1.80 ಕೋಟಿ ವೆಚ್ಚದಲ್ಲಿ ಅಂದ್ರಟ್ಟದಲ್ಲಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ | ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಮಠಂದೂರು
ಪುತ್ತೂರು: ಬನ್ನೂರು ಗ್ರಾಪಂ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು-ರಾಗಿದಕುಮೇರು-ಅಂದ್ರಟ್ಟ-ಪುರುಷರಕಟ್ಟೆ ಸಂಪರ್ಕ ರಸ್ತೆಗೆ ಸುಮಾರು 1.80 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಸಂಜೆ ನಡೆಯಿತು. ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆಯುವ ಮೂಲ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಾವು ಸರ್ವ ಸ್ವತಂತ್ರರಾದರೂ ನಮ್ಮ ಬೇಡಿಕೆಗಳು ಮುಗಿಯುವುದಿಲ್ಲ. ಇದಕ್ಕೆ ಇತಿಶ್ರೀ ಹಾಕಲು ಪ್ರಧಾನಿ ಮೋದಿಯವರು ಎಲ್ಲರಿಗೂ ಎಲ್ಲವನ್ನೂ ನೀಡುತ್ತಿದ್ದಾರೆ. ಅದನ್ನು ಸಾಕಾರಗೊಳಿಸಲು ನಮ್ಮಂತ ಜನಪ್ರತಿನಿಧಿಗಳಿಗೆ ಅವಕಾಶ ಸಿಕ್ಕಿದೆ ಎಂದ ಅವರು, ರೈತಾಪಿ ವರ್ಗಕ್ಕೆ ಕಿಸಾನ್ ಸಮ್ಮಾನ್ […]










