ಪುತ್ತೂರು

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023

ಪುತ್ತೂರು: ಶಾಂತಿಗೋಡು ಫ್ರೆಂಡ್ಸ್ ಪಜಿರೋಡಿ ಆಶ್ರಯದಲ್ಲಿ ತಾಲೂಕು ಅಮೆಚ್ಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪುರುಷರ 55 ಕೆ.ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 ಜ. 14ರಂದು ಬೆಳಿಗ್ಗೆ 9.30ರಿಂದ ಶಾಂತಿಗೋಡು ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಲಿದೆ. ಪ್ರವೇಶ ಶುಲ್ಕ 600 ರೂ. ನಿಗದಿಪಡಿಸಿದ್ದು, ಪ್ರಥಮ ಬಹುಮಾನ 5555 ರೂ., ದ್ವಿತೀಯ ಬಹುಮಾನ 4444 ರೂ., ತೃತೀಯ ಬಹುಮಾನ 3333 ರೂ., ಚತುರ್ಥ ಬಹುಮಾನ 2222 ರೂ. ಜೊತೆಗೆ ಟ್ರೋಫಿ […]

ಜ. 14: ಶಾಂತಿಗೋಡಿನಲ್ಲಿ ಮುಕ್ತ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಫಿ 2023 Read More »

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ

ಪುತ್ತೂರು: ಚಾರ್ವಾಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೊತ್ಸವ ನಡೆಯುತ್ತಿದ್ದು, ಬುಧವಾರ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಜರಗಿತು. ಬೆಳಿಗ್ಗೆ ಬೆಳಿಗ್ಗೆ 8ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಸ್ಥಾನದಲ್ಲಿ ಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ಮಧ್ಯಾಹ್ನ 11.45ರಿಂದ ಶ್ರೀ ಉಳ್ಳಾಕ್ಲು ಮತ್ತು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವಸ್ಥಾನದಲ್ಲಿ ಕುಂಬೇಶ ಕರ್ಕರೀ

ಕುಂಬ್ಲಾಡಿ ಆಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ಉಳ್ಳಾಕ್ಲು, ಶ್ರೀ ಉಳ್ಳಾಲ್ತಿ ಪ್ರತಿಷ್ಠೆ Read More »

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ

– ವಿನೋದ್ ಕೆ. ಕರ್ಪುತ್ತಮೂಲೆ ಪುತ್ತೂರು: ಹಲವು ಕನಸುಗಳನ್ನು ಹೊದ್ದು ಮಲಗಿದ್ದ ಪುಟ್ಟ ಊರು ಪಂಜಿಗ. ನರಿಮೊಗರು ಗ್ರಾ.ಪಂ.ನ ತೆಕ್ಕೆಯಲ್ಲಿರುವ ಪಂಜಿಗದಲ್ಲಿ ಕಿಂಡಿಅಣೆಕಟ್ಟು ಸಹಿತ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪಂಜಿಗ ಜನರ ಕನಸು ಮತ್ತೆ ಗರಿಗೆದರತೊಡಗಿವೆ. ಆನಡ್ಕ – ಶಾಂತಿಗೋಡು ನಡುವಿನ ಪಂಜಿಗ ಮೊದಲು ಹೀಗಿತ್ತು – ರಸ್ತೆ ಸಂಪರ್ಕವೇ ಇಲ್ಲ. ಪಕ್ಕದಲ್ಲಿ ಹರಿಯುವ ಹೊಳೆಗೆ ಹರುಕಲು – ಮುರುಕಲು ಪುಟ್ಟ ಕಾಲು ಸಂಕ. ಪಟ್ಟಣ ತಲುಪಬೇಕಾದರೆ ಹತ್ತಾರು ಕಿ.ಮೀ. ದೂರ ಸಾಗಬೇಕು. ರಿಕ್ಷಾ ಹಿಡಿಯಬೇಕಾದರೆ

ಊರುಗಳನ್ನು ಬೆಸೆದ, ಅಭಿವೃದ್ಧಿಗೆ ಹಾದಿಯಾಗುವ ಪಂಜಿಗ ಕಿಂಡಿಅಣೆಕಟ್ಟಿನ ಸೇತುವೆ | ಶಾಸಕರ ಕನಸಿನ ಯೋಜನೆಗೆ ಜೀವ, ಊರಿಗೇ ಮರುಜೀವ Read More »

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶ ಸಂದರ್ಭ ಸುಳ್ಯ ಗೀತಾಂಜಲಿ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ಜರಗಿತು.

ಕುಂಬ್ಲಾಡಿ ಬ್ರಹ್ಮಕಲಶ: ಭಜನಾ ಸೇವೆ Read More »

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ

ಪುತ್ತೂರು: ಭೈರವೈಕ್ಯರಾಗಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ, ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆಯನ್ನು ಮಾಡುವ ಸೌಭಾಗ್ಯ ಈ ಭಾಗದ ಜನರದ್ದಾಗಿದೆ. ಆದ್ದರಿಂದ ನಿರೀಕ್ಷೆಗಳೂ ಹೆಚ್ಚಿದೆ.

ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ | ಶ್ರೀ ಡಾ. ಧರ್ಮಪಾಲಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ Read More »

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ

ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ.

ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ Read More »

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ.

ಪುತ್ತೂರು: ಸೇತುವೆ ನಿರ್ಮಾಣದ ಸಂದರ್ಭ ಸ್ಥಗಿತಗೊಂಡಿದ್ದ ಬಸ್ ಸಂಪರ್ಕವನ್ನು ಮತ್ತೆ ಆರಂಭಿಸುವಂತೆ ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಪುತ್ತೂರು – ರೆಂಜ ನಡುವೆ ಮೊದಲು ಬಸ್ ಓಡಾಟವಿತ್ತು. ಸೇತುವೆ ನಿರ್ಮಾಣ ಕಾಮಗಾರಿಗಾಗಿ ಬಸ್ ಸಂಚಾರವನ್ನು ಮೊಟುಕುಗೊಳಿಸಲಾಗಿತ್ತು. ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಸಂಪರ್ಕ ರಸ್ತೆ ಸುಸ್ಥಿತಿಗೆ ಬಂದಿದೆ.

ಸುಳ್ಯಪದವು ಬಸ್ ಸಂಚಾರ ಮರುಕಲ್ಪಿಸಲು ವಿದ್ಯಾರ್ಥಿಗಳಿಂದ ಆಗ್ರಹ | ಸೇತುವೆ ನಿರ್ಮಾಣ ಸಂದರ್ಭ ಸ್ಥಗಿತಗೊಳಿಸಿದ್ದ ಕೆ.ಎಸ್.ಆರ್.ಟಿ.ಸಿ. Read More »

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

error: Content is protected !!
Scroll to Top