ಪುತ್ತೂರು

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ

ಪುತ್ತೂರು: ಅಝಾನ್ ಹಾಗೂ ಅಲ್ಲಾಹುವಿನ ಕುರಿತು ಅವಹೇಳನವಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಶುಕ್ರವಾರ ಸಂಜೆ ತಾಲೂಕು ಆಡಳಿತ ಸೌಧದ ಬಳಿಯ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಮಾತನಾಡಿ, ಎಸ್‌ಡಿಪಿಐ ಪಕ್ಷದವರಿಗೆ ಹಿಂದೂ, ಮುಸ್ಲಿಂ, ಬೌದ್ಧ, ಕ್ರಿಶ್ಚಿಯನ್ ಎಲ್ಲರೂ ಒಂದೇ. ನಮಗೇ ಬೇಕಾದ್ದು ಮನುಷ್ಯ ಜಾತಿ ಹೊರತು ಧರ್ಮ ಅಲ್ಲ. ಈ ನಿಟ್ಟಿನಲ್ಲಿ ಬಿಜೆಪಿಯವರು ದ್ವೇಷವನ್ನು ಬಿಟ್ಟುಬಿಡಿ ಎಂದು ಹೇಳಿದ ಅವರು, […]

ಅಝಾನ್, ಅಲ್ಲಾಹು ಕುರಿತು ಅವಹೇಳನ: ಎಸ್.ಡಿ.ಪಿ.ಐ. ಪ್ರತಿಭಟನೆ Read More »

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಕ್ಕಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತರಬಾರದು ಎಂಬ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತೀ ಶಾಲೆಗಳಿಗೆ ಒದಗಿಸಲಾಗುತ್ತಿದೆ. ಖಾಸಗಿ ಶಾಲೆಗಳಿಗೆ ನಾವೇ ಕಡಿಮೆಯಿಲ್ಲ ಎಂಬ ದೃಷ್ಟಿಯಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಮುಚ್ಚಬಾರದು ಎಂಬ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು

ಬನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ

ಪುತ್ತೂರು : ಬಡಗನ್ನೂರು ಗ್ರಾಮದ ಪೆರಿಗೇರಿ ನೂಚಿಲೋಡು ಮೂಕಾಂಬಿ ಗುಳಿಗ ದೈವದ ಪುನರ್ ಪ್ರತಿಷ್ಠಾ ಮಹೋತ್ಸವ ಮತ್ತು  ಧಾರ್ಮಿಕ ಸಭಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಭೂತಾರಾಧನೆ ಕುರಿತು ಬಯಲು ಸೀಮೆಯ ಜನ ಕೂಡ ತಿಳಿದುಕೊಳ್ಳುವ ಸಂಗತಿ ಕಾಂತರ ಸಿನಿಮಾದ ಮೂಲಕ ಆಗಿದೆ. ನಂಬಿಕೆ ಆಧಾರದಲ್ಲಿ ನಮ್ಮ ಜೀವನ ಪದ್ಧತಿ ಇದೆ ನಮ್ಮಲ್ಲಿ ಪ್ರೀತಿ ವಿಶ್ವಾಸ, ಸಹ ಬಾಳ್ವೆಯ ಜೀವನ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಡಿ ಬಂದಿದೆ. ದೈವಸ್ಥಾನಗಳ

ಪೆರಿಗೇರಿ ಮೂಕಾಂಬಿ ಗುಳಿಗ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭಾ ಕಾರ್ಯಕ್ರಮ | ಶಾಸಕ ಮಠಂದೂರು ಭಾಗಿ Read More »

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಈ ವರ್ಷ ಎಲ್.ಕೆ.ಜಿ.ಯಿಂದ ಪ್ರಾರಂಭಗೊಳ್ಳುತ್ತಿದೆ. ಗುಣಮಟ್ಟದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ, ಮಾದರಿ ಸಂಸ್ಥೆಯಾಗಿ ಮೂಡಿಬರಲಿ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬನ್ನೂರಿನ ಕೃಷ್ಣನಗರದಲ್ಲಿ ಅಲುಂಬುಡದಲ್ಲಿ ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಪ್ರೇಮ ಇಲ್ಲದ ಶಿಕ್ಷಣ ಎಂದೂ ಯಶಸ್ವಿ ಆಗಲಾರದು. ದೇಶಪ್ರೇಮದ ಜೊತೆಗೆ ಶಿಕ್ಷಣ ಪಡೆದ ವ್ಯಕ್ತಿ ದೇಶದ ಸಂಪನ್ಮೂಲವಾಗಿ ಗುರುತಿಸಿಕೊಳ್ಳುತ್ತಾನೆ. ಇಂತಹ ದೇಶಪ್ರೇಮ, ಸಂಸ್ಕಾರಯುತ ಶಿಕ್ಷಣ ನೀಡುವ

ಕೆ.ವಿ.ಜಿ.ಯಂತೆಯೇ ಎ.ವಿ.ಜಿ. ಬೆಳಗಲಿ | ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ ಮಾ.22 ಚಾಂದ್ರಮಾನ ಯುಗಾದಿಯಂದು ಬೆಳಿಗ್ಗೆ 8 ಕ್ಕೆ ನಡೆಯಲಿದೆ. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.22 : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರ,ಮ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಪೂರ್ವಭಾವಿಯಾಗಿ ಅನುಜ್ಞಾ ಕಲಶ ದೇವಸ್ಥಾನದ ಗರ್ಭಗುಡಿ ಎದುರು  ಪ್ರಾರ್ಥನೆಯೊಂದಿಗೆ ಶುಕ್ರವಾರ ನಡೆಯಿತು. ಕ್ಷೇ್ತ್ರದ  ವೇ.ಮೂ.ರವೀಶ ತಂತ್ರಿ ಅವರ ನೇತೃತ್ವದಲ್ಲಿ ವೇ.ಮೂ. ಗುರು ತಂತ್ರಿ ಶ್ರೀ ದೇವರಿಗೆ ಅನುಜ್ಞಾ ಕಲಶ ನೆರವೇರಿಸಿದರು. ಬಳಿಕ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿದರು. ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಗುರುವಾರ ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ಜರಗಿತು. ರಾತ್ರಿ ರಂಗಪೂಜೆ ದೈವದ ನೇಮೋತ್ಸವದೊಂದಿಗೆ ಜಾತ್ರೆ  ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಡಾ,ಎಂ.ಕೆ.ಪ್ರಸಾದ್, ವ್ಯವಸ್ಥಾಪನಾ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ

ಪುತ್ತೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂದ್ದ  2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ,

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ Read More »

ಮದನ ಪೂಜಾರಿ ನಿಧನ

ಪುತ್ತೂರು: ಕುದ್ಮಾರು ಹಿ.ಪ್ರಾ. ಶಾಲಾ ನಿವೃತ್ತ ಮುಖ್ಯಗುರು, ಕುದ್ಮಾರು ನಿವಾಸಿ ಮದನ ಪೂಜಾರಿ ಅವರು ಮಾ. 16ರಂದು ರಾತ್ರಿ ನಿಧನರಾದರು. ವಿವಿಧ ಸಂಘ – ಸಂಸ್ಥೆಗಳಲ್ಲಿ, ದೇವಸ್ಥಾನ – ದೈವಸ್ಥಾನಗಳಲ್ಲಿ, ಪುತ್ತೂರು ತಾಲೂಕು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮದನ ಪೂಜಾರಿ ನಿಧನ Read More »

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ

ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ. ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ Read More »

error: Content is protected !!
Scroll to Top