ಪುತ್ತೂರು

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು […]

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read More »

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಪುತ್ತೂರು:  ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ ಮುರ ಒಕ್ಕಲಿಗ ಸಮುದಾಯ ಭವನದ ಮೇಲೆಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಆದಿ ಚುಂಚನಗಿರಿ ಸಂಸ್ಥಾನಮ್ ನ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಮುದಾಯ ಭವನಗಳ ಮೂಲಕ ನಮ್ಮ ಸಮಾಜದ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಆಗಿದೆ. ವಿಶೇಷ ಸ್ಥಾನಮಾನ, ಗೌರವ ಸಲ್ಲಿಸುವ ಮೂಲಕ

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ Read More »

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ

ಪುತ್ತೂರು: ಜನರ ಹಣ ಲೂಟಿ ಮಾಡಲೆಂದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹುಟ್ಟಿದ್ದು, ಆಧಾರ್ – ಪಾನ್ ಜೋಡಣೆಯ ಹೆಸರಿನಲ್ಲಿ ಜನರಿಂದ ವಸೂಲಿ ಮಾಡಿದ ಹಣವನ್ನು ಸರ್ಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಬೇಕಾಗಿದೆ. ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿ ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಪ್ರಕ್ರಿಯೆಯನ್ನು ಖಂಡಿಸುತ್ತೇವೆ ಮತ್ತು ಈಗಾಗಲೇ ಪಡೆದ ಹಣವನ್ನು ತಕ್ಷಣ ಮರುಪಾವತಿ ಮಾಡಬೇಕೆಂದು

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನ, ದೈವಸ್ಥಾನಗಳಲ್ಲಿನ ಕಲ್ಮಶಗಳು ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಿಂದ ದೂರವಾಗಿ ಭಕ್ತಿ ನೆಲೆಗೊಳ್ಳುವವ ಕಾರ್ಯವಾಗುತ್ತಿದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ನುಡಿದರು. ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ಜಾತ್ರೋತ್ಸವದ ಅಂಗವಾಗಿ ಭಾನುವಾರ ನಡೆದ  ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ನಾವು ಗಳಿಸುವ ಸಂಪತ್ತು ಧರ್ಮಾಧಾರಿತವಾಗಿರಬೇಕು. ಅಧರ್ಮದಿಂದ ಸಂಪಾಧಿಸುವ ಸಂಪತ್ತು ಶಾಶ್ವತವಲ್ಲ. ದೈಹಿಕವಾಗಿ ದೊರೆಯುವ ಸುಖವೇ ಮುಖ್ಯವಲ್ಲ.

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ Read More »

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ

ಪುತ್ತೂರು : ಹಂಟ್ಯಾರು ಸರಕಾರಿ ಉನ್ನತ ಹಿರಿಯ ಪ್ರಾರ್ಥಮಿಕ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಕುಡಿಯುವ ನೀರಿನ ಟ್ಯಾಂಕನ್ನು ದಾನಿಗಳ ಮೂಲಕ ಹಸ್ತಾಂತರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯರಾದ ಯತೀಶ್ ದೇವ ಮತ್ತು  ಹರೀಶ್ ನಾಯಕ್ ಬಳಕ್ಕ ಅವರ ನೇತೃತ್ವದಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿ ಮತ್ತು ದಾನಿಗಳಾದ ಗಣೇಶ್ ರೈ ಮೂಲೆ, ಸೀತಾರಾಮ ರೈ ಕೈಕಾರ ಅವರ ಸಹಕಾರದಿಂದ ಸೋಮವಾರ ಶಾಲಾ ಆಡಳಿತ ಮಂಡಳಿಗೆ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಆರ್ಯಾಪು ಪಂಚಾಯಿತಿ ಸದಸ್ಯರಾದ ಯತೀಶ್ ದೇವ, ಹರೀಶ್ ನಾಯಕ್ ಬಳಕ್ಕ,

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ Read More »

ಮಾ.30 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಬಿಡುಗಡೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭಾರತ ಸ್ವಾತಂತ್ರ್ಯ ಹೋರಾಟ ಹಾಗೂ 1837 ರಲ್ಲಿ ತುಳುನಾಡಿನಲ್ಲಿ ನಡೆದ ಅಮರ ಸುಳ್ಯ ಮಹಾ ಕ್ರಾಂತಿಗೂ ಇದುವ ಅವಿನಾಭಾವ ಸಂಬಂಧದ ಕುರಿತ ದಾಖಲೆಗಳನ್ನು ಕನ್ನಡ ಅನುವಾದದಲ್ಲಿ ಪ್ರಸ್ತುತಪಡಿಸುವ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಮಾ.30 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳ್ಳಳಿದೆ ಎಂದು ಲೇಖಕ ಅನಿಂದಿತ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಪುಸ್ತಕ ಇದಾಗಿದ್ದು,, ದಾಖಲೆಗಳ

ಮಾ.30 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಬಿಡುಗಡೆ Read More »

ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ

ಪುತ್ತೂರು: ಎರಡು ಉಪನ್ಯಾಸಕ ಹುದ್ದೆಗಳನ್ನು ಶಿಫ್ಟ್ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಕಾಲೇಜು ಭಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿ ನಾಯಕ ವಿನೀತ್ ಮಾತನಾಡಿ, ಕಾಲೇಜಿನಲ್ಲಿ 120 ವಿದ್ಯಾರ್ಥಿಗಳಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಆಗಬೇಕು ಎಂದು ಹೇಳುತ್ತಾರೆ. ಆದರೆ ಇರುವ ಉಪನ್ಯಾಸಕ ಹುದ್ದೆಯನ್ನೇ ಪಿರಿಯಾಪಟ್ಟಣಕ್ಕೆ ಶಿಫ್ಟ್ ಮಾಡುತ್ತಾರೆ. ಹೀಗಾದರೆ ಕಾಲೇಜು ಅಭಿವೃದ್ಧಿ ಆಗುವುದು ಹೇಗೆ? ಕಾಲೇಜಿಗೆ ಆಗಮಿಸಲು ಬಸ್

ಉಪನ್ಯಾಸಕ ಹುದ್ದೆ ಶಿಫ್ಟ್: ಜಿಡೆಕಲ್ಲು ವಿದ್ಯಾರ್ಥಿಗಳಿಂದ ಕಾಲೇಜು ಬಹಿಷ್ಕರಿಸಿ ಪ್ರತಿಭಟನೆ Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ,  ಕೆರೆ ಆಯನ ನಡೆಯುವ ಶ್ರೀ ದೇವರ ಕಟ್ಟೆಯನ್ನು ಶಿಲಾಮಯ ಕಟ್ಟೆಯಾಗಿ ರೂಪುಗೊಳಿಸುವ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿ, ಜಾತ್ರೋತ್ಸವ ಸಂದರ್ಭ ಶ್ರೀ ಮಹಾಲಿಂಗೇಶ್ವರ  ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದಲ್ಲಿರುವ , ದೇವರು ಕುಳಿತುಕೊಳ್ಳುವ, ಕೆರೆ ಆಯನ  ಮಾಡುವ ಕಟ್ಟೆಯನ್ನು ಶಿಲಾಮಯ ಕಟ್ಟೆಯನ್ನಾಗಿ  ನಿರ್ಮಾಣ ಮಾಡಿ ಅಲ್ಲಿರುವ ವರುಣನ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯಭಾಗದ ಕಟ್ಟೆ ಪುನರ್ ನಿರ್ಮಾಣಕ್ಕೆ ಚಾಲನೆ Read More »

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ

ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸೀಸ್ ಘಟಕ ಮತ್ತು ಪ್ರಯೋಗ ಶಾಲಾ ಉಪಕರಣಗಳ ಉಧ್ಘಾಟನೆ ಸೋಮವಾರ ಬೆಳಿಗ್ಗೆ ನಡೆಯಿತು. ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸರಕಾರಿ ಆಸ್ಪತ್ರೆಗಳು ಯಾವುದೇ ಖಾಸಾಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಶಾಸಕರ ಪ್ರದೇಶಾಭಿವೃಧ್ಧಿ ಯೋಜನೆಯ ಅನುದಾನದ ಮೂಲಕ ಒದಗಿಸಲಾಗಿದೆ. ರೋಟರಿ ಸಂಸ್ಥೆಯ ಕೊಡುಗೆಯೂ ಇಲ್ಲಿ ಸ್ಮರಣೀಯ . ಜನೌಷಧಿ ಕೇಂದ್ರದ ಮೂಲಕ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ನೀಡುವ ಕೆಲಸ ಕಾರ್ಯಗಳು

ಸರಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲ : ಶಾಸಕ ಮಠಂದೂರು | ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನವೀಕೃತ ಡಯಾಲಿಸಿಸ್ ಘಟಕ, ಪ್ರಯೋಗ ಶಾಲಾ ಉಪಕರಣ ಉದ್ಘಾಟನೆ Read More »

error: Content is protected !!
Scroll to Top