ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ | ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯರಿಗೆ ಸೀರೆ ಸಮವಸ್ತ್ರ
ಪುತ್ತೂರು: ಒಕ್ಕಲಿಗ ಸ್ವಸಹಾಯ ಸಂಘದ ಸುಮಾರು 5 ಸಾವಿರ ಮಹಿಳೆಯರು ಜ. 22ರಂದು ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಮವಸ್ತ್ರ ತೊಟ್ಟು, ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಒಕ್ಕಲಿಗ ಸ್ವಸಹಾಯ ಸಂಘದಲ್ಲಿ ಸುಮಾರು 8 ಸಾವಿರ ಸದಸ್ಯರಿದ್ದು, ಇದರಲ್ಲಿ 5 ಸಾವಿರ ಮಂದಿ ಮಹಿಳೆಯರು. ಅವರಿಗೆ ಸಮವಸ್ತ್ರ ವಿತರಣೆ ಮಾಡಲಿದ್ದು, ಸಾಂಕೇತಿಕವಾಗಿ ಮಂಗಳವಾರ ಸಮಿತಿಯ ಕಾರ್ಯಾಲಯದಲ್ಲಿ ಸಮವಸ್ತ್ರ ವಿತರಿಸಲಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ […]