ಪುತ್ತೂರು

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಶಿವರಾಮ ಕಾರಂತರ ಬಾಲವನ ಅಂಗನವಾಡಿ ಕಟ್ಟಡಕ್ಕೆ ಸಂಪೂರ್ಣ ಪೈ೦ಟ್ ಕೆಲಸ ಪೂರ್ತಿಗೊಳಿಸಿ, ಬಾಲವನ ಅಂಗನವಾಡಿಗೆ ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಕೊಡುಗೆ ಯೋಜನೆಯನ್ನು ರೋಟರಿ ಜಿಲ್ಲೆ 3181 ವಲಯ 5ರ  ಅಸಿಸ್ಟೆ೦ಟ್ ಗವರ್ನರ್ ಎ. ಜಗಜೀವನ್ ದಾಸ್ ರೈ ಉದ್ಘಾಟಿಸಿದರು. ರೋಟರಿ ಸೆ೦ಟ್ರಲ್ ಅದ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿಗೆ ರೋಟರಿ ಮೂಲಕ ನೀರಿನ ಘಟಕ ಮತ್ತು ಸುಣ್ಣ ಬಣ್ಣ ಬಳಿಯಲು ಸಹಕರಿಸಿದ ನಿವೃತ್ತ ಉಪನ್ಯಾಸಕ […]

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಠದ ಶ್ರೀ ಸತ್ಯನಾರಾಯಣ ಗುಡಿಯಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಪುರಸ್ಸರ, ಕಲಶಾಭಿಷೇಕ, ಕಲಶ ಪ್ರತಿಷ್ಠೆ, 10.30 ರಿಂದ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಿತು. ಈ ಸಂದರರ್ಭದಲ್ಲಿ ಮಠದ ಟ್ರಸ್ಟಿಗಳಾದ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು : ನಗರದ  ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.  ಸಮಾರಂಭದಲ್ಲಿ ವಿದ್ಯಾಲಯದ ಹಿರಿಯ ಶಿಕ್ಷಕಿ ಹಾಗೂ ಉಪ ಪ್ರಾoಶುಪಾಲೆ ಸುಜನಿ ಬೋರ್ಕರ್ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸುಜನಿ ಬೋರ್ಕರ್, ಭಾರತೀಯ ಪರಂಪರೆಯಲ್ಲಿ ಸ್ತ್ರೀಯರಿಗೆ ಅಪಾರ ಗೌರವವಿದೆ. ಯತ್ರ ನಾರ್ಯಸ್ತು ಪೂಜ್ಯoತೆ ರಮಂತೆ ತತ್ರ ದೇವತಾ: ಎಂಬ ನುಡಿಯಂತೆ ಎಲ್ಲಿ ಸ್ತ್ರೀಯರನ್ನು ಪೂಜ್ಯ ಭಾವದಿಂದ ನೋಡುತ್ತಾರೋ,

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ

ಕಾವು: ಇಲ್ಲಿನ ನವೋದಯ ಒಕ್ಕೂಟದ ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುತ್ತಾ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ ನವೋದಯ

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ Read More »

ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ

ಪುತ್ತೂರು: ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಮಾಹಿತಿ ಮತ್ತು ಕಾರ್ಯಾಗಾರ ಸಭೆ ಆರ್ಯಾಪು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಂಗಳೂರು, ಆರ್ಯಾಪು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಮನಸ್ವಿನಿ, ವಿಧವಾ ವೇತನದ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ,

ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ Read More »

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಮುಂಜಾನೆಯ ವೇಳೆ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸುತ್ತಿರುವ ರಾಜ್ಯದ ಏಕೈಕ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ, ಇಲ್ಲಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮಂಗಳವಾರದ  ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಮಹಾಲಿಂಗೇಶ್ವರ ಭಜಕ ವೃಂದದವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7ಗಂಟೆಯಿಂದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು Read More »

ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ

ಪುತ್ತೂರು: ಕಾವು: ನವೋದಯ ಒಕ್ಕೂಟದ  ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್  ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುವ ಮೂಲಕ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ

ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ Read More »

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್

ಪುತ್ತೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವವಾದದ್ದು, ಇದಕ್ಕಾಗಿ ತಾಯಂದಿರು ಪಣ ತೊಡಬೇಕು ಎಂದು ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದ ನೃತ್ಯಗುರು ಶಾಲಿನಿ ಆತ್ಮಭೂಷಣ್ ಹೇಳಿದರು. ರೋಟರಿ ಕ್ಲಬ್ ಪುತ್ತೂರು, ಇನ್ನರ್‌ವೀಲ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಇಲ್ಲಿನ ಎಪಿಎಂಸಿ ರಸ್ತೆಯ ಸಾಯ ಎಂಟರ್‌ಪ್ರೈಸಸ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಿಳಾ ದಿನಾಚರಣೆ ಕೇವಲ ಒಂದೇ ದಿನಕ್ಕೆ ಸೀಮಿತವಾಗಬಾರದು. ಸಮಾಜದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮಹಿಳೆಯರಿಗೆ ನಿತ್ಯವೂ ಮಹಿಳಾ ದಿನಾಚರಣೆಯೇ ಆಗಿರುತ್ತದೆ.

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್ Read More »

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು: ಬೆಟ್ಟಂಪಾಡಿ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಅಂಗವಾಗಿ ಮುಂಡೂರು ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ  ನಡೆಯಿತು. ಮುಂಡೂರು ಸ ಹಿ ಪ್ರಾ ಶಾಲೆ,, ಪುತ್ತೂರಿನ ವಿಷನ್ ಐ ಕೇರ್ ಆಪ್ಟಿಕಲ್ಸ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ನಡೆದ ಶಿಬಿರವನ್ನು ಸ್ವರ್ಗ ಸ್ವಾಮಿ ವಿವೇಕಾನಂದ  ಎ ಯು ಪಿ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ರಾಮಯ್ಯ ರೈ ನುಳಿಯಾಲು  ಉದ್ಘಾಟಿಸಿದರು . ಡಾ.ಸುಜನ್ ರಾಜ್ ,ಭವ್ಯ ಕುಮಾರಿ ಮತ್ತು ಪೂಜಾ ಇವರು ತಪಾಸಣೆಯನ್ನು ನಡೆಸಿದರು. ಶಾಲಾ

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹೊದಿಸಿದ ಹಿತ್ತಾಳೆಯ ಹೊದಿಕೆ ಸಮರ್ಪಣಾ ಸಮಾರಂಭ ಮಾರ್ಚ್ 13ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುತ್ತಾ, ಧಾರ್ಮಿಕ ಕೇಂದ್ರಗಳು ಸಮಾಜದ ಶ್ರದ್ಧಾ ಕೇಂದ್ರಗಳು. ಸಮಾಜದ ವಿಕಸನದಲ್ಲಿ ಇಂತಹ ಕೇಂದ್ರಗಳ ಪಾತ್ರ ಪ್ರಮುಖವಾದುದು. ಆದ್ದರಿಂದ ಭಕ್ತರು ಇಂತಹ ಕೇಂದ್ರಗಳಿಗೆ ತಮ್ಮ ಸೇವೆಯನ್ನು ಸಲ್ಲಿಸುವುದು ಅಗತ್ಯ ಎಂದರು. ಸಂಸ್ಕಾರ, ಸಂಸ್ಕೃತಿ ಬೆಳೆಯಬೇಕು: ಶಾಸಕ ಮಠಂದೂರು ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ Read More »

error: Content is protected !!
Scroll to Top