ಪುತ್ತೂರು

ಸಮುದಾಯ ಹಿಂದೂ ಸಮಾಜದ ರೆಂಬೆ | ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಗೆ ಚಪ್ಪರ ಮುಹೂರ್ತ ನೆರವೇರಿಸಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಸಮುದಾಯದ ಸಂಸ್ಕೃತಿ, ಸಂಸ್ಕಾರಗಳು ತನ್ನ ಚೌಕಟ್ಟಿನಲ್ಲಿ ಮುಂದುವರಿದಾಗ, ಹಿಂದೂ ಸಮಾಜ ಬಲಿಷ್ಠವಾಗಿ ಮುಂದುವರಿಯಲು ಸಾಧ್ಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಭಾನುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿಂದೂ ಸಮಾಜ ಎನ್ನುವುದು ಒಂದು ವೃಕ್ಷ. ಸಮುದಾಯಗಳು ಅದರ ರೆಂಬೆಗಳಿದ್ದAತೆ. […]

ಸಮುದಾಯ ಹಿಂದೂ ಸಮಾಜದ ರೆಂಬೆ | ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಗೆ ಚಪ್ಪರ ಮುಹೂರ್ತ ನೆರವೇರಿಸಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ಸಭಾಭವನ ಕಟ್ಟಡದಲ್ಲಿ ಜ. ೧೫ರಂದು ಕಾರ್ಯಾಲಯ ಉದ್ಘಾಟನೆಗೊಂಡಿತು. ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಕಾರ್ಯಾಲಯ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜಯಂತ್ಯೋತ್ಸವ ಸಂಸ್ಮರಣಾ ಜಿಲ್ಲಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ ಸಂಸ್ಮರಣೆ: ಕಾರ್ಯಾಲಯ ಉದ್ಘಾಟನೆ Read More »

ಅಗಳಿ ಬ್ರಹ್ಮಕಲಶೋತ್ಸವ : ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ

ಪುತ್ತೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 14ರಂದು ಬೆಳಿಗ್ಗೆ 5ಕ್ಕೆ ಧನು ಪೂಜೆ, ಬಳಿಕ ಶ್ರೀ ಗಣಪತಿ ಹೋಮ, ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ, ತತ್ವ ಕಲಶಾಭಿಷೇಕ ಜರಗಿತು.ಬೆಳಂದೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ,ಬಿ.ಸಿ ಟ್ರಸ್ಟ್, ಅಬೀರ ಕೊಡಿಮಾರು ಗೆಳೆಯರ ಬಳಗದಿಂದ ಭಜನೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಮಧಾಹ್ನ ಸವಣೂರು ಶ್ರವಣ ರಂಗ ಪ್ರತಿಷ್ಠಾನದಿಂದ ಯಕ್ಷಗಾನ ತಾಳಮದ್ದಳೆ, ಭಕ್ತಕೋಡಿ

ಅಗಳಿ ಬ್ರಹ್ಮಕಲಶೋತ್ಸವ : ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಹೋಮ Read More »

ವಿವೇಕಾನಂದ ಜಯಂತಿ, ಯುವ ಸಪ್ತಾಹ, ತಾಲೂಕು ಯುವ ಮಂಡಲ ಪ್ರಶಸ್ತಿ ಪ್ರದಾನ

ಪುತ್ತೂರು: ತಾಲೂಕು ಪಂಚಾಯತ್ ಪುತ್ತೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ, ಯುವ ಸಪ್ತಾಹ, ವಿವೇಕ ರಥ-ಯುವ ಪಥ ಹಾಗೂ ತಾಲೂಕು ಯುವ ಮಂಡಲ ಪ್ರಶಸ್ತಿ ಪ್ರದಾನ ಸಮಾರಂಭವು ಜ. 14ರಂದು ನೆಹರು ನಗರದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಿತು ವಿಷ್ಣು ಯುವಕ ಮಂಡಲ ಮಜ್ಜಾರಡ್ಕ, ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ನವೋದಯ ಮಹಿಳಾ ಮಂಡಲ ಬನ್ನೂರು, ಸ್ಪೂರ್ತಿ

ವಿವೇಕಾನಂದ ಜಯಂತಿ, ಯುವ ಸಪ್ತಾಹ, ತಾಲೂಕು ಯುವ ಮಂಡಲ ಪ್ರಶಸ್ತಿ ಪ್ರದಾನ Read More »

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಪುತ್ತೂರು: ತ್ಯಾಗ ಮತ್ತು ಸೇವೆ ಜೀವನದ ಪರಮೋಚ್ಚ ಧರ್ಮ ಎಂದು ಸವಣೂರು ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ ವಿ ಸೂರ್ಯನಾರಾಯಣ ಹೇಳಿದರು.ಆಂತರಿಕ ಗುಣಮಟ್ಟ ಭರವಸಾ ಕೋಶ , ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ವತಿಯಿಂದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. ‘ದೇವರು ಬಂದು ಭೂಮಂಡಲವನ್ನು

ಬೆಟ್ಟಂಪಾಡಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ Read More »

ಜ. 22: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ಜಯಂತ್ಯೋತ್ಸವ ಸಂಸ್ಮರಣೆ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ನೇತೃತ್ವದಲ್ಲಿ ಜ. 22ರಂದು ಬೆಳಿಗ್ಗೆ 10.30ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಗುರುವಂದನೆ, ರಜತ ತುಲಾಭಾರ, ಗ್ರಂಥ ಬಿಡುಗಡೆ ಸಮಾರಂಭ ನಡೆಯಲಿದೆ. ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ, ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕ ದಶಮಾನೋತ್ಸವ ಹಿನ್ನೆಲೆಯಲ್ಲಿ ರಜತ ತುಲಾಭಾರ, ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಮಹಾಪ್ರಬಂಧ ಸಂಸ್ಕೃತ

ಜ. 22: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78ನೇ ಜಯಂತ್ಯೋತ್ಸವ ಸಂಸ್ಮರಣೆ Read More »

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಗೋಣಿಕೊಪ್ಪದ ಕಾವೇರಿ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಐಟಿ ಫೆಸ್ಟ್“ಕಾವೇರಿ ಅಚಿಂತ್ಯ ಟೆಕ್ ಫೆಸ್ಟ್”ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟ್ರೆಶರ್ ಹಂಟ್ ಸ್ಪರ್ಧೆಯಲ್ಲಿ ಕಾರ್ತಿಕ್ ಕೆ.ಆರ್ ಮತ್ತು ಪ್ರಿನ್ಸಿಟಾ ಡಿಸೋಜ ದ್ವಿತೀಯ ಬಹುಮಾನ, ವೆಬ್ಸೈಟ್ ಡಿಜೈನ್ ಸ್ಪರ್ಧೆಯಲ್ಲಿ ದೀಪಕ್ ಆಚಾರ್ಯ ಮತ್ತು ಮಹಮ್ಮದ್ ಶಿಯಾಬುದ್ದೀನ್ ಪ್ರಥಮ ಬಹುಮಾನ, ವಿಡಿಯೋಗ್ರಫಿಯಲ್ಲಿ ಕೆಲ್ವಿನ್ ಆಂಟನಿ ಕುರಿಯಾಕೋಸ್ ಮತ್ತು ಆದಿತ್ಯ ದಿನೇಶ್ ಪ್ರಥಮ ಬಹುಮಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳಿಗೆ ಪಿನ್ಯಾಕಲ್ ಐಟಿ ಕ್ಲಬ್ನ

ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ಘಟಕಗಳು, ಎನ್ ಸಿ ಸಿ ಆರ್ಮಿ ಮತ್ತು ನೇವಿ ಘಟಕಗಳು, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಐಕ್ಯುಎಸಿ ಇವುಗಳ ಸಹಯೋಗದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅತಿಥಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟನಿ ಪ್ರಕಾಶ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನಾಚರಣೆ Read More »

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ

ಪುತ್ತೂರು: ಪುತ್ತೂರಿಗೆ ಆಗಮಿಸಿದ ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ ಸ್ವಾಗತ ನೀಡಲಾಯಿತು. ತಾಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಕಬಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಬಕ ಗ್ರಾಪಂ ಅಧ್ಯಕ್ಷ ವಿನಯ್ ಕಲ್ಲೇಗ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ಬಳಿಕ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪಕ್ಕೆ ಜಾಥಾದಲ್ಲಿ ತೆರಳಲಾಯಿತು.

ವಿವೇಕ ರಥ – ಯುವ ಪಥಕ್ಕೆ ಕಬಕದಲ್ಲಿ‌ಸ್ವಾಗತ Read More »

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ

ಪುತ್ತೂರು: ಪುತ್ತೂರಿನಲ್ಲಿ ನಡೆಯಲಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣವನ್ನು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ನೀಡಲಾಯಿತು. ಆಮಂತ್ರಣವನ್ನು ದೇವರ ಮುಂದೆ ಇಟ್ಟು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಎಂ.ಪಿ ಉಮೇಶ್, ಯು.ಪಿ. ರಾಮಕೃಷ್ಣ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಜಯಂತ್ಯೋತ್ಸವ: ಡಿ.ವಿ.ಸದಾನಂದ ಗೌಡರಿಗೆ ಆಮಂತ್ರಣ Read More »

error: Content is protected !!
Scroll to Top