ಪುತ್ತೂರು

ಅಶಿಸ್ತಿನ ಹೇಳಿಕೆ ಸಹಿಸಲ್ಲ: ಅಬ್ದುಲ್ ಕುಂಞಿಯನ್ನು ಉಚ್ಚಾಟಿಸಿ ಸ್ಪಷ್ಟ ಸಂದೇಶ ರವಾನಿಸಿದ ಬಿಜೆಪಿ

ಪುತ್ತೂರು: ಬಿಜೆಪಿ ಪ್ರಮುಖರು ಹಾಗೂ ಪಕ್ಷದ ಬಗ್ಗೆ ಜರೆದು, ಅಶಿಸ್ತಿನಿಂದ ಮಾತನಾಡಿದ್ದ ಬಿಜೆಪಿ ಕಾರ್ಯಕರ್ತ, ಕೆಡಿಪಿ ಸದಸ್ಯ ಅಬ್ದುಲ್ ಕುಂಞಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದರು, ಶಾಸಕರಾದಿಯಾಗಿ ಬಿಜೆಪಿ ಪ್ರಮುಖರ ಬಗ್ಗೆ ಅಶಿಸ್ತಿನಿಂದ ಮಾತನಾಡಿದ್ದು ಮಾತ್ರವಲ್ಲ, ಪ್ರವೀಣ್ ನೆಟ್ಟಾರು ಹತ್ಯೆಯ ಬಗ್ಗೆಯೂ ಆಧಾರರಹಿತ ಹೇಳಿಕೆ ನೀಡಿರುವುದು ಆಡಿಯೋದಲ್ಲಿ ದಾಖಲಾಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಪುತ್ತೂರು ಬಿಜೆಪಿ ಮಂಡಲದ […]

ಅಶಿಸ್ತಿನ ಹೇಳಿಕೆ ಸಹಿಸಲ್ಲ: ಅಬ್ದುಲ್ ಕುಂಞಿಯನ್ನು ಉಚ್ಚಾಟಿಸಿ ಸ್ಪಷ್ಟ ಸಂದೇಶ ರವಾನಿಸಿದ ಬಿಜೆಪಿ Read More »

ಬಿಜೆಪಿಯ ೨೪ ಪ್ರಕೋಷ್ಠಗಳ ವಿವಿಧ ಸ್ತರದ ಪದಾಧಿಕಾರಿಗಳ ರಾಜ್ಯ ಸಮಾವೇಶ ‘ಶಕ್ತಿ ಸಂಗಮ’

ಬೆಂಗಳೂರು: ಬಿಜೆಪಿಯ ೨೪ ಪ್ರಕೋಷ್ಠಗಳ ವಿವಿಧ ಸ್ತರದ ಪದಾಧಿಕಾರಿಗಳ ರಾಜ್ಯ ಸಮಾವೇಶ ‘ಶಕ್ತಿ ಸಂಗಮ’ ಭಾನುವಾರ ಬೆಂಗಳೂರಿನ ಅರಮನೆ ವೈದಾನದಲ್ಲಿ ಜರಗಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾವೇಶವನ್ನು ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದರು. ದೇಶದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಶಕ್ತಿ ಸಂಗಮ ಕಾರ್ಯಕ್ರಮ ಜರಗಿದ್ದು, ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಪ್ರಕೋಷ್ಠಗಳ ಇಂತಹ ಶಕ್ತಿ ಸಂಗಮವು, ಪಕ್ಷದ ಕಾರ್ಯಚಟುವಟಿಕೆಗಳಿಗೆ ಹೊಸ ಶಕ್ತಿಯನ್ನು

ಬಿಜೆಪಿಯ ೨೪ ಪ್ರಕೋಷ್ಠಗಳ ವಿವಿಧ ಸ್ತರದ ಪದಾಧಿಕಾರಿಗಳ ರಾಜ್ಯ ಸಮಾವೇಶ ‘ಶಕ್ತಿ ಸಂಗಮ’ Read More »

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ | ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಆಯೋಜನೆ

ಪುತ್ತೂರು: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯದ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ರವಿವಾರ ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು, ನಿವೃತ್ತ

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ | ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಆಯೋಜನೆ Read More »

ಶಿಸ್ತು, ನಾಯಕತ್ವ ಗುಣ ಬೆಳೆಸಿಕೊಳ್ಳುವುದಕ್ಕೆ ಎನ್‌ಎಸ್‌ಎಸ್ ಸಹಕಾರಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟಿಸಿ ಸತ್ಯಜಿತ್ ಉಪಾಧ್ಯಾಯ

ಪುತ್ತೂರು: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳುವಂತೆ ಮಾಡಲು ಕಾಲೇಜು ಹಂತದಲ್ಲಿ ವಿವಿಧ ಯೋಜನೆಗಳಿರುವುದನ್ನು ಗಮನಿಸಬಹುದು. ಅಂತಹ ಆಲೋಚನೆಯೊಂದಿಗೆ ರೂಪುಗೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರಲ್ಲಿ ಶಿಸ್ತು, ಸ್ವಚ್ಛತೆ, ನಾಯಕತ್ವ ಗುಣ, ಸಮಯಪಾಲನೆ ಹಾಗೂ ಸಾಮಾಜಿಕ ಕಳಕಳಿಯನ್ನು ತುಂಬುವ ಕಾರ್ಯವನ್ನು ಮಾಡುತ್ತದೆ. ಶ್ರಮದಾನ, ವಿಶೇಷ ಶಿಬಿರಗಳಲ್ಲಿ ನಡೆಸುವ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ. ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ

ಶಿಸ್ತು, ನಾಯಕತ್ವ ಗುಣ ಬೆಳೆಸಿಕೊಳ್ಳುವುದಕ್ಕೆ ಎನ್‌ಎಸ್‌ಎಸ್ ಸಹಕಾರಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟಿಸಿ ಸತ್ಯಜಿತ್ ಉಪಾಧ್ಯಾಯ Read More »

ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಡಿ. 17ರಂದು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ವಸತಿ ಯೋಜನೆ, ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಯ ಫಲಾನುಭವಿಗಳಿಗೆ ಚೆಕ್ ಹಾಗೂ ಸೌಲಭ್ಯ ವಿತರಿಸಲಾಯಿತು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಗ್ರಾಮ ಪಂಚಾಯತ್ ಮಟ್ಟದಲ್ಲೇ ಜನರಿಗೆ ಸೌಲಭ್ಯ ನೀಡುವ ಕೆಲಸ ಆಗುತ್ತಿದೆ. ಅದರಲ್ಲೂ ಮಹಿಳೆಯರ ಕೆಲಸಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಜೊತೆಗೆ, ಉದ್ಯೋಗ

ಬೆಟ್ಟಂಪಾಡಿ: ಸಂಜೀವಿನಿ ಕಟ್ಟಡ, ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ Read More »

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ | ಬನ್ನೂರು ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಂದರ್ಭ ಆಶಾ ಕಾರ್ಯಕರ್ತೆಯರಿಗೆ ಶಾಸಕರ ಭರವಸೆ

ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಿಲಾನ್ಯಾಸಕ್ಕೆ ತೆರಳಿದ ಶಾಸಕರನ್ನು ಭೇಟಿಯಾದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳ ಬಗ್ಗೆ ಗಮನ ಸೆಳೆದರು. ಸ್ಪಂದಿಸಿದ ಶಾಸಕ ಸಂಜೀವ ಮಠಂದೂರು ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಡಿ. 19ರಿಂದ 30ರವರೆಗೆ ಬೆಳಗಾವಿಯಲ್ಲಿ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಸೌಲಭ್ಯ, ಸೂಕ್ತ ವೇತನ ಸೇರಿದಂತೆ ಸರಕಾರಿ ನೌಕರರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಆಶಾ ಕಾರ್ಯಕರ್ತೆಯರಿಗೂ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ | ಬನ್ನೂರು ಗ್ರಾಮದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಂದರ್ಭ ಆಶಾ ಕಾರ್ಯಕರ್ತೆಯರಿಗೆ ಶಾಸಕರ ಭರವಸೆ Read More »

ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಾಸಕ ಸಂಜೀವ ಮಠಂದೂರು ಅವರು ಡಿ. 17ರಂದು ಶಿಲಾನ್ಯಾಸ ನೆರವೇರಿಸಿದರು. 15 ಲಕ್ಷ ರೂ. ವೆಚ್ಚದಲ್ಲಿ ಊರಾಮಾಲು ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ಪಳಸಾಡ್ಕ ಏಕ ರಸ್ತೆ, 30 ಲಕ್ಷ ರೂ. ವೆಚ್ಚದಲ್ಲಿ ಚಿಕ್ಕಮುಡ್ನೂರು ಪುಲುವಾರು ದೇವಸ್ಥಾನ ರಸ್ತೆ ಹಾಗೂ ಬೀರಿಗ ಬೀರಿನಹಿತ್ಲು ಸಂಪರ್ಕ ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ದಾರಂದಕುಕ್ಕು ಪ.ಪಂಗಡ ಕಾಲನಿ ರಸ್ತೆ ಹಾಗೂ ಕುಂಜೂರು ದೇವಸ್ಥಾನ ರಸ್ತೆಗೆ ಅನುದಾನ ನೀಡಿದ್ದು, ಕಾಮಗಾರಿಗೆ ಶಿಲಾನ್ಯಾಸ

ಚಿಕ್ಕಮುಡ್ನೂರು ಗ್ರಾಮದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ Read More »

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭ ಕುಳ, ಇಡ್ಕಿದು, ನೆಟ್ಲಮುಡ್ನೂರು, ಕೆದಿಲ, ಪುಣಚ, ಬಿಳಿಯೂರು, ಪೆರ್ನೆ, ವಿಟ್ಲಮುಡ್ನೂರು ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟಗಳ ಪದಗ್ರಹಣ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಗಣಪತಿ ಹೋಮ, 8ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, 10-30ಕ್ಕೆ

ವಿಟ್ಲ: ನಾಳೆ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಗಡಿಭಾಗವಾದ ಪಾಣಾಜೆ – ಬೆಟ್ಟಂಪಾಡಿ ಜನರು ರಾಜ್ಯ ರಾಜಧಾನಿಯನ್ನು ಸುಲಭವಾಗಿ ಸಂಪರ್ಕ‍ ಸಾಧಿಸುವಂತಾಗಬೇಕು ಎಂಬ ದೃಷ್ಟಿಯಿಂದ ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚ್ ಬಸ್ ಆರಂಭವಾಗಿದೆ. ಪಾಣಾಜೆ ಪರಿಸರದ ಜನರ ಬೇಡಿಕೆಗೆ ಮನ್ನಣೆ ದೊರೆತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಬಸ್ ಸೇವೆಗೆ ಡಿ. 16ರಂದು ರಾತ್ರಿ ಪಾಣಾಜೆಯಲ್ಲಿ ತೆಂಗಿನಕಾಯಿ ಒಡೆದು ಚಾಲನೆ ನೀಡಿ, ಮಾತನಾಡಿದರು. ಪಾಣಾಜೆ ಭಾಗದ ಜನರು ಬೆಂಗಳೂರಿಗೆ ತೆರಳುಬೇಕು ಎಂದರೆ, ಪುತ್ತೂರಿನಿಂದ ಬಸ್ ಹಿಡಿಯಬೇಕಿತ್ತು.

ಗ್ರಾಮೀಣ ಭಾಗ ರಾಜ್ಯ ರಾಜಧಾನಿಗೆ ನೇರ ಸಂಪರ್ಕ | ಪಾಣಾಜೆಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚಿಗೆ ಚಾಲನೆ ನೀಡಿ ಶಾಸಕ ಸಂಜೀವ ಮಠಂದೂರು Read More »

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ

ಪುತ್ತೂರು: ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಶ್ವತಿ ವಾರ್ತಾ ಪತ್ರಿಕೆ ಬಿಡುಗಡೆ ಸಮಾರಂಭ ಡಿ. 17ರಂದು ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು. ಶಾಸಕರೂ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ನಿವೃತ್ತ ಪ್ರಾಧ್ಯಾಪಕಿ ವತ್ಸಲಾ ರಾಜ್ಞಿ ಮುಖ್ಯ ಅತಿಥಿಯಾಗಿದ್ದರು. ಕಾಲೇಜು ಪ್ರಾಂಶುಪಾಲ ಡಾ. ಶ್ರೀಧರ್ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘ ಸಂಚಾಲಕ ಪ್ರೊ. ಶಾಂತರಾಮ ಎ.,

ಪಠ್ಯೇತರ ಚಟುವಟಿಕೆ, ಶಾಶ್ವತಿ ವಾರ್ತಾ ಪತ್ರಿಕೆ ಉದ್ಘಾಟನೆ Read More »

error: Content is protected !!
Scroll to Top