ಪುತ್ತೂರು

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಸ್ವಾಮಿ ವಿವೇಕಾನಂದ ಯೂಥ್ ಮೂಮೆನ್ಟ್  ಮತ್ತು  ಪ್ರಗತಿ  ಪಾರಾ ಮೆಡಿಕಲ್ ಕಾಲೇಜು  ವತಿಯಿಂದ ಹದಿ ಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು. ಪ್ರೋಗ್ರಾಮಿಂಗ್ ಅಧಿಕಾರಿ  ರವಿ ರೈ ಮಾಹಿತಿ ನೀಡಿ, ಏಡ್ಸ್ ರೋಗ ನಿರ್ಮೂಲನೆಗೆ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳು,  ರೊಗ ಪತ್ತೆಯಾದರೆ ವ್ಯಕ್ತಿ ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು, ಏಡ್ಸ್ ರೋಗಿಗೆ ಆತ್ಮಸ್ಥೈರ್ಯವನ್ನು ಹೆಚ್ಚುಮಾಡುವ ಕೆಲಸ ಮಾಡಬೇಕು ಎಂದರು. ಕ್ಷೇತ್ರ ಸಂಯೋಜಕಿ ಚೈತ್ರ ಸಹಕರಿಸಿದರು. ಕಾಲೇಜಿನ ಉಪನ್ಯಾಸಕಿ ಮನಸಾ […]

ಹದಿಹರೆಯದ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ Read More »

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ

ಪುತ್ತೂರು: ಹಲವು ವರ್ಷಗಳ ಬೇಡಿಕೆಯಾದ ಪುತ್ತೂರು – ಎಪಿಎಂಸಿ – ಉಪ್ಪಿನಂಗಡಿ ಸಂಪರ್ಕ ರಸ್ತೆಯ ಎಪಿಎಂಸಿ ಬಳಿಯ ರಸ್ತೆಯ ರೈಲ್ವೇ ಕ್ರಾಸಿಂಗ್ ಬಳಿ ರೂ. 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರೈಲ್ವೇ ಅಂಡರ್‌ಪಾಸ್‌ನ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಬಹು ವರ್ಷಗಳ ಬೇಡಿಕೆಯಾದ ಈ ರಸ್ತೆ ರೈತರು ಸೇರಿದಂತೆ ಜನಸಾಮಾನ್ಯರಿಗೆ ಹಾಗೂ ತುರ್ತು ನಗರಕ್ಕೆ ಬರುವವರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ

ಯೋಜನೆಗಳ ಅನುಷ್ಠಾನ ಡಬಲ್ ಇಂಜಿನ್ ಸರಕಾರದಿಂದ ಸಾಧ್ಯವಾಗಿದೆ : ಶಾಸಕ ಮಠಂದೂರು | ಎಪಿಎಂಸಿ ಬಳಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ Read More »

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು: ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ 2 ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ತುಳುನಾಡಿನ ಸಮಾಜ ಸೇವೆಯಲ್ಲಿ ನಿರತರಾಗಿರುವ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ್ನು ಗುರುತಿಸಿ ಸಂಸ್ಥೆಗೆ ಗೌರಾವರ್ಪಣೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಮನೆಯ ಫಲಾನುಭವಿ ಗಿರಿಜಾ ಮೊಗೇರ್ತಿ ತುರ್ತು ಸೇವಾ ಯೋಜನೆಯಾಗಿ 5 ಸಾವಿರ ರೂ. ಚೆಕ್ಕನ್ನು ಸಹಾಯಹಸ್ತ ಟ್ರಸ್ಟಿನ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಅರ್ಜುನ್ ಭಂಡಾರ್ಕರ್, ಗೋವಿಂದ ಬಾಬು

ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುರ್ತು ಸೇವಾ ಯೋಜನೆಯ ಚೆಕ್ ಹಸ್ತಾಂತರ Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು:ಯುವಕನೋರ್ವ ಪಾಣೆಮಂಗಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಕೆಮ್ಮಿಂಜೆ ಗ್ರಾಮದ ಲಕ್ಷ್ಮೀ ವೆಂಕಟರಮಣ ಲೇಔಟ್ ನಿವಾಸಿ ವಿಠ್ಠಲ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿದ್ದು, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು.. ಶಾಸಕ ಸಂಜೀವ ಮಠಂದೂರು ತೆಂಗಿನ ಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪತ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ತೆಂಕಿಲದಲ್ಲಿ ಶಾಲೆಯ ಮುಂದಿರುವ ಚತುಷ್ಪತ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪತ

ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ Read More »

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಕೇವಲ ಒಂದು ಧರ್ಮಕ್ಕೆ ಸೀಮಿತ ಮಾಡದೇ ಹಿಂದೂ ಸಮಾಜಕ್ಕೆ ಸಂದೇಶ ನೀಡಿದ ಅವಳಿ ವೀರರು ಎಂದು ನಾವೆಲ್ಲರೂ ಪರಿಗಣಿಸಬೇಕಾದ ಅಗತ್ಯವಿದ್ದು, ತುಳುನಾಡಿನ ಅವಳಿವೀರ ಪುರುಷರಾದ ಕೋಟಿ-ಚೆನ್ನಯರ ಹೆಸರನ್ನು ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ನೀಡುವ ಮೂಲಕ ಪುತ್ತೂರಿನಲ್ಲಿ ಇತಿಹಾಸ ನಿರ್ಮಾಣ ಆಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಭಾನುವಾರ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಶುರಾಮ

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮರ್ಪಣೆಯಾಯಿತು. ಬೆಳಗ್ಗೆ ಶ್ರೀ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನಡೆದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಮುಖ್ಯರಸ್ತೆಯಿಂದ ಹೊರಟು ದರ್ಬೆ, ಬೆದ್ರಾಳ ಮೂಲಕ ದೇವಸ್ಥಾನವನ್ನು ತಲುಪಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಯಿತು. ಸಂಜೆ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ Read More »

ಕಿಶೋರ್ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ದಿ. ಪೂವಣ್ಣಿ ಗೌಡರ ಪುತ್ರ, ಕೃಷಿಕ ಕಿಶೋರ್ (38) ಮಾ. 25ರಂದು ಬೆಳಿಗ್ಗೆ ಅಸೌಖ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಕಿಶೋರ್ ನಿಧನ Read More »

error: Content is protected !!
Scroll to Top