ಪುತ್ತೂರು

ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸುವರ್ಣಾವಕಾಶ

ಪುತ್ತೂರು: ನೀವು ಉದ್ಯೋಗಾಕಾಂಕ್ಷಿಗಳೇ? ಹೌದಾದಲ್ಲಿ, ಪ್ರೇರಣಾ ಸಂಸ್ಥೆ ನಿಮಗಾಗಿ ಸುವರ್ಣ  ಅವಕಾಶವನ್ನು ಮುಂದಿಟ್ಟಿದೆ. ಪುತ್ತೂರು, ಮಂಗಳೂರು ಮಾತ್ರವಲ್ಲ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉದ್ಯೋಗ ಅರಸುವ ಆಕಾಂಕ್ಷಿಗಳಿಗೆ ವಿಫುಲ ಉದ್ಯೋಗ ಅವಕಾಶಗಳನ್ನು ಪ್ರೇರಣಾ ತೆರೆದಿಡುತ್ತಿದೆ. ಪಿಯುಸಿ, ಬಿ.ಎ, ಬಿ.ಕಾಂ, ಬಿ.ಎಸ್.ಸಿ., ಎಂ.ಕಾಂ, ಎಂ.ಎಸ್.ಸಿ, ಇತರ ಪದವೀಧರರ ಜೊತೆಯಲ್ಲಿ ನರ್ಸಿಂಗ್, ಫಾರ್ಮಸಿ, ಡಿಪ್ಲೋಮಾ, ಇಂಜಿನಿಯರಿಂಗ್, ಲಾಜಿಸ್ಟಿಕ್ ಕೋರ್ಸ್ ಮಾಡಿರುವ ಅರ್ಹ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವನ್ನು ತೆರೆದಿಟ್ಟಿದೆ. ಫೆ. 22ರಿಂದ 28ರ ತನಕ ನೋಂದಾವಣೆಗೆ ಅವಕಾಶವಿದ್ದು, ಸಿವಿ ಕಳುಹಿಸಿದವರಿಗೆ […]

ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸುವರ್ಣಾವಕಾಶ Read More »

ಹಿಂದೂ ಸಂಘಟನೆಗಳ ಆಕ್ಷೇಪಕ್ಕೆ ದಾಳಿ ಎಂದ ಯು.ಟಿ.ಖಾದರ್: ಶಾಸಕ ಸಂಜೀವ ಮಠಂದೂರು ಆಕ್ಷೇಪ

ಪುತ್ತೂರು: ಅಡ್ಯನಡ್ಕದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ನೀಡಿದ ಘಟನೆಯನ್ನು ಖಂಡಿಸಿದ ಹಿಂದೂ ಸಂಘಟನೆಗಳ ಕ್ರಮವನ್ನು ದಾಳಿ ಎಂದು ಸದನದಲ್ಲಿ ಪ್ರಸ್ತಾಪಿಸಿರುವ ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರ ಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಾನು ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪ್ರಮುಖರೊಂದಿಗೆ ಮಾತನಾಡಿ, ಘಟನೆಯ ಸತ್ಯಾಸತ್ಯತೆಯನ್ನು ತಿಳಿದುಕೊಂಡಿದ್ದೇನೆ. ಕರಾವಳಿ ಭಾಗದ ಓರ್ವ ಶಾಸಕನಾಗಿ, ಆ ಭಾಗದ ಕಾರ್ಯಕರ್ತರ ಜೊತೆ ತಾನು ಸದಾ ಇರುತ್ತೇನೆ ಎಂದು ತಿಳಿಸಿರುವ ಶಾಸಕ ಸಂಜೀವ ಮಠಂದೂರು ಅವರು,

ಹಿಂದೂ ಸಂಘಟನೆಗಳ ಆಕ್ಷೇಪಕ್ಕೆ ದಾಳಿ ಎಂದ ಯು.ಟಿ.ಖಾದರ್: ಶಾಸಕ ಸಂಜೀವ ಮಠಂದೂರು ಆಕ್ಷೇಪ Read More »

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ

ಪುತ್ತೂರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ವ್ಯಾಘ್ರ ಚಾಮುಂಡಿ ದೈವಸ್ಥಾನ ಕೊರತಿಕಟ್ಟೆ ಮಾಡತ್ತಾರು ಕ್ಷೇತ್ರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ದ ಅಂಗವಾಗಿ ಕ್ಷೇತ್ರದಲ್ಲಿ  ಸ್ವಚ್ಛತೆಗಾಗಿ ಶ್ರಮದಾನ ಮಾಡಲಾಯಿತು. ದೇವಸ್ಥಾನದ ಸುತ್ತಮುತ್ತಲು ಗಿಡಗಂಟಿಗಳನ್ನು ತೆರವುಗೊಳಿಸಿ, ಕಸಕಡ್ಡಿಗಳನ್ನು ಹೆಕ್ಕಿ ಸ್ವಚ್ಛತೆ ಮಾಡಲಾಯಿತು. ಶ್ರಮದಾನದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಜಯಶ್ರೀ, ಸಂಯೋಜಕಿ ಅಸ್ಮಿತಾ ಮತ್ತು ಶೌರ್ಯ  ಘಟಕದ  ಸದಸ್ಯರಾದ ರಮೇಶ್, ಗಿರೀಶ್, ಹರೀಶ್,

ಮಾಡತ್ತಾರು ಕೊರತಿಕಟ್ಟೆ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಶ್ರಮದಾನ Read More »

ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಅವರ ಪತಿ, ಐಎಎಸ್​ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ

ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿದ ಸರ್ಕಾರ Read More »

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವಿಟ್ಲದ ಮಾಧವ ಮತ್ತು ರೋಹಿತ್ ಎಸ್ ಎನ್  ಅವರಿಂದ ಕರಾಟೆ

ರಾಜ್ಯಮಟ್ಟದ ಓಪನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ Read More »

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಪುತ್ತೂರು : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಫೆ.18 ರಂದು ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ರಾಟೆ ಶಿಕ್ಷಕ ಸೆನ್ಸಾಯಿ ಮಾಧವ ಅಳಿಕೆ ವಿಧ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ,. ವಿಟ್ಲ ಜೇಸೀಸ್ ಸ್ಕೂಲ್ : ಧ್ರುವ ಕಟಾ:1st ಕುಮಿಟೆ:1st, ಸಾನ್ವಿ ಕಟಾ:3rd ಕುಮಿಟೆ : 3rd, .ಮನಸ್ವಿ ಬಿ ಕುಮಿಟೆ : 3rd,

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ಬೂಡೋಕಾನ್ ರಾಜ್ಯಮಟ್ಟದ ಕರಾಟೆ ಚಾಪಿಂಯನ್ ಶಿಪ್ ನಲ್ಲಿ ವಿಜೇತರಾದ ವಿದ್ಯಾರ್ಥಿಗಳು Read More »

ಮಾ.4 : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯಿಂದ 10ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ, ಧಾರ್ಮಿಕ ಸಭೆ

ಪುತ್ತೂರು : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆ ವತಿಯಿಂದ 10 ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ ಮತ್ತು ಧಾರ್ಮಿಕ ಸಭೆ ಮಾ. 4 ಶನಿವಾರ ಸಂಜೆ ಗಂಟೆ 5:30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ಗಂಟೆ 9ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅವರಿಂದ ತುಳು ಹಾಸ್ಯಮಯ ನಾಟಕ “ಮಲ್ಲ ಸಂಗತಿಯೇ ಅತ್ತ್” ಪ್ರದರ್ಶನಗೊಳ್ಳಲಿದೆ ಎಂದು ಹಿಂಜಾವೇ

ಮಾ.4 : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯಿಂದ 10ನೇ ವರ್ಷದ ಸಾರ್ವಜನಿಕ ಆಶ್ಲೇಷ ಪೂಜೆ, ಧಾರ್ಮಿಕ ಸಭೆ Read More »

ಮರದಿಂದ ಬಿದ್ದು ಕಾಲು ಸ್ವಾಧೀನ ಕಳಕೊಂಡ ವಿಠಲ ಅವರಿಗೆ ವಾಕರ್ ಕೊಡುಗೆ

ಪೆರ್ನೆ : ಮರದಿಂದ ಬಿದ್ದು ಒಂದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಕೆದಿಲ ಗ್ರಾಮದ ಕಾಂಜಲಿಕೆ ವಿಠಲ ಅವರಿಗೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲ ತಂಡದ ಸದಸ್ಯರು ವಾಕರ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಪೆರ್ನೆ ವಲಯ ಮೇಲ್ವಿಚಾರಕಿ ಜಯಶ್ರೀ ಮತ್ತು ಸಂಯೋಜಕಿ ಅಸ್ಮಿತಾ ಅವರ ಮಾರ್ಗದರ್ಶನದಲ್ಲಿ ಕೆದಿಲ ಸೇವಾಪ್ರತಿನಿದಿಗಳಾದ ಶಾರದ, ಜಯಂತಿ ಮತ್ತು ಶೌರ್ಯ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ ವಿತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ಇದರ ಪೆರ್ನೆ ವಲಯದ

ಮರದಿಂದ ಬಿದ್ದು ಕಾಲು ಸ್ವಾಧೀನ ಕಳಕೊಂಡ ವಿಠಲ ಅವರಿಗೆ ವಾಕರ್ ಕೊಡುಗೆ Read More »

ಫೆ.25 : ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ಗಡಿನಾಡ ಸಮ್ಮೇಳನ – 2023

ಪುತ್ತೂರು : ಗಡಿನಾಡ ಧ್ವನಿ ಮಾಸಪತ್ರಿಕೆ ಹಾಗೂ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಒಡ್ಯ ುನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಕಾರದೊಂದಿಗೆ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023 .2ಫೆ5 ಶನಿವಾರ ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಡಾ.ಹಾಜಿ ಅಬೂಬಕ್ಕರ್ ಆರ್ಲಪದವು ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ

ಫೆ.25 : ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ಗಡಿನಾಡ ಸಮ್ಮೇಳನ – 2023 Read More »

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ

ಪುತ್ತೂರು : ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಸಮೀಪದ ನೈಲದಲ್ಲಿ ಸೋಮವಾರ ಮುಂಜಾನೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ದಾಳಿ ನಡೆಸಿದ ಕಾಡಾನೆಯನ್ನು ಸೆರೆಹಿಡಿಯಲು ಮೈಸೂರು ಹಾಗೂ ದುಬಾರೆಯಿಂದ ಪಳಗಿನ ಆನೆಗಳನ್ನು ತರಿಸಲಾಗಿದೆ. ಸೋಮವಾರ ರಾತ್ರಿಯೇ ಬೃಹತ್‍ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಿಗ್ಗೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ. ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಕಡಬ ತಾಲೂಕಿನ  ರೆಂಜಲಾಡಿ ಗ್ರಾಮದ

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ Read More »

error: Content is protected !!
Scroll to Top