ಪುತ್ತೂರು

ಹಿಂಜಾವೇ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿರುವುದು ನಮ್ಮ ಸಮುದಾಯಕ್ಕೆ ನೋವು ತಂದಿದೆ : ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್

ಪುತ್ತೂರು: ಇತ್ತೀಚೆಗೆ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮವೊಂದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತರು ನಡೆಸುವ ಸಂಸ್ಥೆಗಳ ಹೆಸರನ್ನು ಉಲ್ಲೇಖಿಸಿ ದ್ವೇಷಪೂರಿತ ಭಾಷಣ ಮಾಡಿರುವುದು ಸಮುದಾಯಕ್ಕೆ ನೋವಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಯಿದೇ ದೇವುಸ್  ಶಿ್ಕ್ಷಣ ಸಂಸ್ಥೆಗಳ ಸಂಚಾಲಕ, ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.25 ರಂದು ವಾಟ್ಸ್ ಆಫ್‍ನಲ್ಲಿ ಪ್ರಚಾರವಾದ ಹಿಂದೂ ಜಾಗರಣ ವೇದಿಕೆಯ ಕಾರ್ಯಕ್ರಮದ ಭಾಷಣದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿ […]

ಹಿಂಜಾವೇ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿರುವುದು ನಮ್ಮ ಸಮುದಾಯಕ್ಕೆ ನೋವು ತಂದಿದೆ : ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್ Read More »

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ

ಪುತ್ತೂರು: ದ.ಕ.ಜಿಲ್ಲಾ ಘಟಕದ ವ್ಯಾಪ್ತಿಯಲ್ಲಿ 2023 ರ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸಲು  4 ಸಿಆರ್ ಪಿಎಫ್ ಕಂಪೆನಿಗಳು ಆಗಮಿಸಿದ್ದು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್, ಸ್ಟ್ರಾಂಗ್ ರೂಮ್, ರೂಟ್ ,ಮಾರ್ಚ್‍, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಂಪೆನಿಗಳು ಕರ್ತವ್ಯ ನಿರ್ವಹಿಸಲಿವೆ. ಇನ್ನಷ್ಟು ಹೆಚ್ಚಿನ ಸಿಆರ್ ಪಿಎಫ್ ಕಂಪೆನಿಗಳು ಜಿಲ್ಲೆಗೆ ಆಗಮಿಸಲಿವೆ ಎಂದು ತಿಳಿದು ಬಂದಿದೆ.

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ Read More »

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ

ಪುತ್ತೂರು: ಸುಳ್ಯ ತಾಲೂಕಿನ  ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ ಏ.5 ಬುಧವಾರ ರಾತ್ರಿ ನಡೆಯಲಿದೆ. ಬುಧವಾರ ಮಧ್ಯಾಹ್ನ 12.30 ಕ್ಕೆ ಕಟ್ಟಬೀಡಿನಿಂದ ಪೂರ್ವ ಸಂಪ್ರದಾಯದಂತೆ ಭಂಡಾರ ಹೊರಡುವುದು. ನೇತ್ರಾದಿ ಗರಡಿಯಲ್ಲಿ ದರ್ಶನ. ರಾತ್ರಿ 8 ಕ್ಕೆ ಬೈದೇರುಗಳು ಗರಡಿ ಇಳಿಯುವುದು. ರಾತ್ರಿ 2 ಕ್ಕೆ ಕಿನ್ನಿದಾರು ಗರಡಿ ಇಳಿಯುವುದು. ಪ್ರಾತಃಕಾಲ 3 .30 ಕ್ಕೆ ಎಣ್ಮೂರು ಕಟ್ಟಬೀಡಿಗೆ ಬೈದೇರುಗಳು ಹಾಲು ಕುಡಿಯಲು ಬಂದು ಬೀಡಿಗೆ ಕಾಣಿಕೆ ಅರ್ಪಿಸುವುದು. 5 ಕ್ಕೆ ಕೋಟಿ-ಚೆನ್ನಯರ ದರ್ಶನ ರಂಗಸ್ಥಳದಲ್ಲಿ (ಸೇಟು) ಬೈದೇರುಗಳ

ಇಂದು ರಾತ್ರಿ ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ Read More »

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಪುತ್ತೂರು: ಅಶೋಕ್ ಕುಮಾರ್ ರೈ ಅವರ ರಾಜಕೀಯ ಶ್ರೇಯಸ್ಸಿ ಗಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ಕಾಂಗ್ರೆಸ್ ಟಿಕೆಟ್ ಗೊಂದಲ ನಿವಾರಣೆ ಗಾಗಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಬನ್ನೂರುರವರು ಬನ್ನೂರು ಗ್ರಾಮದ ಶನಿಶ್ವರ ದೇವರ ಸನ್ನಿಧಿ ಯಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಶನಿಶ್ವರ ದೇವರ ಸನ್ನಿಧಿಯ ಅರ್ಚಕ  ದಿನೇಶ್ ಸಾಲಿಯಾನ್ ವಿಶೇಷ ಪ್ರಾರ್ಥನೆ ನೆರವೇರಿಸಿದರು ನವೀನ್ ರೈ ಬನ್ನೂರು ಅವರ ನೇತೃತ್ವ ದಲ್ಲಿ ನಡೆದ ವಿಶೇಷ ಪ್ರಾರ್ಥನೆ ಸಂದರ್ಭ

ಅಶೋಕ್ ಕುಮಾರ್ ರೈ ರಾಜಕೀಯ ಶ್ರೇಯಸ್ಸಿಗಾಗಿ ಬನ್ನೂರು ಶನೀಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ Read More »

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ

ಪುತ್ತೂರು : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜ.ಪಂ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ಸಂಯುಕ್ತ ಆಶ್ರಯದಲ್ಲಿ ಬಣ್ಣದ ಬಣ್ಣ ಎಂಬ ವಿಶಿಷ್ಟ ಮಕ್ಕಳ ಶಿಬಿರ ಏ.6 ರಿಂದ 8ರ ತನಕ ಪುಣ್ಚಪ್ಪಾಡಿ  ಶಾಲೆಯಲ್ಲಿ ನಡೆಯಲಿದೆ. ಕರ್ನಾಟಕದ ಹಿರಿಯ ಶಿಕ್ಷಣ ಚಿಂತಕ, ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ ಸಂಚಾಲಕ ಕಲಾನಿಧಿ ಗೋಪಾಡ್ಕರ್ ಉದ್ಘಾಟಿಸಲಿದ್ದು ಹಿರಿಯ ರಂಗ ಲೇಖಕ,

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ Read More »

ಕೋವಿ ಠೇವಣಿದಾರರಿಗೆ ದ.ಕ.ಜಿಲ್ಲಾಧಿಕಾರಿಯಿಂದ ಸಿಹಿ ಸುದ್ದಿ |  ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೊಷಣೆಯಾದ ಹಿನ್ನಲೆಯಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುವ ಆದೇಶ ರಾಜ್ಯದೆಲ್ಲೆಡೆ ಜ್ಯಾರಿಯಾಗಿದೆ. ಆದರೆ ದ.ಕ.ಜಿಲ್ಲಾಧಿಕಾರಿ ಮಾತ್ರ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನೆಂದರೆ ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಯನ್ನು  ಮಾಡಿದ್ದಾರೆ. ಚುನಾವಣೆ ಸಂದರ್ಭ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲನಾ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶ ಹೊರಡಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಸ್ತ್ರಾಸ್ತ್ರ ಡೆಪಾಸಿಟ್ ಮಾಡುವಂತೆ ರಾಜ್ಯದಲ್ಲಿ ಆದೇಶ ಮಾಡಲಾಗಿದೆ. ಆದರೆ ಈ ಆದೇಶದಿಂದಾಗಿ

ಕೋವಿ ಠೇವಣಿದಾರರಿಗೆ ದ.ಕ.ಜಿಲ್ಲಾಧಿಕಾರಿಯಿಂದ ಸಿಹಿ ಸುದ್ದಿ |  ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ Read More »

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.5 ರಿಂದ 7 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು. ಸಂಜೆ ಕೊಡಿಪಾಡಿ ಶಾಲೆ, ಆನಾಜೆ, ಅರ್ಕ, ಓಜಾಲ, ಹನಿಯೂರು, ಪಲ್ಲತ್ತಾರು ಮೂಲಕ ಹಸಿರುವಾಣಿ ಮೆರವಣಿಗೆ ಸಾಗಿ ಬಂದ ಮೆರವಣಿಗೆಗೆ ಚೆಂಡೆ, ವಾದ್ಯಗಳು, ಮುತ್ತು ಕೊಡೆಗಳು ಮೆರೆಗು ನೀಡಿತು. ಬಳಿಕ ತೆಂಕಿಲ ಧೀಶಕ್ತಿ ಮಹಿಳಾ ಯಕ್ಷ ಬಳಗದಿಂದ ಹಲಸಿನಮಕ್ಕಿ ನರಸಿಂಹ ಶಾಸ್ತ್ರೀ ವೀರಚಿತ “ಶ್ರೀರಾಮ ದರ್ಶನ” ಯಕ್ಷಗಾನ ತಾಳಮದ್ದಳೆ ಜರಗಿತು. ರಾತ್ರಿ ಶ್ರೀ ಮಹಾಗಣಪತಿ

ಏ.5 ರಿಂದ 7 : ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ : ಸಮರ್ಪಣೆಯಾದ ಹೊರೆಕಾಣಿಕೆ Read More »

ಸಂಜೀವ ಮಠಂದೂರೇ ನಮ್ಮ ನಾಯಕರು | ಪುತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ಹೋರಾಟದ ಎಚ್ಚರಿಕೆ | ಗೌಡ ಸಮುದಾಯದ ಪ್ರಾತಿನಿಧ್ಯಕ್ಕೆ ಒತ್ತಾಯ | ಒಕ್ಕಲಿಗ ಗೌಡ ಸಮುದಾಯದ ಮುಖಂಡರಿಂದ ನಿರ್ಮಲಾನಂದ ಶ್ರೀಗಳ ಭೇಟಿ

ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ ಶಾಸಕ ಅಭ್ಯರ್ಥಿ ಎಂದು ಘೋಷಿಸಿದರೂ ಅದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದು ಖಂಡಿತಾ ಎಂದು ಒಕ್ಕಲಿಗ ಗೌಡ ಸಮುದಾಯದ ಮುಖಂಡರು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಗಮನಕ್ಕೆ ತಂದಿದ್ದಾರೆ. ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತನಾಡಿದ ಒಕ್ಕಲಿಗ ಗೌಡ

ಸಂಜೀವ ಮಠಂದೂರೇ ನಮ್ಮ ನಾಯಕರು | ಪುತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡದಿದ್ದರೆ ಹೋರಾಟದ ಎಚ್ಚರಿಕೆ | ಗೌಡ ಸಮುದಾಯದ ಪ್ರಾತಿನಿಧ್ಯಕ್ಕೆ ಒತ್ತಾಯ | ಒಕ್ಕಲಿಗ ಗೌಡ ಸಮುದಾಯದ ಮುಖಂಡರಿಂದ ನಿರ್ಮಲಾನಂದ ಶ್ರೀಗಳ ಭೇಟಿ Read More »

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಮಂಗಳವಾರ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ ನಡೆಯಿತು. ಭಗವಾನ್ ಮಹಾವೀರ ಅವರ ಭಾವಚಿತ್ರದ ಎದುರು ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಿ ಮಾತನಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್, ಭಗವಾನ್ ಮಹಾವೀರರು ಸತ್ಯ, ಅಹಿಂಸಾ, ತತ್ವಾದರ್ಶಗಳು ವಿಶ್ವಕ್ಕೆ ಮಾದರಿ. ಅವರು ನೀಡಿರುವ ಶಾಂತಿಯ ಸಂದೇಶ ಜಗತ್ತಿಗೆ ಮಾದರಿ. ಅದನ್ನು ನಾವು ಪಾಲನೆ ಮಾಡುವುದು ಇಂದಿನ ಅಗತ್ಯ ಎಂದರು.

ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಣೆ Read More »

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್

ಪುತ್ತೂರು: ಸಮಾಜದಲ್ಲಿ ಶೇಕಡಾ 80ರಷ್ಟು ಜನ ಒಂದಲ್ಲ ಒಂದು ರೀತಿಯ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ. ಆದರೆ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್ Read More »

error: Content is protected !!
Scroll to Top