ಪುತ್ತೂರು

ಜ. 13ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ

ಪುತ್ತೂರು: ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆಯ ಪೂರ್ವಭಾವಿಯಾಗಿ ಜ. 13ರಂದು ಬೆಳಿಗ್ಗೆ 11.45ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆ ನಡೆಯಲಿದೆ.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆ ಪ್ರಕಟಣೆ ತಿಳಿಸಿದೆ.

ಜ. 13ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ Read More »

ಜ. 14: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ

ಪುತ್ತೂರು: ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜ. 14ರಂದು ವರ್ಷಾವಧಿ ಉತ್ಸವ ನಡೆಯಲಿದೆ. ಜ. 7ರಂದು ಗೊನೆ ಮುಹೂರ್ತ ನಡೆದಿದ್ದು, ಜ. 14ರಂದು ಬೆಳಿಗ್ಗೆ 5ಕ್ಕೆ ಧನು ಪೂಜೆ ನಡೆಯಲಿದೆ. ಬೆಳಿಗ್ಗೆ 9ಕ್ಕೆ ಬೈಲಾಡಿ ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಮುಡಿಪು ಪೂಜೆ ನಡೆಯಲಿದೆ. ಬೆಳಿಗ್ಗೆ 8ರಿಂದ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ಶ್ರೀ ಸತ್ಯನಾರಾಯನ ದೇವರ ಪೂಜೆ, ಶ್ರೀ ವನದುರ್ಗಾ ದೇವಿ ಮಹಾಪೂಜೆ, ಶ್ರೀ ಶಾಸ್ತಾವು ದೇವರ ಮಹಾಪೂಜೆ, ಗುರುಪೂಜೆ,

ಜ. 14: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ Read More »

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್

ಪುತ್ತೂರು: ಒಂದೊಮ್ಮೆ ಉಪ್ಪಿನಂಗಡಿ ತಾಲೂಕು ಕೇಂದ್ರ. ಕ್ರಮೇಣ ತಾಲೂಕು ಕೇಂದ್ರ ಪುತ್ತೂರಿಗೆ ವರ್ಗವಾಯಿತು. ಹಾಗೆಂದು ಈ ಎರಡು ಪಟ್ಟಣಗಳ ನಡುವಿನ ಸಂಬಂಧ ಪ್ರತ್ಯೇಕಗೊಂಡಿಲ್ಲ. ಎರಡೂ ಪಟ್ಟಣಗಳು ಹುಬ್ಬಳ್ಳಿ – ಧಾರವಾಡ ಟ್ವಿನ್ ಸಿಟಿ ಮಾದರಿಯಲ್ಲಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಬಲ ತುಂಬುವ ದಿಶೆಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ವೇಗ ಪಡೆಯುತ್ತಿದೆ. ಜಿ.ಪಂ. ರಸ್ತೆಯಾಗಿದ್ದ ಸಂದರ್ಭ ಈ ರಸ್ತೆಯ ಅಗಲ ಕೇವಲ 5.5 ಮೀ. ಎದುರಿನಿಂದ ವಾಹನ ಬಂದರೆ, ಪಕ್ಕಕ್ಕೆ ಸರಿದು ನಿಲ್ಲಬೇಕಾದ ಪ್ರಮೇಯ. ಆದ್ದರಿಂದ ರಸ್ತೆಯನ್ನು ಪಿಡಬ್ಲ್ಯೂಡಿಗೆ

ಚತುಷ್ಪಥ ಹೆದ್ದಾರಿ: ಶಾಸಕರ ಕಳಕಳಿ | ಪುತ್ತೂರು – ಉಪ್ಪಿನಂಗಡಿ ‘ಟ್ವಿನ್ ಸಿಟಿ’ ನಡುವಿನ 4 ಲೇನ್ Read More »

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಗುರುವಾರ ಸುಳ್ಯದಲ್ಲಿ ನಡೆಯಿತು. ಮೀನುಗಾರಿಕಾ ಸಚಿವ ಎಸ್. ಅಂಗಾರ ಮಾತನಾಡಿ, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಎಲ್ಲರೂ ಜೊತೆಯಾಗಿ ಸಂಘಟನೆಯ ಕಾರ್ಯದಲ್ಲಿ ತೊಡಗಿಕೊಂಡಾಗ, ಪಕ್ಷ ತಳಮಟ್ಟದಿಂದಲೇ ಬಲಯುತಗೊಳ್ಳುತ್ತದೆ ಎಂದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರೈ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಸುಳ್ಯ: ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »

ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕಿನಿಂದ ಎ ಗ್ರೇಡ್ ಮಾನ್ಯತೆ

ಪುತ್ತೂರು: ಮೌಲ್ಯಾಂಕನ ಹಾಗೂ ಶ್ರೇಣೀಕರಣಕ್ಕಾಗಿ ಸಂತ ಫಿಲೋಮಿನಾ ಕಾಲೇಜು ಕಳೆದ ಸಪ್ಟೆಂಬರ್ ತಿಂಗಳಲ್ಲಿ ನ್ಯಾಕ್ ಸಂಸ್ಥೆಗೆ ಸಲ್ಲಿಸಿದ ಸ್ವ-ಅಧ್ಯಯನ ವರದಿಯ ಮೌಲ್ಯಮಾಪನಕ್ಕಾಗಿ ನ್ಯಾಕ್ ಸಂಸ್ಥೆಯಿಂದ ನಿಯೋಜಿಸಲ್ಪಟ್ಟ ತ್ರಿ-ಸದಸ್ಯ ತಂಡವೊಂದು ಜನವರಿ ೪ ಮತ್ತು ೫ರಂದು ಕಾಲೇಜಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾದ ಉತ್ತರ ಪ್ರದೇಶದ ಮಹರ್ಷಿ ಮಾಹಿತಿ ತಂತ್ರಜ್ಞಾನ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳೂ ಹಾಗೂ ಪ್ರಸ್ತುತ ವಾರಣಾಸಿಯ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರೂ ಆದ ಡಾ| ಹೆಚ್.ಕೆ. ಸಿಂಗ್‌, ಸದಸ್ಯ ಸಂಯೋಜಕ ಹರಿಯಾಣದ ಕುರುಕ್ಷೇತ್ರ

ಸಂತ ಫಿಲೋಮಿನಾ ಕಾಲೇಜಿಗೆ ನ್ಯಾಕಿನಿಂದ ಎ ಗ್ರೇಡ್ ಮಾನ್ಯತೆ Read More »

ಕಾಣಿಯೂರು, ಸವಣೂರು ರೈತ ಉತ್ಪಾದಕ ಕಂಪೆನಿಯಿಂದ 40 ರೈತರ ಬೆಂಗಳೂರು ಅಧ್ಯಯನ ಪ್ರವಾಸ

ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪನಿ, ಕುದ್ಮಾರು ನೇತೃತ್ವದಲ್ಲಿ 40 ಮಂದಿ ರೈತರು ಆನೇಕಲ್ ರೈತ ಉತ್ಪಾದಕ ಸಂಸ್ಥೆ ಸೇರಿದಂಥೆ ಬೆಂಗಳೂರಿನ ವಿವಿಧೆಡೆಗೆ ಪ್ರವಾಸ ಕೈಗೊಂಡರು. ಸಂಸ್ಥೆಯ ಕಾರ್ಯ ಚಟುವಟಿಕೆಯ ಬಗ್ಗೆ ಮತ್ತು ಬೆಳವಣಿಗೆಯ ಬಗ್ಗೆ ಸಂಸ್ಥೆಯ ಲೆಕ್ಕಪರಿಶೋಧಕಿ ಶ್ಯಾಮಲಾ ಅವರಿಂದ ತರಬೇತಿ ಪಡೆದರು.  ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ ಬೆಂಗಳೂರು ಸಂಸ್ಥೆಗೆ ರೈತರ ತಂಡ ಭೇಟಿ ನೀಡಿ ತರಕಾರಿ ಬೆಳೆ, ಹಣ್ಣು ಹಂಪಲು ಸೇರಿದಂತೆ ಹಲವಾರು ಕೃಷಿಯನ್ನು ಬೆಳೆಸುವ ಬಗ್ಗೆ ಸಂಶೋಧನ ವಿಜ್ಞಾನಿಗಳಿಂದ ತರಬೇತಿ

ಕಾಣಿಯೂರು, ಸವಣೂರು ರೈತ ಉತ್ಪಾದಕ ಕಂಪೆನಿಯಿಂದ 40 ರೈತರ ಬೆಂಗಳೂರು ಅಧ್ಯಯನ ಪ್ರವಾಸ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಕಾಣಿಯೂರಿನ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜ. 11ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬುಧವಾರ ಬೆಳಿಗ್ಗೆ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಬುಧವಾರ ಸಂಜೆ ಅಗಳಿ ಶ್ರೀ ಸದಾಶಿವ ಭಜನಾ ಮಂಡಳಿ ಸದಸ್ಯರಿಂದ ಮತ್ತು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸದಸ್ಯರಿಂದ

ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಗುರುವಾರ ಪುತ್ತೂರು ಟೌನ್ ಬ್ಯಾಂಕ್ ಸಬಾಭವನದಲ್ಲಿ ನಡೆಯಿತು. ಶಾಸಕ  ಸಂಜೀವ ಮಠಂದೂರು ಮಾತನಾಡಿ, ಸಂಘಟನೆಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ಪಕ್ಷ ಅಧಿಕಾರದಲ್ಲಿದೆ ಎಂದು ಕೂತಲ್ಲಿಯೇ ಪ್ರಚಾರ ಮಾಡಿದರೆ ಸಾಕಾಗುವುದಿಲ್ಲ. ಪ್ರಚಾರಕ್ಕಾಗಿ ಎಷ್ಟು ಸಮಯ ನೀಡುತ್ತೇವೋ, ಸಂಪರ್ಕ ಸಾಧಿಸುತ್ತೇವೋ, ಎಷ್ಟು ಬಾರಿ ಬೂತ್ ಪ್ರವಾಸ ಕೈಗೊಳ್ಳುತ್ತೇವೆಯೋ ಅಷ್ಟು ಸಂಘಟನೆ ಆಗುತ್ತದೆ. ಪಕ್ಷ ಇನ್ನಷ್ಟು ಬಲಗೊಳ್ಳುತ್ತದೆ ಎಂದರು. ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೆರಳೆ,

ಬಿಜೆಪಿ ಕಾರ್ಯನಿರ್ವಹಣಾ ತಂಡದ ಸಭೆ Read More »

ಜ. 14: ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಯುವ ಸಪ್ತಾಹ | ವಿವೇಕ ರಥ – ಯುವ ಪಥ, ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಯುವ ಸಪ್ತಾಹ ವಿವೇಕ ರಥ – ಯುವ ಪಥ, ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ ಜ. 14ರಂದು ಬೆಳಿಗ್ಗೆ 10ರಿಂದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು ತಾಲೂಕು ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರಾವಳಿ ಅಭಿವೃದ್ಧಿ

ಜ. 14: ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಯುವ ಸಪ್ತಾಹ | ವಿವೇಕ ರಥ – ಯುವ ಪಥ, ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ Read More »

ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ | ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿಯಾಗಲಿದೆ ಎಂ ಅವರು, ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀಧರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಮಾನವೀಯ ಮೌಲ್ಯಗಳನ್ನು ಬೆಳೆಸಿ

ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಳ್ಳಿ | ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top