ಪುತ್ತೂರು

ಶಾಂತಿಗೋಡು, ನರಿಮೊಗರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ |ಶಾಸಕ ಮಠಂದೂರು ಅವರಿಂದ ಉದ್ಘಾಟನೆ

ಪುತ್ತೂರು: ಶಾಂತಿಗೋಡು, ನರಿಮೊಗರು ಗ್ರಾಪಂ ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಸಡಕ್ ಯೋಜನೆಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಅಭಿವೃದ್ಧಿ ಕಾರ್ಯದಿಂದ ಊರಿನ ಚಿತ್ರಣ ಬದಲಾಗಿದೆ : ಮೀನಾಕ್ಷಿ ಶಾಂತಿಗೋಡು ಜಿಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ನನ್ನ ಜಿಲ್ಲಾ ಪಂಚಾಯಿತಿ ಅವಧಿ ಆಗಿರಬಹುದು, ಶಾಸಕರ ಐದು ವರ್ಷದ ಅವಧಿ ಆಗಿರಬಹುದು. ಹಲವು ಕೋಟಿ ಅನುದಾನ ಶಾಂತಿಗೋಡಿಗೆ […]

ಶಾಂತಿಗೋಡು, ನರಿಮೊಗರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ |ಶಾಸಕ ಮಠಂದೂರು ಅವರಿಂದ ಉದ್ಘಾಟನೆ Read More »

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪಾಣಾಜೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸಾರ್ವಜನಿಕ ಬಳಕೆಗೆ ತೆರೆದುಕೊಂಡಿದ್ದು, ಮುಂದಿನ ದಿನದಲ್ಲಿ ಡಯಾಲಿಸಿಸ್ ಘಟಕ ತೆರೆಯಲು ಪ್ರಯತ್ನಗಳು ನಡೆಯುತ್ತಿವೆ. ಇದರೊಂದಿಗೆ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಬಕ, ಬನ್ನೂರಿನ 3 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮೇಲ್ದರ್ಜೆಗೇರಿದ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನ

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು Read More »

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ರಾತ್ರಿ ಶ್ರೀ ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ ಜರಗಿತು. ಭಕ್ತವತ್ಸಲಾ ಹಾಗೂ ಕಾರ್ಣಿಕದ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಮಹಾಕಾಳಿ ಅಮ್ಮನವರ ವರ್ಷಾವಧಿ ಮೆಚ್ಚಿ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾದರು. ನೇಮೋತ್ಸವದ ಅಂಗವಾಗಿ ಅನ್ನಸಂತರ್ಪಣೆ ಜರಗಿತು.

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ Read More »

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ

ಪುತ್ತೂರು: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ಮಾ.24 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.23 ಸೋಮವಾರ ಸಂಜೆ ಗ್ಗೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. ಮಾ.24 ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ Read More »

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪಾಣಾಜೆ ಭಾಗದ ಜನರಿಗೆ 12:40 ಕೋಟಿ ರೂ.ಗಳ ಸಮುದಾಯ ಆರೋಗ್ಯ ಕೇಂದ್ರ ನೀಡಿರುವ ಸರಕಾರದ ಮಹತ್ತರ ಕೊಡುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಸೇವೆಯನ್ನು ಮಾಡುವಲ್ಲಿ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ್ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನನ್ನ ಅನುದಾನದ ಬಹುಪಾಲನ್ನು ಪುತ್ತೂರು ವಿಧಾನ ಸಭಾ

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ

ಪುತ್ತೂರು: ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು.. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,ಸಚಿವ ಎಸ್ ಅಂಗಾರ  ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ  ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ,

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ Read More »

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು

ಪುತ್ತೂರು: ಶತಮಾನದ ಕಡೆಗೆ ಹೋಗಬೇಕಿದ್ದರೆ ನಾವು ಶಾಲಾ ಅಭಿವೃದ್ಧಿಗಾಗಿ ನಾವು ಏನು ಮಾಡಬೇಕು ಎಂಬ ಯೋಚನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಜತೆಗೆ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಮುಂದೆ ಹೆತ್ತವರು

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು Read More »

ಯುಗದ ಆದಿ – ನೂತನ ವರ್ಷದ ಬುನಾದಿ

ಶೋಭಾಕೃತ್ ನಾಮ ಸಂವತ್ಸರದ ಶುಭಾಗಮನ ನಮ್ಮೆಲ್ಲ ಓದುಗ ಪ್ರಭುಗಳಿಗೆ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು. ಹಿಂದೂಗಳು ತಮ್ಮ ವರ್ಷದ ಮೊದಲ ದಿನವಾಗಿ ಆಚರಣೆ ಮಾಡುವ ದಿನ ಇದು. ಅಂತೆಯೇ ಇಂದು ಒಂದು ಸಂವತ್ಸರ ಕಳೆದು ಹೋಗಿ ಶೋಭಾಕೃತ್ ಸಂವತ್ಸರ ಹೊಸ್ತಿಲು ದಾಟಿ ಬಂದಿದೆ. ಪ್ರಕೃತಿಯ ದೃಷ್ಟಿಯಿಂದಲೂ ಯುಗಾದಿಯೆ ವರ್ಷದ ಆರಂಭ ಬ್ರಿಟಿಷ್ ಕ್ಯಾಲೆಂಡರ್ ಪ್ರಕಾರ ನಾವು ಜನವರಿ 1ರಂದು ಆಚರಿಸುವ ಹೊಸ ವರ್ಷ ಪ್ರಕೃತಿಗೆ ಪೂರಕವಿಲ್ಲ. ಆಗ ತೀವ್ರವಾದ ಶಿಶಿರದ ದಟ್ಟ ಪ್ರಭಾವದಿಂದ ಎಲೆಗಳೆಲ್ಲ ಉದುರಿಹೋಗಿ ಗಿಡ

ಯುಗದ ಆದಿ – ನೂತನ ವರ್ಷದ ಬುನಾದಿ Read More »

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್

ಪುತ್ತೂರು : ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಏನೆಕಲ್ ನಿವಾಸಿಯಾಗಿರುವ ಇವರು, ಏನೆಕಲ್ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ‌ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಅನೇಕ ವಿದ್ಯಾರ್ಥಿಗಳನ್ನು ಕ್ರೀಡಾಪಟುಗಳಾಗಿ ತಯಾರುಗೊಳಿಸಿದ್ದರು. ಶಿವರಾಮ ಏನೆಕಲ್ ಅವರು ಏನೆಕಲ್ಲು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಗಳ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ರೋಟರಿ ಸಂಸ್ಥೆ ಸುಬ್ರಹ್ಮಣ್ಯದ ಪೂರ್ವಾಧ್ಯಕ್ಷ ಹಾಗೂ 3181 ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್, ಜಿಲ್ಲಾ ಕಬಡ್ಡಿ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ತಾಲೂಕು,

ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ Read More »

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ

ಪುತ್ತೂರು: ಶಾಂತಿಗೋಡು ಗ್ರಾಮದ ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾ. 22ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಬಲ್ಲೇಗಳೇ ತುಂಬಿದ ಊರು ಬಲೆರಾವು. ತೀರಾ ಹಿಂದುಳಿದ ಪ್ರದೇಶ ಎನ್ನುವುದು ಹೆಸರಿನಿಂದಲೇ ತಿಳಿದುಬರುವ ಸತ್ಯ. ಇದೀಗ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಊರಿನ ಚಿತ್ರಣವನ್ನೇ ಬದಲಾಯಿಸಲಿದೆ. ಇದರೊಂದಿಗೆ ರಸ್ತೆ ಅಭಿವೃದ್ಧಿ, ಶಾಲೆಗಳಿಗೆ ಮೂಲಭೂತ ಸೌಕರ್ಯ ಸೇರಿದಂತೆ ಶಾಂತಿಗೋಡು ಗ್ರಾಮಕ್ಕೆ ಪುತ್ತೂರು ಶಾಸಕರು ಭರಪೂರ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ಬಲೆರಾವು ಪ್ರದೇಶದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಸೇತುವೆ ಸಹಿತ ಕಿಂಡಿ

ಇಂದು ಬಲೆರಾವು ಸೇತುವೆ ಸಹಿತ ಕಿಂಡಿ ಅಣೆಕಟ್ಟು ಲೋಕಾರ್ಪಣೆ | ತ್ರಿವಳಿ ತಾಲೂಕಿನ ಕೊಂಡಿ ಈ ಸೇತುವೆ Read More »

error: Content is protected !!
Scroll to Top