ಪುತ್ತೂರು

ಚುನಾವಣಾ ನೀತಿ ಸಂಹಿತೆ ಜ್ಯಾರಿ : ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ನೀತಿ ಸಂಹಿತೆ ಜ್ಯಾರಿಯಲ್ಲಿರುವ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು ಗುರುವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚುನಾವಣಾ  ಅಧಿಕಾರಿಗಳು ಉಪಸ್ಥಿತರಿದ್ದರು.

ಚುನಾವಣಾ ನೀತಿ ಸಂಹಿತೆ ಜ್ಯಾರಿ : ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳಿಂದ ಪರಿಶೀಲನೆ Read More »

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ

ಪುತ್ತೂರು: ಜನಪ್ರತಿನಿಧಿಯವರ ಫೊಟೋದೊಂದಿಗೆ ತನ್ನ ಫೊಟೋವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಫೊಟೋ ಎಡಿಟ್ ಮಾಡಿ, ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಖಾಸಗಿ ಫೊಟೋವನ್ನು ಎಡಿಟ್ ಮಾಡಿ, ಜನಪ್ರತಿನಿಧಿಯೊಂದಿಗೆ ಜೋಡಿಸಲಾಗಿದೆ. ಈ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ದೌರ್ಜನ್ಯ ನಡೆಸಲಾಗುತ್ತಿದೆ. ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇಂತಹ ಘಟನೆಯಿಂದಾಗಿ ತನಗೆ ಹಾಗೂ ತನ್ನ ಮನೆಮಂದಿಗೆ ತೀವ್ರ

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ Read More »

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು!

ಪುತ್ತೂರು: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಕಸರತ್ತು ನಡೆಸುತ್ತಿದೆ. ಇದೀಗ ಸಾಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಎಬಿವಿಪಿ ತಾಲೂಕು ಪ್ರಮುಖ್ ಸೇರಿದಂತೆ ಹಲವು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ದಿನೇಶ್ ಮೆದು ಹೆಸರು ಕೇಳಿಬರುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರ ಹೆಸರು ಚಾಲ್ತಿಯಲ್ಲಿರುವಂತೆ, ಕೊನೆಕ್ಷಣದಲ್ಲಿ ಹೊಸ ಅಭ್ಯರ್ಥಿಗಳತ್ತಲೂ ಬಿಜೆಪಿ ದೃಷ್ಟಿ ಹಾಯಿಸುತ್ತಿದೆ. ಒಂದು ವೇಳೆ ಹೊಸ ಮುಖಗಳನ್ನು ಆಯ್ದುಕೊಂಡದ್ದೇ ಆದರೆ, ಅದರಲ್ಲಿ ದಿನೇಶ್ ಮೆದು ಅವರ ಹೆಸರು ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡಿದೆ.

ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ದಿನೇಶ್ ಮೆದು ಸಾಧ್ಯತೆ | ಬಿಜೆಪಿ ಹೈಕಮಾಂಡ್ ಒಲವು! Read More »

ರಾಜಕಾರಣಿಯೊಬ್ಬರೊಂದಿಗೆ ಮಹಿಳೆಯ ಅಶ್ಲೀಲ ರೀತಿಯ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ | ಮಹಿಳೆಯಿಂದ ಉಪ್ಪಿನಂಗಡಿ ಠಾಣೆಗೆ ದೂರು

ಉಪ್ಪಿನಂಗಡಿ : ಪ್ರತಿಷ್ಠಿತ ರಾಜಕಾರಣಿಯೊಬ್ಬರ ಫೋಟೊವನ್ನು ಮಹಿಳೆಯೊಂದಿಗೆ ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕುರಿತು ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನೆಕ್ಕಿಲಾಡಿಯ ಮಹಿಳೆಯೋರ್ವರು ದೂರು ನೀಡಿದ್ದಾರೆ. ದೂರಿನಲ್ಲಿ – ತನ್ನ ಫೋಟೊವನ್ನು ವಿಭಿನ್ನ ರೀತಿಯಲ್ಲಿ ಅಸಹ್ಯಕರವಾಗಿ, ಅಶ್ಲೀಲವಾಗಿ ಪ್ರತಿಷ್ಠಿತ ರಾಜಾಕರಣಿ ಜತೆಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ರೀತಿ ಮಾಡಿ ತನ್ನ ಘನತೆಗೆ ಕುಂದುಂಟು ಮಾಡಿರುವ ಅಪರಿಚಿತ

ರಾಜಕಾರಣಿಯೊಬ್ಬರೊಂದಿಗೆ ಮಹಿಳೆಯ ಅಶ್ಲೀಲ ರೀತಿಯ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ | ಮಹಿಳೆಯಿಂದ ಉಪ್ಪಿನಂಗಡಿ ಠಾಣೆಗೆ ದೂರು Read More »

ಏ.10 ರಿಂಧ 17 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ | ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಈ ಬಾರಿಯ ಜಾತ್ರೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಪೂರ್ಣ ಸಹಕಾರ ನೀಡುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ವಿನಂತಿಸಿದ್ದಾರೆ. ಜಾತ್ರೋತ್ಸವದ ಅಂಗವಾಗಿ ವಿವಿಧ ಜವಾಬ್ದಾರಿಗೆ ಸಂಬಂಧಿಸಿ ಬುಧವಾರ ದೇವಸ್ಥಾನದ ಸಭಾಭವನದಲ್ಲಿ ನಡೆದ ವಿವಿಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಾತ್ರೆಗೆ ಬರುವ ಜನಸಂಖ್ಯೆ, ವಾಹನಗಳ ಲೆಕ್ಕಾಚಾರ ಹಾಗೂ ಪೇಟೆ ಸವಾರಿ

ಏ.10 ರಿಂಧ 17 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ | ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ Read More »

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ

ಪುತ್ತೂರು : ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ ಮಂಗಳವಾರದಿಂದ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಪುತ್ತೂರು ಧೀಶಕ್ತಿ ಮಹಿಳಾ ಯಕ್ಷಬಳಗದವರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ಯಕ್ಷಗಾನ ತಾಳಮದ್ದಳೆ ಶ್ರೀರಾಮ ದರ್ಶನ ನಡೆಯಿತು. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಕು|ಸಿಂಚನಾ, ಮೂಡುಕೋಡಿ,  ಮದ್ದಳೆಯಲ್ಲಿ ಮಾ|ಅದ್ವೈತ್ ಕೃಷ್ಣ, ಪುತ್ತೂರು, ಚೆಂಡೆಯಲ್ಲಿ ಮಾ| ಅದ್ವೈತ್, ಕನ್ಯಾನ ಸಹಕರಿಸಿದರು. ಮುಮ್ಮೇಳದಲ್ಲಿ,ಪದ್ಮಾ ಕೆ ಆರ್ ಆಚಾರ್ಯ ಹನುಮಂತನಾಗಿ, ಜಯಲಕ್ಷ್ಮಿ ವಿ ಭಟ್, ವೀರಮಣಿಯಾಗಿ, ಪ್ರೇಮಾ ಕಿಶೋರ್ ಈಶ್ವರನಾಗಿ, ಶುಭಾ ಪಿ ಆಚಾರ್ಯ ಶತ್ರುಘ್ನನಾಗಿ,

ಕೊಡಿಪಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಉತ್ಸವ | ಯಕ್ಷಗಾನ ತಾಳಮದ್ದಳೆ Read More »

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ ಏ.8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ. 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಬೆಳಿಗ್ಗೆ 9.30

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

ಪುತ್ತೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರ ಮ ಮಂಗಳೂರಿನ ಲೊಯಲ್ಲಾ ಹಾಲ್,ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ Read More »

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ

ಪುತ್ತೂರು: ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವದ ಇಂದು  ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ 8 ಕ್ಕೆ ನಾಗತಂಬಿಲ, 8.30 ಕ್ಕೆ ಮುಹೂರ್ತ ತೋರಣ, ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರು ಬಂದು ನೇತ್ರಾದಿ ಗರಡಿಯಲ್ಲಿ ದರ್ಶನ ನಡೆಯಿತು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ನಡೆಯುವ ನೇಮೋತ್ಸವ ನ್ಯೂಸ್ ಪುತ್ತೂರು ಯೂ ಟ್ಯೂಬ್ ಚಾನೆಲ್ನ ನಲ್ಲಿ  ನೇರ ಪ್ರಸಾರಗೊಳ್ಳಲಿದೆ.

ಇಂದು ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ ಆದಿಬೈದೇರುಗಳ ನೇಮೋತ್ಸವ : ಕಟ್ಟಬೀಡಿನಿಂದ ಬಂದ ಭಂಡಾರ Read More »

ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿದೆ : ರಾಕೇಶ್ ಕಮ್ಮಾಜೆ | ಸಿಎ ಫೌಂಡೇಶನ್ ತರಬೇತಿಗೆ ಚಾಲನೆ

ಪುತ್ತೂರು: ಪ್ರಾಮಾಣಿಕ ಸಿಎ ಇದ್ದರೆ ದೇಶ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿ ಕಾರ್ಯಾಚರಿಸುತ್ತಿದೆ ಎಂದು ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಜೇಶ್‍ ಕಮ್ಮಾಜೆ ಹೇಳಿದರು. ಅವರು ಬುಧವಾರ ನಗರದ ಅರುಣಾ ಥಿಯೇಟರ್ ಎದುರಿರುವ ಪ್ರಭು ಬಿಲ್ಡಿಂಗ್‍ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಸಿಎ ಫೌಂಡೇಶನ್ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಸಿಎ ಎಂಬುದು ದೇಶವನ್ನು ಆರ್ಥಿಕವಾಗಿ ಬಲಾಢ್ಯವಾಗುವಂತೆ ಮಾಡುವ ಒಂದು ಪ್ರಕ್ರಿಯೆ. ಭ್ರಷ್ಟಾಚಾರ ಮಾಡುವ ಜತೆಗೆ ಭ್ರಷ್ಟಾಚಾರತೆಯನ್ನು

ಪ್ರಾಮಾಣಿಕ ಸಿಎಗಳನ್ನು ಹುಟ್ಟುಹಾಕುವಲ್ಲಿ ಪ್ರೇರಣಾ ಸಂಸ್ಥೆ ಪ್ರೇರಣಾ ಶಕ್ತಿಯಾಗಿದೆ : ರಾಕೇಶ್ ಕಮ್ಮಾಜೆ | ಸಿಎ ಫೌಂಡೇಶನ್ ತರಬೇತಿಗೆ ಚಾಲನೆ Read More »

error: Content is protected !!
Scroll to Top