ಪುತ್ತೂರು

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು

ಪುತ್ತೂರು: 94 ಸಿ ಹಾಗೂ 94 ಸಿ ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸುಮಾರು 160 ಹಕ್ಕುಪತ್ರವನ್ನು  ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಸ್ತತಾರಿಸಿದರು. ಪುತ್ತೂರು ತಹಸೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್  ಉಪಸ್ಥಿತರಿದ್ದರು.

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ

ಪುತ್ತೂರು: ನಗರಸಭಾ ವಿಶೇಷ ಸಾಮಾನ್ಯ ಸಭೆ ಗುರುವಾರ ನಗರಸಭೆ ಕಾರ್ಯಾಲಯದಲ್ಲಿ ನಡೆಯಿತು. ವಿವಿಧ ಯೋಜನೆಗಳ ಗುತ್ತಿಗೆಗಳಿಗೆ ಅನುಮೋದನೆ ಪಡೆಯುವ ನಿಟ್ಟನಲ್ಲಿ ನಡೆದ ಸಭೆಯಲ್ಲಿ ನಗರ ಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ, ನಗರೋತ್ಥಾನದ ಮೂಲಕ ಬೊಳುವಾರು ತನಕ ಅಗಲೀಕರಣ ಕಾರ್ಯ ನಡೆಯಲಿದೆ. ಇದಕ್ಕಾಗಿ ಹಲವು ದಾನಿಗಳು ನಗರ ಸಭೆ ಜತೆಗೆ ಕೈಜೋಡಿಸಿದ್ದಾರೆ. ಜಾತ್ರೆ ಸಂದರ್ಭ ದೇವರ ಸವಾರಿ ಹೋಗುವ ಜಾಗದಲ್ಲಿ ಎಲ್ಲಾ ರಸ್ತೆಗಳನ್ನು ಸ್ವಲ್ಪವಾಗಿ ಇಡುವ ಪ್ರಯತ್ನ ಮಾಡಲಾಗುತ್ತಿದೆ. ಮನೆ ದುರಸ್ಥಿಯ ವಿಚಾರದಲ್ಲಿ ಚಿತ್ರ ಸಹಿತ

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ Read More »

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ

ಪುತ್ತೂರು: ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕರಾದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನಿಧನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಶ್ರೀ ಜೈನಮಠಕ್ಕೆ ಭೇಟಿ ನೀಡಿದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಅಂತಿಮ ದರ್ಶನ ಪಡೆದರು. ಸಂತಾಪ ಸಂದೇಶ ನೀಡಿದ ಅವರು, ಶ್ರೀ ಜೈನಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇನ್ನಿಲ್ಲವಾದುದು ದುಃಖದ ಸಂಗತಿ. ಪೂಜ್ಯರು ಧಾರ್ಮಿಕ ಕ್ಷೇತ್ರದ ಔನ್ನತ್ಯದ ಸ್ಥಾನದಲ್ಲಿದ್ದರೂ ಸರಳತೆಯ

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ Read More »

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ

ಪುತ್ತೂರು : 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅವರು ಕಡಬ ನೀನಾದ ನೃತ್ಯ ಕಲಾ ಶಾಲಾ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಪ್ರಮೀಳಾ ಲೋಕೇಶ್ ಅವರ ಶಿಷ್ಯೆ. ಪುತ್ತೂರು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಬಂಧಕ ಜನಾರ್ದನ ಮತ್ತು ರೇಷ್ಮಾ ದಂಪತಿ ಸುಪುತ್ರಿಯಾಗಿದ್ದಾರೆ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ Read More »

ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. ನಿಧನ

ಪುತ್ತೂರು: ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. (68) ಬುಧವಾರ ನಿಧನರಾಗಿದ್ದಾರೆ. ಬನ್ನೂರು ನಂದಿಲ ನಿವಾಸಿಯಾದ ಅವರು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದು, ಬಳಿಕ ಕಡಬದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನಿವೃತ್ತ ಉಪತಹಶೀಲ್ದಾರ್ ಬಾಲಣ್ಣ ಪಿ. ನಿಧನ Read More »

ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ

ಪುತ್ತೂರು: ಬೆಳ್ಳಾರೆ ನಿವಾಸಿ ಕುಸುಮಧರ ಆಚಾರ್ಯ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪ್ರಾರ್ಥಿ‍ವ ಶರೀರವನ್ನು ಗುರುವಾರ ರಾತ್ರಿ ತಂದು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗುವುದು. ಶುಕ್ರವಾರ ಬೆಳ್ಳಾರೆ ಸ್ವಗೃಹಕ್ಕೆ ಕೊಂಡೊಯ್ದು ಅಲ್ಲಿ ಅಂತಿಮ ವಿಧಿವಿಧಾನ ನಡೆಸಿ ಪುತ್ತೂರು ಹಿಂದೂ ರುದ್ರಭೂಮಿಯಲ್ಲಿ ಬೆಳಿಗ್ಗೆ 11.30 ಕ್ಕೆ ಅಗ್ನಿಸ್ಪರ್ಶ ಮಾಡಲಾಗುವುದು.

ಬೆಳ್ಳಾರೆ ಕುಸುಮಧರ ಆಚಾರ್ಯ ನಿಧನ Read More »

ವಿಟ್ಲ: 94 ಸಿ, 94 ಸಿಸಿ ಹಕ್ಕುಪತ್ರ ವಿತರಿಸಿದ ಶಾಸಕ ಸಂಜೀವ ಮಠಂದೂರು | 1300 ಜನರಿಗೆ ಸಾಗುವಳಿ ಚೀಟಿ, ಶೇ. 80 ಜನರಿಗೆ 94ಸಿ ಹಾಗೂ 94 ಸಿಸಿ ಹಕ್ಕುಪತ್ರ

ವಿಟ್ಲ: ಬಂಟ್ವಾಳ ಹೋಬಳಿಯ 94ಸಿ ಹಾಗೂ 94 ಸಿಸಿ ಹಕ್ಕುಪತ್ರ ವಿತರಣೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಗುರುವಾರ ಇಲ್ಲಿನ ಬ್ರಹ್ಮಶ್ರೀ ಸಭಾಭವನದಲ್ಲಿ ನಡೆಯಿತು. ಹಕ್ಕುಪತ್ರ ವಿತರಿಸಿ, ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕೋವಿಡ್ ಸಮಸ್ಯೆಯ ನಡುವೆಯೂ 1300 ಜನರಿಗೆ ಸಾಗುವಳಿ ಚೀಟಿ ಕೊಡುವ ಕೆಲಸ ಮಾಡಲಾಗಿದೆ. ಶೇ. 80 ಜನರಿಗೆ 94ಸಿ ಹಾಗೂ 94 ಸಿಸಿ ಹಕ್ಕುಪತ್ರ ನೀಡಲಾಗಿದೆ. ಈಗಾಗಲೇ ಸಾಧ್ಯವಾದಷ್ಟು ಜನರಿಗೆ ಪ್ರಾಮಾಣಿಕವಾಗಿ ಹಕ್ಕುಪತ್ರ ನೀಡುತ್ತಿದ್ದೇವೆ. ಹಕ್ಕುಪತ್ರ ಸಿಗದವರಿಗೆ ಚುನಾವಣೆ

ವಿಟ್ಲ: 94 ಸಿ, 94 ಸಿಸಿ ಹಕ್ಕುಪತ್ರ ವಿತರಿಸಿದ ಶಾಸಕ ಸಂಜೀವ ಮಠಂದೂರು | 1300 ಜನರಿಗೆ ಸಾಗುವಳಿ ಚೀಟಿ, ಶೇ. 80 ಜನರಿಗೆ 94ಸಿ ಹಾಗೂ 94 ಸಿಸಿ ಹಕ್ಕುಪತ್ರ Read More »

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಮಾ. 26ರಂದು ಪುತ್ತೂರಿನಲ್ಲಿ ನಡೆಯಲಿರುವ ಯುವ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ ಪ್ರಾಸ್ತಾವಿಕವಾಗಿ ಮಾತನಾಡಿ, ಮಾರ್ಚ್ 26ರಂದು ಮಧ್ಯಾಹ್ನ 3 ಗಂಟೆಗೆ ಜಾಥಾ ನಡೆಯಲಿದ್ದು, ಜಾಥಾವು ಎರಡು ಭಾಗಳಿಂದ ಆಗಮಿಸಲಿದೆ. ವಿಟ್ಲದಿಂದ ಹಾಗೂ ಕುಂಬ್ರದಿಂದ ಜಾಥಾ ಆಗಮಿಸಿ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಸೇರಲಿದೆ. ಕಾರ್ಯಕ್ರಮದ ಯಶಸ್ಸಿಗೆ

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ Read More »

ನಾಳೆ (ಮಾ.24) : ಹಿಂ.ಜಾ.ವೇ. ವತಿಯಿಂದ  ಆ‍ಶ್ಲೇಷ ಬಲಿ, ಅರ್ಧ ಏಕಹಾ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ ಆಶ್ಲೇಷ ಬಲಿ, ಧಾರ್ಮಿಕ ಸಭೆ ಹಾಗೂ ಅರ್ಧ ಏಕಾಹ ಭಜನೆ ಮಾ.24 ಶುಕ್ರವಾರ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಇರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಸ್ಥಳದಲ್ಲಿ ನಡೆಯಲಿದೆ. ಬೆಳಿಗ್ಗೆ 6 ರಿಂದ ಗಣಪತಿ ಹೋಮ, 7 ರಿಂದ ಅರ್ಧಏಕಹಾ ಭಜನೆ, ಸಂಜೆ 6 ರಿಂದ ಆಶ್ಲೇಷ ಬಲಿ, 7 ಕ್ಕೆ ಜನಜಾಗೃತಿ ಸಭೆ, 8 ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ಹಿಂದೂ ಸಮಾಜದ ದೇವಸ್ಥಾನ, ದೈವಸ್ಥಾನ,

ನಾಳೆ (ಮಾ.24) : ಹಿಂ.ಜಾ.ವೇ. ವತಿಯಿಂದ  ಆ‍ಶ್ಲೇಷ ಬಲಿ, ಅರ್ಧ ಏಕಹಾ ಭಜನೆ, ಜನಜಾಗೃತಿ ಸಭೆ Read More »

error: Content is protected !!
Scroll to Top