ಸಂತ ಸೇವಾಲಾಲ್ ಜಯಂತ್ಯೋತ್ಸವ ಆಚರಣೆ
ಪುತ್ತೂರು: ಸಂತ ಸೇವಾಲಾಲ್ ಅವರ ಜಯಂತ್ಯುತ್ಸವ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು. ದೇಶದ ಬಂಜಾರ ಸಮುದಾಯದ ಏಕೈಕ ಸಂತ ಇವರಾಗಿದ್ದಾರೆ. ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್. ದೀಪ ಪ್ರಜ್ವಲಿಸಿ, ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ತಾಲೂಕು ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಸುಲೋಚನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.
ಸಂತ ಸೇವಾಲಾಲ್ ಜಯಂತ್ಯೋತ್ಸವ ಆಚರಣೆ Read More »










