ಪುತ್ತೂರು

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ

ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ  94ಸಿಯಲ್ಲಿ […]

94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್‌ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ Read More »

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಮಾ. 18ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಿತು. ರೋಟರ್ಯಾಕ್ಟ್ ಜಿಲ್ಲೆ 3181 ಇದರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಕ್ತದಾನದ ಸಾಪ್ತಾಹಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ವರ್ಷ ಮಹಾದಾನ್ ಎನ್ನುವ ಹೆಸರಿನಲ್ಲಿ ಜಿಲ್ಲೆಯಾದ್ಯಂತ ರಕ್ತದಾನ ಹಮ್ಮಿಕೊಂಡಿದ್ದು, ಅಭಿಯಾನಕ್ಕೆ ಬೆಂಬಲವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ರಕ್ತದಾನ ನಡೆಸಿತು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ., ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ ಶ್ರೀಧರ್ ಕೆ., ಪ್ರಗತಿ

ಮಹಾದಾನ್ ಅಭಿಯಾನದ ಅಂಗವಾಗಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ರಕ್ತದಾನ Read More »

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇರಿದ ಬೊಳುವಾರಿನಲ್ಲಿ ಜಾಗವನ್ನು ಮರಳಿ ಪಡೆಯುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆಯುತ್ತಿರುವಂತೆ ಶಾಸಕ ಸಂಜೀವ ಮಠಂದೂರು ಅವರು ಶನಿವಾರ ಭೇಟಿ ನೀಡಿದರು. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕಾರಿಂಜದಲ್ಲಿ ನಡೆದ ಹೋರಾಟದ ಬಳಿಕ, ಶ್ರೀ ಕಾರಿಂಜೇಶ್ವರ ಸನ್ನಿಧಿಯ ಎರಡು ಕಿಲೋ ಮೀಟರ್ ಆಸುಪಾಸಿನಲ್ಲಿ ಗಣಿಗಾರಿಕೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ಯಶಸ್ವಿ ಹೋರಾಟದ ಬಳಿಕ ಹಿಂದೂ ಜಾಗರಣ ವೇದಿಕೆ, ಪುತ್ತೂರಿನ ಬೊಳುವಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ಮರಳಿ ಪಡೆಯುವ ಹೋರಾಟಕ್ಕೆ

ಬೊಳುವಾರಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಪಟ್ಟ ಜಾಗಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ | ಹಿಂಜಾವೇ ನೇತೃತ್ವದಲ್ಲಿ ಮಾರ್ಚ್ 24ರಂದು ನಡೆಯಲಿದೆ ಧಾರ್ಮಿಕ ಕಾರ್ಯಕ್ರಮ Read More »

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರದ ನೀರಿನ ಅಗತ್ಯತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆಯನ್ನು ಜಾರಿಗೆ ತಂದು ನೀರಿನ ಕೊರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. 2021ರ ಜನಗಣತಿ ಆಧಾರದಲ್ಲಿ ಜನಸಂಖ್ಯೆ 70 ಸಾವಿರದಿಂದ ಒಂದು ಲಕ್ಷದ ವರೆಗೆ ತಲುಪಿದಾಗ ಪುತ್ತೂರಿಗೆ ಎಷ್ಟು ನೀರು ಬೇಕಾದರೂ ಪೂರೈಸುವ ಕೆಲಸ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಬಿಜೆಪಿ ವತಿಯಿಂದ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನದದ ನಿಟ್ಟಿನಲ್ಲಿ ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪುತ್ತೂರು

ಪುತ್ತೂರು ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ | ನೀರಿನ ಅಗತ್ಯತೆ ಪೂರೈಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ಜಾರಿ: ಶಾಸಕ ಮಠಂದೂರು Read More »

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ

ಪುತ್ತೂರು: ಕಾಲಮಿತಿಯೊಳಗಡೆ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳಿಸುತ್ತಿದ್ದು, ಮಾರ್ಚ್ ೨೬ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶನಿವಾರ ರೈಲ್ವೇ ಅಂಡರ್ ಪಾಸ್ ಕಾಮಗಾರಿಯನ್ನು ಪರಿಶೀಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಪಸ್ಥಿತಿಯಲ್ಲಿ ರೈಲ್ವೇ ಅಂಡರ್ ಪಾಸ್ ಉದ್ಘಾಟನೆಗೊಳ್ಳಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿದರು.ನಿಗದಿತ ಕಾಲಮಿತಿಯೊಳಗಡೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಬಹಳ ಬೇಡಿಕೆಯ ಈ ಯೋಜನೆಯ

ಮಾರ್ಚ್ 26 ರಂದು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಲೋಕಾರ್ಪಣೆ | ಕಾಮಗಾರಿ ಪರಿಶೀಲಿಸಿ ಶಾಸಕ ಸಂಜೀವ ಮಠಂದೂರು | ವಿವೇಕಾನಂದ ಕಾಲೇಜು ಸಂಪರ್ಕಿಸುವ ರೈಲ್ವೇ ಓವರ್ ಬ್ರಿಡ್ಜಿಗೆ ಶಿಲಾನ್ಯಾಸ Read More »

ಮಾ.19 : ವಿಟ್ಲ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮಾ.19 ಭಾನುವಾರ ಚಂದಳಿಕೆ ಭಾರತ್ ಆಡಿಟೋರಿಯಂನಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯ 9400 ಹಕ್ಕು ಪತ್ರ ವಿತರಣೆಯೂ ನಡೆಯಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ

ಮಾ.19 : ವಿಟ್ಲ ಪಂಚಾಯಿತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಹಕ್ಕುಪತ್ರ ವಿತರಣೆ Read More »

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ

ಅಭಿಮಾನಿ ಬಳಗ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಅವರ ಹುಟ್ಟುಹಬ್ಬವನ್ನು ಶನಿವಾರ ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಆಚರಿಸಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಬೃಹತ್ ಕೇಕನ್ನು ಕತ್ತರಿಸಿ ಸಂಭ್ರಮವನ್ನು ಆಚರಿಸಲಾಯಿತು. ಡಿ.ವಿ. ಸದಾನಂದ ಗೌಡ ಅವರ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಹುಟ್ಟುಹಬ್ಬ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ

ಪುತ್ತೂರು: ಆಂಗ್ಲ ಭಾಷಾ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿಯನ್ನು, ಧರ್ಮವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ.  ಈ ಕಾರ್ಯ ಯಶಸ್ವಿಯಾಗಿ ನೆರವೇರಿದಾಗ ಭಾರತ ವಿಶ್ವಗುರುವಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ದೀಪ ಪ್ರದಾನಮ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತಿಯ ಆಚರಣೆಗಳಿಗೆ ಅದರದ್ದೇ ಆದ ವೈಶಿಷ್ಟ್ಯತೆ, ವೈಜ್ಞಾನಿಕ ಹಿನ್ನೆಲೆ ಇದೆ. ಸಂಸ್ಕಾರದ ಅಳವಡಿಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ದೀಪ ಪ್ರದಾನಮ್” ಕಾರ್ಯಕ್ರಮ Read More »

ಮಹಾದಾನ್ ಅಭಿಯಾನದ ಅಂಗವಾಗಿ ನಾಳೆ ರಕ್ತದಾನ

ಪುತ್ತೂರು: ರೊಟರ್ಯಾಕ್ಟ್ ಜಿಲ್ಲಾ ಘಟಕದ ಕಾರ್ಯಕ್ರಮವಾದ ಮಹಾದಾನ್ ಅಭಿಯಾನದ ಅಂಗವಾಗಿ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಮಾರ್ಚ್ 19ರಂದು ಪುತ್ತೂರು ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ರಕ್ತದಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಅಧ್ಯಕ್ಷ ಗಣೇಶ್ ಎನ್. ಕಲ್ಲರ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೋಟರ್ಯಾಕ್ಟ್ ಜಿಲ್ಲಾ ಘಟಕದಿಂದ ಪ್ರತಿವರ್ಷ ರಕ್ತದಾನದ ಶಿಬಿರ ಆಯೋಜಿಸುತ್ತಿದ್ದು, ಒಂದು ವಾರಗಳ ಕಾರ್ಯಕ್ರಮ ಇದಾಗಿದೆ. ರೋಟರ್ಯಾಕ್ಟಿನ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಈ ಅಭಿಯಾನ

ಮಹಾದಾನ್ ಅಭಿಯಾನದ ಅಂಗವಾಗಿ ನಾಳೆ ರಕ್ತದಾನ Read More »

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, ವ್ಯಾಪಾರ ಹಾಗೂ ಇನ್ನಿತರ ಉದ್ದೇಶಗಳಿಗಾಗಿ ನೆಲೆಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಜೀವ ಮಠಂದೂರು ಅಭಿಮಾನಿ ಬಳಗದ ವತಿಯಿಂದ ‘ಬನ್ನಿ, ರಾಜಧಾನಿಯಲ್ಲಿ ನಾವೆಲ್ಲರೂ ಸೇರಿ ಒಗ್ಗಟ್ಟಾಗೋಣ’ ಎನ್ನುವ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಾರ್ಚ್ 25: ಬೆಂಗಳೂರಿನಲ್ಲಿ ಪುತ್ತೂರಿಗರ ಸ್ನೇಹಮಿಲನ | ಸಂಜೀವ ಮಠಂದೂರು ಅಭಿಮಾನಿ ಬಳಗದಿಂದ ಆಯೋಜನೆ Read More »

error: Content is protected !!
Scroll to Top