ಹಿಂಜಾವೇ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿರುವುದು ನಮ್ಮ ಸಮುದಾಯಕ್ಕೆ ನೋವು ತಂದಿದೆ : ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್
ಪುತ್ತೂರು: ಇತ್ತೀಚೆಗೆ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮವೊಂದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತರು ನಡೆಸುವ ಸಂಸ್ಥೆಗಳ ಹೆಸರನ್ನು ಉಲ್ಲೇಖಿಸಿ ದ್ವೇಷಪೂರಿತ ಭಾಷಣ ಮಾಡಿರುವುದು ಸಮುದಾಯಕ್ಕೆ ನೋವಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಯಿದೇ ದೇವುಸ್ ಶಿ್ಕ್ಷಣ ಸಂಸ್ಥೆಗಳ ಸಂಚಾಲಕ, ಧರ್ಮಗುರು ವಂ.ಲಾರೆನ್ಸ್ ಮಸ್ಕರೇನಸ್ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾ.25 ರಂದು ವಾಟ್ಸ್ ಆಫ್ನಲ್ಲಿ ಪ್ರಚಾರವಾದ ಹಿಂದೂ ಜಾಗರಣ ವೇದಿಕೆಯ ಕಾರ್ಯಕ್ರಮದ ಭಾಷಣದಲ್ಲಿ ಡಾ.ಎಂ.ಕೆ.ಪ್ರಸಾದ್ ಅವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿ […]








