ಪುತ್ತೂರು

ಮೇಲ್ದರ್ಜೆಗೇರಿದ ಡಯಾಲಿಸೀಸ್ ಘಟಕ | ಖಾಸಗಿ ಆಸ್ಪತ್ರೆಗಳಿಗೇನೂ ಕಮ್ಮಿ ಇಲ್ಲ ಪುತ್ತೂರು ಸರಕಾರಿ ಆಸ್ಪತ್ರೆ | 300 ಬೆಡ್ ಆಸ್ಪತ್ರೆಗೆ ಪೂರ್ವಭಾವಿ ತಯಾರಿ

ಪುತ್ತೂರು: ಸರಕಾರಿ ಆಸ್ಪತ್ರೆಗೆ ಹೋದರೆ ಹೊಸ ರೋಗಗಳೇ ಬರಬಹುದು ಎನ್ನುವುದು ಸಾಮಾನ್ಯವಾಗಿ ಜನರು ಹೇಳುತ್ತಿದ್ದ ಮಾತಾಗಿತ್ತು. ಆದರೆ ಪುತ್ತೂರು ಸರಕಾರಿ ಆಸ್ಪತ್ರೆ ಈ ಮಾತಿಗೆ ಅಪವಾದವಾಗಿ ನಿಂತಿದೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯ ಆರೋಗ್ಯ ರಕ್ಷಾ ಸಮಿತಿಯ ಶಿಫಾರಸ್ಸಿನ ಮೇಲೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯ 60 ಲಕ್ಷ ರೂ. ಅನುದಾನವನ್ನು ಬಳಸಿಕೊಂಡು, ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಆಧುನೀಕರಣಗೊಳಿಸಲಾಗಿದೆ. ಈ ಅನುದಾನದಲ್ಲಿ ಡಯಾಲಿಸೀಸ್ ಘಟಕವನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳಿಸಿದ್ದು, ಇಂದು ಸುವ್ಯವಸ್ಥಿತವಾಗಿ ಎದ್ದು ನಿಂತಿದೆ. ಇದೀಗ ಯಾವುದೇ […]

ಮೇಲ್ದರ್ಜೆಗೇರಿದ ಡಯಾಲಿಸೀಸ್ ಘಟಕ | ಖಾಸಗಿ ಆಸ್ಪತ್ರೆಗಳಿಗೇನೂ ಕಮ್ಮಿ ಇಲ್ಲ ಪುತ್ತೂರು ಸರಕಾರಿ ಆಸ್ಪತ್ರೆ | 300 ಬೆಡ್ ಆಸ್ಪತ್ರೆಗೆ ಪೂರ್ವಭಾವಿ ತಯಾರಿ Read More »

ಮಾನಸಿಕ, ದೈಹಿಕ ದೃಢತೆಗೆ ಈಜು, ಕ್ರೀಡೆ ಸಹಕಾರಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಪಾರ್ಥ ವಾರಣಾಸಿ

ಪುತ್ತೂರು: ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಲು ಈಜು ಅಥವಾ ಇನ್ನಿತರ ಕ್ರೀಡಾ ಚಟುವಟಿಕೆಗಳು ತುಂಬಾ ಸಹಕಾರಿಯಾಗುತ್ತವೆ ಎಂದು ಈಜು ತರಬೇತುದಾರ, ಸರ್ಫ್ ಲೈವ್ ಸೇವಿಂಗ್ ಇಂಡಿಯಾದ ನಿರ್ದೇಶಕ ಪಾರ್ಥ ವಾರಣಾಸಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನರಗಳ ಪುನಶ್ಚೇತನದ ಮೂಲಕ ಜೀವ ಉಳಿಸುವ ಕೌಶಲ್ಯ ಎನ್ನುವ ವಿಷಯದ ಬಗ್ಗೆ ಮಾತನಾಡಿದ ಇವರು

ಮಾನಸಿಕ, ದೈಹಿಕ ದೃಢತೆಗೆ ಈಜು, ಕ್ರೀಡೆ ಸಹಕಾರಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಪಾರ್ಥ ವಾರಣಾಸಿ Read More »

ವಿಜ್ಞಾನ ಆಸಕ್ತಿಯ ಕ್ಷೇತ್ರವಾದಾಗ ಸಾಧನೆಗಳು ಸಾಧ್ಯ | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಸತ್ಯಜಿತ್ ಉಪಾಧ್ಯಾಯ

ಪುತ್ತೂರು : ವಿಜ್ಞಾನವನ್ನು ಕೇವಲ ಒಂದು ವಿಷಯವಾಗಿ ನೋಡುವುದರ ಬದಲು ಅದನ್ನು ಆಸಕ್ತಿಯ ಕ್ಷೇತ್ರವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಮಾತ್ರವಲ್ಲದೆ ಸಂಶೋಧನೆ ಕೈಗೊಳ್ಳಬೇಕು. ತನ್ಮೂಲಕ ನಮ್ಮ ದೇಶವನ್ನು ಯಶಸ್ಸಿನ ಕಡೆ ಕೊಂಡೊಯ್ಯುಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಆಚರಿಸಲಾದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ಸಿವಿ ರಾಮನ್‌ರವರ ಅಪೂರ್ವ ಸಾಧನೆಯ

ವಿಜ್ಞಾನ ಆಸಕ್ತಿಯ ಕ್ಷೇತ್ರವಾದಾಗ ಸಾಧನೆಗಳು ಸಾಧ್ಯ | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಸತ್ಯಜಿತ್ ಉಪಾಧ್ಯಾಯ Read More »

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್‌ನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ದ.ಕ.ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಕ್ಷೇತ್ರಗಳ, ವಲಯಗಳ ಸಹಕಾರದೊಂದಿಗೆ ಮಾ. 7ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಕೆ.ಎಸ್.ಟಿ.ಎ. ಜಿಲ್ಲಾ ಸಮಿತಿ ಅಧ್ಯಕ್ಷ ಜಯಂತ್ ಉರ್ಲಾಂಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಬಜೆಟ್ ಮಂಡನೆ ಮೊದಲು ನಮ್ಮ ಮೂರು ಬೇಡಿಕೆಯಾದ ಪೆನ್ಶನ್, ಟೈಲರ್ ವೃತ್ತಿಯಲ್ಲಿರುವವರ ಮಕ್ಕಳಿಗೆ ಸ್ಕಾಲರ್ ಶಿಪ್ ಹಾಗೂ ಆರೋಗ್ಯ ವಿಮೆ ನೀಡುವಂತೆ ಸಚಿವ ಕೋಟ

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ Read More »

ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ

ಪುತ್ತೂರು: ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ವಿಚಾರವನ್ನು ಕಿತ್ತು ಹಾಕಿರುವುದು ದ.ಕ. ಜಿಲ್ಲೆಯ ನಾರಾಯಣ ಗುರುಗಳ ಅನುಯಾಯಿಗಳಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ರಚಿಸಿ, ಸಮಿತಿಗೆ ತೃತೀಯ ದರ್ಜೆ ಲೇಖಕ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿ ಮಾಡಿ, ಅವರ ವಿಚಾರಗಳನ್ನೇ ಸಮರ್ಥನೆ ಮಾಡಿ ನಾರಾಯಣ ಗುರುಗಳಿಗೆ ಅವಮಾನ ಮಾಡಿರುವುದು ಇಡೀ ಸಮಾಜಕ್ಕೆ ಮಾಡಿದ ಅವಮಾನ. ಸಂವಿಧಾನದ ಮೂಲ ತಿರುಳನ್ನು ತಿರುಚುವ ಮೂಲಕ

ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ Read More »

ಸರಕಾರಿ ನೌಕರರ ಮುಷ್ಕರ ವಾಪಾಸ್: ತಕ್ಷಣ ಕಚೇರಿಗೆ ಹಾಜರಾಗಲೂ ಸರ್ಕಾರಿ ನೌಕರರಿಗೆ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸೂಚಿಸಿದ್ದಾರೆ. ನೌಕರರ ಸಂಘದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶೇ. 17ರಷ್ಟು ವೇತನ ಹೆಚ್ಚಳ ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಷ್ಕರ ಕೈಬಿಡಲು ನಿರ್ಧಾರ ಮಾಡಿದೆ ಎಂದು

ಸರಕಾರಿ ನೌಕರರ ಮುಷ್ಕರ ವಾಪಾಸ್: ತಕ್ಷಣ ಕಚೇರಿಗೆ ಹಾಜರಾಗಲೂ ಸರ್ಕಾರಿ ನೌಕರರಿಗೆ ಸೂಚನೆ Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರಿಂದ ಮುಷ್ಕರ | ಪುತ್ತೂರಿನಲ್ಲೂ ಎಲ್ಲಾ ಸರಕಾರಿ ನೌಕರರಿಂದ ಬೆಂಬಲ

ಪುತ್ತೂರು : ರಾಜ್ಯ ಸರಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ನೌಕರರು ಹಮ್ಮಿಕೊಂಡ ಪ್ರತಿಭಟನೆಗೆ ಪುತ್ತೂರಿನಲ್ಲೂ ಸಂಪೂರ್ಣ ಬೆಂಬಲ ಸಿಕ್ಕಿದೆ. ಬುಧವಾರ ಬೆಳಗ್ಗೆಯಿಂದಲೇ ಎಲ್ಲಾ ಸರಕಾರಿ ಇಲಾಖೆಯ  ಎ ಯಿಂದ ಡಿ ದರ್ಜೆ ತನಕ್ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಮೌನ ಮುಷ್ಕರದಲ್ಲಿ ತೊಡಗಿಕೊಂಡರು. ಪ್ರತೀ ಸರಕಾರಿ ಇಲಾಖೆಯಲ್ಲಿ ಕೇವಲ ಹೊರಗುತ್ತಿಗೆ ನೌಕರರನ್ನು ಬಿಟ್ಟರೆ ಖಾಯಂ ನೌಕರರು ಕಾಣ ಸಿಗಲಿಲ್ಲ. ಎಲ್ಲರೂ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಮುಷ್ಕರದ ಪರಿಣಾಮ ಸಾರ್ವಜನಿಕರು ಸರಕಾರಿ ಕಚೇರಿ ಎದುರು ಕಾಯುತ್ತಿರುವ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರಿಂದ ಮುಷ್ಕರ | ಪುತ್ತೂರಿನಲ್ಲೂ ಎಲ್ಲಾ ಸರಕಾರಿ ನೌಕರರಿಂದ ಬೆಂಬಲ Read More »

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ : ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಚಾಲನೆ

ಬೆಂಗಳೂರು : ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮಾ.1ರಂದು ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಸೋಲಿಗ

ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ : ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಚಾಲನೆ Read More »

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಜಾತ್ರಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ುತ್ಸವದ ಅಂಗವಾಗಿ ಮಾ.7 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಪಂಚವಿಂಶತಿ ಕಲಶ ಪ್ರತಿಷ್ಠೆ, ಅಧಿವಾಸ ಹೋಮ, ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಲಲಿತಾ ಸಹಸ್ರನಾಮ ಪಾರಾಯಣ, ಸಂಜೆ ದೈವಗಳಿಗೆ ತಂಬಿಲ, ಭಜನೆ, ರಂಗಪೂಜೆ, ಉತ್ಸವ ಬಲಿ,

ಮಾ.7-8 : ಮಠಂತಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ Read More »

ಸಾವರ್ಕರ್, ಆಝಾದ್ ಯುವಪೀಳಿಗೆಗೆ ಮಾದರಿ :  ಆದರ್ಶ ಗೋಖಲೆ | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ದೇಶಭಕ್ತರ ಪುಣ್ಯಸ್ಮರಣೆ

ಪುತ್ತೂರು : ಬಾಲ್ಯದಲ್ಲಿರುವಾಗಲೇ ವೀರ ಸಾವರ್ಕರ್ ದೇಶದ ಪರ ಹೋರಾಡಿದ ನಾಯಕ. ಅವರು ಝಾನ್ಸಿ ರಾಣಿಯ ಸಾಹಸದಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಜನರಲ್ಲಿ ದೇಶಪ್ರೇಮ, ದೇಶ ಭಕ್ತಿ ಬಿತ್ತಿದವರು.  ಮಹಾರಾಷ್ಟ್ರದಲ್ಲಿ ಪತಿತ ಪಾವನ ಎಂಬ ಮಂದಿರವನ್ನು ಸ್ಥಾಪಿಸಿ ದೇಶದಲ್ಲಿ ಎಲ್ಲರೂ ಒಂದೇ ಎಂಬ ಘೋಷಣೆಯನ್ನು ಸಾರಿದ ದೇಶದ ಹೆಮ್ಮೆಯ ಪುತ್ರ ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ವೀರ ಸಾವರ್ಕರ್ ಹಾಗೂ ಚಂದ್ರಶೇಖರ್

ಸಾವರ್ಕರ್, ಆಝಾದ್ ಯುವಪೀಳಿಗೆಗೆ ಮಾದರಿ :  ಆದರ್ಶ ಗೋಖಲೆ | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ದೇಶಭಕ್ತರ ಪುಣ್ಯಸ್ಮರಣೆ Read More »

error: Content is protected !!
Scroll to Top