ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15ನೇ ಹಣಕಾಸು ಯೋಜನೆಯಡಿ ಬನ್ನೂರಿನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ
ಪುತ್ತೂರು : ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15 ನೇ ಹಣಕಾಸು ಯೋಜನೆಯಡಿ ಬನ್ನೂರಿನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಕೋವಿಡ್ ನಂತರ ಎಲ್ಲಾ ಕ್ಷೆತ್ರದಲ್ಲಿಬದಲಾವಣೆ ಆಗುತ್ತಿದೆ. ಮನೆ ಬಾಗಿಲಿಗೆ ಡಾಕ್ಟರ್, ಮನೆ ಬಾಗಿಲಿಗೆ ಆಸ್ಪತ್ರೆ ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಕಾರ್ಯಗಳನ್ನು ಸರಕಾರ ಮಾಡುತ್ತಿದೆ. ನಮ್ಮ ಕ್ಲಿನಿಕ್ ಮೂಲಕ ದಿನದ 8 ಗಂಟೆ ನಿಮ್ಮ ಅರೋಗ್ಯ ತಪಾಸಣೆ ಮಾಡುವ ಕೆಲಸ ನಡೆಯಲಿದೆ. […]









