ಪುತ್ತೂರು

ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ವಾಹನ ವಿತರಣೆ | ವಾಹನ ಸಹಿತ ಸಲಕರಣೆ ವಿತರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದ.ಕ.ಜಿಲ್ಲಾ ಪಂಚಾಯಿತಿ,  ಹಾಗೂ ಪುತ್ತೂರು ತಾಲೂಕು ಪಂಚಾಯಿತಿ ಆಶ್ರಯದಲ್ಲಿ ವಿಕಲ ಚೇತನರಿಗೆ ವಾಹನ ವಿತರಣೆ ಕಾರ್ಯಕ್ರಮ ಮಾ 13 ರಂದು  ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಿಕಲಚೇತನರಿಗೆ ಸಾಂಕೇತಿಕವಾಗಿ ವಾಹನ ವಿತರಿಸಿ ಮಾತನಾಡಿ, ವಿಕಲ ಚೇತನರ ದೈನಂದಿನ ಚಟುವಟಿಕೆಗಳಿಗೆ ಪೂರಕವಾಗಿ ವಾಹನ ಸಹಿತ ವಿವಿಧ ಸಲಕರಣೆಗಳನ್ನು ವಿತರಿಸುವ ಕೆಲಸ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮಪ್ಪ […]

ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ವಾಹನ ವಿತರಣೆ | ವಾಹನ ಸಹಿತ ಸಲಕರಣೆ ವಿತರಿಸಿದ ಶಾಸಕ ಸಂಜೀವ ಮಠಂದೂರು Read More »

ಕಬಕ 2ನೇ ವಾರ್ಡಿನಲ್ಲಿ ವಿವಿಧ ರಸ್ತೆಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ನಗರ ಸಭೆ ವ್ಯಾಪ್ತಿಯ ಕಬಕ 2ನೇ ವಾರ್ಡಿನ ವಿವಿಧ ರಸ್ತೆಗಳಿಗೆ 22.50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪುತ್ತೂರು ನಗರಸಭೆಗೆ ಏಕಕಾಲದಲ್ಲಿ 58 ಕೋಟಿ ರೂ. ಅನುದಾನ ನೀಡುವ ಕೆಲಸ ಆಗಿದ್ದು, ಜಲಸಿರಿ ಯೋಜನೆಯ ಅತೀ ದೊಡ್ಡ ಟ್ಯಾಂಕ್‍ ಸಿಟಿ ಗುಡ್ಡೆಯಲ್ಲಿ ಇದೆ. ಇಲ್ಲಿಗೆ 150 ಎಚ್ ಪಿ ಮೋಟಾರ್ ಮೂಲಕ ನೆಕ್ಕಿಲಾಡಿಯಿಂದ ನೀರು ಸರಬರಾಜು ಮಾಡುವ

ಕಬಕ 2ನೇ ವಾರ್ಡಿನಲ್ಲಿ ವಿವಿಧ ರಸ್ತೆಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ

ಪುತ್ತೂರು: ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಆಶ್ರಯದಲ್ಲಿ ಏಳನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ ಮಾ12 ರಂದು ಕಲರ್ಪೆ ತರವಾಡು ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಮೂರ್ತೆಯ ಕಲಸ ಮಾಡುವುದನ್ನು ಯುವ ಪೀಳಿಗೆಗೆ ನಾವು ತಿಳಿಸುವ ಕೆಲಸ ಮಾಡಬೇಕು.ಸಮಾಜಕದಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಒಳ್ಳೆಯ ಕೆಲಸ ಬಿಲ್ಲವ ಸಮಾಜ ಮಾಡಿದೆ ಎಂದ ಅವರು,  ಕೋಟಿ ಚೆನ್ನಯ ಹುಟ್ಟಿದ ಊರು ಪುತ್ತೂರಿನ ಬಸ್ಸು ತಂಗುಧಾಣಕ್ಕೆ ಕೋಟಿ ಚೆನ್ನಯ ನಾಮಕರಣ  ಕಾರ್ಯಕ್ರಮ 

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ 7ನೇ ವರ್ಷದ ಗುರುಪೂಜೆ, ಭಜನೆ, ಸನ್ಮಾನ ಕಾರ್ಯಕ್ರಮ | ಶಾಸಕ ಸಂಜೀವ ಮಠಂದೂರು ಭಾಗಿ Read More »

ಡಿ.ಸಿ.ಆರ್.ನಲ್ಲಿ ಗೇರು ದಿನೋತ್ಸವ -2023 ಆಚರಣೆ

ಪುತ್ತೂರು : ಪುತ್ತೂರಿನ ಕೆಮ್ಮಿಂಜೆಯಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಗೇರು ದಿನೋತ್ಸವ-2023 ವನ್ನು ಆಚರಿಸಲಾಯಿತು. ಮುಖ್ಯ ಅಥಿತಿಗಳಾಗಿ ಗದಗ ಜಿಲ್ಲಾ ಗೇರು ಬೆಳೆಗಾರರ ಸಂಘದ ಅಧ್ಯಕ್ಷ ಗುರುನಾಥ ಆರ್. ಓದುಗೌಡರ್ ಮಾತನಾಡಿ, ಕೃಷಿಕರು ತಾಯಿಗೆ ಸಮಾನ. ತಾಯಿಯ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಕೃಷಿ ವಿಜ್ಞಾನಿಗಳು ಮಾಡಬೇಕಾದ ಕೆಲಸದ ಬಗ್ಗೆ ತಿಳಿಸಿದರು. ರೈತರ ಹೊಲಗಳಿಗೆ ಬೇಟಿ ನೀಡಿ ಖಾಲಿ ಇರುವ ಪ್ರದೇಶದಲ್ಲಿ ವಿಸ್ತರಣಾ ಚಟುವಟಿಕೆಗಳನ್ನು ಕೈಗೊಂಡು ಪರಿಸರಕ್ಕೆ ಹೊಂದುವ ವಿವಿಧ ತಳಿಗಳನ್ನು ಬಿಡುಗಡೆ ಮಾಡಬೇಕೆಂದು ಸಲಹೆ ನೀಡಿದ ಅವರು,

ಡಿ.ಸಿ.ಆರ್.ನಲ್ಲಿ ಗೇರು ದಿನೋತ್ಸವ -2023 ಆಚರಣೆ Read More »

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು :ಶಾಂತಿಗೋಡು ಗ್ರಾಮದ ಪೇರಡ್ಕ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನೆ ಭಾನುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಅಂಗನವಾಡಿ ಉದ್ಘಾಟಿಸಿ ಮಾತನಾಡಿ, ಪುತ್ತೂರು ತಾಲೂಕಿಗೆ ಐದು ಅಂಗನವಾಡಿ ಮಂಜೂರಾಗಿದೆ.ಈ ಮೂಲಕ ಮಹಿಳೆಯರ ಚಟುವಟಿಕೆ ಆರಂಭ ಆಗಿದೆ. ಬಹಳಷ್ಟು ಜನರಿಗೆ ಅಂಗನವಾಡಿ ಬಂದಾಗ ಮಕ್ಕಳು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂದುವರಿಯುವ ಕೆಲಸ ಪ್ರಸ್ತುತ ದಿನಗಳಲ್ಲಿ ಕಾಣುತ್ತಿದೆ. ಗ್ರಾಮೀಣ ಭಾಗದಲ್ಲಿ  ಮಕ್ಕಳಿಗೆ ಅಂಗವಾಗಿ ಕೇಂದ್ರದಲ್ಲಿ ಪೌಸ್ಟಿಕ ಆಹಾರ ಕೊಡುವ ಕೆಲಸ ಆಗಿದೆ.  ಅಂಗನವಾಡಿ ಮೂಲಕ ಮಹಿಳಾ ಸ್ತ್ರೀ ಶಕ್ತಿ ಗುಂಪು ಕೆಲಸ

ಶಾಂತಿಗೋಡು ಗ್ರಾಮದ ಪೇರಡ್ಕ ಅಂಗನವಾಡಿ ಕೇಂದ್ರ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ

ಪುತ್ತೂರು : ತಾಲೂಕು ಬಂಟರ ಸಂಘದ ಹಾಗೂ ಮಹಿಳಾ ಬಂಟರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಬಂಟ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ನಗರದ ಬಂಟರ ಭವನದಲ್ಲಿ ನಡೆಯಿತು. ಪುತ್ತೂರು ಪದ್ಮಾ ಸೋಲಾರ್ ನ ಲತಾ ಪಿ. ಶೆಟ್ಟಿ ಮಹಿಳಾ ಬಂಟರ ಸಂಭ್ರಮವನ್ನು ಉದ್ಘಾಟಿಸಿ, ಬೆಳಕು ಹಾಗೂ ಹೆಣ್ಣಿಗೆ ಅವಿನಾಭಾವ ಸಂಬಂಧವಿದೆ. ಪ್ರಸ್ತುತ ಹೆಣ್ಣು ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗಿರದೆ, ತನ್ನಲ್ಲಿ ಫೋಷಕ ಶಕ್ತಿಯನ್ನು ಬೆಳೆಸಿಕೊಳ್ಳುವ ಜತೆಗೆ ಕ್ರಿಯಾಶೀಲರಾಗಿ ಪರಿಸರ, ಸಂಸಾರ,

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ Read More »

ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಪ್ರಯುಕ್ತ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಮಾರ್ಚ್ 12ರಂದು ಬೆಳಿಗ್ಗೆ ಕ್ಷೇತ್ರದ ತಂತ್ರಿಗಳಾದ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಗೌಡ ದೇವಸ್ಯ, ಜತೆ ಕಾರ್ಯದರ್ಶಿ ಗಿರೀಶ್ ಕಿನ್ನಿಜಾಲ್, ಉಪಾಧ್ಯಕ್ಷರಾದ ನಾರಾಯಣ ನಾಯ್ಕ್ ಗೆಣಸಿನಕುಮೇರ್, ಜಯಂತ ಶೆಟ್ಟಿ ಕಂಬಳತಡ್ಡ, ವ್ಯವಸ್ಥಾಪನಾ

ಕಾರ್ಪಾಡಿ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ

ಪುತ್ತೂರು: ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಯುವಶಕ್ತಿಯನ್ನು ಗರಿಷ್ಠ ಪ್ರಮಾಣದಲ್ಲಿ ಹೊಂದಿದ ರಾಷ್ಟ್ರ ಭಾರತ. ಯುವ ಸಂಪನ್ಮೂಲ ಸದ್ಬಳಕೆಯಾದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಸಾಗುವುದು ನಿಶ್ಚಿತ ಎಂದು ಬೆಳ್ಳಾರೆಯ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಹೇಳಿದರು.ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಮುಂಡೂರು ಶಾಲೆಯಲ್ಲಿ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು

ಯುವಶಕ್ತಿಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ :ಪ್ರೊ.ದಾಮೋದರ| ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ ಎಸ್ ಎಸ್ ಶಿಬಿರ Read More »

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 5 ಲಕ್ಷ ರೂ. ದೇಣಿಗೆ ಚೆಕ್ ನ್ನು ಹಸ್ಥಾಂತರಿಸಿದರು. ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ ಮಜಲುಮಾರು ಮುಕ್ವೆ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ.ಯಂ.ಬೆಳಿಯಪ್ಪ ಗೌಡ ಕೆದ್ಕಾರ್, ಸದಸ್ಯರುಗಳಾದ ಗಣೇಶ್ ಭಟ್, ಯಂ.ರವಿ ಮಣಿಯ, ಕೆ.ಗಿರೀಶ್ ರೈ

ಮುಕ್ವೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ Read More »

ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ, ಧಾರ್ಮಿಕ ಸಭೆ

ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ಮಾ.10, 11ರಂದು ನಡೆದ  ವಾರ್ಷಿಕ ನೇಮೋತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ  ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ಮೂಲನಂಬಿಕೆಯ ತಳಹದಿಯಲ್ಲಿ ಬೆಳೆದು ಬಂದ ಕ್ಷೇತ್ರವಿದು. ಸ್ವಾರ್ಥರಹಿತ ಭಕ್ತಿ,  ನಿಸ್ವಾರ್ಥ ಸೇವೆಯಿಂದ ಸಾನಿಧ್ಯ ವೃದ್ಧಿಯಾಗಲು ಸಾಧ್ಯ ಎಂದ ಅವರು, ಬಹಳ ವೇಗದ ಜಗತ್ತಿನಲ್ಲಿ ನಾವಿದ್ದು, ಇಂತಹ ವೇಳೆಯಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ತಂದೆ-ತಾಯಿಯನ್ನೇ ಮರೆತುಬಿಡುವ

ದಂಬೆತ್ತಿಮಾರು ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ, ಧಾರ್ಮಿಕ ಸಭೆ Read More »

error: Content is protected !!
Scroll to Top