ಉದ್ಯೋಗದ ಜೊತೆ ಸ್ವ – ಉದ್ಯೋಗಕ್ಕೂ ಗಮನ ಕೊಡಿ | ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಭಾರತಿ ಎಂ.ಎಲ್.
ಪುತ್ತೂರು: ಸಮಾಜದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನ ಪ್ರಾಶಸ್ತ್ಯ ಪಡೆದುಕೊಂಡಿದ್ದು, ಉದ್ಯೋಗದ ಜೊತೆಗೆ ಸ್ವ-ಉದ್ಯೋಗ ನಡೆಸುವತ್ತಲೂ ಗಮನ ಕೊಡಬೇಕು ಎಂದು ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಭಾರತಿ ಎಂ.ಎಲ್. ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆದ ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವದಲ್ಲಿ ಅವರು ಮುಖ್ಯಅತಿಥಿಯಾಗಿ ಮಾತನಾಡಿದರು. ಸ್ತ್ರೀಯರನ್ನು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ. ಶಿಕ್ಷಣವೇ ಇಂದು ಎಲ್ಲಾ ಕ್ಷೇತ್ರಗಳ ಅಡಿಪಾಯ. ಶಿಕ್ಷಣ ಪಡೆದವರು ಸ್ವತಂತ್ರವಾಗಿ ಜೀವನ ಕಟ್ಟಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನವೂ ಆಗುತ್ತದೆ […]










