ಪುತ್ತೂರು

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್ಲು ಅವರಿಗೆ ನೀಡಲಾಗುವುದು ಎಂದು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು  15 ಸಾವಿರ ರೂ. ನಗದು, ಪ್ರಶಸಿ  ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1985 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು […]

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ Read More »

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು. ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

ಕೊಯಿಲ ಪಶುವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ ಆಡಳಿತ ಸೌಧ, ತಾಲೂಕು ಪಂ. ಕಟ್ಟಡ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ

ಕಡಬ: ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಅಳವಡಿಸಿ ಆಮೂಲಾಗ್ರ ಬದಲಾವಣೆ ಮಾಡಲಾಗಿದ್ದು, ಸಾಕಷ್ಟು  ಅಭಿವೃದ್ಧಿ ಕಾರ್ಯಗಳು ನಡೆದಿವೆ.ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಗೊಶಾಲೆಯನ್ನು ಲೋಕಾರ್ಪಣೆ ಮಾಡಿ ತಾಲೂಕು ಪಂಚಾಯಿತಿ ಕಟ್ಟಡ ಬಳಿ ನಡೆದ ಸಭೆಯಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣೆ ನೆರವೇರಿಸಿ ಅವರು ಮಾತನಾಡಿದರು. ನಾನು ಶಾಸಕನಾದ ಮೇಲೆ ಇಲ್ಲಿಯ ತನಕ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ

ಕೊಯಿಲ ಪಶುವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ ಆಡಳಿತ ಸೌಧ, ತಾಲೂಕು ಪಂ. ಕಟ್ಟಡ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ Read More »

ಎಂ.ಸಂಜೀವ ಶೆಟ್ಟಿ ಸಿಲ್ಸ್ಕ್ & ರೆಡಿಮೇಡ್ಸ್ ನ ನೂತನ ಸಂಸ್ಥೆ ಎಂಎಸ್‌ಎಲ್ ಆಲ್ ಎಕ್ಸ್ ಕ್ಲೂಸಿವ್ ಶುಭಾರಂಭ

ಪುತ್ತೂರು: ಜವುಳಿ ಉದ್ಯಮದಲ್ಲೇ ತನ್ನದೇ ಆದ ಛಾಪು ಮೂಡಿಸಿರುವುದಲ್ಲದೆ ಕಳೆದ ಸುಮಾರು 79 ವರ್ಷಗಳ ಪರಂಪರೆಯನ್ನು ಹೊಂದಿರುವ ಪುತ್ತೂರಿನ ಪ್ರತಿಷ್ಠತ ಜವುಳಿ ಮಳಿಗೆ ಎಂ.ಸಂಜೀವ ಶೆಟ್ಟಿ ಸಿಲ್ಕ್ ರೆಡಿಮೇಡ್ಸ್‌ನವರ ನೂತನ ಶಾಖೆ ಬ್ರಾಂಡೆಡ್ ಡ್ರೆಸ್ಸ್‌ಗಳ ಎಕ್ಸ್‌ಕ್ಲೂಸಿವ್ ಮಳಿಗೆ ಎಂಎಸ್‌ಎಸ್ ಆಲ್ ಎಕ್ಸ್‌ಕ್ಲೂಸಿವ್ ಶುಕ್ರವಾರ ಮುಖ್ಯರಸ್ತೆ ಹಳೆ ಅಂಚೆ ಕಚೇರಿ ಬಳಿ ಶುಭಾರಂಭಗೊಂಡಿತು. ಮಳಿಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಜವುಳಿ ಉದ್ಯಮದಲ್ಲಿ ಮಾದರಿಯಾಗಿದ್ದಾರೆ. ದಾನ, ಧರ್ಮದಲ್ಲಿಯೂ ಸಂಜೀವ ಶೆಟ್ಟಿಯವರು ಎತ್ತಿದ

ಎಂ.ಸಂಜೀವ ಶೆಟ್ಟಿ ಸಿಲ್ಸ್ಕ್ & ರೆಡಿಮೇಡ್ಸ್ ನ ನೂತನ ಸಂಸ್ಥೆ ಎಂಎಸ್‌ಎಲ್ ಆಲ್ ಎಕ್ಸ್ ಕ್ಲೂಸಿವ್ ಶುಭಾರಂಭ Read More »

ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಪುತ್ತೂರು ಸಿಟಿ  ಚರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ರೋಟರಿ ಸಂಘಟನೆ ಉತ್ತಮ  ನಿರ್ಧಾರ ತೆಗೆದುಕೊಂಡು ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಿ ಇತಿಹಾಸ ನಿರ್ಮಿಸಲು ಹೊರಟ್ಟಿದಾರೆ. ಮಕ್ಕಳ ಆರೋಗ್ಯದ ಕಾಳಜಿ ಜತೆ ಸರಕಾರಿ ಶಾಲೆಯ ಉಳಿಸುವ ನಿಟ್ಟಿನಲ್ಲಿ ವಿಗೆ 5 ಕೋಟಿ ವೆಚ್ಚದಲ್ಲಿ 111

ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಭ್ರಷ್ಟಾಚಾರ ಮುಕ್ತ ಆಡಳಿತ : ಶಾಸಕ ಮಠಂದೂರು | ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ

ಪುತ್ತೂರು: ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ಮಾಡುತ್ತಿದೆ. ನಾಗರಿಕರ ಅರೋಗ್ಯಕ್ಕೆ ಮೊದಲ ಪ್ರಾಮುಖ್ಯತೆ ನೀಡುವುದರ ಜತೆಗೆ ಮೂಲಭೂತ ಸೌಕರ್ಯಗಳಾದ ಶಿಕ್ಷಣ, ರಸ್ತೆ ಅಭಿವೃದ್ಧಿ, ಹೀಗೆ ನೂರಾರು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಜಾಲಜೀವನ್ ಮಿಷನ್, ನರೇಗಾ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಅನುದಾನ ನೀಡಿ ಅಂತರ್ಜಲ ಅಭಿವೃದ್ಧಿ, ಕಿಂಡಿ ಆನಣೆಕಟ್ಟು,

ಮೋದಿ ನೇತೃತ್ವದ ಬಿಜೆಪಿ ಸರಕಾರದಿಂದ ಭ್ರಷ್ಟಾಚಾರ ಮುಕ್ತ ಆಡಳಿತ : ಶಾಸಕ ಮಠಂದೂರು | ನಿಡ್ಪಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ Read More »

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು 2018ರಿಂದ 2023ರ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 110247.34 ಕೋಟಿ ರೂ. ಅನುದಾನವನ್ನು ತರಿಸಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಕೊರೋನಾ ಕಾಲಘಟ್ಟ ಸಹಿತ ವಿರೋಧ ಪಕ್ಷದವರನ್ನು ಎದುರಿಸಿ ನಿರೀಕ್ಷೆಗೂ ಮೀರಿ ಅನುದಾನವನ್ನು ತರುವಲ್ಲಿ ಯಶಸ್ವಿಯಾಗುವುದರ ಜತೆಗೆ ಅಭೂತಪೂರ್ವ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. 2018 ರಿಂದ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ Read More »

ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ

ಪುತ್ತೂರು: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಶಾರದಾ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನಡೆಯಿತು. ಪಕ್ಕದಲ್ಲೇ ಇರುವ ಪಿ.ಓ.ಕೆ. ಬಳಿಯಲ್ಲೇ ಶ್ರೀ ಶಾರದಾ ದೇವಾಲಯ ನಿರ್ಮಾಣಗೊಂಡಿದೆ. ಒಟ್ಟು ಕಾರ್ಯಕ್ರಮ, ವ್ಯವಸ್ಥೆಗಳ ಬಗ್ಗೆ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರು ವಿವರಿಸಿದ್ದಾರೆ. ಅವರ ಮಾತುಗಳಲ್ಲೇ ಕೇಳಿ…

ಕಾಶ್ಮೀರದಲ್ಲಿ ಶಾರದಾ ಮೂರ್ತಿ ಪ್ರತಿಷ್ಠೆ | ಸುಬ್ರಹ್ಮಣ್ಯ ನಟ್ಟೋಜ ವಿವರಣೆಯಲ್ಲಿ ಕೇಳಿ Read More »

error: Content is protected !!
Scroll to Top