ಪುತ್ತೂರು

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ

ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌. ಒನ್‌ ಶಾಪಿಂಗ್‌ ಮಾಲ್‌ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್‌. ಒನ್‌ ಮಾಲ್‌?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್‌. ತನ್ನದೇ ಆದ ಬ್ರ್ಯಾಂಡ್‌ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ […]

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ Read More »

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ಬರ ದೇವಸ್ಥಾನದಲ್ಲಿ ಏ.10 ರಿಂದ 17 ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಶನಿವಾರ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದ ಬಳಿಕ ದೇವಸ್ಥಾನದ ಪಕ್ಕದ ತೋಟವೊಂದರಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ,

ಏ.10 ರಿಂದ 17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಗೊನೆ ಮುಹೂರ್ತ Read More »

ವಾಕ್ಚಾತುರ್ಯ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹು ಮುಖ್ಯ: ಹೇಮ ಸುಭಾಷಿಣಿ

ಪುತ್ತೂರು :  ವಾಕ್ಚಾತುರ್ಯ ಚಾತುರ್ಯತೆ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹುಮುಖ್ಯ ಅಂಶದ ಜತೆ ಮಾತಿನಲ್ಲಿ ಸ್ಪಷ್ಪತೆ ಇರಬೇಕು. ಅದರೊಂದಿಗೆ  ವಿದ್ಯಾರ್ಥಿಗಳು ಪ್ರಾಯೋಗಿಕ ಕಲಿಕೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು  ಉಪನ್ಯಾಸಕಿ ಹೇಮ ಸುಭಾಷಿಣಿ ಹೇಳಿದರು. ಅವರು ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಹಾಗೂ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ ಮಣಿಕರ್ಣಿಕ ಮಾತುಗಾರರ ವೇದಿಕೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಯು

ವಾಕ್ಚಾತುರ್ಯ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹು ಮುಖ್ಯ: ಹೇಮ ಸುಭಾಷಿಣಿ Read More »

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ

ಪುತ್ತೂರು: ಭಾರತ ಸಂಸ್ಕೃತಿಯಲ್ಲಿ ನಮ್ಮದೇ ಆದ ವೇಳಾಪಟ್ಟಿ ಇದೆ, ಅದುವೇ ಪಂಚಾಂಗ. ಚೈತ್ರ ಮಾಸದ ನವಮಿಯಂದು ರಾಮ ಹುಟ್ಟಿದ್ದರಿಂದ ಆ ದಿನ ರಾಮನವಮಿಯನ್ನು ಆಚರಣೆ ಮಾಡುತ್ತೇವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜ ಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ರಾಮನವಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ಯೋಚಿಸುವಾಗ ಕೆಟ್ಟದರಲ್ಲೂ  ಏನು ಒಳ್ಳೆಯದಿದೆ ಎಂಬುವುದನ್ನು ಯೋಚಿಸಬೇಕು. ಅಂತೆಯೇ ಜೀವನದಲ್ಲಿ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ Read More »

ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್

ಪುತ್ತೂರು: ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆಮ್ ಆದ್ಮಿ ಪಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿತ್ತು. ಇದೀಗ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪುತ್ತೂರು ಬಿಟ್ಟರೆ ಜಿಲ್ಲೆಯ ಮಂಗಳೂರು ನಗರ ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಸಂದೀಪ್ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಳೆದೊಂದು ವರ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ

ಆಮ್ ಆದ್ಮಿ ಪುತ್ತೂರು ಅಭ್ಯರ್ಥಿಯಾಗಿ ಡಾ. ಬಿ.ಕೆ. ವಿಷು ಕುಮಾರ್ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ  : ದರ್ಶನ ಬಲಿ Read More »

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವೇ ಹೀಗೆ. ಸಡಗರ, ಸಂಭ್ರಮದೊಂದಿಗೆ ಸ್ವಚ್ಛತೆ, ಶೃಂಗಾರಕ್ಕೂ ಇಲ್ಲಿದೆ ಆದ್ಯತೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ವರ್ಷಾವಧಿ ಜಾತ್ರೆಗೆ ಅಣಿಯಾಗುತ್ತಿದ್ದಂತೆ ಇಡೀ ಆಲಯ ಶೃಂಗಾರ ವರ್ಣ ಬಣ್ಣಗಳಿಂದ ಭಕ್ತರ ಕಣ್ಮನ ಸೆಳೆಯುತ್ತಿರುವುದು ನಿಜ. ಪ್ರತೀ ವರ್ಷ ಜಾತ್ರೆ ಸಂದರ್ಭದಲ್ಲಿ ದೇವಸ್ಥಾನದ ವಠಾರ ಸಹಿತ ಒಳಾಂಗಣ, ಹೊರಾಂಗಣ, ರಥಬೀದಿ ಹೀಗೆ ಇಂಚಿಂಚು ಬಿಡದೆ ಸ್ವಚ್ಛಗೊಳಿಸುವುದರ ಜತೆಗೆ ಸುತ್ತುಪೌಳಿಯ ಒಳಾಂಗಣ, ಹೊರಾಂಗಣದ ಗೋಡೆ, ಉಪ ದೇವರ ಗುಡಿಗಳು ಸಹಿತ ದೇವಸ್ಥಾನದ ಎದುರಗಡೆ

ಶ್ರೀ ಮಹಾಲಿಂಗೇಶ್ವರನ ಜಾತ್ರೆಗೆ ಸುಣ್ಣ-ಬಣ್ಣ ಶೃಂಗಾರ Read More »

ನಾಳೆಯಿಂದ (ಏ.1)  ಸಂತಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತವೈಟ್‌ ಲಿಪ್ಟಿಂಗ್‌, ಅಥ್ಲೆಟಿಕ್ಸ್‌ ಹಾಗೂ ಕ್ರಿಕೆಟ್‌ ತರಬೇತಿ ಶಿಬಿರ

ಪುತ್ತೂರು:  ಮಂಗಳೂರು ವಿಶ್ವವಿದ್ಯಾನಿ ಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವೈಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಹಾಗೂ ಕ್ರಿಕೆಟ್ ತರಬೇತಿ ಶಿಬಿರ ಏ.1 ರಿಂದ ಕಾಲೇಜಿನ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ. 18 ವರ್ಷದ ಒಳಗಿನ ಹುಡುಗ-ಹುಡುಗಿಯರಿಗೆ ತರಬೇತಿ ನಡೆಯಲಿದ್ದು, ಒಂದು ತಿಂಗಳ ಕಾಲ ಶಿಬಿರ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್‌ ಪಿಂಟೋ (9448549616) ಹಾಗೂ ರಾಜೇಶ್‌ ಮೂಲ್ಯ (9964084411) ರವರನ್ನು ಸಂಪರ್ಕಿಸಬಹುದು ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆಯಿಂದ (ಏ.1)  ಸಂತಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತವೈಟ್‌ ಲಿಪ್ಟಿಂಗ್‌, ಅಥ್ಲೆಟಿಕ್ಸ್‌ ಹಾಗೂ ಕ್ರಿಕೆಟ್‌ ತರಬೇತಿ ಶಿಬಿರ Read More »

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾ. 31 ರಂದು ಸಂಭವಿಸಿದೆ. ರೆನೀಶ್ (27) ಎಂಬಾತನೇ ಮೃತ ಯುವಕ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಇವನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ.

ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ Read More »

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಧರ್ಮಸ್ಥಳ ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಜನಜಾಗೃತಿ ಸಭೆಯಲ್ಲಿ ನಡೆಸಲಾಯಿತು. ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಲೋಕೇಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕೋಶಾಧಿಕಾರಿಯಾಗಿ ಪ್ರವೀಣ್ ಚಂದ್ರ ಆಳ್ವ ಆಯ್ಕೆಯಾದರು. ಉಪ್ಪಿನಂಗಡಿ ವಲಯಾಧ್ಯಕ್ಷರುಗಳಾಗಿ ಲೋಕೇಶ್ ಬೆತ್ತೋಡಿ, ಕುಂಬ್ರ ವಲಯಾಧ್ಯಕ್ಷರಾಗಿ ಪ್ರಕಾಶ್ಚಂದ್ರ ಕೈಕಾರ, ಕೆದಂಬಾಡಿ ವಲಯಾಧ್ಯಕ್ಷರಾಗಿ ಶ್ಯಾಮ್ ಸುಂದರ್ ರೈ, ಬೆಟ್ಟಂಪಾಡಿ ವಲಯಾಧ್ಯಕ್ಷರಾಗಿ ರವಿ ಕಟೀಲ್ತಡ್ಕ, ಬನ್ನೂರು ವಲಯಾಧ್ಯಕ್ಷರಾಗಿ ರಾಮಣ್ಣ ಗೌಡ ಗುಂಡೋಲೆ, ಪುತ್ತೂರು ವಲಯಾಧ್ಯಕ್ಷರಾಗಿ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top