ಜನರ ಸೇವೆಯಿಂದ ರಾಮರಾಜ್ಯ ನಿರ್ಮಾಣ | ಒಳಮೊಗ್ರು ರಾಜೀವ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಪಂ ಕಚೇರಿ ಉದ್ಘಾಟಿಸಿ ಶಾಸಕ ಮಠಂದೂರು
ಪುತ್ತೂರು: ಜನರ ಸೇವೆಯೇ ಜನಾರ್ದನನ ಸೇವೆ ಎಂಬ ವೇದವ್ಯಾಕ್ಯದೊಂದಿಗೆ ಗಾಂಧಿ ಕಂಡ ರಾಮ ರಾಜ್ಯ ನಿರ್ಮಾಣ ಮಾಡಬಹುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪುತ್ತೂರು ತಾಲೂಕು ಪಂಚಾಯಿತಿ, ಒಳಮೊಗ್ರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಗ್ರಾಮ ಪಂಚಾಯಿತಿ ಕಚೇರಿಯನ್ನು ಮಾ. 13ರಂದು ಉದ್ಘಾಟಿಸಿ ಮಾತನಾಡಿದರು. ತಾನು ದೇವರ ಕೆಲಸ ಮಾಡಲು ಬಂದಿದ್ದೇನೆ ಎಂಬ ಭಾವನೆಯನ್ನಿಟ್ಟು ಕೆಲಸ ನಿರ್ವಹಿಸಿದ್ದೇನೆ. ಪ್ರತಿಯೊಬ್ಬ ಮತದಾರನ ಭರವಸೆಗಳನ್ನು […]










