ಪುತ್ತೂರು

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌ […]

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಏ. 11ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ | ಚುನಾವಣಾಧಿಕಾರಿ ಗಿರೀಶ್ ನಂದನ್ ಮಾಹಿತಿ

ಪುತ್ತೂರು: ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, ಏ. 20ರಂದು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ತಾಲೂಕು ಆಡಳಿತ ಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣೆಯನ್ನು ಸೂಸೂತ್ರ ಮತ್ತು ನಿರ್ಭೀತಿಯಿಂದ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 220 ಮತದಾನ ಕೇಂದ್ರಗಳಿವೆ. ಈಗಾಗಲೇ ಇವತ್ತಿನ ದಿನಕ್ಕೆ ಸಂಬಂಧಿಸಿ 2,10,792 ಮತದಾರರಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಮಾಧ್ಯಮ ಸಹಿತ ವಿವಿಧ

ಏ. 11ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ | ಚುನಾವಣಾಧಿಕಾರಿ ಗಿರೀಶ್ ನಂದನ್ ಮಾಹಿತಿ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 3ರಂದು ಪ್ರತಿಷ್ಠಾ ಮಹೋತ್ಸವ, ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಏ. 2ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ಭಜನ ಮಂದಿರದಿಂದ ದೇವಸ್ಥಾನದವರೆಗೆ ಹೊರೆಕಾಣಿಕೆ ಮೆರವಣಿಗೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ. 3ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆದು,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ Read More »

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ

ಪುತ್ತೂರು: ಮಾಡಾವು ಪಲ್ಲತ್ತಡ್ಕದ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವ ಏ. 5ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ, ಮಧ್ಯಾಹ್ನ ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಕೆಯ್ಯೂರು ಶ್ರೀ ದುರ್ಗಾ ಭಜನಾ ಮಂಡಳಿಯಿಂದ ಭಜನೆ, ಭಂಡಾರ ತೆಗೆದು ಅನ್ನಸಂತರ್ಪಣೆ ಬಳಿಕ ಶ್ರೀ ಹೊಸಮ್ಮ ದೈವದ ನೇಮೋತ್ಸವ,

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ Read More »

ಏಪ್ರಿಲ್ 8ರಂದು ಮುಖಗಳು ಕಲಾಕೃತಿ ಪ್ರದರ್ಶನ

ಪುತ್ತೂರು: ಪರ್ಪುಂಜ ಸೌಗಂಧಿಕ ಆರ್ಟ್ ಗ್ಯಾಲರಿಯಲ್ಲಿ ಏಪ್ರಿಲ್ 8ರಂದು ಸಂಜೆ 4ಕ್ಕೆ ಮುಖಗಳು ಕಲಾಕೃತಿ ಪ್ರದರ್ಶನ ನಡೆಯಲಿದೆ. ಆದಿತ್ಯ ಸದಾಶಿವ ರಾವ್ ಅವರ ಕಲಾಕೃತಿ ಪ್ರದರ್ಶನ ಇದಾಗಿದೆ. ಕಲಾಪ್ರದರ್ಶನ ಏಪ್ರಿಲ್ 8ರಿಂದ 20ರವರೆಗೆ ನಡೆಯಲಿದೆ. ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರದರ್ಶನ ವೀಕ್ಷಣೆಗೆ ಲಭ್ಯವಿದೆ. ಸುಬ್ರಹ್ಮಣ್ಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಎನ್.ಎಸ್. ಗೋವಿಂದ ಅವರು ದೀಪ ಬೆಳಗಿಸುವರು. ರಂಗಗೀತೆಗಳ ಕಾರ್ಯಕ್ರಮವನ್ನು ಸತ್ಯ ನಾ ಕೊಡೇರಿ, ರಾಘವೇಂದ್ರ, ಭ್ರಮರ, ಸಂದೇಶ, ಅರವಿಂದ ಕುಡ್ಲ, ರಶ್ಮಿ ನಡೆಸಿಕೊಡುವರು

ಏಪ್ರಿಲ್ 8ರಂದು ಮುಖಗಳು ಕಲಾಕೃತಿ ಪ್ರದರ್ಶನ Read More »

ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಬಿಡುಗಡೆಗೊಳಿಸಿದರು. ಏಪ್ರಿಲ್ 26, 27ರಂದು ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವ ನಡೆಯಲಿದೆ. ಅದೇ ದಿನ ಚಂಡಿಕಾ ಹೋಮ ಸಹಿತ ಮಹಾ ಉತ್ಸವ ನಡೆಯಲಿದೆ. ಶ್ರೀ ಅಮ್ಮನವರ ಬೆಳ್ಳಿಯ ಕತ್ತಿ ಮತ್ತು ಬೆಳ್ಳಿಯ ತ್ರಿಶೂಲ ಸಮರ್ಪಣೆಯೂ ನಡೆಯಲಿದೆ. ವಾರ್ಷಿಕ ಮಹೋತ್ಸವಕ್ಕೆ ಮೊದಲು ಅಂದರೆ ಏಪ್ರಿಲ್ 20ರಂದು ಗೊನೆ ಮುಹೂರ್ತ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಮಹೋತ್ಸವದ ಆಮಂತ್ರಣ ಬಿಡುಗಡೆ Read More »

ಕೂಜುಗೋಡಿನಿಂದ ಮಠಂದೂರುವರೆಗಿನ ಶಾಸಕತ್ವದ ಅವಧಿ | ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಶಾಸಕ ಮಠಂದೂರು ಭಾಗಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮೊದಲ ಶಾಸಕ ಕೂಜುಗೋಡು ವೆಂಕಟ್ರಮಣ ಗೌಡ. ಈಗಿನ ಶಾಸಕ ಸಂಜೀವ ಮಠಂದೂರು. ಶಾಸಕ ಸಂಜೀವ ಮಠಂದೂರು ಅವರು ಕೂಜುಗೋಡು ವೆಂಕಟ್ರಮಣ ಗೌಡ ಅವರ ಮನೆಗೆ ಭೇಟಿ ನೀಡಿದರು. ಗೌಡ ಸಮುದಾಯದ ಪ್ರತಿಷ್ಠಿತ ಮನೆತನವಾದ ಕೂಜುಗೋಡು ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇವರಿಬ್ಬರೂ ಪ್ರತಿಷ್ಠಿತ ಗೌಡ ಸಮುದಾಯದ ಮನೆತನಗಳಿಗೆ ಸೇರಿದವರು ಎನ್ನುವುದೇ ಇಲ್ಲಿನ ವಿಶೇಷತೆ. ಅವಿಭಜಿತ ವಿಧಾನಸಭಾ ಕ್ಷೇತ್ರ: 1952ರಲ್ಲಿ ಸುಳ್ಯ, ಬೆಳ್ತಂಗಡಿ ಹಾಗೂ ಪುತ್ತೂರು ಒಂದೇ ವಿಧಾನಸಭಾ ಕ್ಷೇತ್ರವಾಗಿತ್ತು. ಅದು ಪುತ್ತೂರು ವಿಧಾನಸಭಾ

ಕೂಜುಗೋಡಿನಿಂದ ಮಠಂದೂರುವರೆಗಿನ ಶಾಸಕತ್ವದ ಅವಧಿ | ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಶಾಸಕ ಮಠಂದೂರು ಭಾಗಿ Read More »

ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ

ಪುತ್ತೂರು: ತಟ್ಟಿ ಚಪ್ಪರಕ್ಕೆ ಸಾಂಪ್ರದಾಯಿಕ ಮನ್ನಣೆಯಿದೆ. ಜಾತ್ರೆಯಲ್ಲೂ ತಟ್ಟಿ ಚಪ್ಪರಕ್ಕೆ ಪ್ರಾಶಸ್ತ್ಯ ನೀಡಲಾಗುತ್ತದೆ. ಪುತ್ತೂರ ಈಶನ ಜಾತ್ರೆಯಲ್ಲಿ ತಟ್ಟಿ ಚಪ್ಪರದ ವಿಶೇಷ ಮೆರುಗು ಇರುತ್ತದೆ. ಈ ವರ್ಷದ ಹೆಚ್ಚುಗಾರಿಕೆ ಎಂದರೆ, ಅಡಿಕೆ ಕಂಬದ ಬದಲಿಗೆ ಶಾಶ್ವತ ಕಂಬದ ಅಳವಡಿಕೆ. ಪ್ರತೀ ವರ್ಷ ಒಳಾಂಗಣದಲ್ಲಿ ಹಾಕುವ ಚಪ್ಪರದ ಕಂಬಗಳನ್ನು ಅಡಕೆ ಮರದಿಂದ ತಯಾರಿಸಿದ ಕಂಬಗಳನ್ನು ಹಾಕಲಾಗುತ್ತದೆ. ಆದರೆ ಈ ಬಾರಿಯ ವಿಶೇಷತೆ ಎಂದರೆ ಶಾಶ್ವತ ಸ್ಟೀಲ್ ಕಂಬಗಳನ್ನು ಈಗಾಗಲೇ ಹಾಕಲಾಗಿದೆ. ಕಂಬದ ಮೇಲೆ ಕೇವಲ ತಟ್ಟಿಗಳನ್ನು ಹಾಕಲಾಗುತ್ತದೆ. ಜಾತ್ರೆ

ಮಹಾಲಿಂಗೇಶ್ವರನ ಜಾತ್ರೆಗೆ ಸಾಂಪ್ರದಾಯಿಕ ತಟ್ಟಿ ಚಪ್ಪರದ ಸೊಬಗು | ಚಪ್ಪರಕ್ಕಾಗಿ ಶಾಶ್ವತ ಕಂಬ ಅಳವಡಿಕೆ Read More »

ನಿವೃತ್ತ ಶಿಕ್ಷಕ ದಿ.ಮದನ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆ

ಪುತ್ತೂರು: ಇತ್ತೀಚೆಗೆ ನಿಧನರಾದ ಕುದ್ಮಾರು ಶಾಲಾ ನಿವೃತ್ತ ಮುಖ್ಯ ಶಿಕ್ಷಕ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಮದನ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶಾಂತಿಮೊಗರು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಮಾತನಾಡಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಮದನ ಪೂಜಾರಿಯವರ ಪಾತ್ರ ಮಹತ್ತರ. ಜತೆಗೆ ತನ್ನ ಶಿಷ್ಯರನ್ನು ದೇವಸ್ಥಾನದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ್ದಾರೆ. ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಬೇಕೆಂದು ಪಣತೊಟ್ಟ ಅವರು ಆ ಸಂದರ್ಭದಲ್ಲಿ

ನಿವೃತ್ತ ಶಿಕ್ಷಕ ದಿ.ಮದನ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆ Read More »

ಅಂಚೆ ಕಚೇರಿಯಲ್ಲಿ Ramp, ಪ್ರತ್ಯೇಕ ಕೌಂಟರ್ ಅಗತ್ಯ | ಪುತ್ತೂರು ಅಂಚೆ ಕಚೇರಿಗೆ ಅಸಹಾಯಕರ ಸೇವಾ ಟ್ರಸ್ಟ್ ನಿಂದ ಮನವಿ

ಪುತ್ತೂರು: ಸರಕಾರದ ನಿಯಮದಂತೆ ಪಾನ್ ಕಾರ್ಡ್, ಆಧಾರ್ ಕಾರ್ಡ್ ಗೆ ಫೋನ್ ನಂಬರ್ ಜೋಡಿಸಬೇಕಾದ ಅನಿವಾರ್ಯತೆ ಇದ್ದು, ಈ ಎಲ್ಲಾ ಕೆಲಸ ಕಾರ್ಯಗಳಿಗೆ ಅಂಚೆ ಕಚೇರಿಗೆ ಬರುವ ವಿಕಲಚೇತನ, ವಿಶೇಷ ಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಕಡ್ಡಾಯವಾಗಿ ಇರಲೇಬೇಕಾದ Ramp ವ್ಯವಸ್ಥೆ ಪುತ್ತೂರು ಅಂಚೆ ಕಚೇರಿಗೆ ಇರುವುದಿಲ್ಲ ಇದರಿಂದ ಅನನುಕೂಲವಾಗುತ್ತಿದ್ದು, ತಕ್ಷಣ Ramp ವ್ಯವಸ್ಥೆಯನ್ನು ಮಾಡುವಂತೆ ಅಸಹಾಯಕರ ಸೇವಾ ಟ್ರಸ್ಟ್ ಅಂಚೆ ಕಚೇರಿಗೆ ಮನವಿ ಮಾಡಿದೆ. ಕಳೆದ 15 ವರ್ಷಗಳಿಂದ ಅಸಹಾಯಕರ ಸೇವಾ ಟ್ರಸ್ಟ್ ನಿರಂತರವಾಗಿ ಸಮಾಜದಲ್ಲಿ

ಅಂಚೆ ಕಚೇರಿಯಲ್ಲಿ Ramp, ಪ್ರತ್ಯೇಕ ಕೌಂಟರ್ ಅಗತ್ಯ | ಪುತ್ತೂರು ಅಂಚೆ ಕಚೇರಿಗೆ ಅಸಹಾಯಕರ ಸೇವಾ ಟ್ರಸ್ಟ್ ನಿಂದ ಮನವಿ Read More »

error: Content is protected !!
Scroll to Top