ಪುತ್ತೂರು

ಉದ್ಯೋಗದ ಜೊತೆ ಸ್ವ – ಉದ್ಯೋಗಕ್ಕೂ ಗಮನ ಕೊಡಿ |  ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಭಾರತಿ ಎಂ.ಎಲ್.

ಪುತ್ತೂರು: ಸಮಾಜದಲ್ಲಿ ಮಹಿಳೆಯರು ಪುರುಷರಷ್ಟೇ ಸಮಾನ ಪ್ರಾಶಸ್ತ್ಯ ಪಡೆದುಕೊಂಡಿದ್ದು, ಉದ್ಯೋಗದ ಜೊತೆಗೆ ಸ್ವ-ಉದ್ಯೋಗ ನಡೆಸುವತ್ತಲೂ ಗಮನ ಕೊಡಬೇಕು ಎಂದು ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಭಾರತಿ ಎಂ.ಎಲ್. ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ  ನಡೆದ ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವದಲ್ಲಿ ಅವರು ಮುಖ್ಯಅತಿಥಿಯಾಗಿ ಮಾತನಾಡಿದರು. ಸ್ತ್ರೀಯರನ್ನು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ. ಶಿಕ್ಷಣವೇ ಇಂದು ಎಲ್ಲಾ ಕ್ಷೇತ್ರಗಳ ಅಡಿಪಾಯ. ಶಿಕ್ಷಣ ಪಡೆದವರು ಸ್ವತಂತ್ರವಾಗಿ ಜೀವನ ಕಟ್ಟಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನವೂ ಆಗುತ್ತದೆ […]

ಉದ್ಯೋಗದ ಜೊತೆ ಸ್ವ – ಉದ್ಯೋಗಕ್ಕೂ ಗಮನ ಕೊಡಿ |  ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಭಾರತಿ ಎಂ.ಎಲ್. Read More »

ಮಾ. 30: ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ, ಸಮಾವೇಶ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಜತೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾ. 30ರಂದು ಹೋರಾಟ ಸಮಿತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ ಹಾಗೂ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು 317 ಲಯನ್ ಜಿಲ್ಲೆಯ 8 ಪ್ರಾಂತ್ಯದ ಅಧ್ಯಕ್ಷೆ ಸಂಧ್ಯಾ ಸಚಿತ್ ರೈ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆಂದೋಲನಕ್ಕೆ 317 ಲಯನ್ ಜಿಲ್ಲೆಯ 7 ಮತ್ತು 8 ಪ್ರಾಂತ್ಯಗಳ ಒಟ್ಟು 12 ಲಯನ್ಸ್ ಕ್ಲಬ್ಬುಗಳು ಅಖಂಡ ಬೆಂಬಲ ಘೋಷಿಸಿದೆ. ಈಗಾಗಲೇ ಹೋರಾಟ ನಡೆಸುತ್ತಿರುವ

ಮಾ. 30: ಮೆಡಿಕಲ್ ಕಾಲೇಜು ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಕಾಲ್ನಡಿಗೆ ಜಾಥಾ, ಸಮಾವೇಶ Read More »

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

ಪುತ್ತೂರು: ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಎಲ್ಲಾ ಸೌಲಭ್ಯಗಳೊಂದಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ. ರಾಜ್ಯ ಶಿಷ್ಟಾಚಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ – 2 ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ರಾಜ್ಯ ಸರಕಾರ ನೀಡಿದಂತಾಗಿದೆ. ಸಂಪುಟ ದರ್ಜೆಯ ಸ್ಥಾನಮಾನವು ರಾಜ್ಯದ ಸಂಪುಟ ದರ್ಜೆಯ ಸಚಿವರಿಗೆ ಸರಿಸಮಾನವಾದ ಸ್ಥಾನಮಾನ. ಸಚಿವರುಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳು, ಅಧಿಕಾರಗಳು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ Read More »

ಪುತ್ತೂರು ತಹಸೀಲ್ದಾರ್ ಜೆ. ಶಿವಶಂಕರ್ ಅಧಿಕಾರ ಸ್ವೀಕಾರ | ಶಾಸಕ ಸಂಜೀವ ಮಠಂದೂರು ಭೇಟಿಯಾದ ತಹಸೀಲ್ದಾರ್

ಪುತ್ತೂರು: ನಿಸರ್ಗಪ್ರಿಯ ಅವರ ವರ್ಗಾವಣೆ ಬಳಿಕ ತೆರವಾಗಿದ್ದ ಪುತ್ತೂರು ತಹಸೀಲ್ದಾರ್ ಹುದ್ದೆಗೆ ಭೀಮರಾಯನಗುಡಿ ಎಸ್.ಎಲ್.ಎ.ಒ. ಕಚೇರಿಯ ಕಂದಾಯ ಅಧಿಕಾರಿ ಜೆ. ಶಿವಶಂಕರ್ ಅವರು ಆಗಮಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ನಡೆಸಲಾಗಿದೆ. ಭೀಮರಾಯನಗುಡಿ ಎಸ್.ಎಲ್.ಎ.ಓ. ಕಚೇರಿಯ ತಹಸೀಲ್ದಾರ್ ಗ್ರೇಡ್-2 ಆಗಿದ್ದ ಜೆ. ಶಿವಶಂಕರ್ ಅವರನ್ನು ಪುತ್ತೂರು ಗ್ರೇಡ್-1 ತಹಸೀಲ್ದಾರ್ ಆಗಿ ನಿಯುಕ್ತಿಗೊಳಿಸಿ, ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸೋಮವಾರ ತಹಸೀಲ್ದಾರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ

ಪುತ್ತೂರು ತಹಸೀಲ್ದಾರ್ ಜೆ. ಶಿವಶಂಕರ್ ಅಧಿಕಾರ ಸ್ವೀಕಾರ | ಶಾಸಕ ಸಂಜೀವ ಮಠಂದೂರು ಭೇಟಿಯಾದ ತಹಸೀಲ್ದಾರ್ Read More »

ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ

ಪುತ್ತೂರು: ಎನ್.ಐ.ಎ. ತಂಡಕ್ಕೆ ಬೆಂಗಾವಲು ವಾಹನವಾಗಿ ಸಾಗುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ, ಆರ್ಲಪದವಿನ ಪಾಣಾಜೆ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ನಾಯ್ಕ್ (48) ಅವರ ಮೃತದೇಹದ ಅಂತಿಮ ದರ್ಶನ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು. ಬಳಿಕ ಸ್ವಗೃಹ ಕೋಟೆಯಲ್ಲಿ ಅಂತಿಮ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಆರ್ಲಪದವಿಗೆ ತರಲಾಯಿತು. ಪಾಣಾಜೆ, ನಿಡ್ಪಳ್ಳಿ, ಬೆಟ್ಟಂಪಾಡಿ ಗ್ರಾಮದ ನೂರಾರು

ಹೆಲ್ಮೆಟ್ ಹಾಕಿದ್ದರೂ ತಲೆಗೇ ಬಲವಾದ ಪೆಟ್ಟು ಬಿದ್ದು ಮೃತ್ಯು | ಪೊಲೀಸ್ ಜೀಪ್ ಡಿಕ್ಕಿಯಾಗಿ ಮೃತಪಟ್ಟ ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅಂತಿಮ ದರ್ಶನ Read More »

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಉಜಿರೆ : ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಶನಿವಾರ ವಿವಾಹ ನೋಂದಣಿ ಕಾರ್ಯಾಲಯವನ್ನು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸೀರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ.

ಮೇ 3 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ

ಪಡುಮಲೆ : ಪಡುಮಲೆ ಶ್ರೀ ಕೂವೆ ಶಾಸ್ತರ ವಿಷ್ಣುಮೂರ್ತಿ ದೇವಾಲಯದಲ್ಲಿ  1008 ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಮಾ.5 ರಂದು ನಡೆಯಿತು. ಪೂರ್ವಾಹ್ನ ಗಂ 5 ರಿಂದ   ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ವಾಸುದೇವ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇಧ ಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ   ಗಣಪತಿ ಹೋಮ,ಕವಟೋದ್ಘಾಟನೆ,ಶಾಂತಿ, ಪ್ರಾಯಶ್ಚಿತ್ತ ಮತ್ತು ಶಾಂತಿ ಹೋಮ ನಡೆದು ಬಳಿಕ ಪಡುಮಲೆ ಒಡೆಯ ಶ್ರೀ ಶಾಸ್ತಾರ ವಿಷ್ಣುಮೂರ್ತಿ  ದೇವರಗೆ  ಕಲಶಾಭಿಷೇಕ  ಅವಭೃತ ಪ್ರೋಕ್ಸಣೆ ಮಹಾಪೂಜೆ ,ಮಂತ್ರಾಕ್ಷತೆ ಕಾರ್ಯಕ್ರಮ ನೆಡೆಯಿತು. .ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು. 

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವ ಸಂಪನ್ನ Read More »

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ

ಮುಕ್ಕೂರು: ಊರಿನ ಅಂಚೆ ಕಚೇರಿಯು ವ್ಯವಹಾರ ಕುಸಿತದಿಂದ ಬೇರೆಡೆಗೆ ಸ್ಥಳಾಂತರ ಅಥವಾ ಮುಚ್ಚುವುದನ್ನು ಯಾರಿಂದಲೂ ಒತ್ತಡ ಹೇರಿ ತಡೆಯುವುದು ಸಾಧನೆ ಅಲ್ಲ. ಅದರ ಬದಲಾಗಿ ಅಂಚೆ ಕಚೇರಿಯಲ್ಲಿ ಪ್ರತಿಯೊಬ್ಬರು ಖಾತೆ ತೆರೆದು ವ್ಯವಹಾರ ಹೆಚ್ಚಳಗೊಳಿಸಿ ಸ್ವಂತ ಶಕ್ತಿಯಿಂದ ಅಂಚೆ ಕಚೇರಿ ಶಾಶ್ವತವಾಗಿ ಉಳಿಯುವಂತೆ ಮಾಡುವುದೇ ಸಾಧನೆ ಎಂದು ಪೆರುವಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಬೆಳ್ಳಾರೆ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರು ಶಾಖಾ ಅಂಚೆ ಕಚೇರಿ ವ್ಯವಹಾರ ಕುಸಿದಿದ್ದು ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ

ಮುಕ್ಕೂರು ಅಂಚೆ ಕಚೇರಿ ಉಳಿಸಿಕೊಳ್ಳಲು ಪೂರ್ವಭಾವಿ ಸಭೆ Read More »

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ

ಪುತ್ತೂರು : ಭಾಗ್ಯಜ್ಯೋತಿ ಜ್ಞಾನವಿಕಾಸ  ಕೇಂದ್ರದ ಮಾಸಿಕ  ಸಭೆ  ಕೀರ್ತಿ ಸಂಘದ  ಸದಸ್ಯೆ ಜ್ಯೋತಿ ಅವರ  ಅಧ್ಯಕ್ಷತೆಯಲ್ಲಿ  ಕುಂಜೂರುಪಂಜ ಶ್ರೀ ಮಂಜುನಾಥ  ಸಭಾಭವನದಲ್ಲಿ ನಡೆಯಿತು,  ಸಭೆಯಲ್ಲಿ  ಮಹಿಳಾ   ಸಾಂತ್ವನ  ಕೇಂದ್ರದ  ಸಾಮಾಜಿಕ  ಕಾರ್ಯಕರ್ತೆ  ಅಶ್ವಿನಿ  ಮಹಿಳಾ  ದೌರ್ಜನ್ಯ ಮತ್ತು ಅದಕ್ಕೆ ಪರಿಹಾರ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೇವಾಪ್ರತಿನಿಧಿ ಆಶಾಲತಾ, ವರಮಹಾಲಕ್ಷ್ಮಿ ಪೂಜಾ  ಸಮಿತಿ  ಅಧ್ಯಕ್ಷೆ ವಸಂತಿ, ಸಂಯೋಜಕಿ  ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.

ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ Read More »

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು

ಪುತ್ತೂರು: ಸಂಪ್ಯ ಮಸೀದಿ ಮುಂಭಾಗದಲ್ಲಿ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ನಾಯ್ಕ್ ಎಂದು ಗುರುತಿಸಲಾಗಿದೆ. ಪುತ್ತೂರಿಗೆ ಆಗಮಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಆರ್ಲಪದವು ಕಡೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೈಕ್ ಸವಾರ ಲಕ್ಷ್ಮಣ್ ನಾಯ್ಕ್ ಅವರು ಗಂಭೀರ ಗಾಯಗೊಂಡು, ಕೊನೆಯುಸಿರೆಳೆದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ಜೀಪ್ – ಬೈಕ್ ಡಿಕ್ಕಿ: ಆರ್ಲಪದವು ಸಿಎ ಬ್ಯಾಂಕ್ ಮ್ಯಾನೇಜರ್ ಮೃತ್ಯು Read More »

error: Content is protected !!
Scroll to Top