ಪುತ್ತೂರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮುಡ್ನೂರು ಆದಿಲಕ್ಷ್ಮೀ ಸಂಘ ಉದ್ಘಾಟನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರೇಸ್ಟ್ ಪುತ್ತೂರು.ಚಿಕ್ಕಮುಡ್ನೂರು ಕಾರ್ಯಕ್ಷೇತ್ರದ ಆದಿಲಕ್ಷ್ಮೀ ಸಂಘವನ್ನು ಶನಿವಾರ ಉದ್ಘಾಟಿಸಲಾಯಿತು. ಯೋಜನೆಯ ಪುತ್ತೂರು ಯೋಜನಾಧಿಕಾರಿ ಆನಂದ ಕೆ. ಸಂಘ ಉದ್ಘಾಟಿಸಿ ಶುಭ ಹಾರೈಸಿದರು. ಸಂಘದ ಪ್ರಬಂಧಕರಾಗಿ ಗೀತಾ, ಸಂಯೋಜಕರಾಗಿ ಮಾಲಿನಿ, ಕೋಶಾಧಿಕಾರಿಯಾಗಿ ಯಶೋದಾ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಒಕ್ಕೂಟದ ಉಪಾಧ್ಯಕ್ಷೆ ಪೂರ್ಣಿಮಾ, ಚಿಕ್ಕಮುಡ್ನೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚಂದ್ರಿಕಾ, ಕೇಪುಲು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೀಣಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮುಡ್ನೂರು ಆದಿಲಕ್ಷ್ಮೀ ಸಂಘ ಉದ್ಘಾಟನೆ Read More »

ರಾಧಾಕೃಷ್ಣ ರಾವ್ ನಿಧನ

ಪುತ್ತೂರು: ಕೊಂಬೆಟ್ಟು ನಿವಾಸಿ ರಾಧಾಕೃಷ್ಣ ರಾವ್ (61) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಸಹೋದರು, ಸಹೋದರಿಯರನ್ನು ಅಗಲಿದ್ದಾರೆ.

ರಾಧಾಕೃಷ್ಣ ರಾವ್ ನಿಧನ Read More »

ಬಂಗಾರ್ ಕಾಯರ್ ಕಟ್ಟೆಯ ಪುನರ್ ನವೀಕರಣಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಂಗಾರ್ ಕಾಯರ್ ಕಟ್ಟೆಯ ನವೀಕರಣ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರೂ, ಸಮಿತಿ ಸದಸ್ಯರೂ ಆಗಿರುವ ವೇ. ಮೂ. ವಿ.ಎಸ್. ಭಟ್ ಅವರು ಪೂಜಾ ವಿಧಿವಿಧಾನ ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡ ಅವರು ಕಾಮಗಾರಿಗೆ ಚಾಲನೆ ನೀಡಿದರು. ಇಂಜಿನಿಯರ್ ಹಾಗೂ ಗುತ್ತಿಗೆದಾರ ಶಂಕರ ಭಟ್ಟ್, ಚಾಕರಿಯವರ ಕುಟುಂಬ, ನೆರೆಕರೆಯ ಭಕ್ತರು, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಂಗಾರ್ ಕಾಯರ್ ಕಟ್ಟೆಯ ಪುನರ್ ನವೀಕರಣಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟೆ Read More »

ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ

ಪುತ್ತೂರು: ಸ್ವಾತಂತ್ರ್ಯ ಸೇನಾನಿ, ಶಿಕ್ಷಕ ಶೀಂಟೂರು ದಿ.ನಾರಾಯಣ ರೈ ಸ್ಮರಣಾರ್ಥ ಅವರ ಪುತ್ರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಸವಣೂರು ಸ.ಪ.ಪೂ. ಕಾಲೇಜಿಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್ ಇದರ ಉದ್ಘಾಟನೆ ಮಾ. 24ರಂದು ನಡೆಯಿತು. ಗೇಟ್‌ ಉದ್ಘಾಟಿಸಿ ಮಾತನಾಡಿದ ಸವಣೂರು ಕೆ. ಸೀತಾರಾಮ ರೈ, ಸುತ್ತಮುತ್ತಲಿನ 8 ಗ್ರಾಮಗಳ ಸರಕಾರಿ ಶಾಲೆಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದ್ದೇನೆ. ಈ ಮೂಲಕ ನನ್ನದೇ ಶಿಕ್ಷಣ ಸಂಸ್ಥೆಯ ಜೊತೆಗೆ ಸರಕಾರಿ

ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ Read More »

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭ ಮಾ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕರ್ನಾಟಕ ಸರಕಾರದ ಸಾರಿಗೆ ಸಚಿವ ಬಿ.ಶ್ರೀರಾಮುಲು ನಾಮಫಲಕ ಅನಾವರಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ, ಕೋಟಿ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ

ಪುತ್ತೂರು: ಸ್ವ ಗ್ರಾಮದ ಶಾಲೆಗಳಲ್ಲಿ ಅದರಲ್ಲೂ ಮಾತೃ ಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಪಡೆಯಲು ಸಾಧ್ಯ ಎ೦ದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ.ಕೆ. ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಜಿ ಅವರ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ದೇಶದ ಅಮೃತ ಮಹೋತ್ಸವದ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ Read More »

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್ಲು ಅವರಿಗೆ ನೀಡಲಾಗುವುದು ಎಂದು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು  15 ಸಾವಿರ ರೂ. ನಗದು, ಪ್ರಶಸಿ  ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1985 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ Read More »

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು. ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

error: Content is protected !!
Scroll to Top