ಪುತ್ತೂರು

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟಗಳ ಪದಗ್ರಹಣ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಗಣಪತಿ ಹೋಮ, 8ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, 10-30ಕ್ಕೆ […]

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗಡಿಭಾಗವಾದ ಪಾಣಾಜೆ – ಬೆಟ್ಟಂಪಾಡಿ ಜನರು ರಾಜ್ಯ ರಾಜಧಾನಿಯನ್ನು ಸುಲಭವಾಗಿ ಸಂಪರ್ಕ‍ ಸಾಧಿಸುವಂತಾಗಬೇಕು ಎಂಬ ದೃಷ್ಟಿಯಿಂದ ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚ್ ಬಸ್ ಆರಂಭವಾಗಿದೆ. ಪಾಣಾಜೆ ಪರಿಸರದ ಜನರ ಬೇಡಿಕೆಗೆ ಮನ್ನಣೆ ದೊರೆತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಬಸ್ ಸೇವೆಗೆ ಡಿ. 16ರಂದು ರಾತ್ರಿ ಪಾಣಾಜೆಯಲ್ಲಿ ತೆಂಗಿನಕಾಯಿ ಒಡೆದು ಚಾಲನೆ ನೀಡಿ, ಮಾತನಾಡಿದರು. ಪಾಣಾಜೆ ಭಾಗದ ಜನರು ಬೆಂಗಳೂರಿಗೆ ತೆರಳುಬೇಕು ಎಂದರೆ, ಪುತ್ತೂರಿನಿಂದ ಬಸ್ ಹಿಡಿಯಬೇಕಿತ್ತು.

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ

ಪುತ್ತೂರು: ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಶ್ವತಿ ವಾರ್ತಾ ಪತ್ರಿಕೆ ಬಿಡುಗಡೆ ಸಮಾರಂಭ ಡಿ. 17ರಂದು ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು. ಶಾಸಕರೂ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ನಿವೃತ್ತ ಪ್ರಾಧ್ಯಾಪಕಿ ವತ್ಸಲಾ ರಾಜ್ಞಿ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಂಶುಪಾಲ ಡಾ. ಶ್ರೀಧರ್ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘ ಸಂಚಾಲಕ ಪ್ರೊ. ಶಾಂತರಾಮ ಎ.,

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ Read More »

ಡಿ. 20: ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆ ಹಿನ್ನೆಲೆಯಲ್ಲಿ ಡಿ. 20ರಂದು ಮಧ್ಯಾಹ್ನ 3.30ಕ್ಕೆ ನಗರಸಭೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ- ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆಯ ಪ್ರಕಟಣೆ ತಿಳಿಸಿದೆ.

ಡಿ. 20: ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ Read More »

ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು

ಪುತ್ತೂರು: ಅಪಘಾತಕ್ಕೀಡಾಗಿ ಬಳಿಕ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಬನ್ನೂರಿನ ಕೊಲ್ಯ ನಿವಾಸಿ ಪುರುಷೋತ್ತಮ ಅವರ ಮನೆಗೆ ಶಾಸಕ ಶ್ರೀ ಸಂಜೀವ ಮಠಂದೂರು ಭೇಟಿ ನೀಡಿ ಯೋಗ್ಯಕ್ಷೇಮ ವಿಚಾರಿಸಿದರು. ಶಕ್ತಿ ಕೇಂದ್ರ ಸಂಚಾಲಕ ನಾಗೇಶ್, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಅಪಘಾತಕ್ಕೀಡಾದ ಪುರುಷೋತ್ತಮರವರ ಆರೋಗ್ಯ ವಿಚಾರಿಸಿದ ಶಾಸಕರು Read More »

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ 64ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್ Read More »

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ

ಪುತ್ತೂರು: ಇಲ್ಲಿನ ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನಾ ಸಮಾರಂಭ ಡಿ. 17ರಂದು ಸಂಜೆ 5 ಗಂಟೆಗೆ ಆಸ್ಪತ್ರೆಯಲ್ಲಿ ನಡೆಯಲಿದೆ. ಮಾಡ್ಯುಲರ್ ಓಟಿ  ವಿಭಾಗವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೆಬ್’ಸೈಟ್ ಅನ್ನು ಸರ್ಜನ್ ಡಾ. ಎಂ.ಕೆ. ಪ್ರಸಾದ್ ಅನಾವರಣಗೊಳಿಸಲಿದ್ದಾರೆ. ಯು ಬ್ರೀದ್ ಕ್ಲಿನಿಕ್ ಅನ್ನು ಸರ್ಜರಿ ಪ್ರೊಫೆಸರ್ ಡಾ. ಗೋಪಿನಾಥ್ ಪೈ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲೆಯ ಮುಂದಿನ ಗವರ್ನರ್ ವಿಕ್ರಮ್ ದತ್ತ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು

ಡಿ. 17: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಡ್ಯುಲರ್ ಒಟಿ, ಯು ಬ್ರೀದ್ ಕ್ಲಿನಿಕ್ ಉದ್ಘಾಟನೆ, ವೆಬ್’ಸೈಟ್ ಲೋಕಾರ್ಪಣೆ Read More »

ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಪ್ರಾರಂಭಿಸಿ, ಸರಕಾರಿ ಶಾಲೆಗಳಿಗೇ ಮಾದರಿಯಾಗಿರುವ ಕಾವು ಸರಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ರೆಡ್ ಡೇ ಕಾರ್ಯಕ್ರಮ ನಡೆಯಿತು. ಕೆಂಪು ಬಣ್ಣದ ವಸ್ತುಗಳ ಸಂಗ್ರಹ ಮತ್ತು ಕೆಂಪು ಬಣ್ಣದ ವಸ್ತ್ರ ಧರಿಸಿದ್ದ ಎಲ್‌ಕೆಜಿ, ಯುಕೆಜಿ ಮಕ್ಕಳು, ರೆಡ್ ಡೇಯನ್ನು ಆಚರಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಲ್‌ಕೆಜಿ, ಯುಕೆಜಿ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಗೂ ಕಾವು ಶಾಲೆಯನ್ನು ದತ್ತು ಸ್ವೀಕರಿಸಿರುವ ಕಾವು

ಕಾವು ಸರಕಾರಿ ಶಾಲೆಯಲ್ಲಿ ರೆಡ್ ಡೇ | ಶಾಲಾ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ಕಾರ್ಯಕ್ರಮ Read More »

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ  ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು

ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ Read More »

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: 20 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಕೈಕಾರ ಬೀಜತ್ರೆ ಯ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ , ನವೀನ್ ಕೈಕಾರ,  ಸಂತೋಷ್ ಕೈಕಾರ, ಹರೀಶ್ ಬಿಜತ್ರೆ, ಪಾಣಾಜೆ ಮಹಾಶಕ್ತಿ ಕೇಂದ್ರದ ಜಯರಾಮ್ ಪೂಜಾರಿ, ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಮಂಜುನಾಥ್ ಮಂಡಲ, ಸ್ಥಳೀಯರು  ಉಪಸ್ಥಿತರಿದ್ದರು. ರಾಜ್ಯ ಎಸ್ ಟಿ ಮೋರ್ಚಾ  ಸದಸ್ಯರಾದ ಎನ್. ಎಸ್. ಮಂಜುನಾಥ್ ಸ್ವಾಗತಿಸಿ

ಬಿಜತ್ರೆ: ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top