ಪುತ್ತೂರು

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಹನುಮಗಿರಿ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಏ.4 ರಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಏ.4 ರಂದು ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು, ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಏ.5 ರಂದು ಬೆಳಿಗ್ಗೆ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ […]

ಏ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವಏ.ಮಾ.4 ರಿಂದ 6 : ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಏ.3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಹೊರೆಕಾಣಿಕೆ ಸಮರ್ಪಣೆ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶಾಂತಿಗೋಡು ವಿಷ್ಣುಮೂರ್ತಿ ಭಜನಾ ಮಂದಿರದಿಂದ ಭಕ್ತಾದಿಗಳು ಸಮರ್ಪಿಸಿದ ಹೊರೆಕಾಣಿಕೆ ಮೆರವಣಿಗೆ ಸಾಗಿ ಶ್ರೀ ದೇವಸ್ಥಾನದಲ ಉಗ್ರಾಣದಲ್ಲಿ ಜಮಾವಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.

ನಾಳೆ (ಮಾ.3) : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ | ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

ಪುತ್ತೂರು: 2023-24ನೇ ಸಾಲಿನ ಶೈಕ್ಷಣಿಕ ಅವಧಿ ಮೇ.29 ರಿಂದ ಆರಂಭವಾಗಲಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಕೆಗಳು ಮಾ.29 ರಿಂದ ಆರಂಭಗೊಳ್ಳುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. 2023-24ನೇ ಮೊದಲ ಶೈಕ್ಷಣಿಕ ಅವಧಿ ಮೇ. 29ರಿಂದ ಅಕ್ಟೋಬರ್ 7 ರ ತನಕ,

ಶೈಕ್ಷಣಿಕ ಅವಧಿ ಮೇ 29ರಿಂದ ಆರಂಭ | ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ | 2023-24ನೇ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 30ರಂದು ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ಎಂಬಲ್ಲಿ ಸಂಭವಿಸಿದೆ. ರೆನೀಶ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರ ತಮ್ಮ ಎರಡು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯಲ್ಲಿ ರೆನೀಶನು ಒಬ್ಬರೇ ವಾಸವಾಗಿದ್ದರು. ಇಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಮಾ. 30 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದು, ರಾತ್ರಿ ಸುಮಾರು 12.00 ಗಂಟೆಯ ಸಮಯಕ್ಕೆ ಚಿಕ್ಕಪ್ಪನ ಮಗ ಜಿತಿನ್ ಗೆ ದೂರವಾಣಿ ಮೂಲಕ, ನನ್ನ ಮರಣಕ್ಕೆ ನಾನೆ

ಉಪ್ಪಿನಂಗಡಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್  27ರಿಂದ 30ರವರೆಗೆ ನಡೆದ  42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ  ವೆಂಕಟೇಶ್ ಪ್ರಸಾದ್  45ರ ವಯೋಮಾನದ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ. ಅವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ Read More »

ಪೆರ್ನೆ-ಕರೆಕೋಡಿ-ಪೆಜಕ್ಕೊಡೆ-ಅಗರ್ತಬೈಲು-ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಕ್ತಾಯ ಹಂತ | ಶಾಸಕ ಮಠಂದೂರು ಅವರಿಗೆ ಅಭಿನಂದನೆ ಸಲ್ಲಿಸಿದ ಊರವರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ಅನುದಾನದಲ್ಲಿ ಬಿಳಿಯೂರು ಗ್ರಾಮದ ಬೂತ್ ಸಂಖ್ಯೆ 31ರ ಪೆರ್ನೆ. ಕೆರೆ ಕೋಡಿ ಪೆಜಕ್ಕೊಡೆ ಪದ ಬರಿ ಅಗರ್ತ ಬೈಲು ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಂಕ್ತಾ ಹಂತದಲ್ಲಿದೆ. ಈ ಸಂಪರ್ಕ ರಸ್ತೆಗೆ ಆ ಭಾಗದ ಜನರ ಬೇಡಿಕೆಯಂತೆ ಶಾಸಕರು  25 ಲಕ್ಷ ಅನುದಾನ ಮಂಜೂರುಗೊಳಿಸಿದ್ದರು. ಈ ಕಾಮಗಾರಿಗೆ ಅನುದಾನ ಒದಗಿಸಿಕೊಟ್ಟ ಜನಪ್ರಿಯ ಶಾಸಕರಿಗೆ ಈ ಭಾಗದ ಜನತೆ ಅಭಿನಂದನೆ ಸಲ್ಲಿಸಿದ್ದು, ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ

ಪೆರ್ನೆ-ಕರೆಕೋಡಿ-ಪೆಜಕ್ಕೊಡೆ-ಅಗರ್ತಬೈಲು-ಗುಂಡಿ ರಸ್ತೆ ಕಾಂಕ್ರಿಟೀಕರಣ ಮುಕ್ತಾಯ ಹಂತ | ಶಾಸಕ ಮಠಂದೂರು ಅವರಿಗೆ ಅಭಿನಂದನೆ ಸಲ್ಲಿಸಿದ ಊರವರು Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ

ಪುತ್ತೂರು : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವದ ಎ.2 ಹಾಗೂ 3 ರಂದು ವಿವಿಧ ವೈದಿಕ ಕಾರ್ಯಕ್ರ ಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಎ.2 ರಂದು ಬೆಳಿಗ್ಗೆ ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಿಂದ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಏ.3 ಸೋಮವಾರ ಬೆಳಿಗ್ಗೆ 8.30 ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ,

ಏ.2-3 : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ:  ನಾಳೆ ಹೊರೆಕಾಣಿಕೆ Read More »

error: Content is protected !!
Scroll to Top