ಪುತ್ತೂರು

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾರ್ಚ್ 26ರಂದು ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಪೂರ್ವತಯಾರಿಯಾಗಿ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಜೊತೆಗಿದ್ದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಾ, ಕೋಟಿ – ಚೆನ್ನಯರ ನಾಮಫಲಕವನ್ನು ಪುತ್ತೂರು ಪೇಟೆಗೆ ಕಾಣಿಸುವಂತೆ ಸರಿಯಾಗಿ ಅಳವಡಿಸಲು ಸೂಚನೆ ನೀಡಿದರು. ನಾಮಕರಣದ ದಿನದಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕಿವಿಮಾತು ಹೇಳಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ […]

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ Read More »

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ

ಪುತ್ತೂರು: ಗ್ರಾಮೀಣ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಯ ಭಾಗ್ಯ ಒದಗಿ ಬಂದಿದೆ. ಇನ್ನು ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರವಾಗಿ ಆಸ್ಪತ್ರೆಯ ಕೆಲಸವನ್ನು ನಿರ್ವಹಿಸಲಿದೆ. ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆ 300 ಬೆಡ್‍ಗಳಿಗೆ ಏರಬೇಕು ಎನ್ನುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಪ್ರಯತ್ನ ಮುಂದುವರಿಸುತ್ತಿದ್ದಾರೆ. ಇದರ ನಡುವೆ ಪಾಣಾಜೆಗೆ ಸಮುದಾಯ ಆರೋಗ್ಯ ಕೇಂದ್ರದ ಮಾನ್ಯತೆ ನೀಡುವಲ್ಲಿಯೂ ಯಶಸ್ವಿಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕೊರಗನ್ನು ಸಮುದಾಯ ಆಸ್ಪತ್ರೆ ನೀಗಲಿದೆ.

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ Read More »

ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ

ಪುತ್ತೂರು: ನಗರಸಭೆ ಸದಸ್ಯ ಶಿವರಾಮ ಸಫಲ್ಯ ಗುರುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಮ ಸಪಲ್ಯರು ಒಂದನೇ ವಾರ್ಡ್ ನ ಸದಸ್ಯರಾಗಿದ್ದಾರೆ. ನಗರದ ಹೊರವಲಯದ ಸಾಲ್ಮರ ಸಮೀಪದ ಉರಮಾಲ್ ನಲ್ಲಿ ವಾಸವಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಗುರುವಾರ ಪತ್ನಿ ಹೊರಗೆ ಹೋಗಿದ್ದು, ಪತಿಗೆ ಫೋನ್ ಕರೆ ಮಾಡಿದರೂ ತೆಗೆಯದ ಹಿನ್ನಲೆಯಲ್ಲಿ ಪಕ್ಕದ ಮನೆಯವರಲ್ಲಿ ಮನೆಕಡೆ ಹೋಗುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಮನೆಯತ್ತ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು

ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ Read More »

ಮಾಂಬಾಡಿ ರಾಮಕೃಷ್ಣ ಭಟ್‍ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪಡುಮಲೆ ನಿವಾಸಿ ಮಾಂಬಾಡಿ ರಾಮಕೃಷ್ಣ ಭಟ್ (95) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು. ಪ್ರಸಿದ್ಧ ಜ್ಯೋತಿಷಿ ಮಾಂಬಾಡಿ ಈಶ್ವರ ಭಟ್ಟರ ಪುತ್ರರಾಗಿದ್ದ ಅವರು ತಮ್ಮ ಚಿಕ್ಕಪ್ಪ ಮಾಂಬಾಡಿ ನಾರಾಯಣ ಭಟ್ಟರಿಂದ ಮದ್ದಳೆ ಕಲಿತು ಹವ್ಯಾಸಿ ಕಲಾವಿದರಾಗಿದ್ದರು. ಕೂಡ್ಲು ಮೇಳದ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದು, ಪಡುಮಲೆ ಕೋಟಿ-ಚೆನ್ನಯ ಯುವಕ ಮಂಡಲ ಹಾಗೂ ಬೆನಕ ಯಕ್ಷ ಕಲಾ ವೇದಿಕೆ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ನಾಲ್ವರು ಪುತ್ರರು, ನಾಲ್ಕು ಮಂದಿ ಪುತ್ತಿಯರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ.

ಮಾಂಬಾಡಿ ರಾಮಕೃಷ್ಣ ಭಟ್‍ ನಿಧನ Read More »

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ

ಪುತ್ತೂರು : ದಕ್ಷಿಣಕನ್ನಡಜಿಲ್ಲಾ ಖೊ-ಖೊ ಅಸೋಸಿಯೇನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಮತ್ತು ವಿವೇಕಾನಂದಕಾಲೇಜು ಸ್ವಾಯತ್ತ ಪುತ್ತೂರು, ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಪುತ್ತೂರಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ -1 2023 ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 12  ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನುಅಲ್ಟಿಮೇಟ್ ಸ್ಪೋರ್ಟ್ಸ್‌ಕ್ಲಬ್ ಪುತ್ತೂರುತಂಡ, ದ್ವಿತೀಯ

ವಿವೇಕಾನಂದ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ- ಅಲ್ಟಿಮೇಟ್ ಸ್ಫೋಟ್ಸ್‌ ಕ್ಲಬ್‌ಗೆ ಪ್ರಥಮ ಪ್ರಶಸ್ತಿ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10 ರಿಂದ ನಡೆಯುವ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತಂದು ನಿಲ್ಲಿಸುವ ಮುಹೂರ್ತ ಗುರುವಾರ ನಡೆಯಿತು. ಈ ಮೂಲಕ ಪುತ್ತೂರು ಜಾತ್ರೋತ್ಸವಕ್ಕೆ ಮುನ್ಸೂಚನೆ ನೀಡಲಾಯಿತು. ಪ್ರತೀ ವರ್ಷದಂತೆ ಬಿಲ್ವಪತ್ರೆ ಭೂಸ್ಪರ್ಶ ಮಾಡುವ ಮೂಲಕ ಸೂಚಿಸುವಂತೆ ಈ ಬಾರಿಯೂ ಬಿಲ್ವಪತ್ರೆ ಭೂಸ್ಪರ್ಶ ಮಾಡಿದೆ. ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೆ.ಮೂ. ವಸಂತ ಕೆದಿಲಾಯರು ಬ್ರಹ್ಮರಥಕ್ಕೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ

ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಮುನ್ಸೂಚನೆಯಂತೆ ಬ್ರಹ್ಮರಥ ಮಂದಿರದಿಂದ ರಥಬೀದಿಗೆ Read More »

ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ

ಸವಣೂರು: ಕೆಟ್ಟು ನಿಂತಿದ್ದ ಸವಣೂರು ವಿದ್ಯುತ್ ಸಬ್ ಸ್ಟೇಷನಿನ 33/11 ಕೆವಿ ಪರಿವರ್ತಕವನ್ನು ಬದಲಿಸಿ, ಹೊಸ ಟ್ರಾನ್ಸ್‍ಫಾರ್ಮರ್ ಅಳವಡಿಸುವ ಕಾರ್ಯದ ನಂತರ ವಿದ್ಯುತ್ ಸರಬರಾಜು ಸರಾಗವಾಗಿ ನಡೆಯುತ್ತಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ, ಸಚಿವ ಎಸ್. ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ, ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಾತುಗಳು ವ್ಯಕ್ತವಾಗಿದೆ. ಕಳೆದ ಕೆಲ ದಿನಗಳಿಂದ ಟ್ರಾನ್ಸ್‍ಫಾರ್ಮರ್ ಕೆಟ್ಟು ಹೋಗಿತ್ತು. ಇದನ್ನು ಶಾಸಕ, ಮೆಸ್ಕಾಂ ನಿರ್ದೇಶಕರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದನೆ ನೀಡಿದ್ದಾರೆ.

ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ Read More »

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು : ಬಡಗನ್ನೂರು ಗ್ರಾಮದ ದೇಯಿಬೈದೈತಿ – ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.16 ರಿಂದ 20 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹೋತ್ಸವದ ಅಂಗವಾಗಿ ಮಾ.16 ಗುರುವಾರ ಸಂಜೆ 5.30 ರಿಂದ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ರಾತ್ರಿ 7 ರಿಂದ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ನಾಳ

ಮಾ.16 ರಿಂದ 20 : ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ Read More »

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗೆ ಬೆಸ್ಟ್ ಬ್ಯಾಂಕ್ ಬ್ಯುಸಿನೆಸ್ ಅವಾರ್ಡ್-2023

ಪುತ್ತೂರು: ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯವರು ನಡೆಸಿದ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ಸ್ ಮೈಸೂರು 2023 ಇದರಲ್ಲಿ ಬೆಸ್ಟ್ ಬ್ಯಾಂಕರ್ ಇನ್ ರೂರಲ್ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಟೈಮ್ಸ್ ಬೆಸ್ಟ್ ಬ್ಯಾಂಕ್ ಬ್ಯುಸಿನೆಸ್ ಆವಾರ್ಡ್ ಲಭಿಸಿದೆ. ಮೈಸೂರು ಸೈಲೆಂಟ್ ಸ್ಪಾದಲ್ಲಿ ಮಾ.14 ರಂದು ನಡೆದ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ 2023 ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರನಟಿ ರಾಶಿ ಸಿನ್ಹಾರವರು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟುರವರಿಗೆ ಬೆಸ್ಟ್ ಬ್ಯಾಂಕ್ ಆವಾರ್ಡ್ ವಿತರಿಸಿದರು. ಸಮೀಕ್ಷೆಯಲ್ಲಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗೆ ಬೆಸ್ಟ್ ಬ್ಯಾಂಕ್ ಬ್ಯುಸಿನೆಸ್ ಅವಾರ್ಡ್-2023 Read More »

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು

ಪುತ್ತೂರು: . ಕಾಂಗ್ರೆಸ್ ಭ್ರಷ್ಠಾಚಾರ ನಡೆಸಿದ್ದೇ ಆದರೆ ಜೈಲಿಗೆ ಹಾಕಲಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ  ಮುರ ಗೌಡ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್‌ನ ಕರಾವಳಿಯ ಪ್ರಜಾಧ್ವನಿ ಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗವುದು. ಬಿಜೆಪಿ ಜನಸಾಮಾನ್ಯರ ಜೀವನ ಸುಧಾರಣೆ ಮಾಡದೇ ಲೂಟಿ ಮಾಡಿರುವುದು ಮಾತ್ರ ಅವರ ಸಾಧನೆಯಾಗಿದೆ. ಬಿಜೆಪಿಯವರು ಸಮಾಜಕ್ಕೆ, ಕುಟುಂಬಕ್ಕೆ ಪೂರಕವಾದ ಯಾವುದೇ

ಕಾಂಗ್ರೆಸ್ ಭ್ರಷ್ಟಾಚಾರ ನಡೆಸಿದಲ್ಲಿ ಜೈಲಿಗೆ ಹಾಕಲಿ : ಬಿ.ಕೆ. ಹರಿಪ್ರಸಾದ್ ಸವಾಲು Read More »

error: Content is protected !!
Scroll to Top