ಪುತ್ತೂರು

ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ | ಲಯನ್ಸ್ ಸೇವಾ ಮಂದಿರದಲ್ಲಿ ಪ್ರದರ್ಶನ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು, ರೋಹಿಣಿ ಹೊಲಿಗೆ ಆರ್ಟ್ & ಕ್ರಾಫ್ಟ್ ತರಬೇತಿ ಕೇಂದ್ರದ ಆಶ್ರಯದಲ್ಲಿ ಬುಧವಾರ ಬೆಳಿಗ್ಗೆ ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಅವರು ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಶುಭಹಾರೈಸಿದರು. ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷ ಶಾಂತಿ ಹೆಗಡೆ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಗಣೇಶ್ ಶೆಟ್ಟಿ ಕೆ., ಜಿಲ್ಲಾ ಸಂಪನ್ಮೂಲ […]

ಕೃತಕ ಹೂವುಗಳ ಪ್ರದರ್ಶನಕ್ಕೆ ಚಾಲನೆ | ಲಯನ್ಸ್ ಸೇವಾ ಮಂದಿರದಲ್ಲಿ ಪ್ರದರ್ಶನ Read More »

ಕರಾವಳಿಗೆ ತಂಪೆರೆದ ಮಳೆ | ಪುಣಚ, ಕಬಕ, ನೇರಳಕಟ್ಟೆಯಲ್ಲಿ ಸುರಿದ ಮಳೆ

ಪುತ್ತೂರು: ಪುತ್ತೂರು ಸೇರಿದಂತೆ ಕರಾವಳಿಯ ಹಲವೆಡೆಗಳಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದು, ಕಾದು ಕೆಂಪಗಾಗಿದ್ದ ಕರಾವಳಿಗೆ ಮಳೆ ತುಸು ತಂಪೆರೆದಿದೆ. ಪುಣಚ, ಕಬಕ, ನೇರಳಕಟ್ಟೆ ಮೊದಲಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಬುಧವಾರ ಮಧ್ಯಾಹ್ನ ಮೋಡ ಮುಸುಕಿದ ವಾತಾವರಣವಿದ್ದು, ಗುಡುಗಿನ ಮಾರ್ದನಿಯೂ ಕೇಳಿಸುತ್ತಿತ್ತು. ಮಳೆಯ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಮಳೆ ಬರಲಿದೆ ಎಂದು ವರದಿ ಮಾಡಿತ್ತು.

ಕರಾವಳಿಗೆ ತಂಪೆರೆದ ಮಳೆ | ಪುಣಚ, ಕಬಕ, ನೇರಳಕಟ್ಟೆಯಲ್ಲಿ ಸುರಿದ ಮಳೆ Read More »

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ

ಪುತ್ತೂರು:-ಹತ್ತೂರಿನಲ್ಲೂ ಹೆಸರು ಪಡೆದ ಊರು ಪುತ್ತೂರು. ಇಲ್ಲಿನ ವಿದ್ಯಾವಂತ ಯುವ ಸಮೂಹ ಪುತ್ತೂರಿನ ಹೆಮ್ಮೆ.ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಪ್ರಗತಿಯ ಹಾದಿಯಲ್ಲಿ ಸಾಗುವ ಶೈಕ್ಷಣಿಕ,ಸಮಾಜಮುಖಿ ಕಾರ್ಯವನ್ನು ಪ್ರಗತಿಯ ಸ್ಟಡಿ ಸೆಂಟರ್ ಮಾಡುತ್ತಿದೆ ಎಂದು ಜಿ.ಎಲ್.ಆಚಾರ್ಯ ಸಂಸ್ಥೆಯ ಮುಖ್ಯಸ್ಥ ಬಲರಾಮ ಆಚಾರ್ಯ ಹೇಳಿದರು. ಅವರು ಇಲ್ಲಿಯ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿರು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾಗೌರಿ ಮಾತನಾಡಿ, ಪ್ರಗತಿ ಸಂಸ್ಥೆಯು ಯಾವುದೇ ವಿದ್ಯಾಲಯ

ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಆಫ್ಟರ್ ಪಿಯುಸಿ ವಾಟ್ ನೆಕ್ಟ್ಸ್  ಕಾರ್ಯಕ್ರಮ Read More »

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು; ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕುರಿತು ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಉಪ ಸಮಿತಿಗಳ ಸಂಚಾಲಕರು ಹಾಗೂ ಸದಸ್ಯರುಗಳಿಗೆ ಅವರವರ ಜವಾಬ್ದಾರಿಗಳನ್ನು ತಿಳಿಸಿ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರುವಲ್ಲಿ ಎಲ್ಲರ ಸಹಕಾರವನ್ನು ಕೋರಲಾಯಿತು. ಮಾ.21 ರಂದು ಪುತ್ತೂರಿನಲ್ಲಿ ಆಮಂತ್ರಣ ವಿತರಣೆ: ಬ್ರಹ್ಮಕಲಶೋತ್ಸವದ ಪ್ರಚಾರಾರ್ಥವಾಗಿ ಪುತ್ತೂರು ನಗರದಲ್ಲಿ ಆಮಂತ್ರಣ ಪತ್ರಿಕೆಯನ್ನು ಮಾ.21 ರಂದು ವಿತರಿಸುವುದಾಗಿ ತೀರ್ಮಾನಿಸಲಾಯಿತು. ಬೆಳಿಗ್ಗೆ 9.30

ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ Read More »

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್

ಪುತ್ತೂರು: ಎನ್ ಎಸ್ ಎಸ್ ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ಯಶಸ್ವಿ ಮನುಷ್ಯರ ಯಶಸ್ಸಿನ ಗುಟ್ಟು ಸಮಯ ಪ್ರಜ್ಞೆ, ಒಬ್ಬ ವ್ಯಕ್ತಿಯು ಸಮಯವನ್ನು ಗೌರವಿಸದಿದ್ದರೆ ಸಮಯ ಅವನನ್ನು ಗೌರವಿಸುವುದಿಲ್ಲ. ಎನ್ಎಸ್ಎಸ್ ಸಮಯವನ್ನು ಗೌರವಿಸುವ ಪರಿಯನ್ನು ಕಲಿಸಿಕೊಡುತ್ತದೆ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು. ಅವರು ಮುಂಡೂರು ಶಾಲೆಯಲ್ಲಿ ಜರುಗಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬುದ್ಧಿವಂತರಾಗದೆ ಜೀವನದಲ್ಲಿ ಮುಂದೆ ಬರಲು

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್ Read More »

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್

ಪುತ್ತೂರು: ಉತ್ತರಾಖಂಡ ರಾಜ್ಯದಲ್ಲಿ ಮಾರ್ಚ್ 19ರಿಂದ ನಡೆಯಲಿರುವ `ಸರಸ್ ಫೇರ್’ನಲ್ಲಿ ಪುತ್ತೂರಿನ ಅವನಿ ಸಂಜೀವಿನಿ ಸಂಘದ ಅಂಬಿಕಾ ರಮೇಶ್ ಅವರು ಪಾಲ್ಗೊಳ್ಳುತ್ತಿದ್ದಾರೆ. ಸರಸ್ ಫೇರ್’ನಲ್ಲಿ ಭಾಗವಹಿಸಲು ರಾಜ್ಯದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಿಂದ ಪುತ್ತೂರಿನ ಕಲ್ಲರ್ಪೆ ನಿವಾಸಿ ಅಂಬಿಕಾ ರಮೇಶ್ ಭಾಗವಹಿಸುತ್ತಿದ್ದರೆ, ಇನ್ನೊಬ್ಬರು ರಾಯಚೂರಿನ ಸಿಂಧನೂರು ತಾಲೂಕಿನ ಲಕ್ಷ್ಮೀ. ಅಂಬಿಕಾ ರಮೇಶ್ ಅವರು ತೆಂಗಿನಕಾಯಿಯ ಚಿಪ್ಪಿನಿಂದ ಮಾಡಿರುವ ಅಲಂಕಾರಿನ ಉತ್ಪನ್ನಗಳು, ಉಪ್ಪಿನಕಾಯಿ, ಸ್ನ್ಯಾಕ್ಸ್ ಮೊದಲಾದ ಉತ್ಪನ್ನಗಳನ್ನು `ಸರಸ್ ಫೇರ್’ನಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ. ಮಾರ್ಚ್ 19ರಿಂದ

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್ Read More »

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಡಯಾಬಿಟಿಕ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆರ್ಕ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಹಾಗೂ ಮಧುಮೇಹದ ಉಚಿತ ತಪಾಸಣೆ ಮಾ. 15ರಂದು ಕಲ್ಲಾರೆ ಕೃಷ್ಣ ಆರ್ಕೇಡಿನಲ್ಲಿರುವ ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕಿನಲ್ಲಿ ನಡೆಯಿತು. ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ Read More »

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು. ಮಾ.17 ರಂದು ಧ್ವಜಾರೋಹಣದೊಂದಿಗೆ

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ Read More »

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ

ಪುತ್ತೂರು :,ಶಿಕ್ಷಣ ವೃತ್ತಿಯು  ಮಕ್ಕಳನ್ನು ತಿದ್ದುವ ಒಂದು ಅಭೂತಪೂರ್ವ ವೇದಿಕೆಯಾಗಿದೆ. ಸಮಾಜವನ್ನು ತಿದ್ದಲು ಹಾಗೂ ಮಕ್ಕಳ ಜೀವನ ಸರಿಪಡಿಸಲು ಶಿಕ್ಷಕ ವೃತ್ತಿ ಒಂದು ಪ್ರಮುಖ ವೃತ್ತಿ. ಶಿಕ್ಷಕನಾದವನು ಮಕ್ಕಳಿಂದ ಏನನ್ನು ನಿರೀಕ್ಷಿಸಬಾರದು. ಅವರ ಮನೋಭಾವವನ್ನು ಅರ್ಥೈಸಿಕೊಂಡು ಅವರೊಂದಿಗೆ ಬೆರೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಭವಿಷ್ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ’ನಾನು ಯಾಕೆ ಅಧ್ಯಾಪಕ ವೃತ್ತಿ ಆಯ್ದುಕೊಂಡೆ’

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ Read More »

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 12 ಬೂತುಗಳನ್ನು ಮಾದರಿ ಬೂತುಗಳೆಂದು ಗುರುತಿಸಲಾಗಿದ್ದು, ಚುನಾವಣೆಯ ದಿನ ವಿಶೇಷ ಅಲಂಕಾರ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾದ 12 ಬೂತುಗಳನ್ನು ವಿಶೇಷ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಆ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚಿನ ಮತದಾನ ಆಗುವ ನಿಟ್ಟಿನಲ್ಲಿ ಸಖಿ, ಯಕ್ಷಗಾನ, ಕಂಬಳ, ನೀಲತರಂಗ, ಪರಂಪರೆ, ಗೋ ಗ್ರೀನ್, ಯುವ, ವಿಕಲಚೇತನ ಎಂದು ಗುರುತಿಸಿ, ವಿಶೇಷ ಅಲಂಕಾರ ಮಾಡಲಾಗುವುದು

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ Read More »

error: Content is protected !!
Scroll to Top