ಪುತ್ತೂರು

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶಾಂತಿಗೋಡು  ಮಾರ್ಚ್ 2 ಹಾಗೂ 3 ರಂದು ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಮಾ 28 ಮಂಗಳವಾರ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ದೇವಸ್ಥಾನ ಅರ್ಚಕ ರಾಮಕೃಷ್ಣ ಭಟ್ ಗೊನೆಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶುಬ್ರಹ್ಮಣ್ಯ ತೋಲ್ಪಾಡಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೋನಪ್ಪ ಗೌಡ ಕೈಂಡಾಡಿ, ಸುಬ್ರಮಣ್ಯ ಹೆಬ್ಬಾರ್ ಸೇರಾಜೆ, ಬಾಬು ಗೌಡ ಕೈಂಡಾಡಿ, ವಿಶ್ವನಾಥ ಬಲ್ಯಾಯ ಮುಂದೋಡಿ, ಕೂಸಪ್ಪ […]

ಮಾ.2-3 : ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ : ಗೊನೆ ಮುಹೂರ್ತ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್

ಪುತ್ತೂರು: ಪಿ.ಡಿ. ಹಾಗೂ ಗ್ರಂಥಪಾಲಕ ಹುದ್ದೆ ರದ್ದುಗೊಳಿಸಿರುವ ಕ್ರಮದ ವಿರುದ್ಧ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಶಾಸಕ ಸಂಜೀವ ಮಠಂದೂರು ಭರವಸೆ ಬಳಿಕ ವಾಪಾಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಂದ ಮನವಿ ಪಡೆದುಕೊಂಡು ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆಯನ್ನು ನೀಡಲಾಗುತ್ತದೆ. ಜಿಡೆಕಲ್ಲು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಆದ್ದರಿಂದ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಗ್ರಂಥಪಾಲಕ ಹುದ್ದೆಯನ್ನು ಸರಕಾರ ತೆರವು ಮಾಡಿದೆ. ಇದರ ಬಗ್ಗೆ ಈಗಾಗಲೇ ಉನ್ನತ ಶಿಕ್ಷಣ ಸಚಿವರಲ್ಲಿ

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.27 ರಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕು ಗಾಂಧಿನಗರ ಅಲೆಟ್ಟಿ ರಸ್ತೆ, ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ Read More »

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read More »

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಪುತ್ತೂರು:  ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ ಮುರ ಒಕ್ಕಲಿಗ ಸಮುದಾಯ ಭವನದ ಮೇಲೆಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಆದಿ ಚುಂಚನಗಿರಿ ಸಂಸ್ಥಾನಮ್ ನ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಮುದಾಯ ಭವನಗಳ ಮೂಲಕ ನಮ್ಮ ಸಮಾಜದ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಆಗಿದೆ. ವಿಶೇಷ ಸ್ಥಾನಮಾನ, ಗೌರವ ಸಲ್ಲಿಸುವ ಮೂಲಕ

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ Read More »

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ

ಪುತ್ತೂರು: ಜನರ ಹಣ ಲೂಟಿ ಮಾಡಲೆಂದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹುಟ್ಟಿದ್ದು, ಆಧಾರ್ – ಪಾನ್ ಜೋಡಣೆಯ ಹೆಸರಿನಲ್ಲಿ ಜನರಿಂದ ವಸೂಲಿ ಮಾಡಿದ ಹಣವನ್ನು ಸರ್ಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಬೇಕಾಗಿದೆ. ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿ ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಪ್ರಕ್ರಿಯೆಯನ್ನು ಖಂಡಿಸುತ್ತೇವೆ ಮತ್ತು ಈಗಾಗಲೇ ಪಡೆದ ಹಣವನ್ನು ತಕ್ಷಣ ಮರುಪಾವತಿ ಮಾಡಬೇಕೆಂದು

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನ, ದೈವಸ್ಥಾನಗಳಲ್ಲಿನ ಕಲ್ಮಶಗಳು ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಿಂದ ದೂರವಾಗಿ ಭಕ್ತಿ ನೆಲೆಗೊಳ್ಳುವವ ಕಾರ್ಯವಾಗುತ್ತಿದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ನುಡಿದರು. ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ಜಾತ್ರೋತ್ಸವದ ಅಂಗವಾಗಿ ಭಾನುವಾರ ನಡೆದ  ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ನಾವು ಗಳಿಸುವ ಸಂಪತ್ತು ಧರ್ಮಾಧಾರಿತವಾಗಿರಬೇಕು. ಅಧರ್ಮದಿಂದ ಸಂಪಾಧಿಸುವ ಸಂಪತ್ತು ಶಾಶ್ವತವಲ್ಲ. ದೈಹಿಕವಾಗಿ ದೊರೆಯುವ ಸುಖವೇ ಮುಖ್ಯವಲ್ಲ.

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ Read More »

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ

ಪುತ್ತೂರು : ಹಂಟ್ಯಾರು ಸರಕಾರಿ ಉನ್ನತ ಹಿರಿಯ ಪ್ರಾರ್ಥಮಿಕ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಕುಡಿಯುವ ನೀರಿನ ಟ್ಯಾಂಕನ್ನು ದಾನಿಗಳ ಮೂಲಕ ಹಸ್ತಾಂತರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯರಾದ ಯತೀಶ್ ದೇವ ಮತ್ತು  ಹರೀಶ್ ನಾಯಕ್ ಬಳಕ್ಕ ಅವರ ನೇತೃತ್ವದಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿ ಮತ್ತು ದಾನಿಗಳಾದ ಗಣೇಶ್ ರೈ ಮೂಲೆ, ಸೀತಾರಾಮ ರೈ ಕೈಕಾರ ಅವರ ಸಹಕಾರದಿಂದ ಸೋಮವಾರ ಶಾಲಾ ಆಡಳಿತ ಮಂಡಳಿಗೆ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಆರ್ಯಾಪು ಪಂಚಾಯಿತಿ ಸದಸ್ಯರಾದ ಯತೀಶ್ ದೇವ, ಹರೀಶ್ ನಾಯಕ್ ಬಳಕ್ಕ,

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ Read More »

ಮಾ.30 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಬಿಡುಗಡೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಭಾರತ ಸ್ವಾತಂತ್ರ್ಯ ಹೋರಾಟ ಹಾಗೂ 1837 ರಲ್ಲಿ ತುಳುನಾಡಿನಲ್ಲಿ ನಡೆದ ಅಮರ ಸುಳ್ಯ ಮಹಾ ಕ್ರಾಂತಿಗೂ ಇದುವ ಅವಿನಾಭಾವ ಸಂಬಂಧದ ಕುರಿತ ದಾಖಲೆಗಳನ್ನು ಕನ್ನಡ ಅನುವಾದದಲ್ಲಿ ಪ್ರಸ್ತುತಪಡಿಸುವ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಮಾ.30 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳ್ಳಳಿದೆ ಎಂದು ಲೇಖಕ ಅನಿಂದಿತ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಪುಸ್ತಕ ಇದಾಗಿದ್ದು,, ದಾಖಲೆಗಳ

ಮಾ.30 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಪುತ್ತೂರಿನಲ್ಲಿ ಅಂದು ನಡೆದದ್ದು ಏನು ?” ಕಿರು ಇ-ಪುಸ್ತಕ ಬಿಡುಗಡೆ Read More »

error: Content is protected !!
Scroll to Top