94ಸಿಗೆ ಪಂಚಾಯಿತಿ ದೃಡೀಕರಣ ಸಮಸ್ಯೆ ಪರಿಹಾರಕ್ಕೆ ಕ್ರಮ : ತಹಸೀಲ್ದಾರ್ರಿಂದ ಗ್ರಾಮಸ್ಥರಿಗೆ ಭರವಸೆ | ಪುತ್ತೂರು ತಹಸೀಲ್ದಾರ್ ಗ್ರಾಮ ವಾಸ್ತವ್ಯ
ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ 94ಸಿಯಲ್ಲಿ […]









