ಪುತ್ತೂರು

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ರವಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಮೊದಲು ವೈಭವದ ಶೋಭಾಯಾತ್ರೆ ನಡೆಯಿತು. ದರ್ಬೆ ವೃತ್ತದಿಂದ ಹೊರಟ ಶೋಭಾಯಾತ್ರೆ ಪುತ್ತೂರು ಪೇಟೆ ಮೂಲಕ ಸಾಗಿ ಸಭಾಂಗಣದ ಬಳಿ ಸಮಾಪನಗೊಂಡಿತು. ಮುಂಭಾಗದಿಂದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುತ್ಥಳಿ ಸಾಗಿದರೆ, ಅದನ್ನು ಅನುಸರಿಸಿ ಹಾಗೂ ಚೆಂಡೆ, ಕೊಂಬು ವಾದ್ಯಗಳ ಸ್ವರದೊಂದಿಗೆ ಸ್ವಾಮೀಜಿಗಳು, ಪ್ರಮುಖರು ಸಾಗಿದರು. ಇದರ ಹಿಂದೆ ಸಾಗಿ ಬಂದ ಟ್ಯಾಬ್ಲೋಗಳು ಆಕರ್ಷಕವಾಗಿತ್ತು. […]

ಜಯಂತ್ಯೋತ್ಸವ ಸಂಸ್ಮರಣೆಯ ವೈಭವದ ಶೋಭಾಯಾತ್ರೆ Read More »

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ

ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ

ಪುತ್ತೂರು: ಸರಕಾರಿ ಕಾನೂನು ಮಹಾವಿದ್ಯಾಲಯದಲ್ಲಿ ಜ. 21ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳಾ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ತಂಡ ಭಾಗವಹಿಸಿದ್ದು, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ ಅಖಿಲ ಭಾರತೀಯ ದಕ್ಷಿಣ ಪ್ರಾಂತ ಅಂತರ್ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ Read More »

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ

ಪುತ್ತೂರು: ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು. ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲ ಯುವ ಸಮುದಾಯದ ಪ್ರೇರಕ ಶಕ್ತಿ. ಅವರ ವಿಚಾರದಾರೆಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಡಾ. ಬಿ ಎ ಕುಮಾರಹೆಗ್ಡೆ ಕರೆ ನೀಡಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಘಟಕದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ

ಸ್ವಾಮಿ ವಿವೇಕಾನಂದರು ಯುವಶಕ್ತಿಯ ಪ್ರತೀಕ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿವೇಕ ಸಪ್ತಾಹ-2023ಕ್ಕೆ ಚಾಲನೆ ನೀಡಿ ಡಾ. ಬಿ.ಎ. ಕುಮಾರಹೆಗ್ಡೆ Read More »

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ

ಪುತ್ತೂರು: ಹೊರೆಕಾಣಿಕೆ ಮೆರವಣಿಗೆ ಆರಂಭವಾಗುವ ಮೂಲಕ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ. ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು‌ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತೆಂಗಿನಕಾಯಿ ಒಡೆದು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ

ಜಯಂತ್ಯೋತ್ಸವ ಸಂಸ್ಮರಣೆಗೆ ಹೊರೆಕಾಣಿಕೆ ಸಮರ್ಪಣೆ | ದರ್ಬೆಯಲ್ಲಿ ಭವ್ಯ ಮೆರವಣಿಗೆಗೆ ಚಾಲನೆ Read More »

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ

ಪುತ್ತೂರು: ರಾಜ್ಯದ ಕೇಂದ್ರಬಿಂದುವಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ವರ್ಷದ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ಸಮಾರಂಭಕ್ಕೆ ವೇದಿಕೆ, ಸಭಾಂಗಣ ಸಿದ್ಧಗೊಳ್ಳುತ್ತಿದ್ದು, ಅಂತಿಮ ಸ್ಪರ್ಶವಷ್ಟೇ ಬಾಕಿ ಉಳಿದಿವೆ. ಜ. 22ರಂದು ಬೆಳಿಗ್ಗೆ 8 ಗಂಟೆಗೆ ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಶಂಕುಸ್ಥಾಪನೆ ಸಮಾರಂಭದ ಮೂಲಕ ಇಡೀ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಇಂದು ಸಂಜೆಯೇ ಆಗಮಿಸಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ

ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭದ ಸಿದ್ಧತೆಗಳಿಗೆ ಅಂತಿಮ ಸ್ಪರ್ಶ Read More »

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ

ಪುತ್ತೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಇದರ ಆಶ್ರಯದಲ್ಲಿ ‘5ನೇ ಕೃಷಿ ಯಂತ್ರ ಮೇಳ-2023 ಹಾಗೂ ಕನಸಿನ ಮನೆ’ ಬೃಹತ್ ಪ್ರದರ್ಶನ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಫೆ. 10ರಿಂದ 12ರವರೆಗೆ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ನಾಲ್ಕು ಯಂತ್ರಮೇಳಗಳು ಈ ವಿದ್ಯಾ

ಫೆ. 10 – 12: 5ನೇ ಕೃಷಿಯಂತ್ರ ಮೇಳ 2023, ಕನಸಿನ ಮನೆ ಬೃಹತ್ ಪ್ರದರ್ಶನ Read More »

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ನೀಡಲಾಯಿತು. ಶಾಸಕ ಸಂಜೀವ ಮಠಂದೂರು ಅವರ ಆಪ್ತ ಸಹಾಯಕ ವಸಂತ್ ಅವರು ಜಗ್ಗೇಶ್ ಅವರಿಗೆ ಆಮಂತ್ರಣ ನೀಡಿ, ಸಮಾರಂಭಕ್ಕೆ ಆಹ್ವಾನಿಸಿದರು. ಸಮಾರಂಭದಲ್ಲಿ ಭಾಗವಹಿಸಲಿರುವ ಮುಖ್ಯ ಅತಿಥಿಗಳ ಪೈಕಿ ಜಗ್ಗೇಶ್ ಅವರು ಕೂಡ ಒಬ್ಬರು. ಸಮಾರಂಭದಲ್ಲಿ ಪಾಲ್ಗೊಳ್ಳಲು ಪುತ್ತೂರಿಗೆ ಆಗಮಿಸಲಿರುವ ಜಗ್ಗೇಶ್ ಅವರು ನಂತರ

ನಟ ಜಗ್ಗೇಶ್‍ಗೆ ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವದ ಆಮಂತ್ರಣ Read More »

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮಕ್ಕೆ ಮುನ್ನದಿನವಾದ ಜ. 21ರಂದು ಸಂಜೆ 3.30ಕ್ಕೆ ದರ್ಬೆ ದುಗ್ಗಣ್ಣ ದೇರಣ್ಣ ಸಭಾಭವನದ ಬಳಿಯಿಂದ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 3.30ಕ್ಕೆ ಸರಿಯಾಗಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಪೂರ್ವಭಾವಿಯಾಗಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ದರ್ಬೆ ವೃತ್ತದಿಂದ ದೇವರಮಾರು ಗದ್ದೆಯವರೆಗೆ ನಡೆಯಲಿರುವ ಶೋಭಾಯಾತ್ರೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಜೊತೆಯಲ್ಲಿ ಮಹಾಸಂಸ್ಥಾನದ ಎಲ್ಲಾ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆ ಆಕರ್ಷಕವಾಗಿ ಮೂಡಿಬರುವಂತಾಗಲು ವಿವಿಧ ಸ್ತಬ್ದಚಿತ್ರಗಳು ಮೆರುಗು ನೀಡಲಿವೆ. ಸ್ತಬ್ಧಚಿತ್ರಗಳ್ಯಾವುವು:ಮುಂಭಾಗದಿಂದ ಶೋಭಾಯಾತ್ರೆಯ ಮಾಹಿತಿಯನ್ನು ಸಾರುತ್ತಾ,

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಸಂಸ್ಮರಣೆಯಂದು ನಡೆಯಲಿದೆ ಭವ್ಯ ಶೋಭಾಯಾತ್ರೆ | ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ವೈವಿಧ್ಯಮಯ ಸ್ತಬ್ಧಚಿತ್ರಗಳು Read More »

error: Content is protected !!
Scroll to Top