ಪುತ್ತೂರು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು […]

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆಧಾರ್ – ಪಾನ್ ಲಿಂಕ್ ಆಗದೇ ಇರುವವರು 1 ಸಾವಿರ ರೂ. ದಂಡ ಪಾವತಿಸಬೇಕು ಎಂಬ ಆದೇಶ ಬಡವರಿಗೆ ಹೊರೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಯ ಬಗ್ಗೆ ಶಾಸಕ ಸಂಜೀವ ಮಠಂದೂರು ಅವರು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ರಾಜೀವ್ ಚಂದ್ರಶೇಖರ್ ಅವರ ಗಮನ ಸೆಳೆದಿದ್ದಾರೆ. ಸರಿಯಾದ ಮಾಹಿತಿ ಇರದೇ ಆಧಾರ್ – ಪಾನ್ ಕಾರ್ಡ್ ಲಿಂಕ್ ಮಾಡದೇ ಇರುವ ಬಡವರಿಗೆ ಇನ್ನೊಂದು ಅವಕಾಶ ಮಾಡಿಕೊಡಬೇಕು ಎಂದು ಸಚಿವರ ಗಮನಕ್ಕೆ ತಂದಿದ್ದಾರೆ. ಆಧಾರ್ – ಪಾನ್ ಕಾರ್ಡ್

ಆಧಾರ್- ಪಾನ್ ಲಿಂಕ್ ಆಗದಿದ್ದರೆ ದಂಡ ಬಡವರಿಗೆ ಹೊರೆ | ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ ಶಾಸಕ ಸಂಜೀವ ಮಠಂದೂರು Read More »

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು:  ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಮಾ.31 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ, ವಿಕಲಚೇತನರ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ದ.ಕ. ಜಿಪಂ ಮಂಗಳೂರು, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಲಯನ್ಸ್ ಕ್ಲಬ್ ಇವರ ಸಹಯೋಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಮಂಗಳೂರಿನ ಯೇನೆಪೋಯಾ ಆಸ್ಪತ್ರೆಯ ನುರಿತ ವೈದ್ಯರಿಂದ ಆರೋಗ್ಯ ತಪಾಸಣೆ, ಮೂಳೆ

ಮಾ. 31: ಹಿರಿಯ ನಾಗರಿಕರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಪುತ್ತೂರು: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯವನ್ನು ಖಂಡಿಸಿ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಮಂಗ:ಳವಾರ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು. ಮುಸ್ಲಿಂಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವುದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ. ಇದು ಸರ್ಕಾರದ ಅಸಂವಿಧಾನಿಕ ತೀರ್ಮಾನವಾಗಿದೆ. ಮುಸ್ಲಿಮರ ವಿರುದ್ಧ ಸರ್ಕಾರ ನಡೆಸುವ ಷಡ್ಯಂತ್ರ ಇದಾಗಿದೆ

ಮುಸ್ಲಿಂ ಮೀಸಲಾತಿ ರದ್ಧತಿ : ಪುತ್ತೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ Read More »

ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ

ಪುತ್ತೂರು: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ, ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವ, ಸಾಮೂಹಿಕ ನಾಗತಂಬಿಲ ಏ.4 ಹಾಗೂ 5 ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಮಂಗಳವಾರ ನಡೆಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ, ಮುಖ್ಯ ಪರಿಚಾರಕ ಬಾಲಕೃಷ್ಣ ಕೆ. ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜನಾರ್ದನ ಎ.ಹೇಮಳ, ಟ್ರಸ್ಟ್ ಅಧ್ಯಕ್ಷ ನಾರಾಯಣ ಕೋರ್ಜೆ, ಆಡಳಿತ ಮಂಡಳಿ ಸದಸ್ಯರಾದ ಜಯಾನಂದ

ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ Read More »

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ

ಪುತ್ತೂರು: ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಜನಾರೋಗ್ಯ ಆಂದೋಲನದ ಭಾಗವಾಗಿ ಬೃಹತ್‍ ಕಾಲ್ನಡಿ ಜಾಥಾ ಹಾಗೂ “ಆರೋಗ್ಯಕ್ಕಾಗಿ ನಾವು” ಎಂಬ ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ ಮಾ.30 ರಂದು ಜೈನಭವನದಲ್ಲಿ ನಡೆಯಲಿದೆ ಎಂದು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿ”ಸೋಜಾ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಿತಿ ಈಗಾಗಲೇ ದ.ಕ.ಜಿಲ್ಲೆಯ ಸುಮಾರು 30 ಸಾವಿರ ಮಂದಿಯನ್ನು ನೇರವಾಗಿ ಸಂಪರ್ಕಿಸಿ ಆಂದೋಲನದ ಕುರಿತು ಮನವರಿಕೆ ಮಾಡಿದೆ. ಈ ಮೂಲಕ ಸಹಿ ಅಭಿಯಾನ, ಪರಸ್ಪರ

ಮಾ.30 : ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥಾ | ಆರೋಗ್ಯಕ್ಕಾಗಿ ನಾವು ಶೀರ್ಷಿಕೆಯಡಿ ಐತಿಹಾಸಿಕ ಸಮಾವೇಶ Read More »

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯ ಶವವೊಂದು ಗ್ರಾಪಂನ ನೀರು ಪೂರೈಕೆಯ ಸಿಮೆಂಟ್‍ ಟ್ಯಾಂಕಿನ ಒಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಡನ್ನೂರು ಗ್ರಾಮದ ತೋಟದಮೂಲೆ ಎಂಬಲ್ಲಿ ಗ್ರಾಪಂ ನೀರು ಸರಬರಾಜಿನ ಸಿಮೆಂಟ್ ಟ್ಯಾಂಕಿ ಒಳಗಡೆ ಶವ ಪತ್ತೆಯಾಗಿದ್ದು, ಪರಿಸರದಲ್ಲಿ ದುರ್ನಾತ ಬೀರುತ್ತಿರುವುದರಿಂದ ಸ್ಥಳೀಯರು ಟ್ಯಾಂಕಿಯನ್ನು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಟ್ಯಾಕಿನ ಮೇಲೆ ಕೇಸರಿ ಬಣ್ಣ ಲುಂಗಿಯೊಂದು ಪತ್ತೆಯಾಗಿದ್ದು, ಟ್ಯಾಂಕ್ ಸ್ವಚ್ಛ ಮಾಡಲು ಬಳಸುವ ಏಣಿ ನಾಪತ್ತೆಯಾಗಿದ್ದು ಸಂಶಯಕ್ಕೆ ಎಡೆಮಾಡಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹೆಚ್ಚಿನ ಮಾಹಿತಿ

ಅಪರಿಚಿತ ಗಂಡಸಿನ ಕೊಳೆತ ಶವ ನೀರಿನ ಟ್ಯಾಂಕಿಯಲ್ಲಿ ಪತ್ತೆ Read More »

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶಾಂತಿಗೋಡು  ಮಾರ್ಚ್ 2 ಹಾಗೂ 3 ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಮಾ 28 ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ದೇವಸ್ಥಾನ ಅರ್ಚಕ ರಾಮಕೃಷ್ಣ ಭಟ್ ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶುಬ್ರಹ್ಮಣ್ಯ ತೋಲ್ಪಾಡಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂಡಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಕೂಸಪ್ಪ

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್

ಪುತ್ತೂರು: ಪಿ.ಡಿ. ಹಾಗೂ ಗ್ರಂಥಪಾಲಕ ಹುದ್ದೆ ರದ್ದುಗೊಳಿಸಿರುವ ಕ್ರಮದ ವಿರುದ್ಧ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಶಾಸಕ ಸಂಜೀವ ಮಠಂದೂರು ಭರವಸೆ ಬಳಿಕ ವಾಪಾಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಂದ ಮನವಿ ಪಡೆದುಕೊಂಡು ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆಯನ್ನು ನೀಡಲಾಗುತ್ತದೆ. ಜಿಡೆಕಲ್ಲು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಆದ್ದರಿಂದ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಗ್ರಂಥಪಾಲಕ ಹುದ್ದೆಯನ್ನು ಸರಕಾರ ತೆರವು ಮಾಡಿದೆ. ಇದರ ಬಗ್ಗೆ ಈಗಾಗಲೇ ಉನ್ನತ ಶಿಕ್ಷಣ ಸಚಿವರಲ್ಲಿ

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್ Read More »

error: Content is protected !!
Scroll to Top