ಪುತ್ತೂರು

ವಿಧಾನಸಭಾ ಚುನಾವಣೆಗೆ ಇಲಾಖೆಗಳ ಸಿದ್ಧತೆ | ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ, ಜಾಗೃತಿ ಅಭಿಯಾನ, ಸಂಚಾರಿ ಪ್ರದರ್ಶನ ವಾಹನ

ಪುತ್ತೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ ಹಾಗೂ ಜಾಗೃತಿ ಅಭಿಯಾನ ಮಾರ್ಚ್ 2ರಂದು ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಸಂಚಾರಿ ಪ್ರದರ್ಶನ ವಾಹನದ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ ಹಾಗೂ ಜಾಗೃತಿ ಅಭಿಯಾನ ಫೆ. 22ರಿಂದ ಆರಂಭಗೊಂಡಿದ್ದು, ಮಾರ್ಚ್ 12ರವರೆಗೆ ನಡೆಯಲಿದೆ. ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ, ಚುನಾವಣೆಯ ಅಣುಕು ಕಾರ್ಯಾಚರಣೆ ಇಲ್ಲಿ ನಡೆಯುತ್ತಿದೆ. ಮಾಸ್ಟರ್ ಟ್ರೈನರ್ ಪ್ರಶಾಂತ್ ಅವರು ಇವಿಎಂನಲ್ಲಿ ಮತದಾನ ಮಾಡುವ ವಿಧಾನ […]

ವಿಧಾನಸಭಾ ಚುನಾವಣೆಗೆ ಇಲಾಖೆಗಳ ಸಿದ್ಧತೆ | ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ, ಜಾಗೃತಿ ಅಭಿಯಾನ, ಸಂಚಾರಿ ಪ್ರದರ್ಶನ ವಾಹನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 541ನೇ ನಮ್ಮೂರ ಕೆರೆಗೆ ಭೂಮಿ ಪೂಜೆ | ಶಾಸಕ ಸಂಜೀವ ಮಠಂದೂರು ಅವರಿಂದ ಚಾಲನೆ

ಪುತ್ತೂರು “ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಒಳಮೊಗ್ರು ಗ್ರಾಪಂ, ಅಜಲಡ್ಕಕೆರೆ ಸಮಿತಿ, ಸಹಯೋಗದಲ್ಲಿ 541ನೇ ನಮ್ಮೂರ ನಮ್ಮ ಕೆರೆ ಹೂಳೆತ್ತುವ, ಭೂಮಿ ಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮ ಅಜಲಡ್ಕಕೆರೆ ಆವರಣದಲ್ಲಿ ಗುರುವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಕೆರೆ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಬೂಡಿಯರು ವಹಿಸಿದ್ದರು.  ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 541ನೇ ನಮ್ಮೂರ ಕೆರೆಗೆ ಭೂಮಿ ಪೂಜೆ | ಶಾಸಕ ಸಂಜೀವ ಮಠಂದೂರು ಅವರಿಂದ ಚಾಲನೆ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ೬ನೇ ದಿನವಾದ ಗುರುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬೆಳಗ್ಗೆ ೮ ಗಂಟೆಗೆ ಕ್ಷೇತ್ರದ ತಂತ್ರಿಗಳಾದ ಬ್ರ.ವೇ.ಮೂ. ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ.ಮೂ.ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ೧೦೮ ತೆಂಗಿನಕಾಯಿ ಗಣಪತಿ ಹೋಮ, ಪ್ರತಿಷ್ಠಾ ಪಾಣಿ ನಡೆದು ಮಧ್ಯಾಹ್ನ 1.04 ರಿಂದ 3.15 ರ ಮಿಥುನ ಲಗ್ನ ಸುಮುಹೂರ್ತದಲ್ಲಿ

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ವಿಷ್ಣುಮೂರ್ತಿ ಹಾಗೂ ಪರಿವಾರ ದೇವರುಗಳ ಪ್ರತಿಷ್ಠೆ Read More »

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಪುತ್ತೂರು : ದೇಹವೆಂಬ ಪಥಕ್ಕೆ ರಥ ಧರ್ಮ. ಸತ್ಯವನ್ನು ಹೇಳುವ ಧರ್ಮ ಚಾಲನಾಶೀಲ. ಮನುಷ್ಯ ಬದುಕಿನ ಸಂವಿಧಾನ ಧರ್ಮ. ಇಲ್ಲಿ ಆತ್ಮ ಸತ್ಯ ಒಂದೇ ಸತ್ಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಐತಿಹಾಸಿಕ ಪಡುಮಲೆ ಕ್ಷೇತ್ರದ ಶ್ರೀ ಕೂವೆ ಶಾಸ್ತರ ದೇವಾಲಯದ ಪ್ರತಿಷ್ಟ ಬ್ರಹ್ಮಕಲಶೋತ್ಸವದ ೫ ನೆ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಾಚನ ನೀಡಿದರು. ಅಧ್ಯಾತ್ಮ ಎಂಬುದು ಕೀಲಿ ಕೈ. ಅದರ ಮೂಲಕ ಎಲ್ಲಾ ಸಮಸ್ಯೆಗಳಿಂದ ಬಿಡುಗಡೆ ಪಡೆಯಬಹುದು. ಪಡುಮಲೆಯಲ್ಲಿ ಸುಂದರ ಶ್ರದ್ದಾ

ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ Read More »

ಮಾ. 4: ಮೊಳಹಳ್ಳಿ ಶಿವರಾಯ ರಸ್ತೆಯ ರೈತ ಸೌಧದಲ್ಲಿ “ವಿ ವಾಕ್” ನೂತನ ಫೂಟ್ ವೇರ್ ಶೋರೂಂ ಶುಭಾರಂಭ

ಪುತ್ತೂರು: ನೂತನ ಫೂಟ್ ವೇರ್ ಶೋ ರೂಂ “ವಿ ವಾಕ್” ಮಾ. 4ರ ಶನಿವಾರ ಬೆಳಿಗ್ಗೆ 8ಕ್ಕೆ ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಭೂ ಅಭಿವೃದ್ಧಿ ಬ್ಯಾಂಕ್ ಕಟ್ಟಡದ ರೈತ ಸೌಧದಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಶೋ ರೂಂನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ

ಮಾ. 4: ಮೊಳಹಳ್ಳಿ ಶಿವರಾಯ ರಸ್ತೆಯ ರೈತ ಸೌಧದಲ್ಲಿ “ವಿ ವಾಕ್” ನೂತನ ಫೂಟ್ ವೇರ್ ಶೋರೂಂ ಶುಭಾರಂಭ Read More »

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿಯ ಲೋಕಸಭಾ ಚುನಾವಣೆ ಲೀಡ್‌ಗಿಂತಲೂ ಅಧಿಕ ಮತಗಳಿಂದ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಬಿಜೆಪಿ ಅತ್ಯಂತ ಬಲಿಷ್ಠವಾಗಿದ್ದು, ಯೋಜನೆ ಹಾಗೂ ಯೋಚನೆ ಸಹಿತ ಕಾರ್ಯಬದ್ಧತೆಯಲ್ಲಿ ರಾಜಿ ಮಾಡಿಕೊಂಡಿಲ್ಲ. ಪಕ್ಷದ ಯೋಜನೆ, ಯೋಚನೆಗಳಿಗೆ ಪೂರಕವಾಗಿ ಶಾಸಕ ಸಂಜೀವ ಮಠಂದೂರು ಅವರ ಕಾರ್ಯವೈಖರಿ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ನಮಗೆ ಗೆಲ್ಲುವುದರಲ್ಲಿ ನಿಶ್ಚಯವಿದೆ ಎಂದ ಅವರು,

ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್ ಕುಮಾರ್ ಕಾರ್ಯವೈಖರಿಯಿಂದ ಮತ್ತೊಮ್ಮೆ ಬಿಜೆಪಿ ಗೆಲುವು | ಬೂತ್ ವಿಜಯ ಅಭಿಯಾನದಿಂದ ಬಿಜೆಪಿ ಬೂತ್ ಶಕ್ತೀಕರಣ Read More »

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ

ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮುದಾಯದ ಕಾಂಗ್ರೆಸ್ ಮುಖಂಡರಿಂದ ಡಿಕೆಶಿಗೆ ಮನವಿ ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಕ್ಕಲಿಗ ಗೌಡ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಒಕ್ಕಲಿಗ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ಸಂದರ್ಭ ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯವನ್ನು ಕಡೆಗಣಿಸಿರುವುದನ್ನು ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಯಿತು. ನಿಯೋಗದ

ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‍ ಟಿಕೇಟ್ ನೀಡಿ Read More »

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ

ಪುತ್ತೂರು : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಮಹಾಸಭೆ ಮಾ. 4 ಶನಿವಾರ ಅಪರಾಹ್ನ 3.30ಕ್ಕೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಎಂ.ಎಲ್. ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ವಿಶ್ವಕರ್ಮ ಮಹಿಳಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾ.4 : ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವಾರ್ಷಿಕೋತ್ಸವ, ಮಹಾಸಭೆ Read More »

ಮಾ.5 : ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯುವ ವೈದ್ಯಕೀಯ ಶಿಬಿರಕ್ಕೆ ವರ್ಷ ಸಂಭ್ರಮ | ವಿಶಿಷ್ಟ ಶೈಲಿಯಲ್ಲಿ ಆರೋಗ್ಯ ಮೇಳ

ಪುತ್ತೂರು : ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ವಿವಿಧ ಸಂಘ ಸಂಸ್ಥೆಯ ಆಶ್ರಯದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರಕ್ಕೆ ವರ್ಷ ಸಂಭ್ರಮ. ಈ ಹಿನ್ನಲೆಯಲ್ಲಿ ಆರೋಗ್ಯ ಮೇಳವನ್ನು ಮಾ.5 ಭಾನುವಾರ ವಿಶಿಷ್ಟ ಶೈಲಿಯಲ್ಲಿ ನಡೆಯಲಿದೆ. ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿ, ಸಂಪ್ಯ ನವಚೇತನಾ ಯುವಕ ಮಂಢಲ ಹಾಗೂ ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಹಕಾರದೊಂದಿಗೆ ವೈದ್ಯಕೀಯ ಶಿಬಿರ ನಡೆಯಲಿದ್ದು, 12 ಪ್ರತ್ಯೇಕ ವಿಭಾಗಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ. ಸಾಮಾನ್ಯ ವೈದ್ಯಕೀಯ ತಪಾಸಣೆ, ಮಕ್ಕಳ ಚಿಕಿತ್ಸೆ

ಮಾ.5 : ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯುವ ವೈದ್ಯಕೀಯ ಶಿಬಿರಕ್ಕೆ ವರ್ಷ ಸಂಭ್ರಮ | ವಿಶಿಷ್ಟ ಶೈಲಿಯಲ್ಲಿ ಆರೋಗ್ಯ ಮೇಳ Read More »

ಪುತ್ತೂರಿನ ಬೀರಮಲೆ ಬೆಟ್ಟಕ್ಕೆ ಬೆಂಕಿ : ಬೆಂಕಿ ನಂದಿಸುವಲ್ಲಿ ನಿರತರಾದ ಅಗ್ನಿಶಾಮಕ ದಳ

ಪುತ್ತೂರು : ಪುತ್ತೂರಿನ ಬೀರಮಲೆ ಬೆಟ್ಟಕ್ಕೆ ಬೆಂಕಿ ತಗುಲಿದ ಘಟನೆ ಬುಧವಾರ ಸಂಜೆ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮರಗಳು ಸುಟ್ಟು ಹೋಗಿದ್ದು, ಹೆಚ್ಚಿನ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ಪುತ್ತೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪುತ್ತೂರಿನ ಬೀರಮಲೆ ಬೆಟ್ಟಕ್ಕೆ ಬೆಂಕಿ : ಬೆಂಕಿ ನಂದಿಸುವಲ್ಲಿ ನಿರತರಾದ ಅಗ್ನಿಶಾಮಕ ದಳ Read More »

error: Content is protected !!
Scroll to Top