ಪುತ್ತೂರು

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ

ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಶೌರ್ಯ ಯಾತ್ರೆ ಭಾನುವಾರ ನಡೆಯಿತು. ನಗರದ ದಬೆ ವೃತ್ತದಿಂದ ಹೊರಟ ಶೌರ್ಯ ಯಾತ್ರೆ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಸಮಾಪನಗೊಂಡಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿ, ಭಾರತದಲ್ಲಿ ವೀರತ್ವ, ಪರಾಕ್ರಮ ಮೆರೆದವರ ಇತಿಹಾಸವನ್ನು ಮಕ್ಕಳಿಗೆ ತಿಳಿಸಲಾಗದ ವಾತಾವರಣವನ್ನು ಮೆಕಾಲೆ ಶಿಕ್ಷಣ ವ್ಯವಸ್ಥೆ ಮಾಡಿತ್ತು. […]

ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ Read More »

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ಪಂಚಮಿ ರಥ ನಿರ್ಮಿಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳ ಪೂರ್ವಭಾವಿ ಸಭೆ ಭಾನುವಾರ ದೇವಾಲಯದ ವಠಾರದಲ್ಲಿ ನಡೆಯಿತು. ಶತಮಾನಗಳ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಹಿಂದಿನ ಕಾಲದಲ್ಲಿ ಜಾತ್ರೆಯು ರಥೋತ್ಸವದೊಂದಿಗೆ ವೈಭವಪೂರ್ಣವಾಗಿ ನಡೆಯುತಿತ್ತು. ಕಾಲ ಕ್ರಮೇಣ ಅದು ನಿಂತಿತು. ಅದಕ್ಕೆ ಸಾಕ್ಷಿ ಎಂಬಂತೆ ರಥದ ಪಳೆಯುಳಿಕೆಗಳು ಇತ್ತಿಚ್ಚಿನ ದಿನಗಳ ತನಕವು ದೇವಾಲಯದಲ್ಲಿ ಇತ್ತು. ಕೆಲ ವರ್ಷಗಳ ಹಿಂದೆ ನಡೆದ ಪ್ರಶ್ನಾಚಿಂತನೆಯಲ್ಲಿ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ | ಮುಂದಿನ ಜಾತ್ರೆಯೊಳಗೆ 60 ಲಕ್ಷ ವೆಚ್ಚದಲ್ಲಿ ರಥ-ಪಲ್ಲಕ್ಕಿ ನಿರ್ಮಾಣ Read More »

ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎನ್ನುವ ಉದ್ದೇಶದಿಂದ ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ ಮಾರ್ಚ್ 4ರಂದು ಐಎಎಸ್ ಉಚಿತ ಓರಿಯಂಟೇಷನ್ ತರಗತಿ ನಡೆಯಿತು. ಇಂಡಿಯನ್ ಕಾರ್ಪೋರೇಟ್ ಲಾ ಸರ್ವೀಸಿನ 2019ರ ಬ್ಯಾಚಿನ ಅಧಿಕಾರಿ ವೆಂಕಟ್ರಮಣ್ ಕಾವಾಡಿಕೇರಿ, ಐ.ಸಿ.ಎಲ್.ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ, ಓರಿಯಂಟೇಷನ್ ತರಗತಿ ನಡೆಸಿಕೊಟ್ಟರು. ಪ್ರೇರಣಾದೊಂದಿಗೆ ಜೊತೆಯಾಗಿರುವ ಇಂಡಿಯಾ ಫೋರ್ ಐಎಎಸ್ ಸಂಸ್ಥೆ, ಐಎಎಸ್ ಆಕಾಂಕ್ಷಿಗಳಿಗೆ ತರಬೇತಿ ನೀಡಲಿದೆ. 140ಕ್ಕೂ ಅಧಿಕ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೀಡಿರುವ ಪ್ರತಿಷ್ಠಿತ ಇಂಡಿಯ ಫೋರ್ ಐಎಎಸ್

ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ Read More »

ಕೈಕಾರ ಶಾಲಾ ಶತಮಾನೋತ್ಸವ | ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ | ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕೈಕಾರ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಶತಮಾನ ಕಂಡ ಶಾಲೆಗೆ ನಾವೇನು ಕೊಡಬಹುದು ಎಂಬ ಯೋಚನೆ ಮಾಡಿ ಇಂದು ಶತಮಾನೋತ್ಸವ  ಕಾರ್ಯಕ್ರಮ ಆಗುತ್ತಿದೆ. ಹಿರಿಯ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನೆಲ್ಲ ಮಾಡಬಹುದು ಅಂಥ ತೋರಿಸುವ ಕೆಲಸ ಇಲ್ಲಿ ಆಗಿದೆ. ಪ್ರಾಥಮಿಕ ಶಾಲೆಗಳಿಗೆ  ವೈಜ್ಞಾನಿಕ ರೀತಿಯಲ್ಲಿ

ಕೈಕಾರ ಶಾಲಾ ಶತಮಾನೋತ್ಸವ | ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ | ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ  

ಪುತ್ತೂರು : ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾ ಸಮಾವೇಶ ಭಾನುವಾರ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.   ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ, ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಸಾಮಾಜಿಕ ನ್ಯಾಯ

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ   Read More »

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಮಾ.25 ರಿಂದ 27 ರ ತನಕ ನಡೆಯುವ ಬಡಗನ್ನೂರು ಗ್ರಾಮದ ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ  ಬಿಡುಗಡೆ  ಮಾಡಲಾಯಿತು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನ ಮಂದಿರ ಪುನಃ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಶ್ರೀನಿವಾಸ ಗೌಡ ಕನ್ನಾಯ,

ಪೆರಿಗೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ

ಉಪ್ಪಿನಂಗಡಿ : ಉಪ್ಪಿನಂಗಡಿ ಗೃಹರಕ್ಷಕ ದಳದ ವಾರದ ಕವಾಯತಿಗೆ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರುರವರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ಮಾಡಿದರು ಚುನಾವಣಾ ಪೂರ್ವ ಸಿದ್ಧತಾ ಸಭೆ :-ಕವಾಯತು ಮುಗಿದ ನಂತರ ಗೃಹರಕ್ಷಕ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು.. ಮುಂಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಗೃಹರಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಹಾಗೂ ಚುನಾವಣೆ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಅಂಚೆ ಮತದಾನದ ಮೂಲಕ ಮತ ಚಲಾವಣೆ ಮಾಡಲು ಇಲಾಖಾ ಮುಖಾಂತರ ವ್ಯವಸ್ಥೆ ಮಾಡಲಾಗುವುದು

ಉಪ್ಪಿನಂಗಡಿ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಭೇಟಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ

ಪುತ್ತೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ, ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ, ಮಡಿಕೇರಿಯ ಎಂ.ಎಚ್‌. ತುಫೈಲ್‌ ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ತುಫೈಲ್‌ ವಿರುದ್ದ ಲುಕೌಟ್ ನೊಟೀಸ್ ಜಾರಿ ಮಾಡಿದ್ದು, ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಗ್ಗೆ ತನಿಖೆ ನಡೆಸಿದ್ದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ Read More »

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಬೂತ್ ಮಟ್ಟದಲ್ಲಿ ಜಯ ಪಡೆದರೆ ಮಾತ್ರ ನಾವು ದೇಶದಲ್ಲಿ ಜಯ ಗಳಿಸಬಹುದು ಎಂದು ಅಮಿತ್ ಶಾ ಹೇಳಿದ್ದಾರೆ. ಅದರಂತೆ ಆರ್ಯಾಪು ಗ್ರಾಮ ಪಂಚಾಯತ್ ಬೂತ್ ಮಟ್ಟದಲ್ಲಿ ನಾವು ಜಯ ಗಳಿಸಿದ್ದು, ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ದಿಕ್ಸೂಚಿಯಾಗಿರಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಆರ್ಯಾಪು ಗ್ರಾಮ ಪಂಚಾಯತಿನ ಉಪಚುನಾವಣೆಯಲ್ಲಿ ಜಯ ಗಳಿಸಿದ ಯತೀಶ್ ದೇವ ಅವರ ಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನೆ ಹಾಗೂ ಕೃತಜ್ಞತಾ ಸಭೆಯಲ್ಲಿ ಅವರು ಮಾತನಾಡಿದರು. ಮೆಂಬರ್ ಆಫ್ ಪಾರ್ಲಿಮೆಂಟ್ ಅವರಿಗೂ ಎಂ.ಪಿ.

ಬೂತ್ ಜೀತೇಗಾ ತೋ, ದೇಶ್ ಜೀತೇಗಾ | ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ಹಿನ್ನೆಲೆಯ ಕೃತಜ್ಞತಾ ಸಭೆಯಲ್ಲಿ ಶಾಸಕ ಸಂಜೀವ ಮಠಂದೂರು Read More »

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು : ಅರಿಯಡ್ಕ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸ್ಥಳೀಯ ಗ್ರಾಮಸ್ಥರ ಆಶೋತ್ತರಗಳನ್ನು ಈಡೇರಿಸುವ ಕೇಂದ್ರವಾಗಿದ್ದು, ಗ್ರಾಪಂ ಮೂಲಕ ಹಲವಾರು ಯೋಜನೆಗಳು ಜನಸಾಮಾನ್ಯರನ್ನು ತಪುಲುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಹಾಗೂ ಊರ ಗ್ರಾಮಸ್ಥರು

ಅರಿಯಡ್ಕ ಗ್ರಾಮ ಪಂಚಾಯಿತಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

error: Content is protected !!
Scroll to Top