ಪುತ್ತೂರು

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಬಂಟ್ವಾಳ ತಾಲೂಕಿನ ಮಾಣಿಲ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಶನಿವಾರ ಚಾಲನೆ ನೀಡಿದರು. 16.4 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭ ಶಿಲಾನ್ಯಾಸ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಶಾಸಕರು, ನಮ್ಮ ಊರಿಗಿಂತ ಮೊದಲು ನಮ್ಮ ಶಾಲೆ ಹೇಗಿರಬೇಕು ಎಂಬ ಚಿಂತನೆ ನಮ್ಮಲ್ಲಿರಬೇಕು. ಒಂದು ಶಾಲೆಯನ್ನು ನೋಡಿದಾಗ, ಆ ಊರು ಹೇಗಿದೆ ಎನ್ನುವುದನ್ನು ಅರ್ಥವಿಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ. ಇಂದು ನಾವಿರು ಶಾಲೆ, ಮುಂದೆ ಪ್ರೌಢಶಾಲೆಯಾಗಿ ಬೆಳೆಯಬೇಕು […]

ಮಾಣಿಲ ಶಾಲಾ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ Read More »

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ.

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ

ಪುತ್ತೂರು: ಭಾರತ್ ಜೋಡೋ ಯಾತ್ರೆಯನ್ನು ತಡೆಯುವ ಉದ್ದೇಶದಿಂದ ರಾಹುಲ್ ಗಾಂಧಿಯವರಿಗೆ ಕೇಂದ್ರ ಸರಕಾರ ಪತ್ರ ಬರೆಯುತ್ತದೆ. ಆದರೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವಾಗ ಇದಾವುದೇ ನಿಯಮಾವಳಿ ಅನ್ವಯವಾಗುವುದಿಲ್ಲವೇ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಪ್ರಶ್ನಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಮುಂದುವರಿಯುತ್ತಿದ್ದಂತೆ ಕೇಂದ್ರ ಸಚಿವರಾದ ಮನ್ಸೂರ್ ಮಾಂಡವಿಯಾ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುತ್ತಾರೆ. ನಿಮ್ಮ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಎಂದು ಆರೋಪಿಸುತ್ತಾರೆ. ಅಂದರೆ ಇದು ಯಾತ್ರೆಯನ್ನು

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ Read More »

ಜ. 7ರಂದು ಪಾಂಗಳಾಯಿ ನೇಮೋತ್ಸವ

ಪುತ್ತೂರು: ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ಸಮಿತಿ ನೇತೃತ್ವದಲ್ಲಿ ಶ್ರೀ ಅರಸು ಮುಂಡ್ಯತ್ತಾಯ ದೈವದ ವರ್ಷಾವಧಿ ಪೂಜೆ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ ಮತ್ತು ಗ್ರಾಮದೈವ ಹಾಗೂ ಪರಿವಾರ ದೈವಗಳ ಪಾಂಗಳಾಯಿ ನೇಮೋತ್ಸವ ಜ. 7ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ತಾರನಾಥ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಮ್ಮಿಂಜೆ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ನಡೆಯಲಿದೆ. ದೈವಸ್ಥಾನದಲ್ಲಿ ಶ್ರೀ ಅರಸು ಮುಂಡ್ಯತ್ತಾಯ,

ಜ. 7ರಂದು ಪಾಂಗಳಾಯಿ ನೇಮೋತ್ಸವ Read More »

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಜ್ಞಾನ ರಶ್ಮಿ ಕಾರ್ಯಕ್ರಮ ಡಿ. 31ರಂದು ವಿದ್ಯಾಚೇತನ ಅಡಿಟೋರಿಯಂನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿಜ್ಞಾನ ಪ್ರಯೋಗದ ಆಧಾರದಲ್ಲಿ ಬೆಳೆದು ಬಂದಿದೆ. ಆದ್ದರಿಂದ ಪ್ರಾಯೋಗಿಕ ಅಭ್ಯಾಸ ಮಾಡಿದರೆ ಮಾತ್ರ ವಿಜ್ಞಾನದಲ್ಲಿ ಆಸಕ್ತಿ ಬೆಳೆಯುತ್ತದೆ ಎಂದರು. ದೋಲ್ಪಾಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಶಿಧರ ಪಿ. ಮಾತನಾಡಿ, ವಿಶ್ವ ಬಹಳಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದ್ದರಿಂದ ಆಧುನಿಕತೆಯಲ್ಲಿ ನಮ್ಮ ಜೀವನಕ್ಕೆ ವಿಜ್ಞಾನ ಬಹು ಅಗತ್ಯ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ Read More »

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ

ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿಡಿ. 31ರಿಂದ ಜ. 7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮಾಚಿಲ ಶ್ರೀ ಉಳ್ಳಾಕ್ಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಲಿದೆ. 31ರಂದು ಬೆಳಿಗ್ಗೆ 8ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, 8:30ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರಕಾಣಿಕೆ ತರಲಾಗುವುದು. 9ಕ್ಕೆ ದೇವಾಲಯದಲ್ಲಿ ತೋರಣ ಮುಹೂರ್ತ, 12ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ. ರಾತ್ರಿ 7ಕ್ಕೆ ಪ್ರಾಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು

ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ Read More »

ಜ. 1: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ನೂತನ ಕಟ್ಟಡ, ನೂತನ ಕಚೇರಿ ಉದ್ಘಾಟನೆ

ಪುತ್ತೂರು: ಯುವ ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಕತ್ವದ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ಸ್ವಂತ ಕಟ್ಟಡದಲ್ಲಿ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ಹಾಗೂ ಸಭಾ ಕಾರ್ಯಕ್ರಮ ಜ. 1ರಂದು ಬೆಳಿಗ್ಗೆ 9 ಗಂಟೆಗೆ ನೆಲ್ಲಿಕಟ್ಟೆ ಒಕ್ಕಲಿಗ ಸೌಧದಲ್ಲಿ ನಡೆಯಲಿದೆ. ಮಂಗಳೂರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಕಚೇರಿ ಉದ್ಘಾಟಿಸಿ, ಆಶೀರ್ಚನ ನೀಡುವರು. ಪುತ್ತೂರು ಒಕ್ಕಲಿಗ ಸ್ವ-ಸಹಾಯ ಸಂಘದ ಅಧ್ಯಕ್ಷ ಡಿ.ವಿ. ಮನೋಹರ ಅಧ್ಯಕ್ಷತೆ ವಹಿಸುವರು. ಶಾಸಕ ಸಂಜೀವ

ಜ. 1: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ನೂತನ ಕಟ್ಟಡ, ನೂತನ ಕಚೇರಿ ಉದ್ಘಾಟನೆ Read More »

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ

ಪುತ್ತೂರು: “ಎನನ್ ಬದ್ಕಾಯ ಮಗ…” ತನ್ನ ಅನಾರೋಗ್ಯದ ಸಮಯದಲ್ಲಿ ನೆರವಾದ ಶಾಸಕ ಸಂಜೀವ ಮಠಂದೂರು ಅವರಿಗೆ ಮಹಿಳೆಯೊಬ್ಬರು ಕೃತಜ್ಞತೆ ಸಲ್ಲಿಸಿದ್ದ ಭಾವುಕ ಕ್ಷಣವಿದು. ಕೆಲ ದಿನಗಳ ಹಿಂದೆ ಪುರಭವನದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ಮಠಂದೂರು ಅವರು ಹೊರಬರುತ್ತಿದ್ದಂತೆ, ಮಹಿಳೆಯೊಬ್ಬರು ಶಾಸಕರ ಕೈಹಿಡಿದು ತನ್ನ ಒಡಲಿನ ಮಾತುಗಳನ್ನು ಹೊರಗೆಡವಿದ ಬಗೆ ಇದು. ಕಳೆದ ಕೆಲ ದಿನಗಳಿಂದ ಬೇರೆ ಬೇರೆ ಸಾಲುಗಳನ್ನು ಹೊದ್ದುಕೊಂಡು, ಶಾಸಕರ ಫೊಟೋವೊಂದು ವೈರಲ್ ಆಗಿತ್ತು. ಹೆಚ್ಚಿನ ಮಂದಿ ತಮ್ಮ ಸಂದೇಹವನ್ನು ತೋಡಿಕೊಂಡಿದ್ದರೂ ಕೂಡ. ಮಹಿಳೆಯ ಕಣ್ಣಲ್ಲಿ ಕೃತಜ್ಞತಾ

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ Read More »

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಶಾಲಾ ವಾರ್ಷಿಕೋತ್ಸವ ಡಿ. 31 ರಂದು ಶಾಲಾ ಆವರಣದಲ್ಲಿ  ನಡೆಯಲಿದೆ.  60 ವರ್ಷಗಳನ್ನು  ಪೂರೈಸಿದ  ಗ್ರಾಮೀಣ ಪ್ರದೇಶದ  ಕುಮಾರನದಿಯ ತಟದಲ್ಲಿರುವ ಈ  ಶಾಲೆಯಲ್ಲಿ 155 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಾದರಿ ಶಾಲೆಯಾಗಿ ಮೂಡಿಬಂದಿದೆ. ಶಾಸಕ ಸಂಜೀವ ಮಠಂದೂರು ಅವರು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಶಾಂತಿಗೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್, ವೀರಮಂಗಲ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಮ ಭಟ್ ಬಾವ, ವೀರಮಂಗಲ ಜುಮ್ಮಾ ಮಸೀದಿ ಅಧ್ಯಕ್ಷ ರಝಾಕ್ ವಿ.ಎಸ್. ಅತಿಥಿಗಳಾಗಿರುವರು. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಾದ ಯಜ್ಣ ಇವರಿಗೆ ಗೌರವಾರ್ಪಣೆ ಹಮ್ಮಿಕೊಳ್ಳಲಾಗಿದೆ. ಮಕ್ಕಳಿಂದ ವೈವಿಧ್ಯಮಯ ನೃತ್ಯ, ಭಾರತೀಯ ಸಂಸ್ಕೃತಿ ಬಿಂಭಿಸುವ ಏಕ್ ಭಾರತ್ ಶ್ರೇಷ್ಠ ಭಾರತ್ ಸಂಸ್ಕೃತಿಗಳ ಅನಾವರಣಗೊಳ್ಳಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಬೆಳಗ್ಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶಾಂತಿಗೋಡು ಗ್ರಾಮ ಪಂಚಾಯತ್  ಉಪಾಧ್ಯಕ್ಷ ಸುಧಾಕರ ಕುಲಾಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಸ್ ಡಿ ಎಂ ಸಿ ಅಧ್ಯಕ್ಷೆ  ಅನುಪಮ  ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ ಸದಸ್ಯ ಬಾಬು ಶೆಟ್ಟಿ ಬಹುಮಾನ  ವಿತರಣೆ  ಮಾಡಲಿದ್ದಾರೆ. ಗ್ರಾಮ  ಪಂಚಾಯಿತಿ  ಸದಸ್ಯರಾದ ಪದ್ಮಾವತಿ,  ವಸಂತಿ,  ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಸಮನ್ವಯಾಧಿಕಾರಿ ನವೀನ್ ವೇಗಸ್,  ಸಿ.ಆರ್.ಪಿ ಪರಮೇಶ್ವರಿ, ಶಾಲಾ ಮುಖ್ಯಗುರು  ತಾರಾನಾಥ ಸವಣೂರು, ಎಸ್ ಡಿ ಎಂ ಸಿ ಅಧ್ಯಕ್ಷೆಅನುಪಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ರೈ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಆನಂದ ಗೌಡ ಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಶಾಸಕರಾದಿಯಾಗಿ ಕೊಡುಗೆಗಳ

ನಾಳೆಯಿಂದ ವೀರಮಂಗಲ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ Read More »

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆ. 28ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ ಅಥವಾ ಹೊಸ ಪಾಸು ಪಡೆಯುವ ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್‍ ಪೋರ್ಟ್ ಸೈಜಿನ ಫೊಟೋ, ಯಡಿಐಪಿ ಗುರುತಿನ ಚೀಟಿಯನ್ನು ಆನ್ ಲೈನಿನಲ್ಲಿ ಅಪ್ಲೋಡ್ ಮಾಡಬೇಕು. ಹೊಸದಾಗಿ

ವಿಕಲಚೇತನರ ಬಸ್ ಪಾಸ್ ಮಾನ್ಯತೆ ಮುಂದುವರಿಕೆ Read More »

error: Content is protected !!
Scroll to Top