ಪುತ್ತೂರು

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು :  ಕಾವು ನವೋದಯ ಒಕ್ಕೂಟದ ಸದಸ್ಯರಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿಯಾಗಿ ಶ್ರಮದಾನ ನಡೆಯಿತು. ದೇವಸ್ಥಾನದ ಹೊರಾಂಗಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಿದರು. ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ, ಮಾಜಿ ಉಪಾಧ್ಯಕ್ಷೆ ನಿರ್ಮಲಾ ರೈ  ಉಸ್ತುವಾರಿಯಲ್ಲಿ ನಡೆದ ಕರಸೇವೆಯಲ್ಲಿ ಎಲ್ಲಾ ಗುಂಪಿನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ Read More »

ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ. ಆದ್ದರಿಂದ ಯುವಕರು ದಿನದ ಕನಿಷ್ಠ 1 ಗಂಟೆಯನ್ನಾದರೂ ಗ್ರಂಥಾಲಯಕ್ಕೆ ನಮ್ಮ ಸಮಯವನ್ನು ಮೀಸಲಿಡಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರಿನ ಪರ್ಲಡ್ಕ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಸೋಮವಾರ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶ ಸುಸಂಸ್ಕೃತವಾಗಿದೆ ಅಂದರೆ ಅದಕ್ಕೆ ಸಾಹಿತ್ಯವೇ ಪ್ರಮುಖ ಕಾರಣ. ಸುಸಂಸ್ಕೃತತೆಯ ಜೊತೆಗೆ, ದೇಶ ದೊಡ್ಡ ಮಟ್ಟಿನ ಬೆಳವಣಿಗೆಗಳನ್ನು ಕಂಡಿವೆ. ಇದು ಗ್ರಂಥಾಲಯ, ಸಾಹಿತ್ಯದಿಂದ ಸಾಧ್ಯವಾಯಿತು. ಆದ್ದರಿಂದ ಪುತ್ತೂರಿನ ಜನರು ಬಾಲವನದ ಗ್ರಂಥಾಲಯಕ್ಕೆ ಬಂದು,

ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಬಲ್ನಾಡಿನ ವಿನುಶ್ರೀ ಆಯ್ಕೆ

ಪುತ್ತೂರು : ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ  ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ದಂಪತಿಯ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಮೂಡಬಿದಿರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಪಿ ಬಿಎಡ್ ವಿದ್ಯಾರ್ಥಿನಿಯಾಗಿದ್ದಾರೆ.

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಬಲ್ನಾಡಿನ ವಿನುಶ್ರೀ ಆಯ್ಕೆ Read More »

ಪಂಚೋಡಿ-ಗಾಳಿಮುಖ ರಸ್ತೆಗೆ ಶಿಲಾನ್ಯಾಸ : ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು : ಪಂಚೋಡಿ ಗಾಳಿಮುಖ ರಸ್ತೆಗೆ  ಶೀಲಾನ್ಯಾಸ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ವಿಧಾನ ಸಭಾ ಕ್ಷೆತ್ರದಲ್ಲಿ ರಸ್ತೆಗೆ ಆದ್ಯತೆ ನೀಡುವ ಮೂಲಕ ಮೇಲ್ದರ್ಜೆಗೆ ಏರಿಸುವ ಕೆಲಸ ಆಗಿದೆ. ಮುಂದಿನ 25 ವರ್ಷ ಬಾಳ್ವಿಕೆ  ಬರುವ ಹಾಗೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನಬಾರ್ಡ್ ಯೋಜನೆಯಡಿ 3.88 ಕೋಟಿ ಅನುದಾನ ಪೂರ್ತಿ ಒಂದೇ ರಸ್ತೆ ಗೆ ಇಡುವ ಕೆಲಸ ಆಗಿದೆ ಎಂದರು. ಹಿರಿಯ ಕಾರ್ಯಕರ್ತರಾದ ಬಾಲಕೃಷ್ಣ ರೈ ದೀಪ ಬೆಳಗಿಸಿ ಉದ್ಘಾಟಿಸಿದರು. ಪಂಚಾಯತ್

ಪಂಚೋಡಿ-ಗಾಳಿಮುಖ ರಸ್ತೆಗೆ ಶಿಲಾನ್ಯಾಸ : ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವ ಮಾ.25 ರಿಂದ 31 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆ,ಮ್ಮಿಂಜೆ ನಾಗೇಶ್ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಗೌರವ ಸಲಹೆಗಾರ ಜಯರಾಮ ಕೆದಿಲಾಯ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಜಲುಮಾರು ಕ್ಷೇತ್ರ

ಮಾ.25 ರಿಂದ 31 : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರೋತ್ಸವ, ಪುಷ್ಪರಥ ಸಮರ್ಪಣೆ Read More »

ಜಿಲ್ಲೆಯ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರ ಪುತ್ತೂರಿಗೆ | ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಜಿಲ್ಲೆಗೆ ಮಂಜೂರಾದ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರಗಳು ಪುತ್ತೂರಿಗೇ ಮಂಜೂರಾಗಿವೆ. ಈ ಮೂರು ಕೇಂದ್ರಗಳಿಗೂ ಜಾಗದ ಸಮಸ್ಯೆ ಇತ್ತು. ಜಾಗದ ಸಮಸ್ಯೆಯನ್ನು ನಿವಾರಿಸಿ, ಅನುದಾನ ತರಿಸಿ, ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವ ಕೆಲಸ ಆಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಸೋಮವಾರ ದರ್ಬೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆಗೊಂಡಿದ್ದು, ರೈತರ

ಜಿಲ್ಲೆಯ 4 ರೈತ ಸಂಪರ್ಕ ಕೇಂದ್ರಗಳಲ್ಲಿ 3 ಕೇಂದ್ರ ಪುತ್ತೂರಿಗೆ | ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಸಂಟ್ಯಾರ್ ವಿನಾಯಕ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಶನಿವಾರ ಸಂಟ್ಯಾರ್ ನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಪಂದ್ಯಾಟ ಉದ್ಘಾಟಿಸಿ, ಪುತ್ತೂರು: ಇಡೀ ಯುವ ಸಮುದಾಯ ಮತ್ತೊಮ್ಮೆ ಕ್ರೀಡೆಗೆ ಒತ್ತು ಕೊಟ್ಟು ಇಂದು ಈ ಭಾಗದಲ್ಲಿ ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿರುವುದು  ಶ್ಲಾಘನೀಯ. ಇಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ  ಸಾಧನೆ ಮಾಡುವ ಮೂಲಕ ನಮ್ಮ

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ Read More »

ಸರಕಾರ ಕೃಷಿ ಸಾಲದ ವಸೂಲಾತಿಗಾಗಿ ಯಾವುದೇ ರೀತಿಯ ಕಾನೂನು ಹೋರಾಟ ಮಾಡಬಾರದು : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟ ಆಗ್ರಹ

ಪುತ್ತೂರು : ಬಂಟ್ವಾಳ ತಾಲೂಕಿನ ಇಡ್ಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದದಿಂದ ಪಡೆದುಕೊಂಡ ಕೃಷಿ ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಬ್ಯಾಂಕ್‌ನಿಂದ ಕಿರುಕುಳ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡ ವೀರಪ್ಪ ಗೌಡ ಅವರ ಕುಟುಂಬಕ್ಕೆ ಅವರ ಸಂಪೂರ್ಣ ಸಾಲಮನ್ನಾದ ಜತೆ ಸರಕಾರ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಜಿಲ್ಲಾ ಸಂಚಾಲಕ, ಒಕ್ಕೂಟದ ಮುಖ್ಯಸ್ಥ ರೂಪೇಶ್

ಸರಕಾರ ಕೃಷಿ ಸಾಲದ ವಸೂಲಾತಿಗಾಗಿ ಯಾವುದೇ ರೀತಿಯ ಕಾನೂನು ಹೋರಾಟ ಮಾಡಬಾರದು : ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ದ.ಕ.ಜಿಲ್ಲಾ ಒಕ್ಕೂಟ ಆಗ್ರಹ
Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ | ಪ್ರಸ್ತುತ ವರ್ಷದಿಂದ ಆರಂಭ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನ್ನು ಅಳವಡಿಸುವ ಮೂಲಕ ಜೀವನ ಕೌಶಲ್ಯ ತರಬೇತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುವುದು ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಸತನ ಹಾಗೂ ವಿನೂತನ ಕಲ್ಪನೆಗಳ ಸಾಕಾರ ಕೇಂದ್ರವೆನಿಸಿರುವ ಅಂಬಿಕಾ ಸಂಸ್ಥೆ ಅನೇಕ ಮೊದಲುಗಳನ್ನು ಹುಟ್ಟು ಹಾಕಿದೆ. ಇದೀಗ ಮತ್ತೊಂದು ಮೈಲಿಗಲ್ಲು ಎಂಬಂತೆ ಸಿಬಿಎಸ್‌ಇ ಸಂಸ್ಥೆಯಲ್ಲಿ 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ರೋಬೋಟಿಕ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ | ಪ್ರಸ್ತುತ ವರ್ಷದಿಂದ ಆರಂಭ Read More »

ಯೋಜನೆಗೆ ನಿಷ್ಠೆ ಜತೆಯಾದಾಗ ಭವಿಷ್ಯ ಉಜ್ವಲ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಶ್ರೀಕಾಂತ್ ಬಿರಾವು

ಪುತ್ತೂರು: ಗುರಿಯನ್ನು ನಿರ್ಧರಿಸಿ ಕಾರ್ಯಯೋಜನೆಯನ್ನು ತಯಾರಿಸಿದ ಮೇಲೆ ಪ್ರತಿದಿನ ನಿಷ್ಠೆಯಿಂದ ಶ್ರಮವಹಿಸಿ ಅಭ್ಯಾಸ ಮಾಡಿದರೆ ನಮ್ಮ ನಾಳೆಗಳು ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಪುತ್ತೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು ಹೇಳಿದರು. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಆಧುನಿಕ ಯುಗದಲ್ಲಿ ಎಲ್ಲರೂ ತ್ವರಿತಗತಿಯ ಫಲಿತಾಂಶವನ್ನೇ ಬಯಸುತ್ತಾರೆ. ಆದರೆ ಅಭ್ಯಾಸವಿಲ್ಲದ ಸಾಧನೆಗಳು ಕ್ಷಣಿಕ ಫಲಿತಾಂಶವನ್ನು ನೀಡಬಲ್ಲದೇ ಹೊರತು ಭವಿಷ್ಯಕ್ಕೆ ಸಹಕಾರಿಯಾಗಲಾರದು ಎಂದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ

ಯೋಜನೆಗೆ ನಿಷ್ಠೆ ಜತೆಯಾದಾಗ ಭವಿಷ್ಯ ಉಜ್ವಲ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ಶ್ರೀಕಾಂತ್ ಬಿರಾವು Read More »

error: Content is protected !!
Scroll to Top