ಪುತ್ತೂರು

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ

ಪುತ್ತೂರು: ಹಳೆಯ ಮನೆಗಳ ಭಿತ್ತಿಗಳಲ್ಲಿ ಅನೇಕಾನೇಕ ಮಾದರಿಯೆನಿಸುವ ವ್ಯಕ್ತಿಗಳ ಫೋಟೋಗಳಿರುತ್ತಿದ್ದವು. ಆದರೆ ಹೊಸ ಮನೆಗಳನ್ನು ಕಟ್ಟಿಕೊಂಡಂತೆಲ್ಲ ಗೋಡೆಗಳು ಖಾಲಿಯಾಗುತ್ತಿವೆ. ಅತಿಯಾದ ಮೊಬೈಲ್ ಬಳಕೆಯಿಂದ ಗ್ರಂಥಾಲಯಗಳು ಖಾಲಿಯಾಗುತ್ತಿವೆ. ಪರಿಣಾಮವಾಗಿ ನಮ್ಮ ಜ್ಞಾನವೂ ಖಾಲಿಯಾಗಿ ವ್ಯಕ್ತಿತ್ವಗಳೂ ಖಾಲಿಯೆನಿಸುತ್ತಿವೆ. ಹೀಗೆ ಖಾಲಿಯಾದ ವ್ಯಕ್ತಿತ್ವಗಳನ್ನು ತುಂಬಿಕೊಳ್ಳುವುದಕ್ಕೆ ಸ್ವಾಮಿ ವಿವೇಕಾನಂದರoತಹ ವ್ಯಕ್ತಿತ್ವಗಳ ಆದರ್ಶಗಳು ಬೇಕಾಗಿವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಗುರುವಾರ ಆಯೋಜಿಸಲಾದ ಸ್ವಾಮಿ ವಿವೇಕಾನಂದ […]

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ವಿವೇಕಾನಂದ ಜಯಂತಿ ಆಚರಣೆ | ಖಾಲಿಯಾದ ವ್ಯಕ್ತಿತ್ವಗಳಿಗೆ ಸತ್ವ ತುಂಬಲು ಆದರ್ಶ ಪುರುಷರು ಬೇಕು : ರಾಕೇಶ್ ಕಮ್ಮಜೆ Read More »

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ

ಪುತ್ತೂರು: ಸ್ತ್ರೀ ಸ್ವಾತಂತ್ರ್ಯದ  ಅರಿವಿನ ಕೊರತೆ ನಮ್ಮ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳಲ್ಲಿ ಒಂದಾಗಿದೆ. ಆದ್ದರಿಂದ ಈ ಬಗೆಗಿನ ಅರಿವನ್ನು ಹೆಣ್ಣುಮಕ್ಕಳಲ್ಲಿ ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೊಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವಿಶ್ವ ಹಿಂದೂ ಪರಿಷತ್, ದುರ್ಗಾ ವಾಹಿನಿ ಪುತ್ತೂರು ಹಾಗೂ ಅಂಬಿಕಾ ವಿದ್ಯಾಲಯದ ಸಹಯೋಗದೊಂದಿಗೆ ನಡೆದ ಸ್ತ್ರೀ ಸಬಲೀಕರಣದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸನಾತನ ಸಂಸ್ಕೃತಿಯಲ್ಲಿ,

ಸ್ತ್ರೀ ಸ್ವಾತಂತ್ರ್ಯದ ಅರಿವಿನ ಕೊರತೆ ನೀಗಿಸಬೇಕಿದೆ: ರಾಜಶ್ರೀ ಎಸ್ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ತ್ರೀ ಸಬಲೀಕರಣದ ಕಾರ್ಯಾಗಾರ Read More »

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ ಜ. 14ರಂದು ನಡೆಯಲಿದೆ. ಹಿಂದೂ ಜಾಗರಣಾ ವೇದಿಕೆ, ಕೂಡುರಸ್ತೆ ದುರ್ಗಾ ಭಜನಾ ಮಂಡಳಿ, ವಿಕ್ರಂ ಯುವಕ ಮಂಡಲ, ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಜ. 14: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ, ಅಶ್ವತ್ಥ ಪೂಜೆ Read More »

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 13ರಂದು ಧನುಪೂಜೆ, ಹೋಮ ಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 5ಕ್ಕೆ ಧನುಪೂಜೆ, 6ರಿಂದ ಶ್ರೀ ಗಣಪತಿ ಹೋಮ ಅಂಕುರ ಪೂಜೆ , ಪ್ರಾಯಶ್ಚಿತ  ಹೋಮ ನಡೆಯಿತು. ನಂತರ ಬೆಳಂದೂರು ವಿಷ್ಣು ಪ್ರಿಯ ಭಜನಾ ಮಂಡಳಿ. ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದಿಂದ ಭಜನೆ ಜರಗಿತು. ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ 3ರಿಂದ ಕುದ್ಮಾರು ಶ್ರೀ ಪಂಚಲಿಂಗೇಶ್ವರ

ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ ನೇತೃತ್ವದಲ್ಲಿ ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್. ಕಾರ್ಯಾಲಯ ಪಂಚವಟಿ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ನಗರಸಭೆ ವ್ಯಾಪ್ತಿಯಲ್ಲಿರುವ ಪಂಚವಟಿ ಸಂಪರ್ಕಿಸುವ ರಸ್ತೆ 7 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಯಿತು.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ Read More »

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜಗತ್ತು ಸ್ಪರ್ಧೆಯ ಮೇಲೆ ನಿಂತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಧಿ ನೀಡುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ಬೆಳೆಸುವಂತಹ ಕಾರ್ಯವನ್ನು ಶ್ರೀ ರಾಮ್ ಫೈನಾನ್ಸ್ ಮಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‍ನ ಪುತ್ತೂರು ಶಾಖೆ ಆಶ್ರಯದಲ್ಲಿ ಪುತ್ತೂರು ಟೌನ್ ಬ್ಯಾಂಕ್ ಹಾಲ್‍ನಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದರು. ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಇಂದೇ ತೀರ್ಮಾನ ಮಾಡಬೇಕು. ಹಾಗಾದಾಗ ಮಾತ್ರ ಭವಿಷ್ಯವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು

ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬದುಕು ಕಟ್ಟಿಕೊಳ್ಳಿ | ಶ್ರೀರಾಮ್ ಫೈನಾನ್ಸ್‍ ಪ್ರಾಯೋಜಕತ್ವದ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಸಂಜೀವ ಮಠಂದೂರು Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-ರಾಷ್ಟ್ರೀಯತೆ’ಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಆಚರಣೆ

ಪುತ್ತೂರು: ಶರೀರ ಬುದ್ಧಿ ಮತ್ತು ಆತ್ಮದ ಜೀವಂತಿಕೆ ಇರುವುದು ನಮ್ಮ ಸಂಪ್ರದಾಯದ ಪಾಲನೆಯಲ್ಲಿ. ನಾವು ಯೋಗ್ಯತೆಯಲ್ಲಿ ಹಿಂದುಗಳಾಗಬೇಕು. ನಮ್ಮ ಸಾಂಪ್ರದಾಯಿಕ ಪರಂಪರೆಯ ಬಗ್ಗೆ ಸುಂದರ ಪರಿಕಲ್ಪನೆ ಇರಬೇಕು. ಉದಾತ್ತ ಚಿಂತನೆಗಳ ಜೊತೆ ಬದುಕಬೇಕು. ಬದುಕಿನ ಓಘ ಮತ್ತು ಶೈಲಿ ಯೋಗ್ಯವಾಗಿದ್ದಾಗ ಕನಸು ಕಾಣಲು ಅರ್ಹರಾಗಿರುತ್ತೇವೆ ಎಂದು ಕೇಂದ್ರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ‘ಹಿಂದುತ್ವ-ರಾಷ್ಟ್ರೀಯತೆ’ಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿ ಆಚರಣೆ Read More »

ಬೆಟ್ಟಂಪಾಡಿ: ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಸಂಗ್ರಹಿಸಿದ ಹಣ ಬಾಲಕಿಗೆ ಹಸ್ತಾಂತರ

ಪುತ್ತೂರು: ಪಾಣಾಜೆ ಬಿ.ಬಿ. ಕ್ರಿಯೇಷನ್ ಪ್ರಾಯೋಜಕತ್ವದಲ್ಲಿ ಬೆಟ್ಟಂಪಾಡಿಯಲ್ಲಿ ಜ. 11ರಂದು ರಾತ್ರಿ ನಡೆದ ಯಕ್ಷಗಾನ ಸಂದರ್ಭ ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ, ನೊಂದವರ ಪಾಲಿಗೆ ಆಸರೆ ವತಿಯಿಂದ 189ನೇ ಸೇವಾಯೋಜನೆ ನಡೆಯಿತು. ಅನಾರೋಗ್ಯದಿಂದ ಬಳಲುತ್ತಿರುವ ಸುಹಾಸಿನಿ ಎಂಬ ಬಾಲಕಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯಧನ ಸಂಗ್ರಹಿಸಲಾಯಿತು.ಬಳಿಕ ಸಮಾರಂಭದಲ್ಲಿ ನಟ ದೀಪಕ್ ರೈ ಪಾಣಾಜೆ, ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ ಅವರ ಉಪಸ್ಥಿತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಗೆ ಹಸ್ತಾಂತರಿಸಲಾಯಿತು. ಟ್ರಸ್ಟಿನ ಅಧ್ಯಕ್ಷ ಡಿ.ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು, ಆಸರೆ

ಬೆಟ್ಟಂಪಾಡಿ: ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಸಂಗ್ರಹಿಸಿದ ಹಣ ಬಾಲಕಿಗೆ ಹಸ್ತಾಂತರ Read More »

ರಾಷ್ಟ್ರೀಯ ಯುವಜನೋತ್ಸಕ್ಕೆ ಬೆಟ್ಟಂಪಾಡಿ ಕಾಲೇಜಿನ ಕಿರಣ್ ಆಯ್ಕೆ

ಪುತ್ತೂರು: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಅಯೋಜಿಸುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಮಂಗಳೂರು ನೆಹರು ಯುವ ಕೇಂದ್ರದ ಪ್ರತಿನಿಧಿಯಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಿರಣ್ ಕೆ. ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನುಪ್ರತಿನಿಧಿಸಲಿದ್ದಾರೆ. 26ನೇ ರಾಷ್ಟ್ರೀಯ ಯುವಜನೋತ್ಸವವು ಈ ಭಾರೀ ಕರ್ನಾಟಕದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ದೇಶದ ಎಲ್ಲಾ ರಾಜ್ಯಗಳ ಯುವಜನರು ಭಾಗವಹಿಸಲಿದ್ದಾರೆ ಎಂದು ನೆಹರು ಯುವಕೇಂದ್ರದ ಜಿಲ್ಲಾ ಯುವ

ರಾಷ್ಟ್ರೀಯ ಯುವಜನೋತ್ಸಕ್ಕೆ ಬೆಟ್ಟಂಪಾಡಿ ಕಾಲೇಜಿನ ಕಿರಣ್ ಆಯ್ಕೆ Read More »

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಧನುಪೂಜೆ ಪ್ರಯುಕ್ತ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜ. 13ರಂದು ಸಂಜೆ 5.30ರಿಂದ ನೆಹರೂನಗರ ರಕ್ತೇಶ್ವರಿ ವಠಾರದ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ ನಡೆಯಲಿದೆ. ಕಲಾಸಂಗಮದಲ್ಲಿ ಭಕ್ತಿಗಾನ ಭಜನಾಮೃತ, ಭಕ್ತಿರಸಮಂಜರಿ, ಸಾಂಪ್ರದಾಯಿಕ ನೃತ್ಯ, ಯಕ್ಷಗಾನ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಸಂಚಾಲಕ ಮನುಕುಮಾರ್ ಶಿವನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಮಣಿ ಕಲಾ ಸಂಘದಿಂದ ಸಾಂಸ್ಕೃತಿಕ ಕಲಾಸಂಗಮ Read More »

error: Content is protected !!
Scroll to Top