ಪುತ್ತೂರು

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎನ್ನುವ ಉದ್ದೇಶದಿಂದ ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ ಮಾರ್ಚ್ 4ರಂದು ಸಂಜೆ 4 ಗಂಟೆಗೆ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ ಹಮ್ಮಿಕೊಳ್ಳಲಾಗಿದೆ. ಎನ್.ಸಿ.ಇ.ಆರ್.ಟಿ. ಕ್ಲಾಸ್, ಪ್ರಚಲಿತ ವಿದ್ಯಮಾನಗಳ ತರಗತಿಗಳು, ಆಪ್ಟಿಟ್ಯೂಡ್ ಕ್ಲಾಸ್ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿದ್ದು, ಇಂಗ್ಲೀಷ್ ಭಾಷೆಯ ಬ್ರಿಡ್ಜ್ ಕೋರ್ಸ್ ಮತ್ತು ಬರವಣಿಗೆಯ ಕೌಶಲ್ಯದ ಬಗ್ಗೆಯೂ ಮಾಹಿತಿ ನೀಡಲಾಗುವುದು. ಪ್ರಥಮ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಥಿಗಳು […]

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಪುತ್ತೂರು : ಶ್ರದ್ಧಾ ಕೇಂದ್ರಗಳ ಮೂಲಕ ಧರ್ಮ ರಕ್ಷಣೆಯ ಕಾರ್ಯಗಳು ಆಗುತ್ತವೆ. ದೇವಾಲಯಗಳು ಯುವ ಪೀಳಿಗೆಗೆ ಸಂಸ್ಕಾರ, ಸಂಪದ್ರಾಯಗಳನ್ನು ತಿಳಿಸಿಕೊಡುವ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಐತಿಹಾಸಿಕ ಕ್ಷೇತ್ರ ಪಡುಮಲೆ ಶ್ರೀ ಕೂವೆಶಾಸ್ತಾರ ದೇವಾಲಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಆರನೇ ದಿನ ಗುರುವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ Read More »

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ”

ಪುತ್ತೂರು : ಉಬರ್ ಚೆಸ್ ಅಕಾಡೆಮಿ ಹಾಗೂ ತೆಂಕಿಲ ವಿವೇಕಾನಂದ  ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ ಇತ್ತೀಚೆಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ್ ನಾಯರ್ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಚೆಸ್ ಪಂದ್ಯಾಟದಲ್ಲಿ ಗ್ರಾಮೀಣ ಪ್ರತಿಭೆಗಳೂ ಬಹಳ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದು, ಅವರಿಗೂ ಅವಕಾಶ ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ಪಂದ್ಯಾಟದಲ್ಲಿ ಸೋತರೂ, ಗೆದ್ದರೂ ಈ ಆಟದಲ್ಲಿ ಪಾಲ್ಗೊಳ್ಳುವುದನ್ನು ಮುಂದುವರಿಸಿಕೊಂಡು ಹೋಗಿ.

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ” Read More »

ತಾ.ಪಂ. ಮಾಜಿ ಸದಸ್ಯ, ಪಾಪೆಮಜಲು ಗರಡಿ ಮೊಕ್ತೇಸರ ಮುಕುಂದ ಶಾಂತಿವನ ನಿಧನ | ನಾಟಿವೈದ್ಯರ ಕೊನೆಯಾಸೆ ಈಡೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಒಳಮೊಗ್ರು ಗ್ರಾಮದ ಶಾಂತಿವನ ನಿವಾಸಿ ನಾಟಿವೈದ್ಯ ಎಂ.ಎಸ್. ಮುಕುಂದ ಶಾಂತಿವನ (80 ವ.) ಅವರು ಮಾ. 3ರಂದು ಸ್ವಗೃಹದಲ್ಲಿ ನಿಧನರಾದರು. ಅಸೌಖ್ಯದಿಂದ ಬಳಲುತ್ತಿದ್ದ ಅವರು, ಶಾಸಕ ಸಂಜೀವ ಮಠಂದೂರು ಅವರಲ್ಲಿ ಮಾತನಾಡಬೇಕು ಎಂಬ ತನ್ನ ಆಸೆಯನ್ನು ಮುಂದಿಟ್ಟಿದ್ದರು. ಅದರಂತೆ ಶಾಸಕ ಸಂಜೀವ ಮಠಂದೂರು ಅವರು ಮಾ. 2ರಂದು ಮುಕುಂದ ಶಾಂತಿವನ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದರು. ಮಾ. 3ರಂದು ಬೆಳಿಗ್ಗೆ ಮುಕುಂದ ಶಾಂತಿವನ ಅವರು ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು

ತಾ.ಪಂ. ಮಾಜಿ ಸದಸ್ಯ, ಪಾಪೆಮಜಲು ಗರಡಿ ಮೊಕ್ತೇಸರ ಮುಕುಂದ ಶಾಂತಿವನ ನಿಧನ | ನಾಟಿವೈದ್ಯರ ಕೊನೆಯಾಸೆ ಈಡೇರಿಸಿದ ಶಾಸಕ ಸಂಜೀವ ಮಠಂದೂರು Read More »

ಕೆದಿಲ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತೆ ಮೂಲಕ ಶ್ರಮದಾನ

ಪುತ್ತೂರು: ವಿಟ್ಲ ಪೆರ್ನೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟಿನ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಕೆದಿಲ ಹಿಂದು ರುದ್ರಭೂಮಿಯ ಸುತ್ತ ಮುತ್ತ ಸ್ವಚ್ಛತೆ ಮೂಲಕ ಶ್ರಮದಾನ ಮಾಡಿದರು. ರುದ್ರಭೂಮಿಯ ಸುತ್ತಮುತ್ತ ಬೆಳೆದಿರುವ ಗಿಡ ಗಂಟಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಅಶ್ಮಿತಾ, ಸೇವಾಪ್ರತಿನಿಧಿ ಜಯಂತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ್ ಭಾಗವಹಿಸಿದ್ದರು.

ಕೆದಿಲ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತೆ ಮೂಲಕ ಶ್ರಮದಾನ Read More »

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ

ಪುತ್ತೂರು : ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” ಮಾ.5 ಭಾನುವಾರ ಸಂಜೆ 5.30 ಕ್ಕೆ ನಗರದ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ನೃತ್ಯಗುರು ವಿದುಷಿ ಪ್ರೀತಿಕಲಾ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ 7ನೇ ವರ್ಷದ ಕಾರ್ಯಕ್ರಮವಾಗಿದೆ. ಈ ಬಾರಿ ನರ್ತನಾವರ್ತನದಲ್ಲಿ ಭರತನಾಟ್ಯ ಪ್ರಸ್ತುತಿಯನ್ನು ರೆಂಜಿತ್ ಮತ್ತು ವಿಜ್ಞಾ ಚೆನ್ನೈ ಮಾಡಲಿದ್ದಾರೆ. ಅವರಿಗೆ ಹಿಮ್ಮೇಳದಲ್ಲಿ ಕೆ.ಎಸ್‍.ಬಾಲಕೃಷ್ಣನ್ ನಟುವಾಂಗದಲ್ಲಿ, ಬಿನು

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ Read More »

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು : ಬಿಜೆಪಿ ಎಸ್‍.ಟಿ ಮೋರ್ಚಾ ವತಿಯಿಂದ ಎಸ್‍.ಟಿ.ಮೋರ್ಚಾ ಸಮಾವೇಶ ಮಾ.5 ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಎಂದಿ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುತ್ವ, ರಾಷ್ಟ್ರೀಯ ವಿಚಾರಧಾರೆ ಅಡಿಯಲ್ಲಿ ಬಿಜೆಪಿ ಸರಕಾರ ಎಸ್‍.ಟಿ. ಸಮಯದಾಯದ ಅಭಿವೃದ್ಧಿಗೆ ನಿರಂತರ ಕಾರ್ಯಪ್ರವೃತ್ತವಾಗಿದ್ದು, ಭಾರತದ ಅತ್ಯುನ್ನತ ರಾಷ್ಟ್ರಪತಿ ಸ್ಥಾನವನ್ನು ದ್ರೌಪದಿ ಮುರ್ಮು ಅವರಿಗೆ ನೀಡಿದ್ದು, ಅಲ್ಲದೆ ಸುರಂಗದ ಮೂಲಕ ಜಲಧಾರೆಯನ್ನು ಕಂಡುಕೊಂಡು ಬರಡು

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ Read More »

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ

ಮಂಗಳೂರು : ಚಳಿಗಾಲ ಮುಗಿದ ಬೆನ್ನಿಗೆ ಕರಾವಳಿಯಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಗ್ಗಿನ ಹೊತ್ತು ತುಸು ಚಳಿ ಇದ್ದರೂ ಹೊತ್ತೇರುತ್ತಿರುವಂತೆ ಸೂರ್ಯ ಸುಡಲು ತೊಡಗುತ್ತಾನೆ. ಈ ಸಲ ವಾತಾವರಣದಲ್ಲಿ ಬಹಳ ವ್ಯತ್ಯಾಸ ಕಂಡು ಬರುತ್ತಿದ್ದು ಸೆಕೆ ವಿಪರೀತ ಹೆಚ್ಚಳವಾದ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ಮಾರ್ಚ್‌ ತಿಂಗಳಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿದ್ದು,

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ Read More »

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವ ಮಾ.4 ಶನಿವಾರ ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 7ಕ್ಕೆ ಗಣಹೋಮ, 8 ಕ್ಕೆ ನಾಗತಂಬಿಲ, ಪರಿವಾರ ದೈವಗಳಿಂದ ತಂಬಿಲ, 10.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 11.30 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30 ಕ್ಕೆ ದೈವಗಳ ಭಂಡಾರ ತೆಗೆಯುವುದು, 6.30 ಕ್ಕೆ ಕಲ್ಕುಡ ದೈವಗಳ ನೇಮೋತ್ಸವ, ರಾತ್ರಿ

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ Read More »

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ

ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ Read More »

error: Content is protected !!
Scroll to Top