ಪುತ್ತೂರು

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಪುತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಬಸ್ ನಿಲ್ದಾಣದಿಂದ ವೆಂಕಟ್ರಮಣ ದೇವಳದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ರಾಜ್ಯ, ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಆದ್ದರಿಂದ ಜನತೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು. ಶಾಸಕ ಸಂಜೀವ ಮಠಂದೂರು ಅವರ ಪ್ರಾಸ್ತಾವಿಕ ಮಾತಿನ ಪೂರ್ಣ ವಿವರ ಈ ವೀಡಿಯೋನಲ್ಲಿದೆ… ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, […]

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ Read More »

ಮಾ. 12: ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಪಿ

ಪುತ್ತೂರು : ದ.ಕ.ಜಿಲ್ಲಾ ಖೋ ಖೋ ಅಸೋಸಿಯೇಶನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ‍ ಕ್ಲಬ್ ಹಾಗೂ ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಫಿ ಮಾ. 12 ಭಾನುವಾರ ಪುತ್ತೂರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಳೆನೇರೆಂಕಿ ದೈವ ನರ್ತಕ ೋಬಯ್ಯ

ಮಾ. 12: ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಪಿ Read More »

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ

ಪುತ್ತೂರು: ದೇಶದ ಪ್ರಗತಿಯನ್ನು ನಿರ್ಧರಿಸುವುದು ಮತದಾನ. ಆದ್ದರಿಂದ ಮತ ಚಲಾಯಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಚುನಾವಣೆಯ ಗೆಲುವನ್ನು ನಿರ್ಧರಿಸುವಲ್ಲಿ ಪ್ರತಿಯೊಂದು ಅಭ್ಯರ್ಥಿಯ ಮತದಾನ ಮುಖ್ಯ ಎಂದು ಪರೀಕ್ಷಾಂಗ ಕುಲ ಸಚಿವ ಮತ್ತುಕನ್ನಡ ವಿಭಾಗ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಹೇಳಿದರು. ಮತದಾರರ ಸಾಕ್ಷರತಾ ಘಟಕ, ತಾಲೂಕು ಕಛೇರಿ ಪುತ್ತೂರು, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಮತದಾನ ಸಾಕ್ಷರತಾ ಸಮಿತಿ, ಪೊಲಿಟಿಕಲ್ ಫಾರಂ, ಎನ್.ಎಸ್.ಎಸ್, ಎನ್.ಸಿ.ಸಿ., ರೋವರ್ ರೇಂಜರ್ಸ್, ಮತ್ತು ರೆಡ್‌ಕ್ರಾಸ್‌ ಇದರ ಸಹಯೋಗದಲ್ಲಿ

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನ ಹಿನ್ನೆಲೆ

ಪುತ್ತೂರು: ಶನಿವಾರ ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸಿನ ಪ್ರಕಟಣೆ ತಿಳಿಸಿದೆ. ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರ್ಯಕ್ರಮ ರದ್ದಾಗಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಅಜೆಂಡಾವನ್ನು ಪ್ರತಿ ಮನೆಮನೆಗೆ ತಲುಪಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು | ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ನಿಧನ ಹಿನ್ನೆಲೆ Read More »

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಹತ್ತೂರಿನ ಜನರು ತದೇಕಚಿತ್ತದಿಂದ ವೀಕ್ಷಿಸುವ ಪುತ್ತೂರು ಜಾತ್ರೆಯ ಆಮಂತ್ರಣ ಪತ್ರ ಮಾರ್ಚ್ 11ರಂದು ಬೆಳಿಗ್ಗೆ ಶಾಸಕ ಸಂಜೀವ ಮಠಂದೂರು ಬಿಡುಗಡೆಗೊಳಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆಡಳಿತಾಧಿಕಾರಿ ನವೀನ್ ಭಂಡಾರಿ, ಗೌರಿ ಬನ್ನೂರು, ಪಿ.ಜಿ. ಜಗನ್ನೀವಾಸ್ ರಾವ್, ರಾಜೇಶ್ ಬನ್ನೂರು, ಐತ್ತಪ್ಪ ನಾಯ್ಕ್, ವೀಣಾ ಆಚಾರ್ಯ, ಗೌರಿ ಬನ್ನೂರು, ದೀಕ್ಷಾ ಪೈ, ಸಾಜಾ ರಾಧಾಕೃಷ್ಣ

ಪುತ್ತೂರು ಜಾತ್ರೆಯ ಆಮಂತ್ರಣ ಬಿಡುಗಡೆ | ವರ್ಷಂಪ್ರತಿಯಂತೆ ಏ. 1ಕ್ಕೆ ಗೊನೆ ಮುಹೂರ್ತ, ಏ. 10ರಿಂದ ಜಾತ್ರೆ | ಆಮಂತ್ರಣ ಪತ್ರ ಅನಾವರಣಗೊಳಿಸಿದ ಶಾಸಕ ಸಂಜೀವ ಮಠಂದೂರು Read More »

ಕಮಲ ನಿಧನ

ಪುತ್ತೂರು: ಬೆಟ್ಟಂಪಾಡಿಯ ಕುದುರೆಕುಮೇರು ನಿವಾಸಿ ನಾರಾಯಣ ಆಚಾರ್ಯರ ಪತ್ನಿ ಕಮಲ (70 ವ.) ಅಲ್ಪಕಾಲದ ಅಸೌಖ್ಯದಿಂದ ಮಾ. 9ರಂದು ಸ್ವಗೃಹದಲ್ಲಿ ನಿಧನರಾದರು. ಪತಿ, 2 ಗಂಡು, 3 ಹೆಣ್ಣು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕಮಲ ನಿಧನ Read More »

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಪುತ್ತೂರು: ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಮಾ. 12ರಂದು ಬೆಳಿಗ್ಗೆ 10.45ಕ್ಕೆ ಶಿಲಾನ್ಯಾಸ ನೆರವೇರಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆದು, ದೇವಸ್ಥಾನದ ಹೊರ ಸುತ್ತುಪೌಳಿಗೆ ಶಿಲಾನ್ಯಾಸ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಮಾ. 12: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ

ಪುತ್ತೂರು : ರೋಹಿಣಿ ಹೊಲಿಗೆ ಅರ್ಟ್ಸ್ ಆಂಡ್ ಕ್ರಾಫ್ಟ್ ತರಬೇತಿ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಕೃತಕ ಹೂಗಳ ಪ್ರದರ್ಶನ ಮಾ.15 ರಿಂದ 17 ರ ತನಕ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍., ಶಿಶು ಅಭಿವೃದ್ಧಿ

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ Read More »

error: Content is protected !!
Scroll to Top