ಪುತ್ತೂರು

ನೆಹರುನಗರ ಪಟ್ಲ ಪ್ಲಾನೇಟ್ ನಲ್ಲಿ “ಲೈಫ್ ಕೇರ್ ಕ್ಲಿನಿಕಲ್ ಲ್ಯಾಬೋರೇಟರಿ” ಶುಭಾರಂಭ

ಪುತ್ತೂರು: ನೂತನ ಸಂಸ್ಥೆ ಲೈಫ್ ಕೇರ್ ಕ್ಲಿನಿಕಲ್ ಲ್ಯಾಬೊರೇಟರಿ ನೆಹರೂನಗರದ ಪಟ್ಲ ಪ್ಲಾನೇಟ್ ನಲ್ಲಿ ಗುರುವಾರ ಶುಭಾರಂಭಗೊಂಡಿತು. ಪುತ್ತೂರು ನಗರಸಭೆ ಸದಸ್ಯೆ ಪ್ರೇಮ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಪಟ್ಲ ಪ್ಲಾನೇಟ್ನ ಮಾಲಕ ಮಾಧವ, ಮಹಾಲಿಂಗೇಶ್ವರ ವುಡ್ ಆಂಡ್ ಫರ್ನಿಚರ್ ಮಾಲಕ ಹರೀಶ್ ಹಾಗೂ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕರಾದ ಪ್ರದೀಪ್, ಅವರ ತಾಯಿ ಕಮಲ, ಅಣ್ಣ ಪ್ರವೀಣ್, ಅತ್ತಿಗೆ ಅನುಷಾ, ಸಹೋದರಿಯರಾದ ತುಳಸಿ, ತುಷಾರ, ಸಹೋದರ ನವೀನ್ ಅತಿಥಿ ಗಣ್ಯರನ್ನು […]

ನೆಹರುನಗರ ಪಟ್ಲ ಪ್ಲಾನೇಟ್ ನಲ್ಲಿ “ಲೈಫ್ ಕೇರ್ ಕ್ಲಿನಿಕಲ್ ಲ್ಯಾಬೋರೇಟರಿ” ಶುಭಾರಂಭ Read More »

ಹಿರೇಬಂಡಾಡಿ ನಂದಿನಗರ ರಸ್ತೆ ಕಾಂಕ್ರಿಟೀಕರಣ ಹಾಗೂ ನೂತನ ರಸ್ತೆಗೆ ಶಿಲಾನ್ಯಾಸ

ಪುತ್ತೂರು: ಹಿರೇಬಂಡಾಡಿ ಗ್ರಾಮದ ನಂದಿನಗರ ರಸ್ತೆ ಕಾಂಕ್ರಿಟೀಕರಣ ಹಾಗೂ ನೂತನ ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು.  5 ಲಕ್ಷ ರೂ. ಕಾಂಕ್ರಿಟೀಕರಣ ಹಾಗೂ 35 ಲಕ್ಷ ರೂ. ಅಮನುದಾನದಲ್ಲಿ ನೂತನ ರಸ್ತೆಗೆ ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹಾಗೆಯೇ ಈ ರಸ್ತೆಗೆ 35 ಲಕ್ಷ ರೂ. ಅನುದಾನ ಇಡಲಾಗಿದೆ. ಆದಷ್ಟು ಶೀಘ್ರ ರಸ್ತೆ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ತೆರೆದುಕೊಳ್ಳಲಿ

ಹಿರೇಬಂಡಾಡಿ ನಂದಿನಗರ ರಸ್ತೆ ಕಾಂಕ್ರಿಟೀಕರಣ ಹಾಗೂ ನೂತನ ರಸ್ತೆಗೆ ಶಿಲಾನ್ಯಾಸ Read More »

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ

ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ

ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »

ವಿಧಾನಸಭಾ ಚುನಾವಣೆ ಹಿನ್ನಲೆ : ನಗರಸಭಾ ವ್ಯಾಪ್ತಿಯಲ್ಲಿ ಬ್ಯಾನರ್, ಬಂಟಿಂಗ್ಸ್ ತೆರವು ಕಾರ್ಯ

ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯ ಶುಕ್ರವಾರ  ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನಡೆಯಿತು. ದ.ಕ.ಜಿಲ್ಲಾಧಿಕಾರಿಯವರು ಈ ಕುರಿತು ಹೊರಡಿಸಿದ ಆದೇಶದಂತೆ ತೆರವು ಕಾರ್ಯ ನಡೆಸಲಾಯಿತು. ಜಿಲ್ಲಾಧಿಕಾರಿಯವರ ಆದೇಶ ಬೆನ್ನಲ್ಲೇ ಪುತ್ತೂರು ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಅನಧಿಕೃತ ಬ್ಯಾನರ್‍, ಬಂಟಿಗ್ಸ್, ಗೋಡೆಬರಹಗಳನ್ನು ತೆರವುಳಿಸುವ ಕಾರ್ಯ ನಡೆಯಿತು.

ವಿಧಾನಸಭಾ ಚುನಾವಣೆ ಹಿನ್ನಲೆ : ನಗರಸಭಾ ವ್ಯಾಪ್ತಿಯಲ್ಲಿ ಬ್ಯಾನರ್, ಬಂಟಿಂಗ್ಸ್ ತೆರವು ಕಾರ್ಯ Read More »

ಮಾ.27 : ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ | ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

ಪುತ್ತೂರು: ತಾಲೂಕಿನ ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘದ ವತಿಯಿಂದ ಕಾರ್ಯಾಚರಿಸುತ್ತಿರುವ ಮುರ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.27 ಸೋಮವಾರ ಬೆಳಿಗ್ಗೆ 10.45 ಕ್ಕೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಬಾಬು ಗೌಡ ಕಲ್ಲೇಗ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 40 ಲಕ್ಷ ರೂ. ಮೇಲಂತಸ್ತಿನ ಕಟ್ಟಡಕ್ಕೆ ವೆಚ್ಚ ತಗಲಿದ್ದು, ಕಾಮಗಾರಿ ಸಂಪೂರ್ಣಗೊಂಡಿದೆ. ಮೇಲಂತಸ್ತು 2800 ಚದರ ಅಡಿ ಹೊಂದಿದ್ದು, 450 ರಿಂದ 500

ಮಾ.27 : ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ | ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಬ್ರಹ್ಮ ಆದಿಮೊಗರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ತೃತೀಯ ವರ್ಷದ ನೇಮೋತ್ಸವ ಮಾ.25 ಹಾಗೂ 26 ರಂದು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಸ್ಥಳದ ಗುಳಿಗ ದೈವ ಹಾಗೂ ಶ್ರೀ ಬ್ರಹ್ಮ ಆದಿ ಮೊಗೇರ್ಕಳ ಮತ್ತು ಕಾರಣಿಕದ ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ವೇ.ಮೂ. ಶ್ರೀಧರ ಭಟ್ ಕಬಕ ಅವರ ಪೌರೋಹಿತ್ಯದಲ್ಲಿ ಮಾ.25 ಶನಿವಾರ ಬೆಳಿಗ್ಗೆ 9ಕ್ಕೆ ತಂಬಿಲ ಸೇವೆ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ

ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ

ಪುತ್ತೂರು: ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ ಹಾಗೂ ಕೊಯಿಲ ಪಶು ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಪಾರಂಪರಿಕ ರಥಬೀದಿ ಮತ್ತು ಇತರ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ಮಾ.24 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ Read More »

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು

ಪುತ್ತೂರು: 94 ಸಿ ಹಾಗೂ 94 ಸಿ ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸುಮಾರು 160 ಹಕ್ಕುಪತ್ರವನ್ನು  ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಸ್ತತಾರಿಸಿದರು. ಪುತ್ತೂರು ತಹಸೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್  ಉಪಸ್ಥಿತರಿದ್ದರು.

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ

ಪುತ್ತೂರು: ನಗರಸಭಾ ವಿಶೇಷ ಸಾಮಾನ್ಯ ಸಭೆ ಗುರುವಾರ ನಗರಸಭೆ ಕಾರ್ಯಾಲಯದಲ್ಲಿ ನಡೆಯಿತು. ವಿವಿಧ ಯೋಜನೆಗಳ ಗುತ್ತಿಗೆಗಳಿಗೆ ಅನುಮೋದನೆ ಪಡೆಯುವ ನಿಟ್ಟನಲ್ಲಿ ನಡೆದ ಸಭೆಯಲ್ಲಿ ನಗರ ಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ, ನಗರೋತ್ಥಾನದ ಮೂಲಕ ಬೊಳುವಾರು ತನಕ ಅಗಲೀಕರಣ ಕಾರ್ಯ ನಡೆಯಲಿದೆ. ಇದಕ್ಕಾಗಿ ಹಲವು ದಾನಿಗಳು ನಗರ ಸಭೆ ಜತೆಗೆ ಕೈಜೋಡಿಸಿದ್ದಾರೆ. ಜಾತ್ರೆ ಸಂದರ್ಭ ದೇವರ ಸವಾರಿ ಹೋಗುವ ಜಾಗದಲ್ಲಿ ಎಲ್ಲಾ ರಸ್ತೆಗಳನ್ನು ಸ್ವಲ್ಪವಾಗಿ ಇಡುವ ಪ್ರಯತ್ನ ಮಾಡಲಾಗುತ್ತಿದೆ. ಮನೆ ದುರಸ್ಥಿಯ ವಿಚಾರದಲ್ಲಿ ಚಿತ್ರ ಸಹಿತ

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ Read More »

error: Content is protected !!
Scroll to Top