ಪುತ್ತೂರು

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ

ಪುತ್ತೂರು: ರಾಜ್ಯದ ಹೆಸರಾಂತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ ಯುಗಾದಿ ಹಬ್ಬದ ಪ್ರಯುಕ್ತ ತನ್ನ ಎಲ್ಲ ಶೋರೂಂಗಳಲ್ಲಿ ಮಾರ್ಚ್ 22ರಂದು ಯುಗಾದಿ ಒನ್‌ ಡೇ ವಿಶೇಷ ಆಫರ್‍‌ ನೀಡುತ್ತಿದೆ. ಪ್ರತಿ ಖರೀದಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟಾರೆಯಾಗಿ 100 ನಾಣ್ಯಗಳನ್ನು ಗೆಲ್ಲುವ ಅವಕಾಶವಿದೆ. ಪ್ರತಿ Walk-inಗೆ ಬೆಳ್ಳಿ ನಾಣ್ಯ ಗೆಲ್ಲುವ ಅವಕಾಶ ನೀಡಲಾಗುತ್ತಿದೆ. ಈ ಆಫರ್ ನ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ […]

ಮುಳಿಯ ಜ್ಯುವೆಲ್ಸ್‌ನೊಂದಿಗೆ ಯುಗಾದಿ ಸಂಭ್ರಮ | ಮಾರ್ಚ್ 22ರಂದು ಒನ್‌ ಡೇ ಆಫರ್; ಚಿನ್ನ, ಬೆಳ್ಳಿ ನಾಣ್ಯಗಳನ್ನು ಗೆಲ್ಲುವ ಅವಕಾಶ Read More »

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ

ಪುತ್ತೂರು: ಜಾಗೃತ ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಂವಿಂಧಾನಬದ್ಧ ಹಕ್ಕು ಚಲಾಯಿಸಲು ಅವಕಾಶ, ಅನ್ಯಾಯ ಆದಾಗ ನ್ಯಾಯ ಕೊಡುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಹಾಗೂ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಜಂಟಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಠಾರದಲ್ಲಿ ನಡೆದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ

ಮಹಿಳೆಯರು ಜಾಗೃತರಾದರೆ ಸಮಾಜದಲ್ಲಿ ಪರಿವರ್ತನೆ ಸಾಧ್ಯ : ಶಾಸಕ ಸಂಜೀವ ಮಠಂದೂರು | ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಮಹಿಳಾ ದಿನಾಚರಣೆ Read More »

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25 ರಿಂದ 31 ರ ತನಕ  ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಪುತ್ತೂರು ನಗರದಲ್ಲಿ ವಿತರಿಸಲಾಯಿತು. ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಯವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯ ಮೂಲಕ ದರ್ಬೆ, ಕೂರ್ನಡ್ಕದ ತನಕ ಆಮಂತ್ರಣ ವಿತರಿಸಿದರು. ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ

ಪುತ್ತೂರು ಪೇಟೆಯಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವದ ಆಮಂತ್ರ ಪತ್ರಿಕೆ ವಿತರಣೆ Read More »

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿಅಗ್ನಿಪಥ್ 2023 : ಭಾರತೀಯ ವಾಯುಪಡೆ ಸೇನೆಯ ಅಗ್ನಿವೀರ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ / ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಕೊನೆಯ ದಿನಾಂಕ: 31-03-2023. ಸಿಬ್ಬಂದಿ ನೇಮಕಾತಿ ಆಯೋಗ (SSC): ಫೇಸ್ XI ಹುದ್ದೆಗಳು. ವಿದ್ಯಾರ್ಹತೆ: ಪಿಯುಸಿ + ಪದವಿ + ಸ್ನಾತ್ತಕೋತ್ತರ ಪದವಿ. ಕೊನೆಯ ದಿನಾಂಕ: 27-03-2023. KMF: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ವಿವಿಧ ಹುದ್ದೆಗಳು. ವಿದ್ಯಾರ್ಹತೆ: ಪದವಿ/ಸ್ನಾತಕೋತ್ತರ ಪದವಿ/ಬಿ.ಇ/ಐಟಿಐ/ಡಿಪ್ಲೋಮಾ. ಕೊನೆಯ ದಿನಾಂಕ: 17-04-2023. ಕರ್ನಾಟಕ ಹೈಕೋರ್ಟ್‌ನಲ್ಲಿ 37 ಡ್ರೈವರ್ ಹುದ್ದೆಗಳು, ವಿದ್ಯಾರ್ಹತೆ:

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ

ಪುತ್ತೂರು: ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳದಲ್ಲಿ ಮಾರ್ಚ್ 24ರಂದು ಜನಜಾಗೃತಿ ಸಭೆ, ಆಶ್ಲೇಷ ಬಲಿ, ಧಾರ್ಮಿಕ ಸಭೆ, ಅರ್ಧ ಏಕಾಹ ಭಜನೆ ನಡೆಯಲಿದೆ ಎಂದು ಹಿಂಜಾವೇ ಮಂಗಳೂರು ವಿಭಾಗ ಸಹಸಂಚಾಲಕ ಅಜಿತ್ ರೈ ಹೊಸಮನೆ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 6ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂಜೆ 7ಕ್ಕೆ ಜನಜಾಗೃತಿ ಸಭೆ ಆಯೋಜಿಸಲಾಗಿದೆ. ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಕರಾನಂದ ಸ್ವಾಮೀಜಿ ಆಶೀರ್ವಚನ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಬೊಳುವಾರಿನ ಜಾಗದಲ್ಲಿ ಮಾರ್ಚ್ 24ರಂದು ಆಶ್ಲೇಷ ಬಲಿ, ಧಾರ್ಮಿಕ ಸಭೆ | ಲ್ಯಾಂಡ್ ಜಿಹಾದ್, ಮತಾಂತರ, ಗೋಹತ್ಯೆ ವಿರುದ್ದ ಜನಜಾಗೃತಿ ಸಭೆ Read More »

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ

ಪುತ್ತೂರು: ದಣಿವರಿಯದ ನಾಯಕಿ ಶಕುಂತಳಾ ಶೆಟ್ಟಿ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಮಾತನಾಡಿ, ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು ಎಂದು ಮನವಿ ಮಾಡಿಕೊಂಡರು.

ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ Read More »

ಹಿಂದೀ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್

ಪುತ್ತೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ  ಹಿಂದಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪುತ್ತೂರಿನ ಡಿಂಪಲ್ ಮಿಶೆಲ್ ತಾವ್ರೋ 8.45 ಸಿಜಿಪಿಎ ಪಡೆದು ಚಿನ್ನದ ಪದಕದೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ದಿನೇಶ್ ಪಾವ್ಲ್‍ ತಾವ್ರೋ ಹಾಗೂ ಮೋಂತಿಮೇರಿ ಮಸ್ಕರೇನಸ್ ದಂಪತಿ ಪುತ್ರಿ.

ಹಿಂದೀ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ Read More »

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ

ಪುತ್ತೂರು :  ಕಾವು ನವೋದಯ ಒಕ್ಕೂಟದ ಸದಸ್ಯರಿಂದ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿಯಾಗಿ ಶ್ರಮದಾನ ನಡೆಯಿತು. ದೇವಸ್ಥಾನದ ಹೊರಾಂಗಣವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಮಾಡಿದರು. ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ, ಮಾಜಿ ಉಪಾಧ್ಯಕ್ಷೆ ನಿರ್ಮಲಾ ರೈ  ಉಸ್ತುವಾರಿಯಲ್ಲಿ ನಡೆದ ಕರಸೇವೆಯಲ್ಲಿ ಎಲ್ಲಾ ಗುಂಪಿನ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ Read More »

ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ. ಆದ್ದರಿಂದ ಯುವಕರು ದಿನದ ಕನಿಷ್ಠ 1 ಗಂಟೆಯನ್ನಾದರೂ ಗ್ರಂಥಾಲಯಕ್ಕೆ ನಮ್ಮ ಸಮಯವನ್ನು ಮೀಸಲಿಡಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರಿನ ಪರ್ಲಡ್ಕ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಸೋಮವಾರ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶ ಸುಸಂಸ್ಕೃತವಾಗಿದೆ ಅಂದರೆ ಅದಕ್ಕೆ ಸಾಹಿತ್ಯವೇ ಪ್ರಮುಖ ಕಾರಣ. ಸುಸಂಸ್ಕೃತತೆಯ ಜೊತೆಗೆ, ದೇಶ ದೊಡ್ಡ ಮಟ್ಟಿನ ಬೆಳವಣಿಗೆಗಳನ್ನು ಕಂಡಿವೆ. ಇದು ಗ್ರಂಥಾಲಯ, ಸಾಹಿತ್ಯದಿಂದ ಸಾಧ್ಯವಾಯಿತು. ಆದ್ದರಿಂದ ಪುತ್ತೂರಿನ ಜನರು ಬಾಲವನದ ಗ್ರಂಥಾಲಯಕ್ಕೆ ಬಂದು,

ಮೊಬೈಲಿಗಿಂತಲೂ ಪುಸ್ತಕದ ಮಾಹಿತಿ ಶಾಶ್ವತ | ಬಾಲವನದಲ್ಲಿ ಗ್ರಂಥಾಲಯ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಬಲ್ನಾಡಿನ ವಿನುಶ್ರೀ ಆಯ್ಕೆ

ಪುತ್ತೂರು : ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ  ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ದಂಪತಿಯ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಮೂಡಬಿದಿರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಪಿ ಬಿಎಡ್ ವಿದ್ಯಾರ್ಥಿನಿಯಾಗಿದ್ದಾರೆ.

ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಬಲ್ನಾಡಿನ ವಿನುಶ್ರೀ ಆಯ್ಕೆ Read More »

error: Content is protected !!
Scroll to Top