ರಕಾಶ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಗುರಿಯಾಗಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪದವಿ ಪ್ರಧಾನ ಸಮಾರಂಭದಲ್ಲಿ ಡಾ. ವಿಶ್ವೇಶ್ವರಯ್ಯ ಪ್ರಕಾಶ್ Read More »

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ಜಾತ್ರೆಯ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡುತ್ತಿದ್ದಂತೆ, ಚಿಕ್ಕಮುಡ್ನೂರು ಭಾಗದಿಂದಲೂ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ದರ್ಬೆ ಹಾಗೂ ಬೊಳುವಾರಿನಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಈ ಮೆರವಣಿಗೆಗೆ ಚಿಕ್ಕಮುಡ್ನೂರು ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿದರು. ಚಿಕ್ಕಮುಡ್ನೂರು ಗ್ರಾಮದ ಬೀರಿಗ, ಕೆಮ್ಮಾಯಿ, ಬೀರ್ನಹಿತ್ಲು, ಕೃಷ್ಣನಗರ ಮೊದಲಾದ ಭಾಗದ ಭಕ್ತಾದಿಗಳು ಹೊರೆಕಾಣಿಕೆ ಸಮರ್ಪಿಸಿ ಪುನೀತರಾದರು.

ಮಹಾಲಿಂಗೇಶ್ವರ ಜಾತ್ರೆಗೆ ಚಿಕ್ಕಮುಡ್ನೂರಿನಿಂದ ಹೊರೆಕಾಣಿಕೆ Read More »

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಶನಿವಾರ ಹೊರೆಕಾಣಿಕೆ ಸಮರ್ಪಣೆಯಾಯಿತು. ಅಪರಾಹ್ನ 3.30ಕ್ಕೆ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ‌ ಶ್ರಿ ವಜ್ರದೇಹಿ ಮಠದ‌ ಶ್ರೀ ರಾಜಶೇಖರಾನಂದ‌ ಸ್ವಾಮಿಜಿ ತೆಂಗಿನಕಾಯಿ‌ ಒಡೆಯುವ ಮೂಲಕ‌ ಉದ್ಘಾಟಿಸಿದರು. ಬಳಿಕ ಹೊರೆಕಾಣಿಕೆ ಮೆರವಣಿಗೆ ಕೊಂಬು, ಕಹಳೆ,

ಮಹಾಲಿಂಗೇಶ್ವರನ ಜಾತ್ರೆಗೆ ಹೊರೆಕಾಣಿಕೆ ಸಮರ್ಪಣೆ | ಏಕಕಾಲದಲ್ಲಿ ಎರಡೂ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ಮೆರವಣಿಗೆ Read More »

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪುತ್ತೂರು: ಆಮ್‍ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಪ್ರಕಟಗೊಳಿಸಲಾಗಿದೆ ಎಂದು ಆಮ್‍ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್‍ ಎಡಮಲೆ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ ಮೇಲ್ದರ್ಜೆ ಸಹಿತ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬೆಂಬಲ ನೀಡುವ ಮೂಲಕ ಗುಣಮಟ್ಟದ ಆರೋಗ್ಯ ಹಾಗೂ ಶಿಕ್ಷಣ ಒದಗಿಸುವ

ಆಮ್ ಆದ್ಮಿ ರಾಷ್ಟ್ರಾದ್ಯಂತ ಸ್ಪರ್ಧೆ | ದ.ಕ.ದ 5 ಅಭ್ಯರ್ಥಿಗಳ ಪಟ್ಟಿ ಪ್ರಕಟ Read More »

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ

ಪುತ್ತೂರು:  ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್‌ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್ಗಳಲ್ಲಿಯೂ ಗುಡ್‌ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಕಲ್ವಾರಿ ಬೆಟ್ಟದ ಮೇಲೆ ಪ್ರಭು ಕ್ರಿಸ್ತರು ಮನುಕುಲದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ದಿನವನ್ನು ಶುಭ ಶುಕ್ರವಾರವನ್ನಾಗಿ ಆಚರಿಸಲಾಗುತ್ತದೆ. ಆ ದಿನದಂದು ಜಗತ್ತಿನಾದ್ಯಂತ ಕ್ರೈಸ್ತ ದೇವಾಲಯಗಳಲ್ಲಿ ಬಲಿಪೂಜೆಗಳು ಇರುವುದಿಲ್ಲ. ಆದರೆ ಅರ್ಥವತ್ತಾದ ಆರಾಧನೆ ಮತ್ತು ಪ್ರಾರ್ಥನೆಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಆಯಾ ಚರ್ಚ್ ಗಳಲ್ಲಿ ನಡೆಯುತ್ತದೆ.

ಪುತ್ತೂರಿನಲ್ಲಿ ಕ್ರೈಸ್ತ ಬಾಂಧವರಿಂದ ಚರ್ಚ್ ಗಳಲ್ಲಿ ಶ್ರದ್ಧಾ ಭಕ್ತಿಯ ಗುಡ್ ಫ್ರೈಡೇ ಆಚರಣೆ Read More »

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಯೋಜನೆ, ಗೌರವಾರ್ಪಣೆ

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟಿನ ಸಮಾಜಮುಖಿ ಕೆಲಸ ಗಳನ್ನು ಗುರುತಿಸಿ ರಾಮನಗರ ಫ್ರೆಂಡ್ಸ್ ಕಾಪು ಪಡು ಇದರ 20 ನೇ ವರ್ಷದ ವಾರ್ಷಿಕೋತ್ಸವದಲ್ಲಿ ಟ್ರಸ್ಟಿನ ಗೌರವಾದ್ಯಕ್ಸ ಉದಯ ಅರ್ಜುನಗುಳಿ ಹಾಗೂ ಕಾರ್ಯದರ್ಶಿ ಮನೋಹರ್ ಪಲಯಮಜಲು ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಟ್ರಸ್ಟಿನ ಪೋಷಕರು ಹಾಗೂ ಆಪತ್ ಭಾಂದವ ಈಶ್ವರ್ ಮಲ್ಪೆಯವರನ್ನು ಗೌರವಿಸಲಾಯಿತು. ಕಾಪು ಶ್ರೀ ಮಾರಿಯಮ್ಮ ಅಮ್ಮನವರ ಮಾರಿ ಉತ್ಸವದ ಸಂದರ್ಭದಲ್ಲಿ ಹೃದಯ ಸಮಸ್ಯೆಯಿಂದ ಬಲಳುತ್ತಿರುವ ಧರ್ಮಪಾಲ ಇವರ ಚಿಕಿತ್ಸೆಗೆ ನೆರವಾಗಲು ರಾಮನಗರ ಫ್ರೆಂಡ್ಸ್

ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಯೋಜನೆ, ಗೌರವಾರ್ಪಣೆ Read More »

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು :ಕೋಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಉತ್ಸವದ ಅಂಗವಾಗಿ ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ ನಡೆದು ಬಳಿಕ ಮಹಾಅನ್ನಸಂತರ್ಪಣೆ ಜರಗಿತು. ಬಳಿಕ ಪುತ್ತೂರು ಯಕ್ಷಸಾರಥಿ ಅವರಿಂದ ಶ್ರೀ ದೇವಿ ಲೀಲೆ ಯಕ್ಷಗಾನ ಬಯಲಾಟ ನಡೆಯಿತು.

ಪುತ್ತೂರು: ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ

ಪುತ್ತೂರು: ದೇಶ ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿರುವುದು ಇಲ್ಲಿನ ಸಂಸ್ಕೃತಿ ಸಂಸ್ಕಾರಗಳಿಂದ. ಆದರೆ ಅಂತಹ ಸಂಸ್ಕೃತಿಯಿಂದ ನಾವು ನಿಧಾನವಾಗಿ ದೂರ ಸರಿಯುತ್ತಿರುವುದು ಆತಂಕಕಾರಿ ವಿಚಾರ. ಮನೆಯಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ. ಹಿಂದೂ ಧಾರ್ಮಿಕ ಶ್ಲೋಕಗಳನ್ನು ಮಕ್ಕಳು ನಿತ್ಯವೂ ಉಚ್ಚರಿಸುವಂತೆ ಮಾಡಬೇಕಿದೆ ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಮಾತೃ ಸುರಕ್ಷಾ ಪ್ರಮುಖ್ ಬಡೆಕ್ಕಿಲ ಗಣರಾಜ ಭಟ್ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ ಇ ವಿದ್ಯಾಲಯದ ವತಿಯಿಂದ ಆಯೋಜಿಸಲಾದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ Read More »

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವಗಳ ಪೈಕಿ ಹೂತೇರು ಅಥವಾ ಪುಷ್ಪ ರಥಕ್ಕೆ ಹೆಚ್ಚಿನ ಮಹತ್ವ. ಬ್ರಹ್ಮರಥ, ಚಂದ್ರಮಂಡಲ ಇದ್ದರೂ, ಪುಷ್ಪರಥ ಅತೀ ಶ್ರದ್ಧೆಯ, ಭಕ್ತಿಯ ರಥ ಎಂದೇ ಜನಜನಿತ. ಹೂತೇರಿಗೆ ಮಡಿವಂತಿಕೆಯ ರಥ ಎಂದೂ ಕರೆಯಲಾಗುತ್ತದೆ. ಈ ರಥದ ಮೇಲ್ಭಾಗಕ್ಕೆ ಯಾರೆಂದರೆ ಯಾರು ಹೋಗುವಂತಿಲ್ಲ. ಅರ್ಚಕರು ರಥ ಏರಬೇಕಾದರೂ, ಮಡಿವಂತಿಕೆಯಲ್ಲಿ ಇರಬೇಕು ಎಂಬ ನಿಯಮವೂ ಇದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಧ್ವಜಾರೋಹಣ ಏರಿದ ತಕ್ಷಣ ನಂದಿ ಮಂಟಪದ ನಂದಿಗೆ ನೈವೇದ್ಯ ಸಮರ್ಪಣೆ ಮಾಡಲಾಗುತ್ತದೆ.

ಮಡಿವಂತಿಕೆಯ ರಥಕ್ಕೆ ಆನುವಂಶಿಕ ಸೇವೆ | ಮಹಾಲಿಂಗೇಶ್ವರ ದೇವರ ಹೂತೇರು ಶೃಂಗಾರದ ಚಾಕರಿ | ಸೇರಿಗಾರ ವೃತ್ತಿಯಿಂದ ಚಾಕರಿ ವೃತ್ತಿಗೆ ರಮಾನಾಥ ಕುಟುಂಬ Read More »

error: Content is protected !!
Scroll to Top