ಕಮಲ ನಿಧನ
ಪುತ್ತೂರು: ಬೆಟ್ಟಂಪಾಡಿಯ ಕುದುರೆಕುಮೇರು ನಿವಾಸಿ ನಾರಾಯಣ ಆಚಾರ್ಯರ ಪತ್ನಿ ಕಮಲ (70 ವ.) ಅಲ್ಪಕಾಲದ ಅಸೌಖ್ಯದಿಂದ ಮಾ. 9ರಂದು ಸ್ವಗೃಹದಲ್ಲಿ ನಿಧನರಾದರು. ಪತಿ, 2 ಗಂಡು, 3 ಹೆಣ್ಣು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಬೆಟ್ಟಂಪಾಡಿಯ ಕುದುರೆಕುಮೇರು ನಿವಾಸಿ ನಾರಾಯಣ ಆಚಾರ್ಯರ ಪತ್ನಿ ಕಮಲ (70 ವ.) ಅಲ್ಪಕಾಲದ ಅಸೌಖ್ಯದಿಂದ ಮಾ. 9ರಂದು ಸ್ವಗೃಹದಲ್ಲಿ ನಿಧನರಾದರು. ಪತಿ, 2 ಗಂಡು, 3 ಹೆಣ್ಣು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಮಾ. 12ರಂದು ಬೆಳಿಗ್ಗೆ 10.45ಕ್ಕೆ ಶಿಲಾನ್ಯಾಸ ನೆರವೇರಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆದು, ದೇವಸ್ಥಾನದ ಹೊರ ಸುತ್ತುಪೌಳಿಗೆ ಶಿಲಾನ್ಯಾಸ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »
ಪುತ್ತೂರು : ರೋಹಿಣಿ ಹೊಲಿಗೆ ಅರ್ಟ್ಸ್ ಆಂಡ್ ಕ್ರಾಫ್ಟ್ ತರಬೇತಿ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಕೃತಕ ಹೂಗಳ ಪ್ರದರ್ಶನ ಮಾ.15 ರಿಂದ 17 ರ ತನಕ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಶಿಶು ಅಭಿವೃದ್ಧಿ
ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ Read More »
ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್ ಡಿಪ್ಲೋಮಾ ಅಥವಾ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, 2 ಹುದ್ದೆಗಳು ಇವೆ. ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೂ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಸಂಪರ್ಕಿಸಿ : ಪ್ರೇರಣಾ, ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬಿಲ್ಡಿಂಗ್ ಸಮೀಪ, ಅರುಣಾ ಥಿಯೇಟರ್ ಎದುರು, ಏಳ್ಮುಡಿ – ಪುತ್ತೂರು 8904877721, 7204977721.
ಕಂಪೆನಿಗಳಲ್ಲಿ ಉದ್ಯೋಗಾವಕಾಶ Read More »
ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11 ರಂದು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ಹೇಳಿದರು. ಬೆಳಿಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ರಾತ್ರಿ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಉಜ್ರುಪಾದೆಯಲ್ಲಿ ಹಲವು ಶತಮಾತನಗಳಿಂದ ಆರಾಧಿಸಿಕೊಂಡು ಬರುತ್ತಿದ್ದ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2009 ಜುಲೈ 7,,೮ ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ
ನಾಳೆ (ಮಾ.11) : ಬಲ್ನಾಡು ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ನೇಮೋತ್ಸವ Read More »
ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಅಂತಿಮ ವಿಭಾಗದ 4 ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿದ್ದಾರೆ. ಬಿಕಾಂ ವಿಭಾಗದ ಆಕಾಂಕ್ಷ ಹೆಚ್ (3400/3343), ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಜಿ (3400/3352), ಶ್ರೀವರದ ಪಿ (3400/3324), ಬಿಎ ವಿಭಾಗದ ರುಚಿತ ಹೆಗ್ಡೆ (3400/3042) ಅಂಕಗಳನ್ನು ಪಡೆದಿದ್ದಾರೆ. ಬಿಎ ವಿಭಾಗದಲ್ಲಿ ಒಟ್ಟು 89 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 66 ಮಂದಿ ತೇರ್ಗಡೆಗೊಂಡಿದ್ದಾರೆ. ಬಿಎಸ್ಸಿ ವಿಭಾಗದಲ್ಲಿ 142 ಮಂದಿ ಪರೀಕ್ಷೆಗೆ ಹಾಜಾರಾಗಿದ್ದು
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಬಿಕಾಂ ಮತ್ತು ಬಿಎಸ್ಸಿಗೆ ಪ್ರಥಮ ರ್ಯಾಂಕ್ಗಳು Read More »
ಪುತ್ತೂರು: ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 80 ಲಕ್ಷ ರೂ. ವೆಚ್ಚದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ನೆಲ್ಲಿಕಟ್ಟೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಸಂಬಂಧಪಟ್ಟ ಸುಮಾರು ಐದು ಕೋಟಿ ರೂ. ಕಾಮಗಾರಿಗಳಿಗೆ ಮುಂದಿನ ಒಂದು ವಾರದಲ್ಲಿ ಶಿಲಾನ್ಯಾಸ ಮಾಡಲಿದ್ದೇವೆ. ಪ್ರಸ್ತುತ ಉಪ್ಪಿನಂಗಡಿ, ಪುತ್ತೂರು, ವಿಟ್ಲ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೆ ಶಿಲಾನ್ಯಾಸ ಮಾಡಲಾಗಿದೆ. ಅಲ್ಲದೆ ಉಪ್ಪಿನಂಗಡಿ ಪದವಿಪೂರ್ವ ಕಾಲೇಜು ಲೋಕಾರ್ಪಣೆ ಜತೆಗೆ ಶಿಲಾನ್ಯಾಸವನ್ನೂ
ಪುತ್ತೂರು: ಕುದ್ಮಾರು ಗ್ರಾಮದ ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ಮಾರ್ಚ್ 9ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ನಡೆದು, ಸಂಜೆ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವಕ್ಕೆ ಎಣ್ಣೆ ಬೂಳ್ಯ ನೀಡಿ, ಬಳಿಕ ಅನ್ನಸಂತರ್ಪಣೆ ಜರಗಿತು. ಇದೇ ಸಂದರ್ಭ ನೇಮೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಕ್ಕಿಡಿಪ್ ಡ್ರಾದ ಫಲಿತಾಂಶ ನಡೆಯಿತು. ರಾತ್ರಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವದ ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು, ಗ್ರಾಮಸ್ಥರಿಗೆ ಸಿರಿಮುಡಿ ಗಂಧಪ್ರಸಾದ
ಕುದ್ಮಾರು: ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ Read More »
ಪುತ್ತೂರು : ಕುದ್ಮಾರಿನ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನದ ದೈವಗಳ ನೇಮೋತ್ಸವದ ಅಂಗವಾಗಿ ಗುರುವಾರ ರಾತ್ರಿ ಲಕ್ಕಿಡಿಪ್ ಡ್ರಾ ಫಲಿತಾಂಶ ನಡೆಯಿತು. ಫಲಿತಾಂಶ ಹೀಗಿದೆ: ಪ್ರಥಮ : 3831, ದ್ವಿತೀಯ : 4347, ತೃತೀಯ : 2994 ದೈವಸ್ಥಾನದಲ್ಲಿ ನೇಮೋತ್ಸವ ಆರಂಭಕ್ಕೆ ಮುನ್ನ ಗಣ್ಯರು, ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಫಲಿತಾಂಶ ನಡೆಸಿಕೊಟ್ಟರು. ಬಳಿಕ ಅನ್ನಸಂತರ್ಪಣೆ, ನೇಮೋತ್ಸವ ಜರಗಿತು.
ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಲಕ್ಷಿಡಿಪ್ ಡ್ರಾ ಫಲಿತಾಂಶ Read More »
ಪುತ್ತೂರು: ಅಜ್ಞಾನ ನಮ್ಮನ್ನು ಪಾತಾಳಕ್ಕೆ ತಳ್ಳುತ್ತದೆ. ಅದನ್ನು ನಾವು ಹೋಗಲಾಡಿಸಿ ನಮ್ಮನ್ನು ನಾವು ಸುಜ್ಞಾನದೆಡೆಗೆ ಕೊಂಡೊಯ್ಯಬೇಕು. ಅದಕ್ಕಾಗಿ ಅತಿ ಹೆಚ್ಚು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಸರಿಯಾದ ಸ್ಥಾನಮಾನ ಗೌರವ ದೊರಕಬೇಕು. ಹೆಣ್ಣಿಗೆ ಪ್ರಾಧಾನ್ಯತೆ ನೀಡದಿದ್ದಲ್ಲಿ ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ ಇದಕ್ಕೆ ನಮ್ಮ ಪುರಾಣಗಳೇ ಪ್ರತ್ಯಕ್ಷ ಸಾಕ್ಷಿ ಎಂದು ಡಾ.ಅನಿಲಾ ದೀಪಕ್ ಶೆಟ್ಟಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ) ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ, ಮಹಿಳಾ ಕೋಶ ಕುಂದುಕೊರತೆ ಮೇಲ್ಮನವಿ