ಪುತ್ತೂರು

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು

ಪುತ್ತೂರು: ಭಜನೆಯನ್ನು ಹಾಗೂ ಭಜಕರನ್ನು ಅವಮಾನಿಸಿ ಹೇಳಿಕೆ ನೀಡಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಡಿದ ಬಳಿಕ ಹಿಂದೂ ಪರ ಸಂಘಟನೆಗಳು ಪ್ರತಿಭಟನೆಯನ್ನು ಹಿಂದೆಗೆದುಕೊಂಡವು. ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರು ಭಜನೆಯ ಬಗ್ಗೆ ಅವಹೇಳನ ಮಾಡಿದ್ದಲ್ಲದೇ, ಭಜನೆಯಲ್ಲಿ ನಿರತರಾದವರನ್ನು ನಿಂದಿಸಿ ಫೇಸ್ ಬುಕ್ ನಲ್ಲಿ ಸಂದೇಶ ಬರೆದಿದ್ದರು. ಇದರಿಂದ ಆಕ್ರೋಶಗೊಂಡ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಬುಧವಾರ ಪುತ್ತೂರು […]

ಭಜನೆ, ಭಜಕರ ನಿಂದಿಸಿದ ಡಿ.ಆರ್.ಎಫ್.ಓ.: ಎಸಿಎಫ್ ಭರವಸೆ ಬಳಿಕ ಪ್ರತಿಭಟನೆ ಹಿಂದಕ್ಕೆ | ಠಾಣೆಯಲ್ಲಿ ದೂರು ದಾಖಲಿಸಿದ ಕಾರ್ಯಕರ್ತರು Read More »

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ

ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ

ಚೀನಾದಲ್ಲಿ ಮತ್ತೆ ಕೊರೋನಾ ಉಲ್ಭಣ: ಮುಂಜಾಗ್ರತಾ ಕ್ರಮಕ್ಕಾಗಿ ಇಂದು ಸಂಜೆ ಸಿಎಂ ತುರ್ತು ಸಭೆ Read More »

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ

ಪುತ್ತೂರು: ಭಜನೆಯ  ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಸಂದರ್ಭ ಪ್ರತಿಭಟನಾಕಾರರು ಭಜನೆಯನ್ನು ಹಾಡಿ, ಅಧಿಕಾರಿಯ ಹೇಳಿಕೆಯನ್ನು ಖಂಡಿಸಿದರು. ವಲಯ ಅರಣ್ಯಾಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನಿಸಲು ಪ್ರಯತ್ನಿಸಿದರೂ, ಫಲ ನೀಡಲಿಲ್ಲ. ಹೋರಾಟದಲ್ಲಿ ಪಮುಖರಾದ ಮುರಳಿಕೃಷ್ಣ ಹಸಂತಡ್ಕ, ಅಜಿತ್ ಹೊಸಮನೆ, ಶ್ರೀಧರ ತೆಂಕಿಲ, ಲತೀಶ್ ಕುಂಡ್ಯಾ, ನವೀನ್ ರೆಕ್ಯ, ಸಂತೋಷ್ ಕುಮಾರ್ ಕೈಕಾರ, ಕೃಷ್ಣ ಕುಮಾರ್

ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ: ವಲಯ ಅರಣ್ಯಾಧಿಕಾರಿ ಕಚೇರಿ ಮುಂಭಾಗ ಭಜನೆ ಹಾಡಿ ಪ್ರತಿಭಟನೆ Read More »

ಜಲಸಿರಿ ಸಮಸ್ಯೆ: ೧೫ ದಿನದೊಳಗೆ ಸಭೆ | ನಗರಸಭೆ ವಿಶೇಷ ಸಾಮಾನ್ಯ ಸಭೆ ನಿರ್ಣಯ

ಪುತ್ತೂರು: ಶುದ್ಧ ಕುಡಿಯುವ ನೀರಿನ ಯೋಜನೆ ಜಲಸಿರಿ ಕಾಮಗಾರಿಯಿಂದ ಸಾಕಷ್ಟು ಸಮಸ್ಯೆಗಳಾಗಿದ್ದು, ಸಮಸ್ಯೆ ಪರಿಹಾರಕ್ಕೆ ಮುಂದಿನ 15 ದಿನದೊಳಗೆ ಜಲಸಿರಿ ಹಾಗೂ ನಗರಸಭೆ ಕೌನ್ಸಿರ‍್ಸ್ ಸಭೆ ಕರೆಯುವ ಬಗ್ಗೆ ತೀರ್ಮಾನಿಸಲಾಗಿದೆ. ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆ ನಡೆಯಿತು. ನಗರಸಭೆ ಸದಸ್ಯ ಶಕ್ತಿ ಸಿನ್ಹಾ ಮಾತನಾಡಿ, ನಗರಾದ್ಯಂತ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಆದರೆ ತುಕ್ಕು ಹಿಡಿದ ಪೈಪ್, ರಸ್ತೆಗಳನ್ನು ಮತ್ತೆ ಮತ್ತೆ ಅಗೆಯುವುದು ಮೊದಲಾದ

ಜಲಸಿರಿ ಸಮಸ್ಯೆ: ೧೫ ದಿನದೊಳಗೆ ಸಭೆ | ನಗರಸಭೆ ವಿಶೇಷ ಸಾಮಾನ್ಯ ಸಭೆ ನಿರ್ಣಯ Read More »

ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ

ಪುತ್ತೂರು: ಸರಸ್ವತಿ ಚರಿಟೇಬಲ್ ಟ್ರಸ್ಟ್ ಪುತ್ತೂರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಅಡಿಕೆ ಪತ್ರಿಕೆ ಸಹಯೋಗದಲ್ಲಿ ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಡಿ. 20ರಂದು ನಡೆಯಿತು.ದೇಸಿ ಸಂಸ್ಥೆಯ ರುದ್ರಪ್ಪ ಮಾತನಾಡಿ, ನಾವು ಪ್ರತಿ ತಿಂಗಳು 15ರಿಂದ 20 ಕ್ವಿಂಟಾಲ್ ಅಡಿಕೆಯ ಬಣ್ಣ ತಯಾರಿಸಿ, ಬಟ್ಟೆಗಳಿಗೆ ಉಪಯೋಗಿಸುತ್ತಿದ್ದೇವೆ. ಕಳೆದ 18 ವರ್ಷಗಳಿಂದ ದೇಸಿ ಸಂಸ್ಥೆ ಹಾಗೂ ಚರಕ ಸಂಸ್ಥೆ ಒಟ್ಟಾಗಿ ನೈಸರ್ಗಿಕ ಬಣ್ಣಗಳನ್ನು ಬಟ್ಟೆಗಳಿಗೆ ಬಳಕೆ ಮಾಡುವ

ಅಡಿಕೆಯ ಹೊಸ ಬಳಕೆ ವಿಚಾರಗೋಷ್ಠಿ Read More »

ಹಾರಾಡಿ ಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2022

ಪುತ್ತೂರು: ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ಲಾಲಿತ್ಯ ೨೦೨೨ ಕಾರ್ಯಕ್ರಮ ಡಿ. ೧೯ರಂದು ಶಾಲಾ ಆವರಣದಲ್ಲಿ ನಡೆಯಿತು. ಇದು ಚಿಗುರು ಪ್ರತಿಭೆಗಳ ಸಂಭ್ರಮದ ದಿನ ವಾಕ್ಯದಡಿ ನಡೆದ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಸರಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆ ಎಂಬ ಹೆಗ್ಗಳಿಗೆ ಹಾರಾಡಿಗಿದೆ. ಈ ಶಾಲೆಯಲ್ಲಿ ಕಲಿತ ಮಕ್ಕಳು ದೇಶ ಸೇವೆ ಮಾಡಬೇಕು, ಉತ್ತಮ

ಹಾರಾಡಿ ಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2022 Read More »

ಭವಿಷ್ಯದ ಉತ್ತಮ ಆಯ್ಕೆಗಾಗಿ ಸಮರ್ಪಕ ಮಾರ್ಗದರ್ಶನ ಅಗತ್ಯ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಣ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ರಾಜಶ್ರೀ ನಟ್ಟೋಜ

ಪುತ್ತೂರು: ಪಿ.ಯು.ಸಿ ನಂತರ ವಿದ್ಯಾರ್ಥಿಯೊಬ್ಬನಿಗೆ ದೊರಕಬಹುದಾದ ವಿದ್ಯಾಭ್ಯಾಸ ಹಾಗೂ ಉದ್ಯೋಗದ ಬಗ್ಗೆ ಸರಿಯಾದ ಹಾಗೂ ಸಮರ್ಪಕ ಮಾಹಿತಿಯನ್ನು ಹೆತ್ತವರು ಮತ್ತು ವಿದ್ಯಾರ್ಥಿಗಳು ಪಡೆದುಕೊಂಡಾಗ ಭವಿಷ್ಯದಲ್ಲಿ ಅತ್ಯುತ್ತಮ ಆಯ್ಕೆಯನ್ನು ಮಾಡಿಕೊಳ್ಳುವುದಕ್ಕೆ ಸಾಧ್ಯ. ಆ ನೆಲೆಯಲ್ಲಿ ಮಾಹಿತಿ ಕಾರ್ಯಾಗಾರಗಳು ಮಹತ್ವವನ್ನು ಪಡೆದುಕೊಳ್ಳುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಶನಿವಾರ ಹಮ್ಮಿಕೊಂಡ ಉದ್ಯೋಗ ಹಾಗೂ ಶಿಕ್ಷಣ

ಭವಿಷ್ಯದ ಉತ್ತಮ ಆಯ್ಕೆಗಾಗಿ ಸಮರ್ಪಕ ಮಾರ್ಗದರ್ಶನ ಅಗತ್ಯ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಣ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ರಾಜಶ್ರೀ ನಟ್ಟೋಜ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್‍ ಮೂಲಕ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪೆನಿ ಆಪ್ಟ್‍ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಡಿ. 11ರಂದು ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ನಡೆಯಿತು. ಆಪ್ಟಮ್ ಕಂಪೆನಿಯು 125000 ಉದ್ಯೋಗಿಗಳಿರುವ ಬಹುರಾಷ್ಟ್ರೀಯ ಸಂಸ್ಥೆಯಾಗಿದ್ದು, ಪ್ರಸ್ತುತ ಬೆಂಗಳೂರಿನ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ. ಪ್ರಸ್ತುತ ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಅವಶ್ಯಕತೆಯಿದ್ದು, ಲಿಖಿತ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ Read More »

ಸಮುದಾಯ ಸಮ್ಮಿಲನಕ್ಕಾಗಿ ಸುಳ್ಯಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಹಾಸ್ವಾಮೀಜಿಗಳಿಗೆ ಅದ್ಧೂರಿ ಸ್ವಾಗತ

ಪುತ್ತೂರು: ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸುಳ್ಯ ತಾಲೂಕಿನಾದ್ಯಂತ 3 ದಿನಗಳ ಸಮುದಾಯ ಸಮ್ಮಿಲನಕ್ಕಾಗಿ ಮಂಗಳವಾರ ಆಗಮಿಸಿದ್ದು, ಅವರಿಗೆ ನಿಂತಿಕಲ್ಲಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಸುಳ್ಯ ತಾಲೂಕಿಗೆ ಆಗಮಿಸಿದ ಸ್ವಾಮೀಜಿ ಅವರು ಡಿ. 20, 21, 22ರಂದು ಗೌಡ ಸಮುದಾಯದ ವಿವಿಧ ಮನೆಗಳಿಗೆ ತೆರಳಿ ಆಶೀರ್ವಚನ ನೀಡಲಿದ್ದಾರೆ. ಮಂಗಳವಾರವೂ ವಿವಿಧ ಮನೆಗಳಿಗೆ ತೆರಳಲಿದ್ದು, ನಿಂತಿಕಲ್ಲಿನಿಂದ ಅವರನ್ನು ವಾಹನ ಜಾಥದ ಮೂಲಕ ಹರಿಹರಪಲ್ಲತಡ್ಕ ಐನೆಕಿದು ಕಡೆಗೆ ಕರೆದೊಯ್ಯಲಾಯಿತು. ಮಂಗಳವಾರ ಕಿಶೋರ್ ಕುಮಾರ್

ಸಮುದಾಯ ಸಮ್ಮಿಲನಕ್ಕಾಗಿ ಸುಳ್ಯಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಹಾಸ್ವಾಮೀಜಿಗಳಿಗೆ ಅದ್ಧೂರಿ ಸ್ವಾಗತ Read More »

ಸದೃಢ ದೇಹ ಮತ್ತು ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ವಿದ್ಯಾಶಂಕರ್ ದಂಬೆ

ಪುತ್ತೂರು: ಇಲ್ಲಿನ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಶತಮಾನೋತ್ಸವದ ಸವಿನೆನಪಿಗಾಗಿ ಶತಸಂಭ್ರಮದ ಅಂಗವಾಗಿ ಆಯೋಜಿಸಿದ ಎರಡು ದಿನಗಳ ಸಾರಸ್ವತ ಕ್ರಿಕೆಟ್ ಪಂದ್ಯಾಟವು ವಿವೇಕಾನಂದ ವಿದ್ಯಾರ‍್ಧಕ ವಿದ್ಯಾಸಂಸ್ಥೆಗಳ ಕ್ರೀಡಾಂಗಣ ನೆಹರೂನಗರದಲ್ಲಿ ನಡೆಯಿತು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರೀಯ ಕಬಡ್ಡಿ ತರ‍್ಪುಗಾರ ವಿದ್ಯಾಶಂಕರ್ ದಂಬೆ, ಸದೃಢ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದರು. ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣಬರ‍್ಕರ್ ಕತ್ತಲಕಾನ, ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ

ಸದೃಢ ದೇಹ ಮತ್ತು ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ವಿದ್ಯಾಶಂಕರ್ ದಂಬೆ Read More »

error: Content is protected !!
Scroll to Top