ಪುತ್ತೂರು

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್

ಪುತ್ತೂರು: ಕಾಂಗ್ರೆಸಿನ ಪುತ್ತೂರು ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರು ಗಟ್ಟಿಯಾಗಿ ಕೇಳಿಬರುತ್ತಿರುವ ನಡುವೆಯೇ, ಅಶೋಕ್ ಕುಮಾರ್ ರೈ ಅವರು ಕಳೆದ 6 ವರ್ಷಗಳಿಂದ ಬಿಜೆಪಿ ಸದಸ್ಯತನವನ್ನೇ ನವೀಕರಿಸಿಲ್ಲ ಎಂಬ ಮಾಹಿತಿಯನ್ನು ಪುತ್ತೂರು ಬಿಜೆಪಿ ಪ್ರಮುಖರು ಖಾತ್ರಿ ಪಡಿಸಿದ್ದಾರೆ. ಅಶೋಕ್ ಕುಮಾರ್ ರೈ ಅವರು ಶಾಸಕ ಆಕಾಂಕ್ಷಿ ಅಭ್ಯರ್ಥಿ ಎನ್ನುವುದು ಕೆಲ ವರ್ಷಗಳಿಂದಲೇ ಪ್ರಚಲಿತದ್ದಲ್ಲಿತ್ತು. ಇದರಲ್ಲೇನು ಹೊಸತನವಿಲ್ಲ. ಆದರೆ ಏಕಾಏಕೀ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ್ದಾರೆ ಎಂದರೆ ಹಲವರ ಹುಬ್ಬು ಗಂಟ್ಟಿಕ್ಕುವಂತೆ ಮಾಡಿತ್ತು. ಇದೀಗ ಇದಕ್ಕೂ […]

ಅಶೋಕ್ ಕುಮಾರ್ ರೈ ಬಿಜೆಪಿ ಸದಸ್ಯನೇ ಅಲ್ಲವೆಂದ ಬಿಜೆಪಿ ಮುಖಂಡರು | 6 ವರ್ಷ ಹಿಂದೆಯೇ ಫಿಕ್ಸ್ ಆಗಿತ್ತೇ ಕಾಂಗ್ರೆಸ್ ಸೇರುವ ಪ್ಲಾನ್ Read More »

ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ

ಪುತ್ತೂರು: ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ನೇತೃತ್ವದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಕಾರದೊಂದಿಗೆ 8 ತಂಡಗಳ ಪ್ರೋ ಮಾದರಿಯ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ಜ. 21ರಂದು ದರ್ಬೆ ಮಂಗಳಾ ಹೊಟೇಲ್ ಮುಂಭಾಗ ನಡೆಯಲಿದೆ ಎಂದು ಧ್ವನಿ, ಬೆಳಕು, ಶಾಮಿಯಾನ ಮತ್ತು ಡೆಕೋರೇಶನ್ ಮ್ಹಾಲಕರ ಸಂಘದ ಗೌರವಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂದ್ಯಾಟದ ಉದ್ಘಾಟನೆಯನ್ನು ರಾತ್ರಿ

ಜ. 21: ದರ್ಬೆಯಲ್ಲಿ 8 ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ Read More »

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಜನವರಿ 21ರಿಂದ 29ರವೆಗೆ ನಡೆಯಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವಾ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 54 ಶಕ್ತಿ ಕೇಂದ್ರ ವ್ಯಾಪ್ತಿಯ 220 ಬೂತ್ಗಳ 55 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಪೇಜ್ ಪ್ರಮುಖರು ಸಾಥ್ ನೀಡಲಿದ್ದಾರೆ. ಈ ಸಂದರ್ಭ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಮಿಸ್ಡ್ ಕಾಲ್ ಮೆಂಬರ್ಶಿಪ್ ಅಭಿಯಾನ ನಡೆಯಲಿದೆ. 3 ವರ್ಷಗಳ ಹಿಂದೆ

ಜ. 21-29: ಪುತ್ತೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ Read More »

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್.

ಪುತ್ತೂರು: ವಾರಾಂತ್ಯ ಚಟುವಟಿಕೆಯಂತಹ ಕಾರ್ಯಕ್ರಮದಿಂದ ಬದುಕು ರೂಪಿಸಿಕೊಳ್ಳುವ ಶಿಕ್ಷಣ ಸಿಗಲಿದೆ. ಉತ್ತಮ ಬದುಕಿಗೆ ಪೂರಕವಾದ ಅನುಭವಾತ್ಮಕ ಕಲಿಕೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಳಪಡಲಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ತಿಳಿಸಿದರು.ರಾಜ್ಯ ಬಾಲಭವನ ಸೊಸೈಟಿ, ತಾಲೂಕು ಬಾಲಭವನ ಸೊಸೈಟಿ, ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂಸಾರ ತಂಡ ಪುತ್ತೂರು ಇವುಗಳ ಸಹಯೋಗದಲ್ಲಿ

ವಾರಾಂತ್ಯ ಚಟುವಟಿಕೆ ಅನುಭವಾತ್ಮಕ ಕಲಿಕೆ | ಮಕ್ಕಳ ವಾರಾಂತ್ಯ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಬಿಇಓ ಲೊಕೇಶ್ ಎಸ್.ಆರ್. Read More »

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023

ಪುತ್ತೂರು: ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ 2023 ಜ. 22ರಂದು ಬೆಳಿಗ್ಗೆ 9.30ರಿಂದ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ದ.ಕ.ಜಿ.ಪಂ. ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ 3ನೇ ಸರಣಿ ಕಾರ್ಯಕ್ರಮ ಇದಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಉದ್ಘಾಟಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ

ಜ. 22ರಂದು ಗ್ರಾಮ ಸಾಹಿತ್ಯ ಸಂಭ್ರಮ 2023 Read More »

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಫೆ. 8ರಿಂದ 10ರತನಕ ನಡೆಯುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರ ಬಿಡುಗಡೆ ಮತ್ತು ಜೀರ್ಣೋದ್ಧಾರ ಸಮಿತಿ ಸಭೆ ಬುಧವಾರ ರಾತ್ರಿ ನಡೆಯಿತು. ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆಯಲ್ಲಿ ಗ್ರಾಮದ ವಿವಿಧ ಭಾಗದ ಬೈಲ್ವಾರ್ ಸಮಿತಿಯ ಸಭೆ ನಡೆಸಲು ಜವಾಬ್ದಾರಿ ನೀಡಲಾಯಿತು. ಫೆ. 10ರಂದು ಬಾಲಾಲಯ ಪ್ರತಿಷ್ಠೆ ಬಳಿಕ ನಡೆಯುವ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಸರ್ವ

ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ Read More »

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ ಪ್ರಯುಕ್ತ ಜ. 19ರಂದು ಗೊನೆ ಮಹೂರ್ತ ನೆರವೇರಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಪುತ್ತೂರಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್, ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು

ಸಂಪ್ಯ ಜಾತ್ರೆಗೆ ಗೊನೆ ಮುಹೂರ್ತ Read More »

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು. ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ. ಸಂಸ್ನರಣಾ

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ Read More »

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ

ಪುತ್ತೂರು: ಕುಂಜೂರು ಶ್ರೀ  ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಂಜೂರು ಪಂಜ  ಒಕ್ಕೂಟದ  ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ ನಡೆಯಿತು. ವಲಯ  ಮೇಲ್ವಿಚಾರಕ ಹರೀಶ್ ಕುಲಾಲ್ ಹಾಗೂ ಒಕ್ಕೂಟದ  ಅಧ್ಯಕ್ಷ ಮಹಾಲಿಂಗ ನಾಯ್ಕ ಅವರ  ಸಹಕಾರದೊಂದಿಗೆ  ಸ್ವಚ್ಛತೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ  ಸಮಿತಿ  ಅಧ್ಯಕ್ಷ ಪ್ರದೀಪ್ ಕೃಷ್ಣ  ಭಟ್, ವ್ಯವಸ್ಥಾಪನ  ಸಮಿತಿ  ಸದಸ್ಯರು  ಉಪಸ್ಥಿತರಿದ್ದರು, ಸೇವಾಪ್ರತಿನಿಧಿ ಆಶಾ, ಒಕ್ಕೂಟದ  ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.

ಕುಂಜೂರು ದೇವಸ್ಥಾನದಲ್ಲಿ ಶ್ರದ್ದಾ ಕೇಂದ್ರ ಸ್ವಚ್ಛತಾ  ಕಾರ್ಯಕ್ರಮ Read More »

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಕ್ಯಾಂಪ್ಕೋ ಮಂಗಳೂರು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ ನಡೆಯಲಿರುವ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಬೃಹತ್ ಪ್ರದರ್ಶನದ ಚಪ್ಪರ ಮುಹೂರ್ತ ಜ. 18ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಪಿ, ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್, ಕ್ಯಾಂಪ್ಕೋ ಸಂಸ್ಥೆಯ

ಫೆ. 10-12: 5ನೇ ಕೃಷಿ ಯಂತ್ರಮೇಳಕ್ಕೆ ಚಪ್ಪರ ಮುಹೂರ್ತ Read More »

error: Content is protected !!
Scroll to Top