ಪುತ್ತೂರು

1.80 ಕೋಟಿ ವೆಚ್ಚದಲ್ಲಿ ಅಂದ್ರಟ್ಟದಲ್ಲಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಬನ್ನೂರು ಗ್ರಾಪಂ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು-ರಾಗಿದಕುಮೇರು-ಅಂದ್ರಟ್ಟ-ಪುರುಷರಕಟ್ಟೆ ಸಂಪರ್ಕ ರಸ್ತೆಗೆ ಸುಮಾರು 1.80 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಸಂಜೆ ನಡೆಯಿತು. ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆಯುವ ಮೂಲ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಾವು ಸರ್ವ ಸ್ವತಂತ್ರರಾದರೂ ನಮ್ಮ ಬೇಡಿಕೆಗಳು ಮುಗಿಯುವುದಿಲ್ಲ. ಇದಕ್ಕೆ ಇತಿಶ್ರೀ ಹಾಕಲು ಪ್ರಧಾನಿ ಮೋದಿಯವರು ಎಲ್ಲರಿಗೂ ಎಲ್ಲವನ್ನೂ ನೀಡುತ್ತಿದ್ದಾರೆ. ಅದನ್ನು ಸಾಕಾರಗೊಳಿಸಲು ನಮ್ಮಂತ ಜನಪ್ರತಿನಿಧಿಗಳಿಗೆ ಅವಕಾಶ ಸಿಕ್ಕಿದೆ ಎಂದ ಅವರು, ರೈತಾಪಿ ವರ್ಗಕ್ಕೆ ಕಿಸಾನ್ ಸಮ್ಮಾನ್ […]

1.80 ಕೋಟಿ ವೆಚ್ಚದಲ್ಲಿ ಅಂದ್ರಟ್ಟದಲ್ಲಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಮಠಂದೂರು Read More »

ಕಡಿದ ಹಾವು: ಮಗಳ ಧೈರ್ಯಕ್ಕೆ ಗುಡ್ ಬೈ ಹೇಳಿತು ಸಾವು | ತಾಯಿಯ ಉಳಿಸಿದ ದಿಟ್ಟೆಗೆ ಶಾಸಕರಿಂದ ಶಹಬ್ಬಾಶ್ ಗಿರಿ

ಪುತ್ತೂರು: ಹಾವು ಕಚ್ಚಿತು ಎಂದಾಕ್ಷಣ ಎಲ್ಲರೂ ಭಯಗೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬಾಕೆ ದಿಟ್ಟೆ, ತನ್ನ ಬಾಯಿಯಿಂದಲೇ ವಿಷವನ್ನು‌ ಕಚ್ಚಿ ತೆಗೆದು ತಾಯಿಯ ಪ್ರಾಣ ಉಳಿಸಿದ್ದಾಳೆ. ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಮಮತಾ ರೈ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಹಾವು ಕಚ್ಚಿತ್ತು. ತಕ್ಷಣ ಓಡಿ ಬಂದ ಮಗಳು ಶ್ರಮ್ಯ ರೈ, ತಾಯಿಗೆ ಧೈರ್ಯ ತುಂಬಿ, ತನ್ನ ಬಾಯಿಯಿಂದಲೇ ವಿಷವನ್ನು ಕಚ್ಚಿ ತೆಗೆದು ಪ್ರಥಮ ಚಿಕಿತ್ಸೆ ನೀಡಿದ್ದಾಳೆ. ನಂತರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಮಮತಾ ರೈ

ಕಡಿದ ಹಾವು: ಮಗಳ ಧೈರ್ಯಕ್ಕೆ ಗುಡ್ ಬೈ ಹೇಳಿತು ಸಾವು | ತಾಯಿಯ ಉಳಿಸಿದ ದಿಟ್ಟೆಗೆ ಶಾಸಕರಿಂದ ಶಹಬ್ಬಾಶ್ ಗಿರಿ Read More »

ಕಬಕ ಒಕ್ಕೂಟದ ವಿದ್ಯಾಪುರ ಶ್ರೀ ನಾಗ ಮತ್ತು ಪಂಚದೈವಗಳ ಸನ್ನಿಧಿಯಲ್ಲಿ  ನಮ್ಮ ಶೌರ್ಯ ತಂಡದ ಯೋಧರಿಂದ ಶ್ರಮದಾನ

ಪುತ್ತೂರು: ಕಬಕ  ವಿದ್ಯಾಪುರ  ಶ್ರೀ ನಾಗ ಮತ್ತು ಪಂಚ ದೈವಗಳ  ಸಾನಿದ್ಯದ ಜೀರ್ಣೋದ್ದಾರ ಪ್ರಯುಕ್ತ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕ ಒಂದು ದಿನದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ  ಘಟಕದ  ಪ್ರತಿನಿಧಿ ವಿನಯ ನಾಯ್ಕ, ಜಗದೀಶ, ಲೋಕೇಶ್, ವಿನೋದ್ ಬಂಗಾರಡ್ಕ, ಹರಿಪ್ರಸಾದ್, ಚಂದ್ರಶೇಕರ, ಸುನೀಲ್ ಡಿಸೋಜ, ರೋಷನ್ ಡಿಸೋಜ, ಅಜಯ್, ಶಂಭು ಪೂಜಾರಿ, ಬಾಲಕೃಷ್ಣ, ಕಾರ್ತಿಕ್ ಸ್ವಾತಿ ಭಾಗವಹಿಸಿದ್ದರು, ದೈವಸ್ಥಾನದ  ಸಮಿತಿಯವರು  ಸೇವೆ ಸಲ್ಲಿಸಿದ  ಎಲ್ಲರಿಗೂ  ಅಭಿನಂದನೆ  ಸಲ್ಲಿಸಿದರು, ಬಳಿಕ  ಮಾಸಿಕ  ಸಭೆ  ನಡೆಸಲಾಯಿತು, ಸಂಯೋಜಕಿ  ಆಶಾಲತಾ 

ಕಬಕ ಒಕ್ಕೂಟದ ವಿದ್ಯಾಪುರ ಶ್ರೀ ನಾಗ ಮತ್ತು ಪಂಚದೈವಗಳ ಸನ್ನಿಧಿಯಲ್ಲಿ  ನಮ್ಮ ಶೌರ್ಯ ತಂಡದ ಯೋಧರಿಂದ ಶ್ರಮದಾನ Read More »

ವಿಟ್ಲ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ, 94 ಸಿಸಿ ಹಕ್ಕುಪತ್ರ ವಿತರಣೆ | ವಿಟ್ಲದ ಸರ್ವತೋಮುಖ ಅಭಿವೃದ್ಧಿ: ಶಾಸಕ ಮಠಂದೂರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮತ್ತು 94 ಸಿಸಿ ಹಕ್ಕುಪತ್ರ ವಿತರಣೆ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಭಾನುವಾರ ಚಂದಳಿಕೆ ಭಾರತ ಅಡಿಟೂರಿಯಂ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿಟ್ಲದ ಸರ್ವತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗಿದೆ. ವಿವಿಧ ಕಾಮಗಾರಿಗಳ ಉದ್ಘಾಟನೆಯೂ ನಡೆದಿದೆ. 94 ಸಿಸಿ ಹಕ್ಕುಪತ್ರ ವಿತರಿಸುವ ಮೂಲಕ ವಾಸದ ಜಮೀನಿಗೆ ತಾವೇ ಮಾಲಕರಾಗಿದ್ದೀರಿ ಎಂದ

ವಿಟ್ಲ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ, 94 ಸಿಸಿ ಹಕ್ಕುಪತ್ರ ವಿತರಣೆ | ವಿಟ್ಲದ ಸರ್ವತೋಮುಖ ಅಭಿವೃದ್ಧಿ: ಶಾಸಕ ಮಠಂದೂರು Read More »

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ

ಸುಳ್ಯ: ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿ ಸರಕಾರದ ಉದ್ದೇಶ ಎಂದು ಕೇಂದ್ರ ಪ್ರವಾಸೋದ್ಯಮ, ಬಂದರು, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಭಾನುವಾರ ಪಂಜ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಈಗ ವಿಶ್ವದ ಶ್ರೇಷ್ಠ ದೇಶವಾಗಿ ಬೆಳೆಯುತಿದೆ. ಎಂದ ಅವರು, ಈ ಹಿಂದೆ ವಾಜಪೇಯಿ ಸರಕಾರ ಹಾಗು ಈಗ

ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ Read More »

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು: ಶಾಂತಿಗೋಡು ವಿಕ್ರಂ ಯುವಕ ಮಂಡಲದ ವತಿಯಿಂದ ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಏ.2 ಹಾಗೂ 3 ರಂದು ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವದ ಅಂಗವಾಗಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿದ್ದ ಪ್ಲಾಸ್ಟಿಕ್, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸುವ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಶ್ರಮದಾನದಲ್ಲಿ ಯುವಕ ಮಂಡಲದ ಸದಸ್ಯರಾದ ಶಿವಪ್ರಸಾದ್ ಕೈಂದಾಡಿ, ಪ್ರಭಾತ್ ಸಾರಕರೆ, ವರುಣ್ ಶಾಂತಿಗೋಡು, ಪ್ರವೀಣ್ ಬೊಳ್ಳೆಕ್ಕು, ಕಾರ್ತಿಕ್ ಕುಕ್ಯಾನ, ಶಶಿ ಕುಮಾರ್ ಓಲಾಡಿ, ಭಾಸ್ಕರ ಓಲಾಡಿ, ವಿನೋದ್ ಓಲಾಡಿ, ಹರ್ಷಿತ್ ಬಂಡಶಾಲೆ,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರಮದಾನ Read More »

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಪುತ್ತೂರು : ಆದಿ ದ್ರಾವಿಡ ಸಮಾಜ ಒಂದು ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ನೆನಪುಗಳನ್ನು ಮೆಲುಕು ಹಾಕುತ್ತಾ ಈ ದೇಶದ ಇತಿಹಾಸ, ಪರಂಪರೆ, ಹಿಂದೂ ಸಂಸ್ಕೃತಿಗೆ  ಕೊಟ್ಟ ಕೊಡುಗೆಗಳ ಆಧಾರದಲ್ಲಿ ಸಮಾಜಕ್ಕೆ ಸರಕಾರ ಹಲವು ಸವಲತ್ತು ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹಾ ಕ್ರೀಡೆಗಳನ್ನು ಆಯೋಜಿಸಿ ಮನೋರಂಜನೆ ಕೊಡುವ ಕೆಲಸ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಯುವಕರು ಸಾಧಕರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಕೊಟ್ಟಿಗೆ ಪೆರ್ಲ ವಡೆದರ ಆಶ್ರಯದಲ್ಲಿ  ಆದಿ

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ Read More »

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ

ಪುತ್ತೂರು : ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋ ಖೋ ಪಂದ್ಯಾಟವು ಮಾರ್ಚ್ 20 ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಪೂರ್ವಾಹ್ನ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ರಾಷ್ಟ್ರೀಯ ಖೋ ಖೋ ತರಬೇತುದಾರ ಕಾರ್ತಿಕ್.ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ

ನಾಳೆ (ಮಾ.20) : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಖೋ-ಖೋ ಪಂದ್ಯಾಟ Read More »

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ

ಪುತ್ತೂರು: ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ನಿವೃತ್ತಿಯಾದ ಮೇಲೆ ಸಮಾಜ ಗುರತಿಸುವ, ಗೌರವಿಸುವ ಕೆಲಸ ಮಾಡುತ್ತದೆ. ಮುಂಬರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಸವಾಲುಗಳಿದ್ದು, ಈ ಸವಾಲುಗಳನ್ನು ಸ್ವೀಕಾರ ಮಾಡಿಕೊಂಡು ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಸುದಾನ ಶಾಲಾ ಸಂಚಾಲಕ

ರಾಜ್ಯಮಟ್ಟದ ಕ್ರೀಡಾ ಸಾಧಕರು, ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ, ಶೈಕ್ಷಣಿಕ ಕಾರ್ಯಾಗಾರ Read More »

error: Content is protected !!
Scroll to Top